Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:13 - ಪರಿಶುದ್ದ ಬೈಬಲ್‌

13 “ನಾನು ಯಾವಾಗಲೂ ದೇವರಾಗಿದ್ದೇನೆ. ನನ್ನ ಕಾರ್ಯವನ್ನು ತಡೆಯಲು ಯಾರಿಗೆ ಸಾಧ್ಯ? ನನ್ನ ಬಲವಾದ ಹಸ್ತದಿಂದ ಯಾರು ಬಿಡಿಸಬಲ್ಲರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೌದು, ಇಂದಿನಿಂದ ನಾನೇ ದೇವರು. ನನ್ನ ಕೈಯಿಂದ ಬಿಡಿಸಬಲ್ಲವರು ಯಾರೂ ಇಲ್ಲ. ನನ್ನ ಕೆಲಸಕ್ಕೆ ಯಾರು ಅಡ್ಡಿ ಬರುವರು?’” ಎಂಬುದೇ ಯೆಹೋವನ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹೌದು, ನಾನೇ ಪರಮಾತ್ಮ ಆದಿಯಿಂದ ಬಿಡಿಸುವವರಾರು ಇಲ್ಲ ನನ್ನ ಕೈಯಿಂದ ನಾಗೈದುದನು ತಡೆಯಲಾಗದು ಯಾರಿಂದ.” ಈ ಪರಿ ನುಡಿದಿಹನು ಸರ್ವೇಶ್ವರನು, ನಿಮ್ಮ ಉದ್ಧಾರಕನು, ಇಸ್ರಯೇಲಿನ ಪರಮಪಾವನನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೌದು, ಇಂದಿನಿಂದ ನಾನೇ ಪರಮಾತ್ಮನು; ನನ್ನ ಕೈಯಿಂದ ಬಿಡಿಸಬಲ್ಲವರು ಯಾರೂ ಇಲ್ಲ; ನನ್ನ ಕೆಲಸಕ್ಕೆ ಯಾರು ಅಡ್ಡಬಂದಾರು? ಎಂಬದೇ ಯೆಹೋವನ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹೌದು, ಅಂದಿನಿಂದಲೇ ನಾನಿದ್ದೇನೆ. ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ. ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:13
33 ತಿಳಿವುಗಳ ಹೋಲಿಕೆ  

ಸರ್ವಶಕ್ತನಾದ ಯೆಹೋವನ ಈ ಸಂಕಲ್ಪವನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ಜನರನ್ನು ದಂಡಿಸಲು ಆತನು ಕೈಮೇಲೆತ್ತಿದಾಗ ಯಾರೂ ಆತನನ್ನು ತಡೆಯಲಾರರು.


“ನಾನು ಅಂತ್ಯದಲ್ಲಿ ನಡೆಯಲಿರುವ ವಿಷಯಗಳನ್ನು ಪ್ರಾರಂಭದಲ್ಲಿಯೇ ತಿಳಿಸಿರುತ್ತೇನೆ. ಬಹುಕಾಲದ ಹಿಂದೆ ಇನ್ನೂ ಸಂಭವಿಸದ ಸಂಗತಿಗಳನ್ನು ತಿಳಿಸಿದ್ದೇನೆ. ನಾನು ಯೋಜಿಸುವ ಸಂಗತಿಗಳು ನೆರವೇರುವವು. ನಾನು ಮಾಡಲು ಬಯಸುವ ಕಾರ್ಯಗಳನ್ನು ನೆರವೇರಿಸುವೆನು.


ಬೆಟ್ಟಗಳು ಹುಟ್ಟುವುದಕ್ಕಿಂತ ಮೊದಲಿಂದಲೂ ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲಿನಿಂದಲೂ ನೀನೇ ದೇವರು. ಯಾವಾಗಲೂ ದೇವರಾಗಿದ್ದಾತನು ನೀನೇ! ಯಾವಾಗಲೂ ದೇವರಾಗಿರುವಾತನೂ ನೀನೇ!


ಯೇಸು ಕ್ರಿಸ್ತನು ನಿನ್ನೆ ಇದ್ದಂತೆ ಇಂದಿಗೂ ಇದ್ದಾನೆ. ಸದಾಕಾಲ ಹಾಗೆಯೇ ಇರುವನು.


ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಅಬ್ರಹಾಮನು ಹುಟ್ಟುವುದಕ್ಕಿಂತ ಮೊದಲಿಂದಲೂ ನಾನು ಇದ್ದೇನೆ!” ಎಂದು ಉತ್ತರಿಸಿದನು.


ದೇವರೇ ತೆಗೆದುಕೊಳ್ಳುವುದಾದರೆ, ಆತನನ್ನು ತಡೆಯಬಲ್ಲವರು ಯಾರು? ‘ನೀನು ಏನು ಮಾಡುತ್ತಿರುವೆ’ ಎಂದು ಆತನನ್ನು ಕೇಳುವವರು ಯಾರು?


“‘ನಾನೇ ದೇವರು, ನನ್ನ ಹೊರತು ಬೇರೆ ದೇವರಿಲ್ಲ. ಜನರಿಗೆ ಮರಣವನ್ನೂ ಜೀವವನ್ನೂ ಕೊಡುವವನು ನಾನೇ. ಅವರಿಗೆ ಗಾಯ ಮಾಡುವವನೂ ನಾನೇ, ಅದನ್ನು ಗುಣಮಾಡುವವನೂ ನಾನೇ. ನನ್ನ ಶಕ್ತಿಯ ಹಿಡಿತದಿಂದ ಇನ್ನೊಬ್ಬನನ್ನು ರಕ್ಷಿಸಲು ಯಾರಿಗೂ ಸಾಧ್ಯವಿಲ್ಲ.


ಪ್ರಭುವಾದ ದೇವರು ಹೇಳುವುದೇನೆಂದರೆ: “ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನು ವರ್ತಮಾನ, ಭೂತ ಮತ್ತು ಭವಿಷ್ಯತ್ ಕಾಲಗಳಲ್ಲಿರುವಾತನು. ನಾನೇ ಸರ್ವಶಕ್ತನು.”


ಸದಾಕಾಲ ಆಳುವ ಅರಸನಿಗೆ ಗೌರವವೂ ಮಹಿಮೆಯೂ ಇರಲಿ. ಆತನಿಗೆ ಲಯವೆಂಬುದೇ ಇಲ್ಲ. ಆತನು ಅದೃಶ್ಯನಾಗಿರುವನು. ಒಬ್ಬನೇ ದೇವರಾದ ಆತನಿಗೆ ಗೌರವವೂ ಮಹಿಮೆಯೂ ಉಂಟಾಗಲಿ. ಆಮೆನ್.


ನಾವು ದೇವರ ಮಕ್ಕಳಾಗಿರಬೇಕೆಂದು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಳ್ಳಲಾಯಿತು. ನಾವು ತನ್ನ ಮಕ್ಕಳಾಗಿರಬೇಕೆಂದು ದೇವರು ತನ್ನ ಚಿತ್ತಾನುಸಾರವಾಗಿ ಮೊದಲೇ ಯೋಜನೆ ಮಾಡಿದ್ದನು. ತನ್ನ ನಿರ್ಧಾರ ಮತ್ತು ಇಷ್ಟಗಳಿಗನುಸಾರವಾಗಿ ಪ್ರತಿಯೊಂದನ್ನು ನೆರವೇರಿಸುವಾತನು ದೇವರೇ.


ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.


ಇವೆಲ್ಲಾ ನೆರವೇರುವಂತೆ ಮಾಡಿದವರು ಯಾರು? ಆದಿಯಿಂದ ಎಲ್ಲಾ ಜನರನ್ನು ಕರೆದವರು ಯಾರು? ಯೆಹೋವನೆಂಬ ನಾನೇ ಇವೆಲ್ಲವನ್ನು ಮಾಡಿದೆನು. ನಾನೇ ಮೊದಲನೆಯವನಾಗಿದ್ದೇನೆ. ಅನಾದಿಕಾಲಕ್ಕಿಂತ ಮೊದಲು ನಾನಿದ್ದೆನು. ಎಲ್ಲವೂ ಅಂತ್ಯವಾಗುವ ತನಕ ನಾನು ಇರುತ್ತೇನೆ.


ದೇವರೇ, ಆದಿಯಿಂದಲೂ ನಿನ್ನ ರಾಜ್ಯವು ಶಾಶ್ವತವಾಗಿದೆ. ಆದಿಯಿಂದಲೂ ಇರುವಾತನು ನೀನೊಬ್ಬನೇ!


ದೇವರನ್ನು ಮರೆತುಬಿಟ್ಟವರೇ, ಇದನ್ನು ಗಮನಕ್ಕೆ ತಂದುಕೊಳ್ಳಿರಿ. ಇಲ್ಲವಾದರೆ ನಿಮ್ಮನ್ನು ತುಂಡುತಂಡು ಮಾಡುವೆನು; ಯಾರೂ ನಿಮ್ಮನ್ನು ರಕ್ಷಿಸಲಾರರು!


ಆಗ ಹಬಕ್ಕೂಕನು ಹೇಳಿದ್ದೇನೆಂದರೆ, ಯೆಹೋವನೇ, ನೀನು ನಿತ್ಯಕಾಲಕ್ಕೂ ಜೀವಿಸುವ ದೇವರು. ನೀನು ಎಂದಿಗೂ ಸಾಯದ ನನ್ನ ಪರಿಶುದ್ಧ ದೇವರು. ನೀನು ಯೋಚಿಸುವದನ್ನು ನೆರವೇರಿಸಲು ಬಾಬಿಲೋನಿನವರನ್ನು ಸೃಷ್ಟಿಸಿರುವೆ. ನಮ್ಮ ಬಂಡೆಯಾದ ನೀನು ಯೆಹೂದದ ಜನರನ್ನು ಶಿಕ್ಷಿಸುವುದಕ್ಕಾಗಿಯೇ ಅವರನ್ನು ಸೃಷ್ಟಿಸಿರುವೆ.


ಎಫ್ರಾತದ ಬೆತ್ಲೆಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವೆ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ.


ಭೂಮಿಯ ಜನರು ಬಹು ಮುಖ್ಯರಲ್ಲ. ದೇವರು ಪರಲೋಕ ಸಮೂಹದವರಿಗೂ ಭೂಲೋಕದ ನಿವಾಸಿಗಳಿಗೂ ತನ್ನ ಚಿತ್ತಾನುಸಾರ ಮಾಡುತ್ತಾನೆ. ಯಾರೂ ಆತನನ್ನು ತಡೆಯಲಾರರು! ಯಾರೂ ಆತನನ್ನು ಪ್ರಶ್ನಿಸಲಾರರು!


ಯೆಹೋವನೇ ವಿರೋಧವಾಗಿದ್ದರೆ, ಜಯಪ್ರಧವಾಗಬಲ್ಲ ಯೋಜನೆಯನ್ನು ಮಾಡುವಂಥ ಜ್ಞಾನ ಯಾರಿಗೂ ಇಲ್ಲ.


ನಾನು ಆದಿಯಲ್ಲಿ ನಿರ್ಮಾಣಗೊಂಡೆನು. ಪ್ರಪಂಚವು ಆರಂಭವಾಗುವುದಕ್ಕಿಂತ ಮೊದಲೇ ನಾನು ನಿರ್ಮಿತನಾದೆನು.


ಆದರೆ ದೇವರು ಬಡಜನರಿಗೆ ಸಹಾಯಮಾಡದಿರಲು ನಿರ್ಧರಿಸಿದರೆ, ಆತನನ್ನು ದೋಷಿಯೆಂದು ತೀರ್ಪುಮಾಡುವವನು ಯಾರು? ದೇವರು ತನ್ನ ಮುಖವನ್ನು ಅವರಿಗೆ ಮರೆಮಾಡಿಕೊಂಡರೆ ಆತನನ್ನು ನೋಡಬಲ್ಲವರು ಯಾರು? ಮನುಷ್ಯರನ್ನೂ ಜನಾಂಗಗಳನ್ನೂ ಆಳುವವನು ದೇವರೇ.


ನಿಮ್ಮ ದನಗಳನ್ನು ನಿಮ್ಮೆದುರಿನಲ್ಲಿ ಜನರು ಕೊಯ್ಯುವರು. ಆದರೆ ನೀವು ಅದರ ಮಾಂಸವನ್ನು ತಿನ್ನುವುದಿಲ್ಲ. ನಿಮ್ಮ ಕತ್ತೆಗಳನ್ನು ಜನರು ನಿಮ್ಮಿಂದ ತೆಗೆದುಕೊಂಡು ಹೋಗುವರು. ಆದರೆ ಅವುಗಳನ್ನು ಹಿಂದಕ್ಕೆ ಕೊಡರು. ನಿಮ್ಮ ಕುರಿಗಳನ್ನು ವೈರಿಗಳು ಕೊಂಡೊಯ್ಯುವರು. ನಿಮ್ಮನ್ನು ರಕ್ಷಿಸಲು ಯಾರೂ ಬರಲಾರರು.


ಯಾಕೆಂದರೆ ನಾನು ಎಫ್ರಾಯೀಮನಿಗೆ ಸಿಂಹದಂತಿರುವೆನು. ಯೆಹೂದ ಜನಾಂಗದವರಿಗೆ ನಾನು ಪ್ರಾಯದ ಸಿಂಹದಂತಿರುವೆನು. ಹೌದು, ಯೆಹೋವನಾದ ನಾನು ಅವರನ್ನು ಹರಿದು ಚೂರುಚೂರಾಗಿ ಮಾಡುವೆನು. ನಾನು ಅವರನ್ನು ಎತ್ತಿಕೊಂಡು ಹೋಗುವೆನು. ಯಾರೂ ಅವರನ್ನು ನನ್ನಿಂದ ರಕ್ಷಿಸಲಾರರು.


ಈಗ ನಾನು ಆಕೆಯನ್ನು ಬಟ್ಟೆಯನ್ನು ಬಿಚ್ಚಿಹಾಕುವೆನು. ಆಕೆಯ ಬೆತ್ತಲೆತನವನ್ನು ಆಕೆಯ ಪ್ರಿಯತಮರೆಲ್ಲರೂ ನೋಡುವರು. ನನ್ನ ಕೈಯೊಳಗಿಂದ ಯಾರೂ ಆಕೆಯನ್ನು ರಕ್ಷಿಸಲಾರರು.


ಆ ಜನರನ್ನು ಆಶೀರ್ವದಿಸಬೇಕೆಂದು ಯೆಹೋವನು ನನಗೆ ಆಜ್ಞಾಪಿಸಿದನು; ಯೆಹೋವನು ಅವರನ್ನು ಆಶೀರ್ವದಿಸಿದ್ದಾನೆ. ಅದನ್ನು ಬದಲಾಯಿಸಲು ನನಗೆ ಸಾಧ್ಯವಿಲ್ಲ.


ನೀವು ಹುಟ್ಟಿದಾಗ ನಾನು ನಿಮ್ಮನ್ನು ಹೊತ್ತುಕೊಂಡೆನು. ನೀವು ಮುದುಕರಾಗುವಾಗಲೂ ನಾನು ನಿಮ್ಮನ್ನು ಹೊತ್ತುಕೊಳ್ಳುವೆನು. ನಿಮ್ಮ ತಲೆಕೂದಲು ನರೆತಾಗಲೂ ನಾನು ನಿಮ್ಮನ್ನು ಹೊರುವೆನು; ಯಾಕೆಂದರೆ ನಾನು ನಿಮ್ಮನ್ನು ಸೃಷ್ಟಿಸಿದೆನು. ಆದ್ದರಿಂದ ನಾನು ನಿಮ್ಮನ್ನು ಹೊತ್ತುಕೊಳ್ಳುವೆನು, ನಿಮ್ಮನ್ನು ರಕ್ಷಿಸುವೆನು.”


ನೀನು ಕಷ್ಟಪಟ್ಟು ಗಳಿಸಿದ ಸಂಪತ್ತಿಗೆಲ್ಲಾ ಹಾಗೆಯೇ ಆಗುವದು. ನಿನ್ನ ಜೀವಮಾನ ಕಾಲವೆಲ್ಲಾ ವ್ಯವಹಾರ ನಡಿಸಿದ್ದ ಜನರೆಲ್ಲಾ ನಿನ್ನನ್ನು ತೊರೆದುಬಿಡುವರು. ಪ್ರತಿಯೊಬ್ಬನು ತನ್ನ ಸ್ವಂತದಾರಿ ಹಿಡಿಯುವನು. ಆಗ ನಿನ್ನನ್ನು ರಕ್ಷಿಸಲು ಯಾರೂ ಇರುವದಿಲ್ಲ.”


ನನ್ನ ಬಳಿಗೆ ಬಂದು ನನ್ನ ಮಾತು ಕೇಳಿರಿ! ಬಾಬಿಲೋನ್ ಒಂದು ದೇಶವಾಗಿ ಪರಿಣಮಿಸುವಾಗ ನಾನು ಅಲ್ಲಿದ್ದೆನು. ಆದಿಯಿಂದಲೇ ನಾನು ಸ್ವಷ್ಟವಾಗಿ ಹೇಳಿದ್ದೇನೆ. ಜನರಿಗೆ ಅರ್ಥವಾಗುವ ರೀತಿಯಲ್ಲಿ ಹೇಳಿದ್ದೇನೆ.” ಯೆಶಾಯನು ಹೇಳಿದ್ದೇನೆಂದರೆ: “ಈಗ ನನ್ನ ಒಡೆಯನಾದ ಯೆಹೋವನೂ ಆತನ ಆತ್ಮನೂ ಈ ವಿಷಯಗಳನ್ನು ತಿಳಿಸಲು ನನ್ನನ್ನು ಕಳುಹಿಸಿದ್ದಾನೆ.


ಆಗ ಯಾರೋ ಒಬ್ಬರು ಜೆರಿಕೊ ನಗರದ ರಾಜನಿಗೆ, “ನಿನ್ನೆ ರಾತ್ರಿ ಇಸ್ರೇಲರ ಕಡೆಯ ಕೆಲವರು ನಮ್ಮ ದೇಶದ ದೌರ್ಬಲ್ಯಗಳನ್ನು ಕಂಡುಹಿಡಿಯುವುದಕ್ಕಾಗಿ ಬಂದಿದ್ದಾರೆ” ಎಂದು ಹೇಳಿದರು.


ಆದರೆ ನಾನು ನಿರಪರಾಧಿಯೆಂದು ನಿನಗೆ ಗೊತ್ತದೆ. ಆದರೆ ಯಾರೂ ನನ್ನನ್ನು ನಿನ್ನ ಶಕ್ತಿಯಿಂದ ಬಿಡಿಸಲಾರರು!


ನಾವು ನಿನ್ನ ಸೇವಕರಾಗಿದ್ದೇವೆ. ಇಲ್ಲಿ ನಮ್ಮ ಮಕ್ಕಳು ವಾಸವಾಗಿರುತ್ತಾರೆ; ಅವರ ಸಂತತಿಗಳವರೂ ನಿನ್ನನ್ನು ಆರಾಧಿಸಲು ಇಲ್ಲಿರುತ್ತಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು