Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 38:17 - ಪರಿಶುದ್ದ ಬೈಬಲ್‌

17 ಇಗೋ, ನನ್ನ ಸಂಕಟವೆಲ್ಲಾ ಹೊರಟುಹೋಯಿತು. ನನಗೀಗ ಸಮಾಧಾನವಿದೆ. ನೀನು ನನ್ನನ್ನು ಬಹಳವಾಗಿ ಪ್ರೀತಿಸುವದರಿಂದ ನನ್ನ ಶರೀರವು ಸಮಾಧಿಯಲ್ಲಿ ಕೊಳೆಯುವಂತೆ ಮಾಡಲಿಲ್ಲ. ನೀನು ನನ್ನ ಪಾಪಗಳನ್ನು ಕ್ಷಮಿಸಿದೆ. ನನ್ನ ಪಾಪಗಳನ್ನು ಬಹುದೂರ ಬಿಸಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು, ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಮೇಲೆ ಹಾಕಿಕೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾ ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ನನ್ನಾತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ; ನನ್ನ ಪಾಪಗಳನ್ನೆಲ್ಲಾ ನೀ ಹಾಕಿರುವೆ ನಿನ್ನ ಬೆನ್ನ ಹಿಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು, ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಹಿಂದೆ ಹಾಕಿಬಿಟ್ಟಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು. ಆದರೆ ನನ್ನ ಆತ್ಮವನ್ನು ನಾಶದಿಂದ ಬಿಡುಗಡೆ ಮಾಡಿದ್ದು ನಿಮ್ಮ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 38:17
20 ತಿಳಿವುಗಳ ಹೋಲಿಕೆ  

“ನಿಮ್ಮ ಪಾಪಗಳನ್ನೆಲ್ಲಾ ಅಳಿಸಿ ಹಾಕುವಾತನು ನಾನೇ. ನಾನು ಇದನ್ನು ನನಗೋಸ್ಕರವಾಗಿ ಮಾಡುತ್ತೇನೆ. ನಾನು ನಿಮ್ಮ ಪಾಪಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.


ನಾನು ಸಮುದ್ರದ ತಳದಲ್ಲಿದ್ದೆನು. ಅಲ್ಲಿಂದ ಪರ್ವತಗಳು ಉಗಮವಾಗುತ್ತವೆ. ‘ನಾನು ಈ ಸೆರೆಮನೆಯಲ್ಲಿ ಎಂದೆಂದಿಗೂ ಬಂಧಿತನಾದೆನು’ ಎಂದು ನೆನಸಿದೆನು. ಆದರೆ ನನ್ನ ದೇವರಾದ ಯೆಹೋವನು ಸಮಾಧಿಯಿಂದ ನನ್ನನ್ನು ಹೊರತಂದನು. ಯೆಹೋವನೇ ನೀನು ಪುನಃ ನನಗೆ ಜೀವ ಕೊಟ್ಟೆ.


ತಮ್ಮ ನೆರೆಮನೆಯವರಿಗೂ ತಮ್ಮ ಬಂಧುಬಳಗದವರಿಗೂ ಯಾರೂ ಯೆಹೋವನ ಬಗ್ಗೆ ಹೇಳಿಕೊಡಬೇಕಾಗಿಲ್ಲ. ಯಾಕೆಂದರೆ ಅತಿ ಕನಿಷ್ಠರಿಂದ ಅತಿ ಪ್ರಮುಖರವರೆಗೆ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಕ್ಷಮಿಸುವೆನು. ನಾನು ಅವರ ಪಾಪಗಳನ್ನು ಮರೆತುಬಿಡುವೆನು.” ಇದು ಯೆಹೋವನ ನುಡಿ.


ಯೆಹೋವನೇ, ನೀನು ನನ್ನನ್ನು ಸಾವಿನಿಂದ ಬದುಕಿಸಿದೆ; ಪಾತಾಳಕ್ಕೆ ಇಳಿದುಹೋಗದಂತೆ ನನ್ನನ್ನು ಕಾಪಾಡಿದೆ.


ನೀನು ನನ್ನ ಮೇಲೆ ಎಷ್ಟೋ ಪ್ರೀತಿಯನ್ನು ಇಟ್ಟಿರುವೆ. ನೀನು ನನ್ನನ್ನು ಪಾತಾಳದಿಂದ ರಕ್ಷಿಸಿದೆ.


ನಿನ್ನ ಜನರ ದ್ರೋಹವನ್ನು ಕ್ಷಮಿಸು! ಅವರ ಪಾಪಗಳನ್ನು ಅಳಿಸಿಬಿಡು!


ಆತನು ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು. ಆತನು ನನ್ನನ್ನು ಕೆಸರಿನ ಸ್ಥಳದಿಂದ ಮೇಲೆತ್ತಿ ಬಂಡೆಯ ಮೇಲಿರಿಸಿದನು; ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.


ದುಷ್ಟರು ಗರ್ವಿಷ್ಠರಾಗಿ ಬಡವರನ್ನು ಹಿಂದಟ್ಟಿ ಹೋಗುತ್ತಿದ್ದರೆ, ಆ ದುಷ್ಟರ ಕುಯುಕ್ತಿಯಲ್ಲಿ ಅವರು ಸಿಕ್ಕಿಬೀಳುವರು.


“ನನ್ನ ಬಗ್ಗೆ ಆಲೋಚಿಸುತ್ತಾ, ‘ನನ್ನ ದಿನಗಳು ಮರಳಿನ ಕಣಗಳಷ್ಟು ಅಸಂಖ್ಯಾತವಾಗಿವೆ; ನಾನು ನನ್ನ ಸ್ವಂತ ಮನೆಯಲ್ಲಿ ಮರಣಹೊಂದುವೆನು.


‘ಇವನನ್ನು ಪಾತಾಳದಿಂದ ರಕ್ಷಿಸು! ಇವನಿಗೋಸ್ಕರ ಪ್ರಾಯಶ್ಚಿತ್ತದ ಮಾರ್ಗವೊಂದನ್ನು ಕಂಡುಕೊಂಡಿದ್ದೇನೆ’ ಎಂದು ಹೇಳಿದರೆ


ದೇವರೇ, ನೀನು ದುಷ್ಟರನ್ನು ಪಾತಾಳಕ್ಕೆ ದಬ್ಬಿಬಿಡುವೆ. ಕೊಲೆಪಾತಕರೂ ವಂಚಕರೂ ತಮ್ಮ ಅರ್ಧಾಯುಷ್ಯವಾದರೂ ಬದುಕರು. ನಾನಾದರೊ ನಿನ್ನನ್ನೇ ನಂಬಿಕೊಂಡಿರುವೆನು.


ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟೋ ದೂರವಿರುವಂತೆ ನಮ್ಮ ಪಾಪಗಳನ್ನು ನಮ್ಮಿಂದ ತೆಗೆದು ದೂರ ಮಾಡಿದ್ದಾನೆ.


ನಾನೇನು ಹೇಳಲಿ? ನನಗೆ ಸಂಭವಿಸಲಿರುವುದನ್ನು ನನ್ನ ಒಡೆಯನು ತಿಳಿಸಿದ್ದಾನೆ. ನನ್ನ ಒಡೆಯನು ಅದನ್ನು ನೆರವೇರಿಸುತ್ತಾನೆ. ನನ್ನ ಆತ್ಮದಲ್ಲಿ ಸಂಕಟಗಳೆಲ್ಲಾ ತುಂಬಿವೆ. ನಾನು ನನ್ನ ಜೀವಮಾನವೆಲ್ಲಾ ದೀನನಾಗುವೆನು.


ಆತನು ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸುವನು; ನಮ್ಮ ಕಾಯಿಲೆಗಳನ್ನೆಲ್ಲಾ ವಾಸಿಮಾಡುವನು.


ಆತನು ನಮ್ಮ ಜೀವವನ್ನು ನಾಶನದಿಂದ ರಕ್ಷಿಸಿ ನಮಗೆ ಪ್ರೀತಿಯನ್ನೂ ಕನಿಕರವನ್ನೂ ತೋರುವನು.


“ನನ್ನ ಆತ್ಮಕ್ಕೆ ಯಾವ ನಿರೀಕ್ಷೆಯೂ ಇರಲಿಲ್ಲ. ಆಗ ನಾನು ಯೆಹೋವನನ್ನು ಸ್ಮರಿಸಿದೆನು. ಯೆಹೋವನೇ, ನಾನು ನಿನಗೆ ಪ್ರಾರ್ಥಿಸಿದೆನು. ನೀನು ನಿನ್ನ ಪವಿತ್ರ ಆಲಯದಿಂದ ನನ್ನ ಪ್ರಾರ್ಥನೆಯನ್ನು ಕೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು