Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 39:1 - ಪರಿಶುದ್ದ ಬೈಬಲ್‌

1 ಆ ಸಮಯದಲ್ಲಿ ಬಲದಾನ್ ಎಂಬವನ ಮಗನಾದ ಮೆರೋದಕಬಲದಾನ್ ಎಂಬವನು ಬಾಬಿಲೋನಿನ ಅರಸನಾಗಿದ್ದನು. ಅವನಿಗೆ ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂಬ ವರ್ತಮಾನ ತಲುಪಿದ್ದರಿಂದ ಅವನು ಹಿಜ್ಕೀಯನಿಗೆ ಒಂದು ಪತ್ರವನ್ನೂ ಜೊತೆಗೆ ಬಹುಮಾನಗಳನ್ನೂ ತನ್ನ ದೂತರ ಸಂಗಡ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕ ಬಲದಾನನೆಂಬುವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅದೇ ಕಾಲದಲ್ಲಿ ಬಲದಾನನ ಮಗನು ಹಾಗೂ ಬಾಬಿಲೋನಿಯದ ಅರಸನು ಆದ ಮೆರೋದಕಬಲದಾನ ಎಂಬವನು, ರಾಜ ಹಿಜ್ಕೀಯನು ರೋಗದಿಂದ ಗುಣಹೊಂದಿದನು ಎಂದು ಕೇಳಿ ಅವನಿಗೆ ಉಡುಗೊರೆಯೊಂದಿಗೆ ಒಂದು ಪತ್ರವನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕಬಲದಾನನೆಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರವನ್ನೂ ಬಹುಮಾನವನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬಿಲೋನಿನ ಅರಸನೂ ಆದ ಮೆರೋದಕ್ ಬಲದಾನ್ ಎಂಬವನು, ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿದ್ದರಿಂದ ಪತ್ರಗಳನ್ನೂ, ಉಡುಗೊರೆಗಳನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 39:1
11 ತಿಳಿವುಗಳ ಹೋಲಿಕೆ  

ಆಗ ತೂರಿನ ಜನರು ಹೀಗೆನ್ನುವರು: “ಬಾಬಿಲೋನಿನವರು ನಮಗೆ ಸಹಾಯಮಾಡುವರು.” ಆದರೆ ಕಸ್ದೀಯರ ದೇಶವನ್ನು ನೋಡಿ. ಬಾಬಿಲೋನ್ ಈಗ ದೇಶವಲ್ಲ. ಬಾಬಿಲೋನನ್ನು ಅಶ್ಶೂರವು ವಶಪಡಿಸಿಕೊಂಡು ಅದರ ಸುತ್ತಲೂ ಕಾವಲು ಬುರುಜುಗಳನ್ನು ಕಟ್ಟಿಸಿದೆ. ಅಲ್ಲಿದ್ದ ಸುಂದರ ಮನೆಗಳಿಂದ ಸೈನಿಕರು ಎಲ್ಲವನ್ನು ದೋಚಿರುತ್ತಾರೆ. ಅಶ್ಶೂರ ಬಾಬಿಲೋನನ್ನು ಕಾಡುಪ್ರಾಣಿಗಳ ವಾಸಸ್ಥಳವನ್ನಾಗಿ ಮಾಡಿದೆ. ಅವರು ಬಾಬಿಲೋನನ್ನು ಪಾಳುಬಿದ್ದ ಅವಶೇಷವನ್ನಾಗಿ ಮಾಡಿದ್ದಾರೆ.


ಆ ಸಮಯದಲ್ಲಿ ಬಾಬಿಲೋನಿನ ಅರಸನ ಬಗ್ಗೆ ನೀವು ಹೀಗೆ ಹಾಡುವಿರಿ: ಅರಸನು ನಮ್ಮನ್ನಾಳುವಾಗ ಬಹಳ ಕ್ರೂರವಾಗಿದ್ದನು. ಆದರೆ ಈಗ ಅವನ ಆಳ್ವಿಕೆಯು ಅಂತ್ಯವಾಯಿತು.


ಬಾಬಿಲೋನು ಸೊದೋಮ್ ಗೊಮೋರಗಳಂತೆ ನಾಶವಾಗುವದು. ದೇವರೇ ಇದನ್ನು ಮಾಡುವನು. ಆಗ ಅಲ್ಲಿ ಏನೂ ಉಳಿಯದು. “ಎಲ್ಲಾ ರಾಜ್ಯಗಳಿಗಿಂತ ಬಾಬಿಲೋನ್ ಬಹಳ ಸುಂದರವಾಗಿದೆ. ಬಾಬಿಲೋನಿಯರು ತಮ್ಮ ನಗರದ ಬಗ್ಗೆ ತುಂಬಾ ಹೆಚ್ಚಳಪಡುತ್ತಾರೆ.


ಆಮೋಚನ ಮಗನಾದ ಯೆಶಾಯನಿಗೆ ಬಾಬಿಲೋನಿನ ಬಗ್ಗೆ ದೊರೆತ ದೈವಸಂದೇಶ:


ಒಂದು ಸಾರಿ ಬಾಬಿಲೋನಿನವರು ಹಿಜ್ಕೀಯನ ಬಳಿಗೆ ದೂತರನ್ನು ಕಳುಹಿಸಿದರು. ಅವರು ದೇಶದಲ್ಲಿ ಆದ ಅದ್ಭುತ ವಿಷಯದ ಬಗ್ಗೆ ವಿಚಾರಿಸಿದರು. ಅವರು ಹಿಜ್ಕೀಯನ ಬಳಿಗೆ ಬಂದಾಗ ದೇವರು ಅವನನ್ನು ಪರೀಕ್ಷಿಸುವುದಕ್ಕಾಗಿಯೂ ಅವನ ಹೃದಯದಲ್ಲಿದ್ದ ಪ್ರತಿಯೊಂದು ಆಲೋಚನೆಯನ್ನು ತಿಳಿದುಕೊಳ್ಳುವುದಕ್ಕಾಗಿಯೂ ಅವನನ್ನು ತೊರೆದುಬಿಟ್ಟನು.


ಎಷ್ಟೋ ಜನರು ಜೆರುಸಲೇಮಿನಲ್ಲಿನ ದೇವರಾದ ಯೆಹೋವನಿಗೆ ಕಾಣಿಕೆಗಳನ್ನು ತಂದರು. ಹಾಗೆಯೇ ಅರಸನಾದ ಹಿಜ್ಕೀಯನಿಗೂ ಬೆಲೆಬಾಳುವ ವಸ್ತುಗಳನ್ನು ತಂದರು. ಅಂದಿನಿಂದ ಬೇರೆ ದೇಶದವರು ಹಿಜ್ಕೀಯನನ್ನು ಗೌರವಿಸಿದರು.


ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದನು. ಆದ್ದರಿಂದ ಅವನ ಮಗನಿಗೆ ನಾನು ದಯೆತೋರಿಸುವೆನು” ಎಂದು ಹೇಳಿದನು. ಆದ್ದರಿಂದ ತಂದೆಯ ಸಾವಿನಿಂದ ಶೋಕತಪ್ತನಾಗಿರುವ ಹಾನೂನನನ್ನು ಸಂತೈಸಲು ದಾವೀದನು ತನ್ನ ಅಧಿಕಾರಿಗಳನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಹೋದರು.


ಆಗ ತೋವಿಯು ತನ್ನ ಮಗನಾದ ಯೋರಾಮನನ್ನು ರಾಜನಾದ ದಾವೀದನ ಬಳಿಗೆ ಕಳುಹಿಸಿದನು. ದಾವೀದನು ಹದದೆಜೆರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಯೋರಾಮನು ದಾವೀದನನ್ನು ಅಭಿನಂದಿಸಿದನು ಮತ್ತು ಆಶೀರ್ವದಿಸಿದನು. (ಈ ಮೊದಲು ಹದದೆಜೆರನು ತೋವಿಗೆ ವಿರುದ್ಧವಾಗಿ ಯುದ್ಧವನ್ನು ಮಾಡಿದನು.) ಯೋರಾಮನು ಚಿನ್ನ, ಬೆಳ್ಳಿ ಮತ್ತು ಹಿತ್ತಾಳೆಯಿಂದ ಮಾಡಿದ ವಸ್ತುಗಳನ್ನು ತಂದಿದ್ದನು.


ಆದರೆ ಹಿಜ್ಕೀಯನ ಹೃದಯವು ಗರ್ವದಿಂದ ತುಂಬಿತ್ತು. ಅವನು ದೇವರ ಕರುಣೆಗಾಗಿ ಉಪಕಾರಸ್ತುತಿ ಹೇಳಲಿಲ್ಲ. ಇದರಿಂದಾಗಿ ಆತನು ಹಿಜ್ಕೀಯನ ಮೇಲೂ ಯೆಹೂದ ಮತ್ತು ಜೆರುಸಲೇಮಿನ ಜನರ ಮೇಲೂ ಕೋಪಗೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು