Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:20 - ಪರಿಶುದ್ದ ಬೈಬಲ್‌

20 ವನ್ಯಜೀವಿಗಳೂ ನನಗೆ ಕೃತಜ್ಞತೆಯಿಂದ ಇರುತ್ತವೆ. ದೊಡ್ಡ ಗಾತ್ರದ ಪ್ರಾಣಿಗಳೂ ಪಕ್ಷಿಗಳೂ ನನ್ನನ್ನು ಗೌರವಿಸುವವು. ನಾನು ಮರುಭೂಮಿಯಲ್ಲಿ ನೀರನ್ನು ಬರಮಾಡುವಾಗ ಅವು ನನ್ನನ್ನು ಗೌರವಿಸುವವು. ನಾನು ಆರಿಸಿಕೊಂಡ ನನ್ನ ಜನರಿಗೆ ನೀರನ್ನು ಕೊಡುವುದಕ್ಕಾಗಿ ನಾನು ಇದನ್ನು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬಯಲಿನ ಮೃಗಗಳು, ನರಿಗಳು, ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅರಣ್ಯದಲ್ಲಿ ನೀರನ್ನು, ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವುದಕ್ಕೆ ಕೊಟ್ಟೆನು. ನಾನು ಸೃಷ್ಟಿಸಿಕೊಂಡ ಆಪ್ತಜನರ ಜಲಪಾನಕ್ಕಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕಾಡುಮೃಗಗಳು, ನರಿ, ಉಷ್ಟ್ರಪಕ್ಷಿಗಳು ಕೂಗಿ ಕೊಂಡಾಡುವುವು ನನ್ನನು. ಏಕೆನೆ ಕೊಡುವೆನು ನೀರನ್ನು ಮರುಭೂಮಿಯಲಿ ಹರಿಸುವೆನು ತೊರೆನದಿಗಳನ್ನು ಅರಣ್ಯದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನನ್ನ ಸ್ತೋತ್ರವನ್ನು ಪ್ರಚಾರಪಡಿಸಲಿ ಎಂದು ನಾನು ಸೃಷ್ಟಿಸಿಕೊಂಡ ಆಪ್ತಜನರ ಜಲಪಾನಕ್ಕಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕಾಡುಮೃಗಗಳು, ನರಿಗಳು, ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯಲ್ಲಿ ನೀರನ್ನು, ಮರುಭೂಮಿಯಲ್ಲಿ ನದಿಗಳನ್ನು ನಾನು ಆಯ್ದುಕೊಂಡ ನನ್ನ ಪ್ರಜೆಗಳಿಗೆ ಕುಡಿಯುವುದಕ್ಕೆ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:20
27 ತಿಳಿವುಗಳ ಹೋಲಿಕೆ  

“ಬಡಜನರು ನೀರಿಗಾಗಿ ಹುಡುಕಾಡುವರು. ಆದರೆ ನೀರು ಅವರಿಗೆ ದೊರಕುವದಿಲ್ಲ. ಅವರು ದಾಹಗೊಂಡಿದ್ದಾರೆ, ಅವರ ನಾಲಿಗೆ ಒಣಗಿಹೋಗಿದೆ. ನಾನು ಅವರ ಮೊರೆಯನ್ನು ಕೇಳುವೆನು. ನಾನು ಅವರನ್ನು ತೊರೆಯುವುದಿಲ್ಲ, ಅವರನ್ನು ಸಾಯಲು ಬಿಡುವುದಿಲ್ಲ.


ಯೆಹೋವನು ತನ್ನ ಜನರನ್ನು ಮರುಭೂಮಿಯಲ್ಲಿ ನಡೆಸಿಕೊಂಡು ಬಂದನು. ಜನರು ಬಾಯಾರಲಿಲ್ಲ; ಯಾಕೆಂದರೆ ಆತನು ಬಂಡೆಯಿಂದ ನೀರು ಹರಿಯುಂತೆ ಮಾಡಿದನು. ಆತನು ಬಂಡೆಯನ್ನು ಇಬ್ಭಾಗ ಮಾಡಿದಾಗ ನೀರು ಅದರೊಳಗಿಂದ ಹರಿಯಿತು.


ಜನರಿಗೆ ಹಸಿವೆಯಾಗದು, ಬಾಯಾರಿಕೆಯಾಗದು. ಸೂರ್ಯನ ಉರಿ ಬಿಸಿಲಾಗಲಿ ಗಾಳಿಯಾಗಲಿ ಅವರಿಗೆ ಹಾನಿಮಾಡದು. ಯಾಕೆಂದರೆ ದೇವರು ತಾನೇ ಅವರನ್ನು ಸಂತೈಸುವನು, ಅವರನ್ನು ಬುಗ್ಗೆಗಳ ಬಳಿಗೆ ನಡಿಸುವನು.


ಅವರು ಕುರಿಮರಿಯಾದಾತನ ವಿರುದ್ಧ ಯುದ್ಧಗಳನ್ನು ಮಾಡುತ್ತಾರೆ. ಆದರೆ ಕುರಿಮರಿಯಾದಾತನು ಪ್ರಭುಗಳ ಪ್ರಭುವಾದ್ದರಿಂದ ಮತ್ತು ರಾಜಾಧಿರಾಜನಾದ್ದರಿಂದ ಅವರನ್ನು ಸೋಲಿಸುತ್ತಾನೆ. ಆತನೊಂದಿಗೆ, ತಾನು ಕರೆದಿರುವ ಜನರು, ಆಯ್ಕೆಮಾಡಿಕೊಂಡಿರುವ ಜನರು ಮತ್ತು ತನ್ನ ನಂಬಿಗಸ್ತ ಹಿಂಬಾಲಕರು ಇದ್ದರು” ಎಂದನು.


ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ದಾಹವಾಗುವುದೇ ಇಲ್ಲ. ನಾನು ಅವನಿಗೆ ಕೊಡುವ ನೀರು ಅವನೊಳಗೆ ಉಕ್ಕಿಹರಿಯುವ ನೀರಿನ ಬುಗ್ಗೆಯಾಗುವುದು. ಆ ನೀರು ಅವನಿಗೆ ನಿತ್ಯಜೀವವನ್ನು ತರುತ್ತದೆ” ಎಂದು ಉತ್ತರಕೊಟ್ಟನು.


ಕಾಡುನಾಯಿ ಮತ್ತು ತೋಳಗಳು ಬಾಬಿಲೋನಿನ ಭವ್ಯಭವನಗಳೊಳಗಿಂದ ಅರಚುವವು. ಬಾಬಿಲೋನ್ ಕೊನೆಗೊಳ್ಳುವುದು. ಅದರ ಅಂತ್ಯವು ಸಮೀಪದಲ್ಲಿಯೇ ಇದೆ. ಅದರ ಪೂರ್ಣ ನಾಶನಕ್ಕಾಗಿ ನಾನು ಇನ್ನು ಹೆಚ್ಚು ಹೊತ್ತು ಕಾಯುವದಿಲ್ಲ.”


ಆತ್ಮನೂ ಮದುಮಗಳೂ, “ಬಾ!” ಎನ್ನುತ್ತಾರೆ. ಇದನ್ನು ಕೇಳುವ ಪ್ರತಿಯೊಬ್ಬ ವ್ಯಕ್ತಿಯೂ, “ಬಾ!” ಎಂದು ಹೇಳಬೇಕು. ಬಾಯಾರಿದವನು ನನ್ನ ಬಳಿಗೆ ಬರಲಿ; ಅವನಿಗೆ ಇಷ್ಟವಿದ್ದರೆ ಜೀವಜಲವನ್ನು ಉಚಿತವಾಗಿ ಪಡೆದುಕೊಳ್ಳಲಿ.


ಸಿಂಹಾಸನದ ಮೇಲೆ ಕುಳಿತಿದ್ದಾತನು ನನಗೆ ಹೀಗೆ ಹೇಳಿದನು: “ಎಲ್ಲವೂ ನೆರವೇರಿತು! ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ಬಾಯಾರಿದವರಿಗೆ ನಾನು ಜೀವಜಲದ ಬುಗ್ಗೆಯಿಂದ ನೀರನ್ನು ಉಚಿತವಾಗಿ ಕೊಡುತ್ತೇನೆ.


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ಯೇಸು ಆಕೆಗೆ, “ದೇವರು ಏನು ಕೊಡುತ್ತಾನೆಂಬುದು ನಿನಗೆ ಗೊತ್ತಿಲ್ಲ ಮತ್ತು ಕುಡಿಯಲು ನೀರನ್ನು ಕೇಳಿದ ನಾನು ಯಾರೆಂಬುದೂ ನಿನಗೆ ಗೊತ್ತಿಲ್ಲ. ನಿನಗೆ ಈ ಸಂಗತಿಗಳು ಗೊತ್ತಿದ್ದರೆ, ನೀನು ನನ್ನನ್ನು ಕೇಳಿಕೊಳ್ಳುತ್ತಿದ್ದೆ, ಮತ್ತು ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆ” ಎಂದನು.


ದೇವರು ಆ ಭಯಂಕರ ಕಾಲವನ್ನು ಕಡಿಮೆಗೊಳಿಸಲು ನಿರ್ಧರಿಸಿದ್ದಾನೆ. ಇಲ್ಲವಾಗಿದ್ದರೆ, ಯಾವ ಮನುಷ್ಯನೂ ಬದುಕಿ ಉಳಿಯಲು ಸಾಧ್ಯವಿಲ್ಲ. ಆದರೆ ದೇವರು ತಾನು ಆರಿಸಿಕೊಂಡ ವಿಶೇಷ ಜನರಿಗೆ ಸಹಾಯ ಮಾಡಲು ಆ ಸಮಯವನ್ನು ಕಡಿಮೆ ಮಾಡುವನು.


ಆ ದಿವಸ ಸಿಹಿ ದ್ರಾಕ್ಷಾರಸವು ಬೆಟ್ಟಗಳಿಂದ ಹರಿಯುವುದು. ಬೆಟ್ಟಗಳಲ್ಲಿ ಹಾಲು ಹರಿಯುವುದು. ಮತ್ತು ಯೆಹೂದದ ಬತ್ತಿದ ನದಿಗಳಲ್ಲಿ ನೀರು ತುಂಬಿ ಹರಿಯುವದು. ಯೆಹೋವನ ಆಲಯದಿಂದ ಬುಗ್ಗೆಯು ಹೊರಡುವದು. ಅಕಾಸಿಯ ಕಣಿವೆಗೆ ನೀರನ್ನು ಕೊಡುವದು.


ಆ ಜನರು ಹಿಂತಿರುಗಿ ಬರುವಾಗ ಅಳುತ್ತಿರುವರು. ಆದರೆ ನಾನು ಅವರಿಗೆ ದಾರಿತೋರಿಸುವೆನು, ಸಮಾಧಾನಪಡಿಸುವೆನು. ನಾನು ಅವರನ್ನು ನದಿ ದಾಟಿಸಿಕೊಂಡು ಬರುವೆನು. ಅವರು ಎಡವದಂತೆ ಸಮವಾದ ಮಾರ್ಗದಲ್ಲಿ ನಡೆಸಿಕೊಂಡು ಬರುವೆನು. ನಾನು ಇಸ್ರೇಲಿನ ತಂದೆ; ಎಫ್ರಾಯೀಮ್ ನನ್ನ ಚೊಚ್ಚಲ ಮಗ. ಆದ್ದರಿಂದಲೇ ನಾನು ಅವರನ್ನು ನಡೆಸಿಕೊಂಡು ಬರುವೆನು.


ನಿಮ್ಮ ಹೆಸರುಗಳು ನನ್ನ ಸೇವಕರಿಗೆ ಶಾಪವಾಗಿ ಉಪಯೋಗಿಸಲ್ಪಡುತ್ತವೆ.” ನನ್ನ ಒಡೆಯನಾದ ಯೆಹೋವನು ನಿಮ್ಮನ್ನು ಸಾಯಿಸುವನು. ಆತನು ತನ್ನ ಸೇವಕರನ್ನು ಹೊಸ ಹೆಸರಿನಿಂದ ಕರೆಯುವನು.


ಯಾಕೆಂದರೆ, ನಾನು ಹೊಸ ಕಾರ್ಯಗಳನ್ನು ಮಾಡುವೆನು. ನೀವು ಹೊಸ ಸಸಿಯ ರೀತಿಯಲ್ಲಿ ಬೆಳೆಯುವಿರಿ. ಇದು ಸತ್ಯವೆಂದು ನಿಮಗೆ ಗೊತ್ತಿದೆ. ನಾನು ಮರುಭೂಮಿಯಲ್ಲಿ ಖಂಡಿತವಾಗಿಯೂ ರಸ್ತೆಯನ್ನು ಮಾಡುತ್ತೇನೆ; ಒಣನೆಲದಲ್ಲಿ ನದಿ ಹರಿಯುವಂತೆ ಮಾಡುತ್ತೇನೆ.


ಆತನು ಎಲ್ಲಾ ಕಾಡುಪ್ರಾಣಿಗಳನ್ನೂ ಪಶುಗಳನ್ನೂ ಕ್ರಿಮಿಕೀಟಗಳನ್ನೂ ಪಕ್ಷಿಗಳನ್ನೂ ಸೃಷ್ಟಿಮಾಡಿದನು.


ಸಿಂಹಗಳು ಬೇಟೆಯಾಡುವಾಗ ಆಹಾರಕ್ಕಾಗಿ ದೇವರನ್ನು ಕೇಳಿಕೊಳ್ಳುತ್ತಿವೆಯೊ ಎಂಬಂತೆ ಬರ್ಜಿಸುತ್ತವೆ.


ಯಾರಿಗೆ ಯೆಹೋವನು ದೇವರಾಗಿದ್ದಾನೋ ಅವರೇ ಧನ್ಯರು. ಯಾಕೆಂದರೆ ಆತನು ಅವರನ್ನು ಸ್ವಕೀಯರನ್ನಾಗಿ ಆರಿಸಿಕೊಂಡಿದ್ದಾನೆ.


ಆತನ ಅದ್ಭುತಕಾರ್ಯಗಳನ್ನೂ ಮಹತ್ಕಾರ್ಯಗಳನ್ನೂ ನ್ಯಾಯನಿರ್ಣಯಗಳನ್ನೂ ಜ್ಞಾಪಿಸಿಕೊಳ್ಳಿರಿ.


ಪ್ರತಿಯೊಂದು ಬೆಟ್ಟದಲ್ಲಿಯೂ ಪರ್ವತದಲ್ಲಿಯೂ ಹರಿಯುವ ನೀರಿನ ತೊರೆಗಳಿರುವವು. ಇವೆಲ್ಲಾ ಅನೇಕ ಜನರು ಕೊಲ್ಲಲ್ಪಟ್ಟ ನಂತರವೂ ಬುರುಜುಗಳು ಕೆಡವಲ್ಪಟ್ಟ ನಂತರವೂ ಸಂಭವಿಸುವವು.


ಹೀಗಿದ್ದಲ್ಲಿ ರಾಜನು ಮಳೆಯಲ್ಲಿ ಆಶ್ರಯ ಸ್ಥಳವಾಗಿಯೂ ಗಾಳಿಯಲ್ಲಿ ಮರೆಯಂತೆಯೂ ಮರುಭೂಮಿಯಲ್ಲಿ ಒರತೆಯಂತೆಯೂ ಬೆಂಗಾಡಿನಲ್ಲಿ ಬಂಡೆಯ ನೆರಳಿನಂತೆಯೂ ಇರುವನು.


ಕೆಂದರೆ ಬಲಿಷ್ಠನಾದ ಯೆಹೋವನು ಅಲ್ಲಿದ್ದಾನೆ. ಆ ದೇಶವು ತೊರೆಗಳೂ ಅಗಲವಾಗಿ ಹರಿಯುವ ನದಿಗಳೂ ಇರುವ ದೇಶವಾಗಿದೆ. ಆದರೆ ಆ ನದಿಯಲ್ಲಿ ವೈರಿಯ ದೋಣಿಯಾಗಲಿ, ಹಡಗುಗಳಾಗಲಿ ಇರುವದಿಲ್ಲ. ಆ ಹಡುಗುಗಳಲ್ಲಿ ಕೆಲಸಮಾಡುವವರೇ, ನೀವು ಅದರ ಹಗ್ಗಗಳಲ್ಲಿ ಕೆಲಸಮಾಡುವದನ್ನು ಬಿಟ್ಟುಬಿಡಿರಿ. ಹಡಗಿನ ಸ್ತಂಭವನ್ನು ನೀವು ಬಲಪಡಿಸಲಾರಿರಿ. ಹಡಗಿನ ಹಾಯಿಗಳನ್ನು ನಿಮ್ಮಿಂದ ತೆರೆಯಲು ಆಗುವದಿಲ್ಲ. ಯಾಕೆಂದರೆ ದೇವರೇ ನಮ್ಮ ನ್ಯಾಯಾಧೀಶನು. ಆತನು ಧರ್ಮಶಾಸ್ತ್ರವನ್ನು ಸಿದ್ಧಪಡಿಸಿದಾತನು. ಯೆಹೋವನೇ ನಮ್ಮ ಅರಸನು. ಆತನೇ ನಮ್ಮನ್ನು ರಕ್ಷಿಸುವನು, ನಮಗೆ ಸಂಪತ್ತನ್ನು ದಯಪಾಲಿಸುವನು. ಕೈಕಾಲು ಊನವಾದವರೂ ಸಹ ಯುದ್ಧದಲ್ಲಿ ಸಂಪತ್ತನ್ನು ಗಳಿಸುವರು.


ಆಗ ಜನರು ಬಿಸುಲ್ಗುದುರೆಯನ್ನು ನೋಡಿ ನೀರು ಎಂದು ಭಾವಿಸುವರು. ಆದರೆ ಆಗ ನೀರಿನ ಕೊಳಗಳೇ ಇರುವವು. ಬೆಂಗಾಡಿನಲ್ಲಿ ಬಾವಿಗಳಿರುವವು. ನೆಲದೊಳಗಿಂದ ನೀರು ಉಕ್ಕುವುದು. ಒಂದು ಕಾಲದಲ್ಲಿ ಕಾಡುಪ್ರಾಣಿಗಳು ವಾಸವಾಗಿದ್ದ ಸ್ಥಳದಲ್ಲಿ ಎತ್ತರವಾದ ನೀರವಂಜಿಗಳು ಬೆಳೆಯುವವು.


ಒಣಬೆಟ್ಟಗಳಲ್ಲಿ ನದಿಗಳು ಹರಿಯುವಂತೆ ನಾನು ಮಾಡುವೆನು. ಕಣಿವೆಗಳ ಮೂಲಕ ಬುಗ್ಗೆಯ ನೀರು ಹರಿಯುವಂತೆ ಮಾಡುವೆನು. ಮರುಭೂಮಿಯನ್ನು ಸರೋವರವನ್ನಾಗಿ ಮಾಡುವೆನು. ಆ ಒಣನೆಲದಲ್ಲಿ ನೀರಿನ ಬುಗ್ಗೆಗಳು ಕಾಣುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು