Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:21 - ಪರಿಶುದ್ದ ಬೈಬಲ್‌

21 ನಾನು ನಿರ್ಮಿಸಿದ ಈ ಜನರು ನನಗೆ ಸ್ತೋತ್ರಗಾನ ಹಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ಸೃಷ್ಟಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಾ ಸೃಷ್ಟಿಸಿದ ಆಪ್ತ ಜನಕೆ ನೀಡುವೆನು ಜಲಪಾನವನು; ಎಂದೇ ಸ್ತುತಿಸಿಕೊಂಡಾಡುವರು ನನ್ನನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾನು ಅರಣ್ಯದಲ್ಲಿ ನೀರನ್ನು ಒದಗಿಸಿ ಅಡವಿಯಲ್ಲಿ ನದಿಗಳನ್ನು ಹರಿಸುವವನಾದ ಕಾರಣ ನರಿ ಉಷ್ಟ್ರಪಕ್ಷಿ ಮೊದಲಾದ ಕಾಡು ಮೃಗಗಳು ನನ್ನನ್ನು ಘನಪಡಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:21
22 ತಿಳಿವುಗಳ ಹೋಲಿಕೆ  

ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ಆದ್ದರಿಂದ ಆತನ ಮೂಲಕ ನಾವು ದೇವರಿಗೆ ಯಜ್ಞಗಳನ್ನು ಅರ್ಪಿಸುವುದನ್ನು ನಿಲ್ಲಿಸಬಾರದು. ಆತನೇ ಪ್ರಭುವೆಂದು ನಮ್ಮ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.


ಮುಂದಿನ ತಲೆಮಾರುಗಳವರಿಗಾಗಿ ಇವುಗಳನ್ನು ಬರೆದಿಡಿ. ಮುಂದಿನ ಕಾಲದಲ್ಲಿ ಅವರು ಯೆಹೋವನನ್ನು ಸ್ತುತಿಸುತ್ತಾರೆ.


ಆದ್ದರಿಂದ ನೀವು ತಿಂದರೂ ಕುಡಿದರೂ ಏನೇ ಮಾಡಿದರೂ ದೇವರ ಮಹಿಮೆಗಾಗಿ ಅದನ್ನು ಮಾಡಿರಿ.


ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”


ಭೂಲೋಕ ಮತ್ತು ಪರಲೋಕಗಳಲ್ಲಿರುವ ಎಲ್ಲವುಗಳು, ದೃಶ್ಯ ಮತ್ತು ಅದೃಶ್ಯವಾದವುಗಳು, ಆತ್ಮಿಕ ಶಕ್ತಿಗಳು, ಪ್ರಭುತ್ವಗಳು ಆತನ ಶಕ್ತಿಯಿಂದ ನಿರ್ಮಿತವಾಗಿವೆ. ಅಧಿಪತಿಗಳು ಮತ್ತು ಅಧಿಕಾರಿಗಳು ಆತನ ಶಕ್ತಿಯಿಂದ ನಿರ್ಮಿತರಾದರು. ಸಮಸ್ತವೂ ಕ್ರಿಸ್ತನ ಮೂಲಕವಾಗಿ ಆತನಿಗೋಸ್ಕರ ಸೃಷ್ಟಿಸಲ್ಪಟ್ಟವು.


“ನಿನ್ನ ಜನರೆಲ್ಲಾ ನೀತಿಯಲ್ಲಿ ಜೀವಿಸುವರು. ಅವರು ಭೂಮಿಗೆ ಶಾಶ್ವತವಾದ ಬಾಧ್ಯಸ್ತರಾಗುವರು. ಆ ಜನರನ್ನು ನಾನೇ ನಿರ್ಮಿಸಿದೆನು. ನಾನು ನನ್ನ ಸ್ವಂತ ಕೈಗಳಿಂದ ನಿರ್ಮಿಸಿದ ಆಶ್ಚರ್ಯಕರವಾದ ಸಸಿಗಳಂತೆ ಅವರಿರುವರು.


ಆತನಿಗೆ ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಸ್ತೋತ್ರವಾಗಲಿ. ಆಮೆನ್.


ನನ್ನ ಒಡೆಯನಾದ ಯೆಹೋವನು ನನಗೆ ಸಹಾಯ ಮಾಡುವನು. ಆದ್ದರಿಂದ ಅವರ ಶಾಪಗಳು ನನಗೆ ಯಾವ ಹಾನಿಯನ್ನು ಮಾಡುವದಿಲ್ಲ. ನಾನು ಬಲವಾಗಿರುವೆನು. ನಾನು ನಿರಾಶನಾಗುವದಿಲ್ಲವೆಂದು ನನಗೆ ಗೊತ್ತಿದೆ.


ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು.


ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆಂಬುದು ನಿಮಗೆ ತಿಳಿದಿರಲಿ. ನಾನು ಮೊರೆಯಿಡುವಾಗಲೆಲ್ಲಾ ಆತನು ನನಗೆ ಕಿವಿಗೊಡುತ್ತಾನೆ.


ಯೆಹೋವನು ಪ್ರತಿಯೊಂದನ್ನು ತನ್ನ ಉದ್ದೇಶಕ್ಕನುಸಾರವಾಗಿ ಮಾಡಿದ್ದಾನೆ. ಆತನು ಕೆಡುಕರನ್ನು ನಾಶನದ ದಿನಕ್ಕಾಗಿ ಇಟ್ಟಿದ್ದಾನೆ.


ನಾವು ನಿನ್ನ ಜನರೂ ನೀನು ಪಾಲಿಸುವ ಮಂದೆಯೂ ಆಗಿದ್ದೇವೆ. ನಾವು ನಿನ್ನನ್ನು ಎಂದೆಂದಿಗೂ ಕೊಂಡಾಡುವೆವು. ನಿನ್ನನ್ನು ಸದಾಕಾಲ ಸ್ತುತಿಸುವೆವು.


ಯೆಹೋವನನ್ನು ಘನಪಡಿಸಿರಿ. ದೂರದೇಶಗಳ ಜನರೆಲ್ಲರೇ, ಆತನನ್ನು ಸ್ತುತಿಸಿರಿ.


ಯಾಕೋಬೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಇಸ್ರೇಲೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಈಗ ಆತನು ಹೇಳುವುದೇನೆಂದರೆ: “ಭಯಪಡಬೇಡ. ನಾನೇ ನಿನ್ನನ್ನು ರಕ್ಷಿಸಿದ್ದೇನೆ. ನಾನು ನಿನಗೆ ಹೆಸರಿಟ್ಟೆನು. ನೀನು ನನ್ನವನೇ.


ಪುರುಷನೊಬ್ಬನು ನಡುಪಟ್ಟಿಯನ್ನು ಬಿಗಿಯಾಗಿ ಸೊಂಟಕ್ಕೆ ಸುತ್ತಿಕೊಳ್ಳುವಂತೆ ನಾನು ಇಸ್ರೇಲಿನ ಎಲ್ಲಾ ವಂಶಗಳನ್ನು ಮತ್ತು ಯೆಹೂದದ ಎಲ್ಲಾ ವಂಶಗಳನ್ನು ನನ್ನ ಸುತ್ತಲೂ ಬಿಗಿದುಕೊಂಡೆನು.” ಇದು ಯೆಹೋವನಿಂದ ಬಂದ ಮಾತು. “ಅವರು ನನ್ನ ಜನರಾಗುವರು ಎಂದುಕೊಂಡು ನಾನು ಹಾಗೆ ಮಾಡಿದೆ. ನನ್ನ ಜನರು ನನಗೆ ಕೀರ್ತಿ, ಸ್ತುತಿ, ಗೌರವ ತರುವರೆಂದು ತಿಳಿದಿದ್ದೆ. ಆದರೆ ನನ್ನ ಜನರು ನನ್ನ ಮಾತನ್ನು ಕೇಳದೆಹೋದರು.”


ಯೆಹೋವನು ಹೇಳುವುದೇನೆಂದರೆ, “ಅವರು ನನ್ನ ಜನರು. ನಾನು ಅವರಿಗೆ ಕರುಣೆ ತೋರಿಸುವೆನು. ತಂದೆಯು ತನಗೆ ವಿಧೇಯತೆ ತೋರಿಸುವ ತನ್ನ ಮಕ್ಕಳಿಗೆ ಕನಿಕರವುಳ್ಳವನಾಗಿರುತ್ತಾನೆ. ಅದೇ ರೀತಿಯಲ್ಲಿ ನನ್ನನ್ನು ಅನುಸರಿಸುವವರ ಮೇಲೆ ನಾನು ದಯೆ ತೋರಿಸುವೆನು.


ಯೆಹೋವನು ಉನ್ನತದಲ್ಲಿರುವ ತನ್ನ ಪರಿಶುದ್ಧ ಸ್ಥಳದಿಂದ ಕೆಳಗೆ ನೋಡುತ್ತಾನೆ. ಆತನು ಪರಲೋಕದಿಂದ ಭೂಮಿಯನ್ನು ನೋಡುತ್ತಾನೆ.


ಆಗ ಜೆರುಸಲೇಮ್ ಒಂದು ಅದ್ಭುತವಾದ ಸ್ಥಳವಾಗುವುದು; ಜನರು ಸಂತೋಷದಿಂದಿರುವರು. ಅಲ್ಲಿ ನಡೆದ ಒಳ್ಳೆಯ ಸಂಗತಿಗಳ ಬಗ್ಗೆ ಕೇಳಿದಾಗ ಬೇರೆ ಜನಾಂಗಗಳ ಜನರು ಅದನ್ನು ಹೊಗಳುವರು; ವಿಸ್ಮಯಪಡುವರು. ನಾನು ಜೆರುಸಲೇಮಿಗೆ ಮಾಡುತ್ತಿರುವ ಒಳಿತಿನ ವಿಷಯವು ಅವರ ಕಿವಿಗೆ ಬೀಳುವುದು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು