Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:8 - ಪರಿಶುದ್ದ ಬೈಬಲ್‌

8 ಯೆಹೋವನು ಹೀಗೆನ್ನುತ್ತಾನೆ, “ಇಸ್ರೇಲೇ, ನೀನು ನನ್ನ ಸೇವಕನಾಗಿರುವೆ. ಯಾಕೋಬೇ, ನಾನು ನಿನ್ನನ್ನು ಆರಿಸಿಕೊಂಡೆನು. ನೀನು ನನ್ನ ಸ್ನೇಹಿತನಾದ ಅಬ್ರಹಾಮನ ಕುಟುಂಬದವನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನ ಸೇವಕನಾದ ಇಸ್ರಾಯೇಲೇ, ನಾನು ಆರಿಸಿಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇಂತಿರಲು ನನ್ನ ದಾಸನಾದ ಇಸ್ರಯೇಲೇ, ನಾನು ಆಯ್ದುಕೊಂಡ ಯಕೋಬೇ, ನನ್ನ ಗೆಳೆಯ ಅಬ್ರಹಾಮನ ಸಂತತಿಯೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆಯ್ದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:8
37 ತಿಳಿವುಗಳ ಹೋಲಿಕೆ  

ಹೀಗೆ ಪವಿತ್ರಗ್ರಂಥದ ಈ ಮಾತುಗಳು ನೆರವೇರಿದವು: “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅಬ್ರಹಾಮನ ನಂಬಿಕೆಯನ್ನು ಒಪ್ಪಿಕೊಂಡು ಅವನನ್ನು ನೀತಿವಂತನೆಂದು ಪರಿಗಣಿಸಿದನು.” ಅಬ್ರಹಾಮನನ್ನು “ದೇವರ ಸ್ನೇಹಿತ” ನೆಂದು ಕರೆಯಲಾಯಿತು.


ನೀನೇ ನಮ್ಮ ದೇವರಾಗಿರುವೆ. ನೀನು ಈ ದೇಶದಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿ ಈ ದೇಶವನ್ನು ಅಬ್ರಹಾಮನ ಸಂತತಿಯವರಾದ ಇಸ್ರೇಲರಿಗೆ ಕೊಟ್ಟೆ. ಅಬ್ರಹಾಮನು ನಿನ್ನ ಸ್ನೇಹಿತನಾಗಿದ್ದನು.


ಯಾಕೆಂದರೆ ನೀವು ಬೇರೆಯವರಿಗಿಂತ ವಿಭಿನ್ನರು. ನೀವು ಯೆಹೋವನ ವಿಶೇಷ ಜನರಾಗಿದ್ದೀರಿ. ಲೋಕದ ಎಲ್ಲಾ ಜನರಲ್ಲಿ ಯೆಹೋವನು ನಿಮ್ಮನ್ನು ತನ್ನ ಸ್ವಕೀಯ ಜನಾಂಗವನ್ನಾಗಿ ಆರಿಸಿಕೊಂಡಿದ್ದಾನೆ.


ನಿಮ್ಮ ಪಿತೃವಾದ ಅಬ್ರಹಾಮನನ್ನೂ ನಿಮ್ಮ ಮಾತೆಯಾದ ಸಾರಳನ್ನೂ ದೃಷ್ಟಿಸಿರಿ; ನಾನು ಕರೆದಾಗ ಅಬ್ರಹಾಮನು ಒಬ್ಬಂಟಿಗನಾಗಿದ್ದನು. ನಾನು ಅವನನ್ನು ಆಶೀರ್ವದಿಸಿ, ಅವನ ಸಂತಾನವನ್ನು ಅಭಿವೃದ್ಧಿಪಡಿಸಿ, ಅವನನ್ನು ಮಹಾಜನಾಂಗದ ಮೂಲಪುರುಷನನ್ನಾಗಿ ಮಾಡಿದೆನು.”


“ಯಾಕೋಬೇ, ಈ ವಿಷಯಗಳನ್ನು ನೆನಪಿನಲ್ಲಿಟ್ಟುಕೊ! ಇಸ್ರೇಲೇ, ನೀನು ನನ್ನ ಸೇವಕನೆಂಬುದನ್ನು ನೆನಪಿನಲ್ಲಿಟ್ಟುಕೊ! ನಾನೇ ನಿನ್ನನ್ನು ನಿರ್ಮಿಸಿದೆನು; ನೀನೇ ನನ್ನ ಸೇವಕನು. ಆದ್ದರಿಂದ ಇಸ್ರೇಲೇ, ನನ್ನನ್ನು ಮರೆತುಬಿಡಬೇಡ.


ಯೆಹೋವನು ಯಾಕೋಬನ ವಂಶಕ್ಕೆ ಹೀಗೆನ್ನುತ್ತಾನೆ: “ಅಬ್ರಹಾಮನನ್ನು ಬಿಡಿಸಿದ ಯೆಹೋವನೇ ನಾನು. ಈಗ ಯಾಕೋಬಿನ ಜನರು ನಾಚಿಕೆಪಡುವದಿಲ್ಲ ಮತ್ತು ಅವಮಾನ ಹೊಂದುವದಿಲ್ಲ.


ಯಾರಿಗೆ ಯೆಹೋವನು ದೇವರಾಗಿದ್ದಾನೋ ಅವರೇ ಧನ್ಯರು. ಯಾಕೆಂದರೆ ಆತನು ಅವರನ್ನು ಸ್ವಕೀಯರನ್ನಾಗಿ ಆರಿಸಿಕೊಂಡಿದ್ದಾನೆ.


ಯಾಕೋಬೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಇಸ್ರೇಲೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಈಗ ಆತನು ಹೇಳುವುದೇನೆಂದರೆ: “ಭಯಪಡಬೇಡ. ನಾನೇ ನಿನ್ನನ್ನು ರಕ್ಷಿಸಿದ್ದೇನೆ. ನಾನು ನಿನಗೆ ಹೆಸರಿಟ್ಟೆನು. ನೀನು ನನ್ನವನೇ.


ಯೆಹೋವನು ಯಾಕೋಬನನ್ನು ಆರಿಸಿಕೊಂಡನು. ಇಸ್ರೇಲ್, ಆತನಿಗೆ ಸೇರಿದ್ದು.


“ಯೆರೆಮೀಯನೇ, ಜನರು ಏನು ಹೇಳಿದರೆಂಬುದನ್ನು ಕೇಳಲಿಲ್ಲವೇ? ‘ಯೆಹೋವನು ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಎರಡು ಕುಟುಂಬಗಳನ್ನು ಆರಿಸಿಕೊಂಡನು; ಆದರೆ ಈಗ ಅವರನ್ನು ತಿರಸ್ಕರಿಸಿದ್ದಾನೆ.’ ಎಂದು ಅವರು ಹೇಳುತ್ತಿದ್ದಾರೆ. ಅನ್ಯಜನರು ನನ್ನ ಜನರನ್ನು ಎಷ್ಟು ದ್ವೇಷಿಸುತ್ತಾರೆಂದರೆ, ಅವರು ಒಂದು ಜನಾಂಗವಾಗಿ ಮುಂದುವರಿಯುವುದು ಅವರಿಗೆ ಇಷ್ಟವೇ ಇಲ್ಲ.”


“ಯಾಕೋಬೇ, ನನಗೆ ಕಿವಿಗೊಡು. ಇಸ್ರೇಲೇ, ನೀವು ನನ್ನ ಜನರಾಗುವದಕ್ಕಾಗಿ ನಿಮ್ಮನ್ನು ನಾನು ಕರೆದೆನು. ಆದ್ದರಿಂದ ನನ್ನ ಮಾತುಗಳನ್ನು ಕೇಳಿರಿ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.


‘ಅಬ್ರಹಾಮನು ನಮ್ಮ ತಂದೆ’ ಎಂದು ನೀವು ಜಂಬಪಡುವುದೇಕೆ? ದೇವರು ಅಬ್ರಹಾಮನಿಗಾಗಿ ಇಲ್ಲಿರುವ ಬಂಡೆಗಳಿಂದಲೂ ಮಕ್ಕಳನ್ನು ಸೃಷ್ಟಿಸಬಲ್ಲನು ಎಂದು ನಾನು ನಿಮಗೆ ಹೇಳುತ್ತೇನೆ.


ನೀನು ನಮ್ಮ ತಂದೆಯಾಗಿರುವೆ. ಅಬ್ರಹಾಮನಿಗೆ ನಮ್ಮ ಪರಿಚಯವಿಲ್ಲ. ಇಸ್ರೇಲನು ನಮ್ಮನ್ನು ಗುರುತಿಸುವುದಿಲ್ಲ. ಯೆಹೋವನೇ, ನೀನೇ ನಮ್ಮ ತಂದೆ. ನೀನೇ ನಮ್ಮನ್ನು ಯಾವಾಗಲೂ ರಕ್ಷಿಸಿದಾತನು.


ಯೆಹೋವನು ಹೀಗೆಂದನು: “ಇಸ್ರೇಲೇ, ನೀನೇ ನನ್ನ ಸೇವಕನು. ನಾನು ನಿನಗೆ ಆಶ್ಚರ್ಯವಾದ ಕಾರ್ಯಗಳನ್ನು ಮಾಡುವೆನು.”


ಯೆಹೋವನು ನಿಮ್ಮ ಪೂರ್ವಿಕರನ್ನು ಎಷ್ಟು ಪ್ರೀತಿಮಾಡಿದ್ದನೆಂದರೆ, ಅವರ ಸಂತಾನದವರಾದ ನಿಮ್ಮನ್ನು ತನ್ನ ಜನರನ್ನಾಗಿ ಆರಿಸಿಕೊಳ್ಳುವಷ್ಟು ಪ್ರೀತಿಸಿದನು; ಬೇರೆ ಜನಾಂಗದವರ ಬದಲಾಗಿ ನಿಮ್ಮನ್ನೇ ಆರಿಸಿಕೊಂಡನು. ನೀವು ಇಂದಿಗೂ ಆತನಿಂದ ಆರಿಸಲ್ಪಟ್ಟ ಜನರಾಗಿದ್ದೀರಿ.


ಯಾಕೆಂದರೆ ಅವರು ನನ್ನ ಸೇವಕರಾಗಿದ್ದಾರೆ. ನಾನು ಅವರನ್ನು ಈಜಿಪ್ಟಿನಲ್ಲಿ ಗುಲಾಮತನದಿಂದ ಹೊರಗೆ ಬರಮಾಡಿದೆನು; ಅವರು ಮತ್ತೆ ಗುಲಾಮರಾಗಬಾರದು.


ನೀವು ಆತನ ಸೇವಕನಾದ ಅಬ್ರಹಾಮನ ಸಂತತಿಯವರಾಗಿದ್ದೀರಿ; ಆತನು ಆರಿಸಿಕೊಂಡ ಯಾಕೋಬನ ಸಂತತಿಯವರಾಗಿದ್ದೀರಿ.


ಹಾಗಾದರೆ ಧರ್ಮಶಾಸ್ತ್ರವಿದ್ದದ್ದು ಯಾಕೆ? ಜನರ ಅಪರಾಧಗಳನ್ನು ತೋರಿಸುವುದಕ್ಕಾಗಿ ಧರ್ಮಶಾಸ್ತ್ರವನ್ನು ಕೊಡಲಾಯಿತು. ಅಬ್ರಹಾಮನ ವಿಶೇಷ ಸಂತಾನವು ಬರುವ ತನಕ ಧರ್ಮಶಾಸ್ತ್ರವಿತ್ತು. ಈ ಸಂತಾನದ (ಕ್ರಿಸ್ತನು) ಬಗ್ಗೆಯೇ ದೇವರು ವಾಗ್ದಾನ ಮಾಡಿದನು. ಧರ್ಮಶಾಸ್ತ್ರವನ್ನು ದೇವದೂತರ ಮೂಲಕ ಕೊಡಲಾಯಿತು. ಜನರಿಗೆ ಧರ್ಮಶಾಸ್ತ್ರವನ್ನು ಕೊಡುವುದಕ್ಕಾಗಿ ದೇವದೂತರು ಮೋಶೆಯನ್ನು ಮಧ್ಯವರ್ತಿಯನ್ನಾಗಿ ಉಪಯೋಗಿಸಿದರು.


ಆತನು ಆ ದೇಶಗಳನ್ನು ಇಸ್ರೇಲರಿಗೆ ಉಡುಗೊರೆಯಾಗಿ ಕೊಟ್ಟನು. ಆತನ ಪ್ರೀತಿ ಶಾಶ್ವತವಾದದ್ದು.


ಮುಂದಿನ ದಿವಸಗಳಲ್ಲಿ ಯೆಹೋವನು ಯಾಕೋಬನ ಮೇಲೆ ಮತ್ತೆ ಪ್ರೀತಿತೋರುವನು. ಯೆಹೋವನು ಮತ್ತೆ ಇಸ್ರೇಲರನ್ನು ಆರಿಸುವನು. ಆ ಸಮಯದಲ್ಲಿ ಅವರ ದೇಶವನ್ನು ಅವರಿಗೆ ಹಿಂತಿರುಗಿಸುವನು. ಆಗ ಯೆಹೂದ್ಯರಲ್ಲದವರು ಯೆಹೂದ್ಯರೊಂದಿಗೆ ಸೇರಿಕೊಳ್ಳುವರು. ಅವರೆಲ್ಲರೂ ಒಂದೇ ವಂಶದವರಾಗುವರು. ಅದು ಯಾಕೋಬನ ವಂಶ.


“ನನ್ನ ಸೇವಕನನ್ನು ನೋಡಿರಿ! ನಾನು ಆತನಿಗೆ ಬೆಂಬಲ ನೀಡುತ್ತೇನೆ. ನಾನು ಆರಿಸಿಕೊಂಡಿದ್ದು ಆತನನ್ನೇ. ನಾನು ಆತನನ್ನು ಮೆಚ್ಚಿಕೊಂಡಿದ್ದೇನೆ. ನನ್ನ ಆತ್ಮವನ್ನು ಆತನಲ್ಲಿರಿಸುವೆನು. ಆತನು ಜನಾಂಗಗಳನ್ನು ನ್ಯಾಯವಾಗಿ ತೀರ್ಪು ಮಾಡುವನು.


ಬೇರೆ ಎಲ್ಲರಿಗಿಂತ ನನ್ನ ಸೇವಕನು ಕುರುಡನಾಗಿದ್ದಾನೆ. ಬೇರೆ ಎಲ್ಲರಿಗಿಂತ ನನ್ನ ದೂತನು ಕಿವುಡನಾಗಿದ್ದಾನೆ. ನಾನು ಒಡಂಬಡಿಕೆ ಮಾಡಿಕೊಂಡ ನನ್ನ ಸೇವಕನು ಪೂರ್ಣ ಕುರುಡನಾಗಿದ್ದಾನೆ.


“ಆದ್ದರಿಂದ ಭಯಪಡಬೇಡ, ನಾನೇ ನಿನ್ನೊಂದಿಗಿದ್ದೇನೆ. ನಾನು ನಿನ್ನ ಮಕ್ಕಳನ್ನು ಒಟ್ಟುಗೂಡಿಸಿ ನಿನ್ನ ಬಳಿಗೆ ಕರೆತರುವೆನು. ನಾನು ಪೂರ್ವಪಶ್ಚಿಮ ದಿಕ್ಕುಗಳಿಂದ ಅವರನ್ನು ಒಟ್ಟುಗೂಡಿಸುವೆನು.


ಯೆಹೋವನು ಹೇಳುವುದೇನೆಂದರೆ: “ನೀವು ನನ್ನ ಸಾಕ್ಷಿಗಳಾಗಿದ್ದೀರಿ. ನಾನು ಆರಿಸಿಕೊಂಡ ಸೇವಕನು ನೀನೇ. ಜನರು ನನ್ನನ್ನು ನಂಬುವಂತೆ ನಾನು ನಿಮ್ಮನ್ನು ಆರಿಸಿಕೊಂಡೆನು. ನಾನು ನಿಜ ದೇವರು ಎಂದು ನೀವು ತಿಳಿಯಬೇಕೆಂದು ನಿಮ್ಮನ್ನು ಆರಿಸಿಕೊಂಡೆನು. ನಾನೇ ನಿಜವಾದ ದೇವರು. ನನಗಿಂತ ಮೊದಲು ಯಾರೂ ಇರಲಿಲ್ಲ, ಇನ್ನು ಮುಂದೆಯೂ ನನ್ನ ಹೊರತು ಯಾವ ದೇವರೂ ಇರುವದಿಲ್ಲ.


ನಾನು ನನ್ನ ಸೇವಕನಾದ ಯಾಕೋಬನಿಗಾಗಿ ಇದನ್ನೆಲ್ಲಾ ಮಾಡುತ್ತಿದ್ದೇನೆ. ನಾನು ಆರಿಸಿಕೊಂಡ ಜನಾಂಗವಾದ ಇಸ್ರೇಲಿಗಾಗಿ ಇದನ್ನೆಲ್ಲಾ ಮಾಡುತ್ತಿದ್ದೇನೆ. ಸೈರಸನೇ, ನಾನು ನಿನ್ನ ಹೆಸರೆತ್ತಿ ಕರೆದಿದ್ದೇನೆ. ನೀನು ನನ್ನನ್ನು ತಿಳಿಯದವನಾಗಿದ್ದರೂ ನಾನು ನಿನಗೆ ಬಿರುದನ್ನು ಅನುಗ್ರಹಿಸಿದ್ದೇನೆ.


ಯೆಹೋವನು, “ನಾನು ನಿಮ್ನನ್ನೆಲ್ಲಾ ಪ್ರೀತಿಸುತ್ತೇನೆ” ಎಂದು ಹೇಳುತ್ತಾನೆ. ಆದರೆ ನೀವು, “ನೀನು ಪ್ರೀತಿಸುವದಕ್ಕೆ ಗುರುತು ಏನು?” ಎಂದು ಕೇಳುತ್ತೀರಿ. ಯೆಹೋವನು ಅದಕ್ಕುತ್ತರವಾಗಿ, “ಏಸಾವನು ಯಾಕೊಬನ ಅಣ್ಣನಲ್ಲವೋ? ಆದರೆ ನಾನು ಯಾಕೋಬನನ್ನು ಆರಿಸಿಕೊಂಡೆನು.


ಆತನ ಅದ್ಭುತಕಾರ್ಯಗಳನ್ನೂ ಮಹತ್ಕಾರ್ಯಗಳನ್ನೂ ನ್ಯಾಯನಿರ್ಣಯಗಳನ್ನೂ ಜ್ಞಾಪಿಸಿಕೊಳ್ಳಿರಿ.


ಆತನು ಅವರ ದೇಶಗಳನ್ನು ಇಸ್ರೇಲರಿಗೆ ಕೊಟ್ಟನು. ಆತನ ಪ್ರೀತಿ ಶಾಶ್ವತವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು