Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:24 - ಪರಿಶುದ್ದ ಬೈಬಲ್‌

24 ಇವರು ನೆಲದಲ್ಲಿ ನೆಟ್ಟಿರುವ ಸಸಿಗಳಂತಿರುವರು. ಅವುಗಳ ಬೇರುಗಳು ನೆಲದೊಳಗೆ ಆಳವಾಗಿ ಹೋಗುವ ಮೊದಲೇ ದೇವರ ಉಸಿರಿಗೆ ಅವು ಬಾಡಿ ಸಾಯುವವು; ಗಾಳಿಯು ಒಣಹುಲ್ಲಿನಂತೆ ಅವುಗಳನ್ನು ಬಡಿದುಕೊಂಡು ಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂಮಿಯಲ್ಲಿ ಬೇರೂರಿದಾಗಲೇ, ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನೆಟ್ಟಕೂಡಲೇ, ಬಿತ್ತಿದಾಕ್ಷಣವೇ, ಭೂಮಿಯಲ್ಲಿ ಬೇರೂರುವಾಗಲೆ ಬಾಡುವುದು ಇವರ ಸಂತಾನ ಆತನ ಶ್ವಾಸದಿಂದಲೆ; ಬಡಿದು ಹೊಯ್ಯಲ್ಪಡುವುದು ಒಣಹುಲ್ಲಿನಂತೆ ಬಿರುಗಾಳಿಯಿಂದಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂವಿುಯಲ್ಲಿ ಬೇರೂರಿದಾಗಲೇ, ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇವರು ನೆಟ್ಟಕೂಡಲೇ, ಬಿತ್ತಿದಾಕ್ಷಣವೇ, ಭೂಮಿಯಲ್ಲಿ ಬೇರೂರಿದಾಗಲೇ, ಆತನ ಶ್ವಾಸವನ್ನು ಇವರ ಮೇಲೆ ಊದಿದಾಗಲೇ ಒಣಗಿ ಹೋಗುವರು. ಬಿರುಗಾಳಿಯು ಇವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:24
28 ತಿಳಿವುಗಳ ಹೋಲಿಕೆ  

ನೀವು ಅವುಗಳನ್ನು ಗಾಳಿಗೆ ತೂರಿಬಿಡುವಿರಿ. ಗಾಳಿಯು ಅವುಗಳನ್ನು ಹಾರಿಸಿ ಚದರಿಸಿಬಿಡುವುದು. ಆಗ ನೀವು ಯೆಹೋವನಲ್ಲಿ ಸಂತಸಪಡುವಿರಿ. ಇಸ್ರೇಲರ ಪರಿಶುದ್ಧನಲ್ಲಿ ಹೆಚ್ಚಳಪಡುವಿರಿ.


ಈಗ ಯೆಹೋವನಿಂದ ದಂಡನೆಯು ಬಿರುಗಾಳಿಯಂತೆ ಬರುವುದು. ಯೆಹೋವನ ಕೋಪವು ತೂಫಾನಿನಂತೆ ದುಷ್ಟರ ತಲೆಯ ಮೇಲೆ ಆರ್ಭಟಿಸಿ ಬೀಳುವುದು.


ದೇವರು ಗದರಿಸಿದಾಗ ಜನರು ಓಡಿಹೋಗುವರು. ಆ ಜನರು ಗಾಳಿಯಲ್ಲಿ ಹಾರಿಹೋಗುವ ಹೊಟ್ಟಿನಂತಿರುವರು; ಬಿರುಗಾಳಿಯು ಬಹುದೂರಕ್ಕೆ ಕೊಂಡೊಯ್ಯುವ ಬೇರಿಲ್ಲದ ಹಣಜಿಗಳಂತಿರುವರು.


ಯೆಹೋವನು ಅವರಿಗೆ ಕಾಣಿಸಿಕೊಂಡು ತನ್ನ ಬಾಣವನ್ನು ಮಿಂಚಿನ ವೇಗದಲ್ಲಿ ಹಾರಿಸುವನು. ನನ್ನ ಒಡೆಯನಾದ ಯೆಹೋವನು ತುತ್ತೂರಿ ಊದಿದಾಗ ಮರುಭೂಮಿಯ ಬಿರುಗಾಳಿಯಂತೆ ಸೈನ್ಯವು ಮುಂದಕ್ಕೆ ನುಗ್ಗುವುದು.


ನಾನು ಇತರ ಜನಾಂಗಗಳನ್ನು ಬಿರುಗಾಳಿಯಂತೆ ಅವರ ಬಳಿಗೆ ಕಳುಹಿಸುವೆನು. ಆ ರಾಷ್ಟ್ರಗಳನ್ನು ಅವರು ತಿಳಿದಿರಲಿಲ್ಲ. ಆದರೆ ಆ ದೇಶಗಳವರು ಇವರ ದೇಶವನ್ನು ದಾಟಿಹೋಗುವಾಗ ಆ ಸುಂದರವಾದ ದೇಶವು ನಾಶವಾಗುವದು.”


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ದೊಡ್ಡ ಸುಗ್ಗಿಯನ್ನು ಎದುರು ನೋಡುತ್ತಿದ್ದೀರಿ. ಆದರೆ ನೀವು ಪೈರು ಕೊಯ್ಯಲು ಹೋಗುವಾಗ ಸ್ಪಲ್ಪವೇ ಕಾಳು ಇರುವುದು. ಅದನ್ನು ನೀವು ಮನೆಗೆ ತಂದಾಗ ನಾನು ಗಾಳಿಯನ್ನು ಕಳುಹಿಸಿ ಅವುಗಳನ್ನು ಹಾರಿಸಿಬಿಡುವೆನು. ಹೀಗೆಲ್ಲಾ ಯಾಕೆ ಆಗುತ್ತಿದೆ? ಯಾಕೆಂದರೆ, ನನ್ನ ಆಲಯವು ಇನ್ನೂ ಹಾಳುಬಿದ್ದಿದ್ದರೂ ನೀವೆಲ್ಲರೂ ನಿಮ್ಮ ನಿಮ್ಮ ಮನೆಗಳನ್ನು ನೋಡಿಕೊಳ್ಳುವುದಕ್ಕಾಗಿ ಓಡಿಹೋಗುತ್ತೀರಿ.


ಅಶ್ಶೂರದ ಅರಸನೇ, ನಿನ್ನ ವಿಷಯವಾಗಿ ಯೆಹೋವನು ಕೊಟ್ಟ ಆಜ್ಞೆ ಏನೆಂದರೆ, “ನಿನ್ನ ಹೆಸರನ್ನು ಧರಿಸುವ ಸಂತತಿಯವರು ಯಾರೂ ಇರುವುದಿಲ್ಲ. ನಿನ್ನ ಕೆತ್ತನೆಯ ವಿಗ್ರಹಗಳನ್ನು ನಾನು ನಾಶಮಾಡುವೆನು. ನಿನ್ನ ದೇವರುಗಳ ಆಲಯದಲ್ಲಿರುವ ಲೋಹದ ಬೊಂಬೆಗಳನ್ನು ಕೆಡವಿಬಿಡುವೆನು. ನಿನ್ನ ಅಂತ್ಯವು ಬೇಗನೆ ಬರಲಿರುವುದರಿಂದ ನಿನಗೆ ಸಮಾಧಿಯನ್ನು ತಯಾರುಮಾಡುತ್ತಿದ್ದೇನೆ.”


ಇಸ್ರೇಲ್ ತನ್ನ ಸಹೋದರರ ಮಧ್ಯದಲ್ಲಿ ಬೆಳೆಯುವನು. ಒಂದು ಬಲವಾದ ಪೂರ್ವದಿಕ್ಕಿನ ಗಾಳಿಯು ಬರುವದು. ಯೆಹೋವನ ಗಾಳಿಯು ಮರುಭೂಮಿಯಿಂದ ಬೀಸುವದು. ಅವನ ನೀರಿನ ಒರತೆಯು ಒಣಗಿಹೋಗುವದು, ಆ ಗಾಳಿಯು ಇಸ್ರೇಲರ ಐಶ್ವರ್ಯವನ್ನೆಲ್ಲಾ ಎತ್ತಿಕೊಂಡು ಹೋಗಿಬಿಡುವದು.


ಆದ್ದರಿಂದ ಆ ಜನರು ಬೇಗನೇ ಕಣ್ಮರೆಯಾಗುವರು. ಅವರು ಬೆಳಗಿನ ಜಾವದ ಇಬ್ಬನಿಯಂತೆ ಬೇಗನೇ ಮಾಯವಾಗುವರು. ಇಸ್ರೇಲರು ಕಣದಲ್ಲಿರುವ ಹೊಟ್ಟಿನಂತೆ ಗಾಳಿಯಲ್ಲಿ ಹೊಡೆದುಕೊಂಡು ಹೋಗುವರು. ಇಸ್ರೇಲರು ಮನೆಯೊಳಗಿಂದ ಮೇಲಕ್ಕೆ ಹೊರಟು ಆಮೇಲೆ ಕಾಣದೆಹೋಗುವ ಹೊಗೆಯಂತಿದ್ದಾರೆ.


ಯೆಹೋವನು ಹೇಳುವುದೇನೆಂದರೆ: “ಯೆಹೋಯಾಚೀನನು ಮಕ್ಕಳಿಲ್ಲದವನೆಂದು ನೊಂದಾಯಿಸಿರಿ. ಯೆಹೋಯಾಚೀನನು ತನ್ನ ಜೀವನದಲ್ಲಿ ಯಶಸ್ವಿಯಾಗುವುದಿಲ್ಲ. ಅವನ ಮಕ್ಕಳಲ್ಲಿ ಯಾರೂ ದಾವೀದನ ಸಿಂಹಾಸನವನ್ನೇರುವದಿಲ್ಲ. ಅವನ ಮಕ್ಕಳಲ್ಲಿ ಯಾರೂ ಯೆಹೂದದಲ್ಲಿ ರಾಜ್ಯಭಾರ ಮಾಡುವುದಿಲ್ಲ.”


ಯೆಹೋವನ ಕಡೆಯಿಂದ ಒಂದು ಬಲವಾದ ಗಾಳಿಯು ಹುಲ್ಲಿನ ಮೇಲೆ ಬೀಸಿತು. ಆ ಹುಲ್ಲು ಒಣಗಿಹೋಯಿತು. ಕಾಡಿನ ಪುಷ್ಪವು ಬಾಡಿಹೋಯಿತು.


ಇಗೋ, ನಾನು ಒಂದು ಆತ್ಮವನ್ನು ಅಶ್ಶೂರದ ವಿರುದ್ಧವಾಗಿ ಕಳುಹಿಸುತ್ತೇನೆ. ದೇಶಕ್ಕೆ ಬರಲಿರುವ ಅಪಾಯದ ಬಗ್ಗ ಎಚ್ಚರಿಕೆಯ ವರದಿಯು ರಾಜನಿಗೆ ಬರುತ್ತದೆ. ಅದನ್ನು ಕೇಳಿ ಅವನು ತನ್ನ ದೇಶಕ್ಕೆ ಹಿಂದಿರುಗುವನು. ಆಗ ಅವನ ದೇಶದಲ್ಲಿಯೇ ನಾನು ಅವನನ್ನು ಖಡ್ಗದಿಂದ ಸಂಹರಿಸುವೆನು.’” ಎಂದು ಹೇಳಿದನು.


ಒಂದು ದಿವಸ ಆ ಕೊಂಬೆಗಳನ್ನು ನೆಟ್ಟು ಅದು ಚಿಗುರುವಂತೆ ಮಾಡುವಿರಿ. ಮರುದಿವಸ ಅದು ಚಿಗುರುವದು. ಸುಗ್ಗಿಯ ಕಾಲದಲ್ಲಿ ನೀವು ದ್ರಾಕ್ಷಿತೋಟಕ್ಕೆ ಹೋದಾಗ ದ್ರಾಕ್ಷಿಬಳ್ಳಿಗಳೆಲ್ಲಾ ರೋಗದಿಂದ ಸತ್ತುಹೋಗಿರುವವು.


ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.


ಮಹಾ ಸಂಕಷ್ಟವು ಕೆಟ್ಟ ಬಿರುಗಾಳಿಯಂತೆ ನಿಮಗೆ ಬರುವುದು. ತೊಂದರೆಗಳು ಬಲವಾದ ಗಾಳಿಯಂತೆ ನಿಮಗೆ ಬಡಿಯುವುದು. ನಿಮ್ಮ ಕಷ್ಟಗಳು ಮತ್ತು ದುಃಖಗಳು ನಿಮ್ಮ ಮೇಲೆ ಬಹು ಭಾರವಾಗಿರುತ್ತವೆ.


ಒಲೆಯಲ್ಲಿ ಉರಿದುಹೋಗುವ ಮುಳ್ಳುಕಡ್ಡಿಗಳನ್ನು ಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಾಶಮಾಡಲಿ.


ಗಾಳಿಯು ಹುಲ್ಲನ್ನೂ ಬಿರುಗಾಳಿಯು ಹೊಟ್ಟನ್ನೂ ಬಡಿದುಕೊಂಡು ಹೋಗುವಂತೆ ದೇವರು ದುಷ್ಟರನ್ನು ಎಷ್ಟು ಸಲ ಬಡಿದುಕೊಂಡು ಹೋಗುವನು?


ದೇವರ ಉಸಿರು ಅವರನ್ನು ಕೊಲ್ಲುತ್ತದೆ; ಆತನ ಕೋಪದ ಗಾಳಿಯು ಅವರನ್ನು ನಾಶಮಾಡುತ್ತದೆ.


ಇಜ್ರೇಲಿನಲ್ಲಿ ವಾಸಿಸುತ್ತಿದ್ದ ಅಹಾಬನ ಕುಟುಂಬದ ಉಳಿದವರನ್ನೆಲ್ಲ ಯೇಹು ಕೊಂದುಹಾಕಿದನು. ಅಹಾಬನ ಆಪ್ತಮಿತ್ರರು, ಯಾಜಕರು ಮತ್ತು ಪ್ರಮುಖರನ್ನೆಲ್ಲ ಯೇಹುವು ಕೊಂದುಹಾಕಿದನು. ಅಹಾಬನ ಜನರಲ್ಲಿ ಯಾರನ್ನೂ ಉಳಿಸಲಿಲ್ಲ.


ಯೆಹೋವನೇ, ನೀನು ಗದರಿಸಿದಾಗ ನಿನ್ನ ಬಾಯಿಂದ ಪ್ರಬಲವಾದ ಗಾಳಿಯು ಬೀಸಿತು; ನೀರು ಹಿಂದಕ್ಕೆ ತಳ್ಳಲ್ಪಟ್ಟಿತು. ಸಮುದ್ರದ ತಳವೂ ಭೂಮಿಯ ಅಸ್ತಿವಾರಗಳು ಕಣ್ಣಿಗೆ ಗೋಚರವಾದವು.


ಬಹುಕಾಲದವರೆಗೆ ಅಗ್ನಿಕುಂಡ ಸಿದ್ಧವಾಗಿತ್ತು. ಅದು ರಾಜನಿಗಾಗಿ ಸಿದ್ಧವಾಗಿದೆ. ಅದು ಆಳವಾಗಿಯೂ ಅಗಲವಾಗಿಯೂ ಮಾಡಲ್ಪಟ್ಟಿದೆ. ಅಲ್ಲಿ ಒಂದು ದೊಡ್ಡ ಕಟ್ಟಿಗೆಯ ರಾಶಿಯೂ ಬೆಂಕಿಯೂ ಇದೆ ಮತ್ತು ಯೆಹೋವನ ಬಾಯುಸಿರು ಗಂಧಕದ ಪ್ರವಾಹದಂತೆ ಬಂದು ಎಲ್ಲವನ್ನು ನಾಶಮಾಡುವದು.


ಗಾಳಿಗೆ ತೂರಿಹೋಗುವ ಮೊಟಕುಬೇರಿನ ಕಳೆಯಂತೆ ಅವರನ್ನು ಮಾಡು. ಗಾಳಿಯು ಹೊಟ್ಟನ್ನು ಚದರಿಸುವಂತೆ ಅವರನ್ನು ಚದರಿಸು.


ಈ ಪ್ರಶ್ನೆಗಳಿಗೆ ಉತ್ತರಿಸಿರಿ: ಪೂರ್ವದಿಕ್ಕಿನಿಂದ ಬರುವ ಮನುಷ್ಯನನ್ನು ಎಚ್ಚರಿಸಿದವರು ಯಾರು? ಅವನು ಒಳ್ಳೆಯತನವನ್ನು ತನ್ನೊಂದಿಗಿರಲು ಕೇಳುತ್ತಾನೆ. ತನ್ನ ಖಡ್ಗವನ್ನು ಉಪಯೋಗಿಸಿ ಜನಾಂಗಗಳನ್ನು ಸೋಲಿಸುವನು. ಅವರನ್ನು ಧೂಳಿನಂತೆ ಮಾಡುವನು. ತನ್ನ ಬಿಲ್ಲನ್ನು ಉಪಯೋಗಿಸಿ ರಾಜರನ್ನು ವಶಪಡಿಸಿಕೊಳ್ಳುತ್ತಾನೆ. ಅವರು ಗಾಳಿಯಲ್ಲಿ ತೂರಾಡುವ ಹುಲ್ಲಿನಂತೆ ಓಡಿಹೋಗುವರು.


ಅದು ಕಲ್ಲುಕುಪ್ಪೆಯ ಸುತ್ತಲೂ ತನ್ನ ಬೇರುಗಳನ್ನು ಹೆಣೆದುಕೊಂಡು ಕಲ್ಲುಗಳಲ್ಲಿ ಬೆಳೆಯಲು ಒಂದು ಸ್ಥಳಕ್ಕಾಗಿ ನೋಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು