Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 38:13 - ಪರಿಶುದ್ದ ಬೈಬಲ್‌

13 ಇಡೀರಾತ್ರಿ ನಾನು ಸಿಂಹದಂತೆ ಗರ್ಜಿಸಿದೆನು. ಆದರೆ ಸಿಂಹವು ಎಲುಬುಗಳನ್ನು ಜಗಿದು ಪುಡಿಮಾಡುವಂತೆ ನನ್ನ ನಿರೀಕ್ಷೆಯೆಲ್ಲಾ ಜಜ್ಜಿಹೋಯಿತು. ನೀನು ನನ್ನ ಜೀವಿತವನ್ನು ಅಷ್ಟು ಅಲ್ಪಕಾಲಕ್ಕೇ ಕೊನೆಗೊಳಿಸಿದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಬೆಳಗಿನ ತನಕ ಕೂಗಿಕೊಂಡೇ ಇದ್ದೆನು. ಆತನು ಸಿಂಹದಂತೆ ನನ್ನ ಎಲುಬುಗಳನ್ನೆಲ್ಲಾ ಮುರಿಯುತ್ತಿದ್ದರೂ, ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀಯಲ್ಲಾ ಎಂದು ಪ್ರಲಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸಿಂಹವು ಮೇಲೆಬಿದ್ದು ಮೂಳೆ ಮುರಿದಂತೆ ನನಗಾಗುತ್ತಿತ್ತು ಅತೀವ ಬಾಧೆ, ಆದರೂ ಇರುಳೆಲ್ಲ ಮೊರೆಯಿಡುತ್ತಿದ್ದೆ ಬೆಳಗು ಬೈಗಿನೊಳಗೆ ನೀ ನನ್ನ ಮುಗಿಸುತ್ತಿರುವೆನೆಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನು ಸಿಂಹದಂತೆ ನನ್ನ ಎಲುಬುಗಳನ್ನೆಲ್ಲಾ ಮುರಿಯುತ್ತಿದ್ದರೂ ಬೆಳಗಿನ ತನಕ ತಡಕೊಂಡೇ ಇದ್ದೆನು. ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀಯಲ್ಲಾ ಎಂದು ಪ್ರಲಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹೌದು, ದೇವರು ಸಿಂಹದಂತೆ ನನ್ನ ಎಲುಬುಗಳನ್ನೆಲ್ಲಾ ಮುರಿಯುತ್ತಿದ್ದರೂ, ಬೆಳಗಿನತನಕ ತಡೆದುಕೊಂಡೇ ಇದ್ದೆನು. ನೀವು ನನ್ನನ್ನು ಅಂತ್ಯಗೊಳಿಸುತ್ತೀರಲ್ಲಾ ಎಂದು ಹಗಲುರಾತ್ರಿ ಪ್ರಲಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 38:13
15 ತಿಳಿವುಗಳ ಹೋಲಿಕೆ  

ಆಗ ರಾಜನು ದಾನಿಯೇಲನ ಮೇಲೆ ದೋಷಾರೋಪಣೆಯನ್ನು ಮಾಡಿದ ಜನರನ್ನು ಸಿಂಹಗಳ ಗುಹೆಗೆ ಕರೆತರಬೇಕೆಂದು ಆಜ್ಞಾಪಿಸಿದನು. ಆ ಜನರನ್ನೂ ಅವರ ಹೆಂಡತಿಮಕ್ಕಳನ್ನೂ ಸಹಿತವಾಗಿ ಸಿಂಹಗಳ ಗುಹೆಯಲ್ಲಿ ಎಸೆಯಲಾಯಿತು. ಅವರು ಗುಹೆಯ ನೆಲಕ್ಕೆ ಮುಟ್ಟುವ ಮೊದಲೇ ಸಿಂಹಗಳು ಅವರನ್ನು ಎಳೆದುಕೊಂಡವು. ಸಿಂಹಗಳು ಅವರ ದೇಹಗಳನ್ನು ತಿಂದು ಎಲುಬುಗಳನ್ನು ಅಗಿದುಹಾಕಿದವು.


ನನ್ನಲ್ಲಿ ಆನಂದವನ್ನೂ ಉಲ್ಲಾಸವನ್ನೂ ಬರಮಾಡು. ನೀನು ಜಜ್ಜಿಹಾಕಿದ ಮೂಳೆಗಳು ಮತ್ತೆ ಉಲ್ಲಾಸಿಸಲಿ!


ಯಾಕೆಂದರೆ ನಾನು ಎಫ್ರಾಯೀಮನಿಗೆ ಸಿಂಹದಂತಿರುವೆನು. ಯೆಹೂದ ಜನಾಂಗದವರಿಗೆ ನಾನು ಪ್ರಾಯದ ಸಿಂಹದಂತಿರುವೆನು. ಹೌದು, ಯೆಹೋವನಾದ ನಾನು ಅವರನ್ನು ಹರಿದು ಚೂರುಚೂರಾಗಿ ಮಾಡುವೆನು. ನಾನು ಅವರನ್ನು ಎತ್ತಿಕೊಂಡು ಹೋಗುವೆನು. ಯಾರೂ ಅವರನ್ನು ನನ್ನಿಂದ ರಕ್ಷಿಸಲಾರರು.


ದೇವರನ್ನು ಮರೆತುಬಿಟ್ಟವರೇ, ಇದನ್ನು ಗಮನಕ್ಕೆ ತಂದುಕೊಳ್ಳಿರಿ. ಇಲ್ಲವಾದರೆ ನಿಮ್ಮನ್ನು ತುಂಡುತಂಡು ಮಾಡುವೆನು; ಯಾರೂ ನಿಮ್ಮನ್ನು ರಕ್ಷಿಸಲಾರರು!


ನನ್ನನ್ನು ಶಿಕ್ಷಿಸುವುದನ್ನು ನಿಲ್ಲಿಸು. ಇಲ್ಲವಾದರೆ, ನಾನು ಸತ್ತೇ ಹೋಗುವೆನು.


ಆದ್ದರಿಂದ ಮೊದಲನೆಯ ಪ್ರವಾದಿಯು, “ಯೆಹೋವನ ಆಜ್ಞೆಗೆ ನೀನು ವಿಧೇಯನಾಗಲಿಲ್ಲ. ನೀನು ಈ ಸ್ಥಳವನ್ನು ಬಿಟ್ಟು ಹೊರಟಾಗ ನಿನ್ನನ್ನು ಒಂದು ಸಿಂಹವು ಕೊಂದುಹಾಕುತ್ತದೆ” ಎಂದು ಹೇಳಿದನು. ಎರಡನೆಯ ಪ್ರವಾದಿಯು ಆ ಸ್ಥಳವನ್ನು ಬಿಟ್ಟು ಹೊರಟಾಗ ಒಂದು ಸಿಂಹವು ಅವನನ್ನು ಕೊಂದುಹಾಕಿತು.


ನೀನು ನನಗೆ ಸಹಾಯ ಮಾಡದಿದ್ದರೆ, ಸಿಂಹದ ಬಾಯಿಗೆ ಸಿಕ್ಕಿಕೊಂಡಿರುವ ಪ್ರಾಣಿಯಂತಾಗುವೆನು; ರಕ್ಷಣೆಯೇ ಇಲ್ಲದವನಾಗಿ ಸೀಳಿಹಾಕಲ್ಪಡುವೆನು.


ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು. ನಾನು ಬೇಸಿಗೆಯಲ್ಲಿ ಒಣಗಿಹೋದ ಭೂಮಿಯಂತಾದೆನು.


ಆತನು ನನ್ನ ಮಾಂಸವನ್ನು ಮತ್ತು ಚರ್ಮವನ್ನು ಕಂದಿಸಿದ್ದಾನೆ. ಆತನು ನನ್ನ ಮೂಳೆಗಳನ್ನು ಮುರಿದುಹಾಕಿದನು.


“ನನ್ನ ದಿನಗಳು ಮಗ್ಗದ ಲಾಳಿಗಿಂತಲೂ ವೇಗವಾಗಿ ಹೋಗುತ್ತವೆ. ನನ್ನ ಜೀವಿತವು ನಿರೀಕ್ಷೆಯಿಲ್ಲದೆ ಕೊನೆಗೊಳ್ಳುವುದು.


ನೀನು ನಮ್ಮನ್ನು ಗುಡಿಸಿಹಾಕುವೆ. ನಮ್ಮ ಜೀವನವು ಕನಸಿನಂತಿದೆ; ಹೊತ್ತಾರೆಯಲ್ಲಿ ನಾವು ಇಲ್ಲವಾಗುತ್ತೇವೆ. ನಾವು ಹುಲ್ಲಿನಂತಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು