Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:4 - ಪರಿಶುದ್ದ ಬೈಬಲ್‌

4 ತಗ್ಗುಗಳನ್ನು ಸಮತಟ್ಟು ಮಾಡಿರಿ. ಎಲ್ಲಾ ಬೆಟ್ಟಗುಡ್ಡಗಳನ್ನು ನೆಲಸಮ ಮಾಡಿರಿ. ಕೊರಕಲು ರಸ್ತೆಗಳನ್ನು ನೆಟ್ಟಗೆ ಮಾಡಿರಿ. ಏರುತಗ್ಗು ನೆಲವನ್ನು ಸಮಗೊಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು, ಮಲೆನಾಡು ಬಯಲು ಸೀಮೆಯಾಗುವುದು. ಒರಟಾದ ನೆಲವು ಸಮವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತುಂಬಬೇಕು ಎಲ್ಲ ಹಳ್ಳಕೊಳ್ಳಗಳನು ಮಟ್ಟಮಾಡಬೇಕು ಎಲ್ಲ ಬೆಟ್ಟಗುಡ್ಡಗಳನು. ನೆಲಸಮಮಾಡಬೇಕು ದಿಬ್ಬದಿಣ್ಣೆಗಳನು ಸಮತಲಗೊಳಿಸಬೇಕು ತಗ್ಗುಮುಗ್ಗಾದ ಸ್ಥಳಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು, ಮಲೆನಾಡು ಬೈಲುಸೀಮೆಯಾಗುವದು, ಕೊರಕಲ ನೆಲವು ಸಮವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪ್ರತಿಯೊಂದು ಹಳ್ಳಕೊಳ್ಳಗಳನ್ನು ಮಟ್ಟಮಾಡಬೇಕು. ಎಲ್ಲಾ ಬೆಟ್ಟಗುಡ್ಡಗಳು ನೆಲಸಮವಾಗಬೇಕು. ಒರಟಾದ ನೆಲವು ಸಮವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:4
18 ತಿಳಿವುಗಳ ಹೋಲಿಕೆ  

ಪ್ರತಿಯೊಂದು ಕಣಿವೆಯು ಮುಚ್ಚಲ್ಪಡುವವು. ಪ್ರತಿಯೊಂದು ಬೆಟ್ಟಗುಡ್ಡಗಳು ಸಮನಾಗಿ ಮಾಡಲ್ಪಡುವವು. ಡೊಂಕಾದ ದಾರಿಗಳು ನೀಟಾಗುವವು. ಕೊರಕಲಾದ ದಾರಿಗಳು ಸಮವಾಗುವವು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಿನ್ನ ಮುಂಡಾಸವನ್ನು ತೆಗೆ! ನಿನ್ನ ಕಿರೀಟವನ್ನು ತೆಗೆ! ಈಗ ಇರುವಂತೆಯೇ ಸಂಗತಿಗಳು ಇರುವುದಿಲ್ಲ. ಮುಖ್ಯಾಧಿಕಾರಿಗಳು ತಗ್ಗಿಸಲ್ಪಡುವರು. ಈಗ ಸಾಧಾರಣ ವ್ಯಕ್ತಿಗಳಾಗಿರುವವರು ಪ್ರಮುಖ ನಾಯಕರುಗಳಾಗುವರು.


ಅವನು ಪ್ರಾರ್ಥಿಸಿದ ಬಳಿಕ ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ಮನೆಗೆ ಹೋದನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಆ ಫರಿಸಾಯನು ನೀತಿವಂತನೆಂದು ನಿರ್ಣಯಿಸಲ್ಪಡಲಿಲ್ಲ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”


ಸೈರಸನೇ, ನಿನ್ನ ಸೈನ್ಯವು ಮುನ್ನುಗ್ಗುವದು. ನಾನು ನಿನ್ನ ಮುಂದೆ ಹೋಗಿ ಪರ್ವತಗಳನ್ನು ನೆಲಸಮ ಮಾಡುವೆನು. ಹಿತ್ತಾಳೆಯ ನಗರ ದ್ವಾರಗಳನ್ನು ಪುಡಿಪುಡಿ ಮಾಡುವೆನು. ದ್ವಾರಗಳ ಕಬ್ಬಿಣದ ಅಗುಳಿಗಳನ್ನು ತುಂಡು ಮಾಡಿ ಬಿಡುವೆನು.


“ಆಗ ಬೇರೆ ಮರಗಳಿಗೆ, ನಾನು ದೊಡ್ಡ ಮರಗಳನ್ನು ನೆಲಕ್ಕೆ ಬೀಳಿಸುವೆನೆಂತಲೂ, ಚಿಕ್ಕ ಮರಗಳನ್ನು ಉದ್ದವಾಗಿ ಬೆಳೆಯುವಂತೆ ಮಾಡುತ್ತೇನೆಂತಲೂ ಗೊತ್ತಾಗುವದು. ಹಸಿರು ಮರಗಳು ಒಣಗಿಹೋಗುವಂತೆಯೂ ಒಣಗಿಹೋದ ಮರಗಳು ಹಸಿರಾಗಿ ಬೆಳೆಯುವಂತೆಯೂ ನಾನು ಮಾಡುತ್ತೇನೆ. ನಾನೇ ಯೆಹೋವನು. ಇದನ್ನು ನಾನೇ ಹೇಳಿದ್ದೇನೆ; ಮತ್ತು ನಾನೇ ಇದನ್ನು ನೆರವೇರಿಸುವೆನು.”


ಯೆಹೋವನು ಬಡವರನ್ನು ಧೂಳಿನಿಂದ ಮೇಲಕ್ಕೆತ್ತುತ್ತಾನೆ. ಯೆಹೋವನು ದೀನರನ್ನು ತಿಪ್ಪೆಯಿಂದ ಮೇಲಕ್ಕೆತ್ತುತ್ತಾನೆ. ಯೆಹೋವನು ಬಡವರನ್ನು ರಾಜಕುಮಾರರೊಂದಿಗೆ ಕುಳ್ಳಿರಿಸುತ್ತಾನೆ. ಆತನು ಬಡವರನ್ನು ಗೌರವಪೀಠದಲ್ಲಿ ಕುಳ್ಳಿರಿಸುತ್ತಾನೆ. ಲೋಕವೂ ಅದರ ಅಡಿಪಾಯಗಳೂ ಯೆಹೋವನವೇ. ಆತನು ಆ ಕಂಬಗಳ ಮೇಲೆ ಲೋಕವನ್ನು ನಿಲ್ಲಿಸಿರುವನು.


ಮರುಭೂಮಿಗಳೂ ನಗರಗಳೂ ಕೇದಾರಿನ ಹಳ್ಳಿಗಳೂ ಯೆಹೋವನನ್ನು ಸ್ತುತಿಸಲಿ. ಸೆಲಾ ಪಟ್ಟಣವಾಸಿಗಳೇ, ಹರ್ಷದಿಂದ ಹಾಡಿರಿ. ನಿಮ್ಮ ಪರ್ವತಗಳ ತುದಿಯಿಂದ ಗಾನ ಮಾಡಿರಿ.


ಅವರ ಮಾರ್ಗಗಳು ವಕ್ರವಾಗಿವೆ; ಅವರ ನಡತೆಗಳು ದುರ್ನಡತೆಗಳಾಗಿವೆ.


ಒಬ್ಬ ಮನುಷ್ಯನು ಕೂಗಿಹೇಳುವುದನ್ನು ಕೇಳಿರಿ: “ಯೆಹೋವನಿಗೆ ಅಡವಿಯಲ್ಲಿ ದಾರಿಯನ್ನು ಸಿದ್ಧಮಾಡಿರಿ! ನಮ್ಮ ದೇವರಿಗೆ ಅಲ್ಲಿ ಮಾರ್ಗವನ್ನು ನೆಟ್ಟಗೆಮಾಡಿರಿ!


ಆಗ ಯೆಹೋವನ ಮಹಿಮೆಯು ಪ್ರದರ್ಶಿಸಲ್ಪಡುವದು. ಆಗ ಎಲ್ಲರೂ ಯೆಹೋವನ ಮಹಿಮೆಯನ್ನು ನೋಡುವರು. ಯೆಹೋವನೇ ಇವುಗಳನ್ನು ಸ್ವತಃ ನುಡಿದಿದ್ದಾನೆ.”


ನಾನು ನನ್ನ ಜನರಿಗೊಂದು ಮಾರ್ಗ ಸಿದ್ಧಮಾಡುವೆನು. ಬೆಟ್ಟವು ನೆಲದ ಮಟ್ಟಕ್ಕೆ ಇಳಿಯುವುದು; ತಗ್ಗು ಏರಿಸಲ್ಪಡುವದು.


ಉನ್ನತವಾದ ಶಿಖರವು ಜೆರುಬ್ಬಾಬೆಲನಿಗೆ ಸಮತಟ್ಟಾದ ನೆಲದಂತಿರುವುದು. ಅವನು ಆಲಯವನ್ನು ಕಟ್ಟುವನು. ಅದರ ಅತಿ ವಿಶೇಷವಾದ ಕಲ್ಲನ್ನಿಟ್ಟ ಬಳಿಕ ಜನರೆಲ್ಲರೂ, ‘ಬಹಳ ಚಂದ, ಬಹಳ ಚಂದ’ ಎಂದು ಆರ್ಭಟಿಸುವರು.”


ದ್ವಾರಗಳೊಳಗಿಂದ ಬನ್ನಿರಿ. ಜನರು ಬರುವದಕ್ಕೆ ದಾರಿಯನ್ನು ಸರಿಮಾಡಿರಿ. ರಸ್ತೆಯನ್ನು ಸಿದ್ಧಪಡಿಸಿರಿ. ಅದರ ಮೇಲಿರುವ ಕಲ್ಲುಗಳನ್ನು ತೆಗೆದುಬಿಡಿರಿ. ಜನಾಂಗಗಳು ಕಾಣುವಂತೆ ಧ್ವಜವನ್ನು ಏರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು