Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:6 - ಪರಿಶುದ್ದ ಬೈಬಲ್‌

6 ಒಂದು ಸ್ವರವು “ಮಾತನಾಡು” ಎಂದಿತು. ಅದಕ್ಕೆ ಮನುಷ್ಯನು, “ಏನು ಮಾತಾಡಲಿ” ಅಂದನು. ಆಗ ಸ್ವರವು, “ಜನರು ಶಾಶ್ವತವಾಗಿ ಜೀವಿಸುವದಿಲ್ಲ, ಅವರೆಲ್ಲರೂ ಹುಲ್ಲಿನಂತಿದ್ದಾರೆ. ಅವರ ಒಳ್ಳೆಯತನವು ಕಾಡುಹೂವಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಹಾ, ವಾಣಿಯು ಮತ್ತೆ ಕೇಳಿಸಿ, “ಕೂಗು ಎನ್ನುತ್ತದೆ” ಅದಕ್ಕೆ ನಾನು, “ಏನು ಕೂಗಲಿ?” ಎಂದು ಕೇಳಲು, “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ವಾಣಿ ಮತ್ತೆ ಕೇಳಿಸಿತು : ‘ಗಟ್ಟಿಯಾಗಿ ಕೂಗು’ ಎಂದಿತು ನಾನೇನೆಂದು ಕೂಗಲಿ ಎನ್ನಲು ಈ ಪರಿಯಾಗಿ ಉತ್ತರಿಸಿತು : “ನರಮಾನವರೆಲ್ಲ ಬರೀ ಹುಲ್ಲಿನಂತೆ ಅವರ ಸೊಬಗೆಲ್ಲಾ ಬಯಲಿನ ಕುಸುಮದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಹಾ, ವಾಣಿಯು ಮತ್ತೆ ಕೇಳಿಸಿ - ಕೂಗು ಎನ್ನುತ್ತದೆ. ಅದಕ್ಕೆ ನಾನು - ಏನು ಕೂಗಲಿ ಎಂದು ಕೇಳಲು ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ವಾಣಿಯು, “ಗಟ್ಟಿಯಾಗಿ ಕೂಗು,” ಎಂದಿತು. ಅದಕ್ಕೆ, “ನಾನು ಏನೆಂದು ಕೂಗಲಿ?” ಎಂದು ಕೇಳಲು, “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅವರ ಸೊಬಗೆಲ್ಲಾ ಹೊಲದ ಹೂವಿನಂತಿದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:6
17 ತಿಳಿವುಗಳ ಹೋಲಿಕೆ  

ನನ್ನ ಜೀವಮಾನವು ಸಂಜೆಯ ನೆರಳಿನಂತೆ ಕೊನೆಗೊಂಡಿದೆ. ನಾನು ಒಣಗಿ ಸಾಯುತ್ತಿರುವ ಹುಲ್ಲಿನಂತಿದ್ದೇನೆ.


ಮನುಷ್ಯನ ಜೀವಿತವು ಹೂವಿನಂತೆ ಬೇಗನೆ ಬೆಳೆದು ಒಣಗಿಹೋಗುವುದು. ಮನುಷ್ಯನ ಜೀವಿತವು ನೆರಳಿನಂತೆ ಕ್ಷಣಿಕವಾದದ್ದು.


ಎಷ್ಟು ಗಟ್ಟಿಯಾಗಿ ಆರ್ಭಟಿಸಬಹುದೋ ಅಷ್ಟು ಆರ್ಭಟಿಸಿರಿ, ನಿಲ್ಲಿಸಬೇಡಿರಿ. ತುತ್ತೂರಿಯಂತೆ ಗಟ್ಟಿಯಾಗಿ ಕಿರುಚಿರಿ. ಜನರು ಮಾಡಿದ ಪಾಪಗಳನ್ನು ಅವರಿಗೆ ತಿಳಿಸಿರಿ. ಯಾಕೋಬನ ವಂಶದವರಿಗೆ ಅವರ ಪಾಪಗಳನ್ನು ತಿಳಿಸಿರಿ.


ದುಷ್ಟರು ಹುಲ್ಲಿನಂತೆಯೂ ಕೆಡುಕರು ಹೂವಿನಂತೆಯೂ ಬದುಕಿ ಸಾಯುವರು. ಅವರ ನಿರರ್ಥಕ ಕಾರ್ಯಗಳು ನಿತ್ಯ ನಾಶವಾಗುತ್ತವೆ.


ಒಂದು ಕಾಲ ಬರುವುದು, ಆಗ ಕಾವಲುಗಾರರು, ‘ಬನ್ನಿ, ನಮ್ಮ ದೇವರಾದ ಯೆಹೋವನನ್ನು ಆರಾಧಿಸಲು ಚೀಯೋನಿಗೆ ಹೋಗೋಣ’ ಎಂದು ಕೂಗುವರು. ಎಫ್ರಾಯೀಮಿನ ಬೆಟ್ಟಪ್ರದೇಶದ ಕಾವಲುಗಾರರು ಸಹ ಹೀಗೆಯೇ ಕೂಗುವರು.”


“ಯೆರೆಮೀಯನೇ, ಹೋಗಿ ಜೆರುಸಲೇಮಿನ ಜನರೊಂದಿಗೆ ಮಾತನಾಡು, ಅವರಿಗೆ ಹೀಗೆ ಹೇಳು: “ಯೆಹೋವನು ಹೀಗೆನ್ನುತ್ತಾನೆ: ‘ನೀವು ಯುವ ರಾಷ್ಟ್ರವಾಗಿದ್ದಾಗ ನನಗೆ ನಂಬಿಗಸ್ತರಾಗಿದ್ದಿರಿ; ಯುವತಿಯಾದ ಮದುಮಗಳಂತೆ ನನ್ನನ್ನು ಹಿಂಬಾಲಿಸಿದಿರಿ. ಎಂದೂ ಬೇಸಾಯಕ್ಕೆ ಬಳಸದ ಭೂಮಿಯಲ್ಲಿಯೂ ಮರಳುಗಾಡಿನಲ್ಲಿಯೂ ನನ್ನನ್ನು ಹಿಂಬಾಲಿಸಿದಿರಿ.


ಒಬ್ಬ ಮನುಷ್ಯನು ಕೂಗಿಹೇಳುವುದನ್ನು ಕೇಳಿರಿ: “ಯೆಹೋವನಿಗೆ ಅಡವಿಯಲ್ಲಿ ದಾರಿಯನ್ನು ಸಿದ್ಧಮಾಡಿರಿ! ನಮ್ಮ ದೇವರಿಗೆ ಅಲ್ಲಿ ಮಾರ್ಗವನ್ನು ನೆಟ್ಟಗೆಮಾಡಿರಿ!


ಆ ಪಟ್ಟಣಗಳಲ್ಲಿದ್ದ ಜನರು ನಿಸ್ಸಹಾಯಕರಾದರು ಮತ್ತು ಬಲಹೀನರಾದರು. ಅವರು ಹೆದರಿ ಗಲಿಬಿಲಿಗೊಂಡಿದ್ದರು. ಅವರು ಹೊಲದ ಹುಲ್ಲಿನಂತೆಯೂ ಸಸಿಗಳಂತೆಯೂ ಕಡಿದುಹಾಕಲ್ಪಡಲಿದ್ದಾರೆ. ಅವರು ಮನೆಯ ಮೇಲೆ ಬೆಳೆಯುವ ಹುಲ್ಲಿನಂತಿದ್ದಾರೆ. ಅವು ಉದ್ದವಾಗಿ ಬೆಳೆಯುವ ಮೊದಲೇ ಸಾಯುವವು.


ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ.


“ಗಿಬ್ಯದಲ್ಲಿ ಕೊಂಬನ್ನೂದು, ರಾಮದಲ್ಲಿ ತುತ್ತೂರಿಯನ್ನೂದು. ಬೇತಾವೆನಿನಲ್ಲಿ ಎಚ್ಚರಿಕೆಯನ್ನು ನೀಡು. ಬೆನ್ಯಾಮೀನನೇ, ವೈರಿಯು ನಿನ್ನ ಹಿಂದೆಯೇ ಇದ್ದಾನೆ.


ಯೆಹೋವನು ಹೇಳುವುದೇನೆಂದರೆ, “ನಿನ್ನನ್ನು ಸಂತೈಸುವಾತನು ನಾನೇ. ಆದ್ದರಿಂದ ನೀನು ಜನರಿಗೆ ಯಾಕೆ ಹೆದರಬೇಕು. ಅವರು ಹುಟ್ಟಿ ಸಾಯುವ ನರರಾಗಿದ್ದಾರೆ. ಅವರು ಹುಲ್ಲಿನಂತೆ ಸಾಯುವ ಕೇವಲ ಮಾನವರಾಗಿದ್ದಾರೆ.”


ಆಗ ಆ ದೂತನು ಜನರಿಗೆ ತಿಳಿಸಲು ಈ ವಿಷಯವನ್ನು ನನಗೆ ಹೇಳಿದನು: ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಜೆರುಸಲೇಮಿನ ಮೇಲೆಯೂ ಚೀಯೋನಿನ ಮೇಲೆಯೂ ನನಗೆ ಆಳವಾದ ಪ್ರೀತಿಯಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು