Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:23 - ಪರಿಶುದ್ದ ಬೈಬಲ್‌

23 ನನ್ನ ಜನರಲ್ಲಿ ಯಾರಾದರೂ ದೇವರ ಮಾತನ್ನು ಕೇಳಿದ್ದಾರೋ? ಇಲ್ಲ! ಆದರೆ ನೀವು ಆತನ ಮಾತುಗಳಿಗೆ ಲಕ್ಷ್ಯಗೊಟ್ಟು ಕೇಳಿ ಸಂಭವಿಸಿರುವದನ್ನು ಗಮನಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಿಮ್ಮಲ್ಲಿ ಯಾರು ಈ ಮಾತಿಗೆ ಕಿವಿಗೊಡುವರು? ಯಾರು ಇನ್ನು ಮುಂದೆ ಆಲಿಸಿ ಕೇಳುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಈ ಮಾತಿಗೆ ನಿಮ್ಮಲ್ಲಿ ಕಿವಿಗೊಡುವವರಾರು? ಮುಂದಕ್ಕಾದರೂ ಕಿವಿಗೊಟ್ಟು ಆಲಿಸುವವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಿಮ್ಮಲ್ಲಿ ಯಾರು ಈ ಮಾತಿಗೆ ಕಿವಿಗೊಡುವರು? ಯಾರು ಇನ್ನು ಮುಂದೆ ಆಲಿಸಿ ಕೇಳುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಿಮ್ಮಲ್ಲಿ ಯಾರು ಇವುಗಳಿಗೆ ಕಿವಿಗೊಡುವರು? ಯಾರು ಇನ್ನು ಮುಂದೆ ಆಲಿಸಿ ಕೇಳುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:23
16 ತಿಳಿವುಗಳ ಹೋಲಿಕೆ  

ನೀವು ನನಗೆ ವಿಧೇಯರಾಗಿದ್ದರೆ, ತುಂಬಿಹರಿಯುವ ಹೊಳೆಯಂತೆ ಸಮಾಧಾನವು ನಿಮಗೆ ದೊರಕುತ್ತಿತ್ತು. ಸಮುದ್ರದ ತೆರೆಯಂತೆ ಮೇಲಿಂದ ಮೇಲೆ ನಿಮಗೆ ಒಳ್ಳೆಯವುಗಳು ಬರುತ್ತಿದ್ದವು.


ಆದ್ದರಿಂದ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿ. ಆಗ ಆತನು ನಿಮ್ಮ ಪಾಪಗಳನ್ನು ಕ್ಷಮಿಸುವನು.


ಯೆಹೋವನ ಸ್ವರವು ಪಟ್ಟಣದಲ್ಲಿ ಗಟ್ಟಿಯಾಗಿ ಕೇಳಿಸುತ್ತದೆ. “ಬುದ್ಧಿವಂತನು ಯೆಹೋವನ ನಾಮವನ್ನು ಗೌರವಿಸುವನು. ಆದ್ದರಿಂದ ಶಿಕ್ಷೆಯ ಬೆತ್ತದ ಕಡೆಗೆ ಲಕ್ಷ್ಯವಿಡು. ಆ ಬೆತ್ತವನ್ನು ಹಿಡುಕೊಂಡವನನ್ನೂ ಗೌರವಿಸು.


‘ನೀವು ನಿಮ್ಮ ಪಾಪವನ್ನು ಅರಿತುಕೊಂಡರೆ ಸಾಕು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧ ತಿರುಗಿದಿರಿ, ಅದೇ ನಿಮ್ಮ ಪಾಪ. ನೀವು ಬೇರೆ ರಾಷ್ಟ್ರದವರ ವಿಗ್ರಹಗಳನ್ನು ಆರಾಧಿಸಿದಿರಿ. ನೀವು ಪ್ರತಿಯೊಂದು ಹಸಿರು ಮರದ ಕೆಳಗೆ ವಿಗ್ರಹಗಳನ್ನು ಆರಾಧಿಸಿದಿರಿ. ನೀವು ನನ್ನ ಆಜ್ಞೆಯನ್ನು ಪರಿಪಾಲಿಸಲಿಲ್ಲ’” ಇದು ಯೆಹೋವನ ನುಡಿಯಾಗಿತ್ತು.


ಅವರು ಬುದ್ಧಿವಂತರಾಗಿದ್ದಲ್ಲಿ ಅವರಿಗೆ ಏನು ಸಂಭವಿಸುವುದೆಂದು ಅವರು ತಿಳಿಯುತ್ತಿದ್ದರು.


ಆದರೆ, ಜನರನ್ನು ನೋಡಿರಿ. ಅವರನ್ನು ಬೇರೆಯವರು ಸೋಲಿಸಿದ್ದಾರೆ. ಅವರಿಂದ ವಸ್ತುಗಳನ್ನು ದೋಚಿದ್ದಾರೆ. ತರುಣರೆಲ್ಲರೂ ಭಯಪಟ್ಟಿದ್ದಾರೆ; ಅವರನ್ನು ಸೆರೆಮನೆಯಲ್ಲಿ ಬಂಧಿಸಿದ್ದಾರೆ. ಅವರಿಂದ ಹಣವನ್ನು ಜನರು ಕಿತ್ತುಕೊಂಡಿದ್ದಾರೆ. ಅವರನ್ನು ರಕ್ಷಿಸಲು ಯಾರೂ ಇಲ್ಲ. ಅವರಲ್ಲಿ ಹಣವನ್ನು “ಹಿಂದಕ್ಕೆ ಕೊಡು” ಎಂದು ಹೇಳುವವರೇ ಇಲ್ಲ.


ಯಾಕೋಬ್ ಮತ್ತು ಇಸ್ರೇಲ್ ಜನರಿಂದ ಅವರ ಸಂಪತ್ತನ್ನು ದೋಚಿಕೊಳ್ಳಲು ಅವರನ್ನು ಬಿಟ್ಟವರು ಯಾರು? ಯೆಹೋವನು ತಾನೇ ಅವರಿಗೆ ಹಾಗೆ ಮಾಡಿಬಿಟ್ಟನು. ನಾವು ಆತನ ವಿರುದ್ಧವಾಗಿ ಪಾಪಮಾಡಿದೆವು. ಆದ್ದರಿಂದ, ಆತನು ನಮ್ಮ ಆಸ್ತಿಯನ್ನು ದೋಚಿ ಹೋಗುವಂತೆ ಮಾಡಿದನು. ಯೆಹೋವನು ಬಯಸಿದ ರೀತಿಯಲ್ಲಿ ನಡೆಯಲು ಇಸ್ರೇಲರಿಗೆ ಇಷ್ಟವಿರಲಿಲ್ಲ, ಆತನ ಉಪದೇಶಗಳಿಗೆ ಕಿವಿಗೊಡಲಿಲ್ಲ.


ಈ ಭೂಮಿಯನ್ನು ಏಕೆ ಹಾಳು ಮಾಡಲಾಯಿತು? ಇದನ್ನು ಯಾರೂ ಹೋಗದ ಬರಿದಾದ ಮರಳುಗಾಡನ್ನಾಗಿ ಏಕೆ ಮಾಡಲಾಯಿತು? ಇದನ್ನರಿತ ಜ್ಞಾನಿಯೊಬ್ಬನಿದ್ದಾನೆಯೇ? ಯೆಹೋವನಿಂದ ತಿಳಿದುಕೊಂಡ ಜ್ಞಾನಿಯೊಬ್ಬನಿದ್ದಾನೆಯೇ? ಯೆಹೋವನ ಸಂದೇಶವನ್ನು ವಿವರಿಸಬಲ್ಲವನೊಬ್ಬನಿದ್ದಾನೆಯೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು