20 ಅದರ ಪೀಠಕ್ಕಾಗಿ ವಿಶೇಷ ಜಾತಿಯ ಮರವನ್ನು ಆರಿಸುವನು. ಈ ಬಗೆಯ ಮರವು ಕೊಳೆತುಹೋಗುವದಿಲ್ಲ. ಆ ಬಳಿಕ ಅವನು ಒಳ್ಳೆಯ ಬಡಗಿಯನ್ನು ನೇಮಿಸುವನು. ಆ ಬಡಗಿಯು ವಿಗ್ರಹ ನಿಲ್ಲಿಸಿದಾಗ ಅದು ಪಕ್ಕಕ್ಕೆ ವಾಲಿ ಬೀಳದಂತೆ ಮಾಡುವನು.
ಅವರು ಆ ವಿಗ್ರಹವನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ಹೊರುತ್ತಾರೆ. ಆ ಸುಳ್ಳುದೇವರುಗಳು ನಿಷ್ಪ್ರಯೋಜಕವಾಗಿವೆ. ಜನರೇ ಅವುಗಳನ್ನು ಹೊತ್ತುಕೊಳ್ಳಬೇಕು. ಜನರು ಅವುಗಳನ್ನು ನೆಲದ ಮೇಲೆ ಇಟ್ಟಾಗ ಅವು ಅಲ್ಲಾಡುವದಿಲ್ಲ. ತಮ್ಮ ಸ್ಥಳದಿಂದ ಆ ಸುಳ್ಳುದೇವರುಗಳು ಎದ್ದುಹೋಗುವದಿಲ್ಲ. ಜನರು ಅದರ ಮುಂದೆ ಕೂಗಿಕೊಂಡರೂ ಅವು ಕೇಳಿಸಿಕೊಳ್ಳುವದಿಲ್ಲ. ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳಷ್ಟೇ. ಅವು ಜನರನ್ನು ಅವರ ಕಷ್ಟಗಳಿಂದ ಬಿಡಿಸಲಾರವು.
ಒಬ್ಬ ಕೆಲಸಗಾರನು ಮರವನ್ನು ಕಡಿದು ಅದರಿಂದ ವಿಗ್ರಹವನ್ನು ಮಾಡುವನು. ಅವನು ಬಂಗಾರದ ಕೆಲಸದವನನ್ನು ಪ್ರೋತ್ಸಾಹಿಸುವನು. ಇನ್ನೊಬ್ಬನು ತನ್ನ ಸುತ್ತಿಗೆಯಿಂದ ತಗಡನ್ನು ಸಮತಟ್ಟು ಮಾಡುವನು. ಅವನು ಕಬ್ಬಿಣದ ಕೆಲಸದವನನ್ನು ಪ್ರೋತ್ಸಾಹಿಸುವನು. ಈ ಕೆಲಸದವನು ‘ಇದು ಒಳ್ಳೆಯ ಕೆಲಸ. ತಗಡು ಹೊರಗೆ ಬರಲಾರದು’ ಎಂದು ಹೇಳಿ ಆ ವಿಗ್ರಹವನ್ನು ಪೀಠಕ್ಕೆ ಮೊಳೆ ಹೊಡೆದು ಭದ್ರಪಡಿಸುವನು. ಈಗ ವಿಗ್ರಹವು ಅಲ್ಲಾಡುವದಿಲ್ಲ, ಕೆಳಕ್ಕೆ ಬೀಳುವದಿಲ್ಲ.”
ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.
ಒಬ್ಬನು ಕುಲಿಮೆಯ ಬೆಂಕಿಯ ಮೇಲೆ ಕಬ್ಬಿಣವನ್ನು ಕಾಯಿಸುತ್ತಾನೆ. ಅವನು ತನ್ನ ಸುತ್ತಿಗೆಯಿಂದ ಆ ಲೋಹವನ್ನು ವಿಗ್ರಹವನ್ನಾಗಿ ಮಾಡುತ್ತಾನೆ. ಅವನು ಅದನ್ನು ತನ್ನ ತೋಳ್ಬಲದಿಂದ ಮಾಡುತ್ತಾನೆ. ಆದರೆ ಅವನು ಹಸಿದಾಗ ಅವನ ಶಕ್ತಿಯು ಕಡಿಮೆಯಾಗುತ್ತದೆ. ಆ ಮನುಷ್ಯನು ನೀರನ್ನು ಕುಡಿಯದಿದ್ದರೆ ಅವನು ಬಲಹೀನನಾಗುವನು.