Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:4 - ಪರಿಶುದ್ದ ಬೈಬಲ್‌

4 ಇವೆಲ್ಲಾ ನೆರವೇರುವಂತೆ ಮಾಡಿದವರು ಯಾರು? ಆದಿಯಿಂದ ಎಲ್ಲಾ ಜನರನ್ನು ಕರೆದವರು ಯಾರು? ಯೆಹೋವನೆಂಬ ನಾನೇ ಇವೆಲ್ಲವನ್ನು ಮಾಡಿದೆನು. ನಾನೇ ಮೊದಲನೆಯವನಾಗಿದ್ದೇನೆ. ಅನಾದಿಕಾಲಕ್ಕಿಂತ ಮೊದಲು ನಾನಿದ್ದೆನು. ಎಲ್ಲವೂ ಅಂತ್ಯವಾಗುವ ತನಕ ನಾನು ಇರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದನ್ನೆಲ್ಲಾ ನಡೆಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವನಾದ ಯೆಹೋವನೆಂಬ ನಾನೇ; ಹೌದು, ಆದಿಪುರುಷನೂ, ಅಂತ್ಯಕಾಲದವರ ಸಂಗಡಿಗನೂ ಆಗಿರುವ ನಾನೊಬ್ಬನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವರು ಯಾರು? ಸರ್ವೇಶ್ವರನಾದ ನಾನೇ. ಹೌದು, ಆದಿಯಲ್ಲಿದ್ದವನು. ಅಂತ್ಯದಲ್ಲಿ ಇರುವವನು ಆದ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವನಾದ ಯೆಹೋವನೆಂಬ ನಾನೇ; ಹೌದು, ಆದಿಪುರುಷನೂ ಅಂತ್ಯಕಾಲದವರ ಸಂಗಡಿಗನೂ ಆಗಿರುವ ನಾನೊಬ್ಬನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನೂ ಆದಿಯಿಂದ ತಲತಲಾಂತರಗಳನ್ನು ಬರಮಾಡಿದವನು ಯಾರು? ಯೆಹೋವ ಎಂಬ ನಾನೇ ಮೊದಲನೆಯವನು, ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:4
26 ತಿಳಿವುಗಳ ಹೋಲಿಕೆ  

ನಾನೇ ಆದಿಯೂ ಅಂತ್ಯವೂ ಮೊದಲನೆಯವನೂ ಕಡೆಯವನೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ.


“ಯಾಕೋಬೇ, ನನಗೆ ಕಿವಿಗೊಡು. ಇಸ್ರೇಲೇ, ನೀವು ನನ್ನ ಜನರಾಗುವದಕ್ಕಾಗಿ ನಿಮ್ಮನ್ನು ನಾನು ಕರೆದೆನು. ಆದ್ದರಿಂದ ನನ್ನ ಮಾತುಗಳನ್ನು ಕೇಳಿರಿ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.


ನಾನು ಆತನನ್ನು ನೋಡಿದಾಗ, ಆತನ ಪಾದಗಳ ಬಳಿ ಸತ್ತವನಂತೆ ಕುಸಿದುಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ! ನಾನೇ ಆದಿ ಮತ್ತು ಅಂತ್ಯ.


“ಇವುಗಳು ಸಂಭವಿಸುವ ಮೊದಲೇ ಇವುಗಳನ್ನು ತಿಳಿಸಿದಾತನನ್ನೇ ದೇವರೆಂದು ಕರೆಯಬೇಕು. ನಿಮ್ಮ ವಿಗ್ರಹಗಳಲ್ಲಿ ಯಾವದಾದರೂ ನಮಗೆ ಇದನ್ನು ತಿಳಿಸಿತೋ? ಯಾವ ವಿಗ್ರಹವೂ ನಮಗೆ ಇವುಗಳ ವಿಷಯದಲ್ಲಿ ತಿಳಿಸಲಿಲ್ಲ. ಆ ವಿಗ್ರಹಗಳು ಒಂದು ಮಾತನ್ನಾದರೂ ಹೇಳಲಿಲ್ಲ; ಮತ್ತು ನೀವು ಹೇಳಿದ್ದನ್ನು ಆ ಸುಳ್ಳುದೇವರುಗಳು ಕೇಳಿಸಿಕೊಳ್ಳುವದೂ ಇಲ್ಲ.


“ನಾನು ಅಂತ್ಯದಲ್ಲಿ ನಡೆಯಲಿರುವ ವಿಷಯಗಳನ್ನು ಪ್ರಾರಂಭದಲ್ಲಿಯೇ ತಿಳಿಸಿರುತ್ತೇನೆ. ಬಹುಕಾಲದ ಹಿಂದೆ ಇನ್ನೂ ಸಂಭವಿಸದ ಸಂಗತಿಗಳನ್ನು ತಿಳಿಸಿದ್ದೇನೆ. ನಾನು ಯೋಜಿಸುವ ಸಂಗತಿಗಳು ನೆರವೇರುವವು. ನಾನು ಮಾಡಲು ಬಯಸುವ ಕಾರ್ಯಗಳನ್ನು ನೆರವೇರಿಸುವೆನು.


ಯೆಹೋವನು ಹೇಳುವುದೇನೆಂದರೆ: “ನೀವು ನನ್ನ ಸಾಕ್ಷಿಗಳಾಗಿದ್ದೀರಿ. ನಾನು ಆರಿಸಿಕೊಂಡ ಸೇವಕನು ನೀನೇ. ಜನರು ನನ್ನನ್ನು ನಂಬುವಂತೆ ನಾನು ನಿಮ್ಮನ್ನು ಆರಿಸಿಕೊಂಡೆನು. ನಾನು ನಿಜ ದೇವರು ಎಂದು ನೀವು ತಿಳಿಯಬೇಕೆಂದು ನಿಮ್ಮನ್ನು ಆರಿಸಿಕೊಂಡೆನು. ನಾನೇ ನಿಜವಾದ ದೇವರು. ನನಗಿಂತ ಮೊದಲು ಯಾರೂ ಇರಲಿಲ್ಲ, ಇನ್ನು ಮುಂದೆಯೂ ನನ್ನ ಹೊರತು ಯಾವ ದೇವರೂ ಇರುವದಿಲ್ಲ.


ದೇವರು ಒಬ್ಬ ಮನುಷ್ಯನನ್ನು ಸೃಷ್ಟಿ ಮಾಡುವುದರ ಮೂಲಕ ಮಾನವ ಜನಾಂಗವನ್ನು ಆರಂಭಿಸಿದನು. ಅವನಿಂದ ಬೇರೆಲ್ಲ ಜನರನ್ನು ಉತ್ಪತ್ತಿಮಾಡಿ, ಪ್ರಪಂಚದ ಎಲ್ಲೆಲ್ಲಿಯೂ ಅವರು ವಾಸಿಸುವಂತೆ ಮಾಡಿದನು; ಅವರು ಯಾವಾಗ ಮತ್ತು ಎಲ್ಲೆಲ್ಲಿ ವಾಸಿಸಬೇಕೆಂಬುದನ್ನು ಸರಿಯಾಗಿ ನಿರ್ಧರಿಸಿದನು.


ಪ್ರಭುವಾದ ದೇವರು ಹೇಳುವುದೇನೆಂದರೆ: “ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನು ವರ್ತಮಾನ, ಭೂತ ಮತ್ತು ಭವಿಷ್ಯತ್ ಕಾಲಗಳಲ್ಲಿರುವಾತನು. ನಾನೇ ಸರ್ವಶಕ್ತನು.”


ಯಾಕೋಬ್ ಮತ್ತು ಇಸ್ರೇಲ್ ಜನರಿಂದ ಅವರ ಸಂಪತ್ತನ್ನು ದೋಚಿಕೊಳ್ಳಲು ಅವರನ್ನು ಬಿಟ್ಟವರು ಯಾರು? ಯೆಹೋವನು ತಾನೇ ಅವರಿಗೆ ಹಾಗೆ ಮಾಡಿಬಿಟ್ಟನು. ನಾವು ಆತನ ವಿರುದ್ಧವಾಗಿ ಪಾಪಮಾಡಿದೆವು. ಆದ್ದರಿಂದ, ಆತನು ನಮ್ಮ ಆಸ್ತಿಯನ್ನು ದೋಚಿ ಹೋಗುವಂತೆ ಮಾಡಿದನು. ಯೆಹೋವನು ಬಯಸಿದ ರೀತಿಯಲ್ಲಿ ನಡೆಯಲು ಇಸ್ರೇಲರಿಗೆ ಇಷ್ಟವಿರಲಿಲ್ಲ, ಆತನ ಉಪದೇಶಗಳಿಗೆ ಕಿವಿಗೊಡಲಿಲ್ಲ.


“ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಆದಿಯೂ ಅಂತ್ಯವೂ ಆಗಿರುವಾತನು ನಿನಗೆ ಇವುಗಳನ್ನು ಹೇಳುತ್ತಾನೆ. ಸತ್ತು ಜೀವಂತವಾಗಿ ಎದ್ದುಬಂದಾತನು ಆತನೇ.


ಆ ಧ್ವನಿಯು, “ನೀನು ನೋಡುವುದನ್ನೆಲ್ಲ ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಏಳು ಸಭೆಗಳಿಗೆ ಕಳುಹಿಸು” ಎಂದು ಹೇಳಿತು.


ತನ್ನ ಅಂಗೈಯಿಂದ ಸಾಗರಗಳನ್ನು ಅಳತೆ ಮಾಡಿದವರ್ಯಾರು? ತನ್ನ ಹಸ್ತದಿಂದ ಆಕಾಶವನ್ನು ಅಳತೆ ಮಾಡಿದವರ್ಯಾರು? ಭೂಮಿಯ ಧೂಳನ್ನೆಲ್ಲಾ ಒಂದು ಬೋಗುಣಿಯಲ್ಲಿ ಅಳೆದವರ್ಯಾರು? ಪರ್ವತಗಳನ್ನು ಮತ್ತು ಬೆಟ್ಟಗಳನ್ನು ಅಳೆಯಲು ಅಳತೆಕೋಲನ್ನು ಯಾರು ಉಪಯೋಗಿಸಿದರು?


‘ಆದಿಯಿಂದಲೂ ಈ ಕಾರ್ಯಗಳನ್ನು ತಿಳಿಯಪಡಿಸಲಾಗಿದೆ.’


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.” (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.)


ಆಕಾಶಮಂಡಲದ ಕಡೆಗೆ ನೋಡಿರಿ! ಆ ನಕ್ಷತ್ರಗಳನ್ನೆಲ್ಲಾ ಮಾಡಿದವರು ಯಾರು? ಆಕಾಶದಲ್ಲಿರುವ ಆ “ಸೈನ್ಯಗಳನ್ನು” ಸಿದ್ಧ ಮಾಡಿದವರು ಯಾರು? ಪ್ರತಿಯೊಂದು ನಕ್ಷತ್ರವನ್ನು ಹೆಸರೆತ್ತಿ ಕರೆಯುವವರು ಯಾರು? ಆತನು ಬಲಿಷ್ಠನೂ ಪರಾಕ್ರಮಶಾಲಿಯೂ ಆಗಿದ್ದಾನೆ. ಆದ್ದರಿಂದ ಆ ನಕ್ಷತ್ರಗಳಲ್ಲಿ ಒಂದೂ ನಾಶವಾಗಲಿಲ್ಲ.


“‘ನಾನೇ ದೇವರು, ನನ್ನ ಹೊರತು ಬೇರೆ ದೇವರಿಲ್ಲ. ಜನರಿಗೆ ಮರಣವನ್ನೂ ಜೀವವನ್ನೂ ಕೊಡುವವನು ನಾನೇ. ಅವರಿಗೆ ಗಾಯ ಮಾಡುವವನೂ ನಾನೇ, ಅದನ್ನು ಗುಣಮಾಡುವವನೂ ನಾನೇ. ನನ್ನ ಶಕ್ತಿಯ ಹಿಡಿತದಿಂದ ಇನ್ನೊಬ್ಬನನ್ನು ರಕ್ಷಿಸಲು ಯಾರಿಗೂ ಸಾಧ್ಯವಿಲ್ಲ.


ದೇವರೇ, ನೀನಾದರೋ ಎಂದಿಗೂ ಬದಲಾಗುವುದಿಲ್ಲ. ನೀನು ಎಂದೆಂದಿಗೂ ಜೀವಿಸುವೆ!


ಅವನು ಸೈನ್ಯವನ್ನು ಓಡಿಸಿದರೂ ಗಾಯಗೊಳ್ಳುವದಿಲ್ಲ. ತಾನು ಹಿಂದೆಂದೂ ಹೋಗದ ಸ್ಥಳಗಳಿಗೆ ಹೋಗುವನು.


“ನಾನು ಯಾವಾಗಲೂ ದೇವರಾಗಿದ್ದೇನೆ. ನನ್ನ ಕಾರ್ಯವನ್ನು ತಡೆಯಲು ಯಾರಿಗೆ ಸಾಧ್ಯ? ನನ್ನ ಬಲವಾದ ಹಸ್ತದಿಂದ ಯಾರು ಬಿಡಿಸಬಲ್ಲರು?”


ನಾವು ನಿನ್ನ ಸೇವಕರಾಗಿದ್ದೇವೆ. ಇಲ್ಲಿ ನಮ್ಮ ಮಕ್ಕಳು ವಾಸವಾಗಿರುತ್ತಾರೆ; ಅವರ ಸಂತತಿಗಳವರೂ ನಿನ್ನನ್ನು ಆರಾಧಿಸಲು ಇಲ್ಲಿರುತ್ತಾರೆ.”


ಜನರು ಇವುಗಳನ್ನು ನೋಡಿ, ಇವು ಯೆಹೋವನ ಶಕ್ತಿಯಿಂದ ಆದವು ಎಂದು ತಿಳಿದುಕೊಳ್ಳುವರು. ಜನರು ಈ ಸಂಗತಿಗಳನ್ನು ನೋಡಿ ಇಸ್ರೇಲರ ಪರಿಶುದ್ಧನಾದ ಯೆಹೋವನೇ ಇವುಗಳನ್ನು ಮಾಡಿದನೆಂದು ತಿಳಿದುಕೊಳ್ಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು