Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:30 - ಪರಿಶುದ್ದ ಬೈಬಲ್‌

30 ಯೌವನಸ್ಥರು ಆಯಾಸಗೊಳ್ಳುವರು. ಅವರಿಗೆ ವಿಶ್ರಾಂತಿ ಬೇಕು; ಹುಡುಗರೂ ಮುಗ್ಗರಿಸಿಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯುವಕರೂ ದಣಿದು ಬಳಲುವರು ತರುಣರೂ ಸೊರಗಿ ಮುಗ್ಗರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯೌವನಸ್ಥರೋ ದಣಿದು ಬಳಲುವರು ಮತ್ತು ತರುಣರು ಸಂಪೂರ್ಣವಾಗಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:30
11 ತಿಳಿವುಗಳ ಹೋಲಿಕೆ  

ಯಾರೂ ತಪ್ಪಿಸಿಕೊಳ್ಳಲಾರರು. ಅತಿ ವೇಗವಾದ ಓಟಗಾರರೂ ತಪ್ಪಿಸಿಕೊಳ್ಳಲಾರರು. ಬಲಶಾಲಿಗಳಿಗೂ ಶಕ್ತಿ ಸಾಲದು. ಸಿಪಾಯಿಗಳಿಗೂ ತಮ್ಮನ್ನು ಕಾಪಾಡಿಕೊಳ್ಳಲಾಗದು.


ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು. ಆದರೆ ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರು ಸುವರಗಳನ್ನು ಹೊಂದಿಕೊಳ್ಳುವರು.


ಮಹಾಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ. ಭುಜಬಲದಿಂದಲೇ ಯಾವ ಯುದ್ಧವೀರನೂ ಸುರಕ್ಷಿತನಾಗಿರಲಾರನು.


ಇದಲ್ಲದೆ ಲೋಕದಲ್ಲಿ ಇನ್ನೂ ಕೆಲವು ಅನ್ಯಾಯಗಳನ್ನು ಗಮನಿಸಿದ್ದೇನೆ. ಅತಿವೇಗದ ಓಟಗಾರನಿಗೆ ಓಟದಲ್ಲಿ ಯಾವಾಗಲೂ ಗೆಲುವಾಗದು; ಬಲಿಷ್ಠವಾದ ಸೈನ್ಯಕ್ಕೆ ಯುದ್ಧದಲ್ಲಿ ಯಾವಾಗಲೂ ಜಯವಾಗದು; ಜ್ಞಾನಿಗೆ ಯಾವಾಗಲೂ ಆಹಾರ ದೊರಕದು; ಜಾಣನಿಗೆ ಯಾವಾಗಲೂ ಐಶ್ವರ್ಯ ದೊರೆಯದು; ಪ್ರವೀಣರಿಗೆ ಯಾವಾಗಲೂ ಹೊಗಳಿಕೆಬಾರದು; ಸಮಯ ಬಂದಾಗ, ಪ್ರತಿಯೊಬ್ಬರಿಗೂ ಕೇಡುಗಳಾಗುತ್ತವೆ.


ಸೈನಿಕರು ಬಾಬಿಲೋನಿನ ಯುವಕರನ್ನು ಹಿಡಿದು ಕೊಲ್ಲುವರು. ಶಿಶುಗಳಿಗೂ ದಯೆತೋರುವುದಿಲ್ಲ; ಮಕ್ಕಳಿಗೆ ಕರುಣೆತೋರುವುದಿಲ್ಲ.


ಜನರೆಲ್ಲರೂ ದುಷ್ಟರಾಗಿದ್ದಾರೆ. ಆದ್ದರಿಂದ ಯೆಹೋವನು ಯುವಕರಲ್ಲಿ ಸಂತೋಷಿಸುವದಿಲ್ಲ. ಅವರ ವಿಧವೆಯರಿಗೆ ಮತ್ತು ಅನಾಥರಿಗೆ ದೇವರು ದಯೆ ತೋರಿಸುವುದಿಲ್ಲ; ಯಾಕೆಂದರೆ ಎಲ್ಲಾ ಜನರು ದುಷ್ಟರಾಗಿದ್ದಾರೆ. ಅವರು ದೇವರಿಗೆ ವಿರುದ್ಧವಾಗಿ ನಡೆಯುತ್ತಾರೆ. ಅವರು ಸುಳ್ಳಾಡುತ್ತಾರೆ. ಆದ್ದರಿಂದ ದೇವರು ಅವರ ಮೇಲೆ ಕೋಪದಿಂದಲೇ ಇರುವನು; ಅವರನ್ನು ದಂಡಿಸುತ್ತಲೇ ಇರುವನು.


ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತಿದೆ, ತಡೆದುತಡೆದು ನನಗೆ ಸಾಕಾಗಿದೆ. “ಬೀದಿಯಲ್ಲಾಡುವ ಮಕ್ಕಳ ಮೇಲೆ ಅದನ್ನು ಹೊಯ್ದುಬಿಡಬೇಕು. ಒಂದೆಡೆ ಸೇರುವ ತರುಣರ ಮೇಲೆ ಅದನ್ನು ಹೊಯ್ದುಬಿಡಬೇಕು. ಗಂಡಹೆಂಡತಿಯರಿಬ್ಬರನ್ನು ಅಪಹರಿಸಲಾಗುವುದು. ಮುದುಕರನ್ನೂ ಮುಪ್ಪಿನ ಮುದುಕರನ್ನೂ ಅಪಹರಿಸಲಾಗುವುದು.


ನೀನು ನನಗೆ ಕೇವಲ ಅಲ್ಪಾಯುಷ್ಯವನ್ನು ಕೊಟ್ಟಿರುವೆ. ನನ್ನ ಅಲ್ಪ ಜೀವಿತವು ನಿನ್ನ ದೃಷ್ಟಿಯಲ್ಲಿ ಗಣನೆಗೂ ಬಾರದು. ಮನುಷ್ಯನ ಜೀವಿತವು ಕೇವಲ ಮೋಡದಂತೆ ಕ್ಷಣಿಕವಾಗಿದೆ. ಯಾವನೂ ಸದಾಕಾಲ ಬದುಕುವುದಿಲ್ಲ!


ಮೃತ್ಯುವು ಬಂದು ನಮ್ಮ ಕಿಟಕಿಗಳಿಂದ ಇಳಿದಿದೆ. ಮೃತ್ಯುವು ನಮ್ಮ ಅರಮನೆಗಳಲ್ಲಿ ಪ್ರವೇಶ ಮಾಡಿದೆ. ಬೀದಿಯಲ್ಲಿ ಆಡುವ ನಮ್ಮ ಮಕ್ಕಳಿಗೆ ಮೃತ್ಯುವು ಹಿಡಿದುಕೊಂಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸೇರುವ ನಮ್ಮ ಯುವಕರಿಗೆ ಮೃತ್ಯುವು ಹಿಡಿದುಕೊಂಡಿದೆ.”


ವೈರಿಯು ಮೋವಾಬಿನ ಮೇಲೆ ಧಾಳಿ ಮಾಡುವನು. ವೈರಿಯು ಆ ಪಟ್ಟಣಗಳಲ್ಲಿ ಪ್ರವೇಶಮಾಡಿ ಅವುಗಳ ಧ್ವಂಸ ಮಾಡುವನು. ಅವಳ ಅತ್ಯುತ್ತಮ ತರುಣರು ಕೊಲೆಗೀಡಾಗುವರು.” ಈ ಸಂದೇಶವು ರಾಜನಿಂದ ಬಂದಿದೆ. ಆ ರಾಜನ ಹೆಸರು ಸರ್ವಶಕ್ತನಾದ ಯೆಹೋವನು ಎಂದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು