Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:23 - ಪರಿಶುದ್ದ ಬೈಬಲ್‌

23 ನಿನ್ನ ಕುರಿಗಳನ್ನು ನನ್ನ ಬಳಿಗೆ ಯಜ್ಞಮಾಡುವದಕ್ಕಾಗಿ ತರಲಿಲ್ಲ. ನೀನು ನನ್ನನ್ನು ಸನ್ಮಾನಿಸಲಿಲ್ಲ. ನೀನು ನನಗೆ ಬಲಿಯರ್ಪಣೆ ಮಾಡಲಿಲ್ಲ. ನೀನು ಬಲಿಯರ್ಪಣೆ ಮಾಡಬೇಕೆಂದು ನಾನು ನಿನ್ನನ್ನು ಬಲವಂತಪಡಿಸಲಿಲ್ಲ. ನೀನು ಆಯಾಸಗೊಳ್ಳುವ ತನಕ ಧೂಪಹಾಕಬೇಕೆಂದು ನಾನು ನಿನ್ನನ್ನು ಒತ್ತಾಯಪಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀನು ನನಗೆ ಹೋಮಕ್ಕಾಗಿ ಕುರಿ ಮೇಕೆಗಳನ್ನು ತಂದು ಯಜ್ಞಗಳಿಂದ ನನ್ನನ್ನು ಘನಪಡಿಸಲಿಲ್ಲ. ಕಾಣಿಕೆಗಳನ್ನು ಕೇಳಿ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ, ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಕುರಿಮೇಕೆಗಳನ್ನು ನೀನು ತರಲಿಲ್ಲ ನನಗೆ ಹೋಮಕ್ಕಾಗಿ ಬಲಿಗಳನ್ನು ಅರ್ಪಿಸಲಿಲ್ಲ ನನ್ನ ಘನತೆಗಾಗಿ ನಾ ನಿನ್ನನು ಒತ್ತಾಯಿಸಲಿಲ್ಲ ನೈವೇದ್ಯಕ್ಕಾಗಿ ನಾ ನಿನ್ನನು ಬೇಸರಗೊಳಿಸಲಿಲ್ಲ ಧೂಪಾರತಿಗಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀನು ನನಗೆ ಹೋಮಕ್ಕಾಗಿ ಕುರಿಮೇಕೆಗಳನ್ನು ತಂದು ಯಜ್ಞಗಳಿಂದ ನನ್ನನ್ನು ಘನಪಡಿಸಲಿಲ್ಲ, ನೈವೇದ್ಯಕ್ಕಾಗಿ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ, ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಿನ್ನ ದಹನಬಲಿಯ ಎಳೆಯ ಕುರಿಗಳನ್ನು ನನಗೆ ತರಲಿಲ್ಲ. ನಿನ್ನ ಯಜ್ಞಗಳಿಂದ ನನ್ನನ್ನು ಸನ್ಮಾನಿಸಲಿಲ್ಲ. ನೀನು ಕಾಣಿಕೆಯನ್ನು ಅರ್ಪಿಸದೆ ಇದ್ದದ್ದಕ್ಕೆ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ, ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:23
19 ತಿಳಿವುಗಳ ಹೋಲಿಕೆ  

ಇಸ್ರೇಲೇ, ನೀನು ನಲವತ್ತು ವರ್ಷ ಮರುಭೂಮಿಯಲ್ಲಿ ನನಗೆ ಯಜ್ಞಹೋಮಗಳನ್ನು ಅರ್ಪಿಸಿದೆ.


ಹೌದು, ನಿಮಗೆ ನನ್ನ ನೊಗವು ಮೃದುವಾಗಿದೆ; ನನ್ನ ಹೊರೆಯು ಹಗುರವಾಗಿದೆ.”


ದೇವರಿಂದ ಕದ್ದುಕೊಳ್ಳುವದನ್ನು ನಿಲ್ಲಿಸಿರಿ. ಮನುಷ್ಯನು ದೇವರಿಂದ ಕದ್ದುಕೊಳ್ಳಬಾರದು. ಆದರೆ ನೀವು ನನ್ನಿಂದ ಕದ್ದುಕೊಂಡಿದ್ದೀರಿ. “ನಿನ್ನಿಂದ ಏನು ಕದ್ದುಕೊಂಡಿದ್ದೇವೆ” ಎಂದು ಕೇಳುತ್ತೀರಾ? “ನಿಮ್ಮ ದಶಮ ಭಾಗವನ್ನು ನೀವು ನನಗೆ ಅರ್ಪಿಸಬೇಕಿತ್ತು. ವಿಶೇಷ ಕಾಣಿಕೆಗಳನ್ನು ನೀವು ನನಗೆ ಕೊಡಬೇಕಾಗಿತ್ತು. ಆದರೆ ನೀವು ಹಾಗೆ ಮಾಡಲಿಲ್ಲ.


ನಾನು ನಿಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದೆ. ನಾನು ಅವರೊಂದಿಗೆ ಮಾತನಾಡಿದೆ. ಆದರೆ ನಾನು ಅವರಿಗೆ ಸರ್ವಾಂಗಹೋಮಗಳ ಬಗ್ಗೆಯಾಗಲಿ ಯಜ್ಞಗಳ ಬಗ್ಗೆಯಾಗಲಿ ಯಾವ ಆಜ್ಞೆಯನ್ನೂ ಕೊಟ್ಟಿಲ್ಲ.


ಕೆಲವರು ಒಂದು ಕಡೆಯಲ್ಲಿ ಹೋರಿಯನ್ನು ಯಜ್ಞಮಾಡುವರು. ಇನ್ನೊಂದು ಕಡೆಯಲ್ಲಿ ಜನರಿಗೆ ಹಿಂಸೆ ಕೊಡುವರು. ಅವರು ಬಲಿಯರ್ಪಿಸಲು ಕುರಿಗಳನ್ನು ಕೊಯ್ಯುವರು, ಅದೇ ಸಮಯದಲ್ಲಿ ನಾಯಿಗಳ ಕುತ್ತಿಗೆಗಳನ್ನು ಮುರಿಯುವರು. ಅವರು ನನಗೆ ಹಂದಿಗಳ ರಕ್ತವನ್ನು ಅರ್ಪಿಸುವರು. ನನಗೆ ಧೂಪವನ್ನು ಹಾಕಲು ಯಾವಾಗಲೂ ತಯಾರಿರುವರು. ಅದೇ ಸಮಯದಲ್ಲಿ ಅಯೋಗ್ಯವಾದ ತಮ್ಮ ವಿಗ್ರಹಗಳನ್ನು ಪ್ರೀತಿಸುವರು. ಅವರು ನನ್ನ ಮಾರ್ಗವನ್ನು ಅನುಸರಿಸದೆ ತಮ್ಮ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ. ಅವರು ತಮ್ಮ ಭಯಂಕರವಾದ ವಿಗ್ರಹಗಳನ್ನು ಪೂಜಿಸುತ್ತಾರೆ.


ಕೆಡುಕನ ಯಜ್ಞಗಳು ಯೆಹೋವನಿಗೆ ಅಸಹ್ಯ. ಯಾಕೆಂದರೆ ಅವು ದುರುದ್ದೇಶದಿಂದ ಕೂಡಿವೆ.


ಕೆಡುಕರ ಕಾಣಿಕೆಯನ್ನು ಯೆಹೋವನು ದ್ವೇಷಿಸುವನು; ಒಳ್ಳೆಯವರ ಪ್ರಾರ್ಥನೆಯನ್ನು ಸಂತೋಷದಿಂದ ಕೇಳುವನು.


“ಒಬ್ಬನು ದೇವರಾದ ಯೆಹೋವನಿಗೆ ಧಾನ್ಯಸಮರ್ಪಣೆ ಮಾಡಬೇಕೆಂದಿದ್ದರೆ, ಅದು ಗೋಧಿಹಿಟ್ಟಾಗಿರಬೇಕು. ಅವನು ಈ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯಿದು, ಧೂಪವನ್ನಿಡಬೇಕು.


ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಹಾಲುಮಡ್ಡಿ, ಗುಗ್ಗುಲ, ಗಂಧದ ಚೆಕ್ಕೆ ಎಂಬ ಸುಗಂಧ ದ್ರವ್ಯಗಳನ್ನು ಸಮವಾಗಿ ತೆಗೆದುಕೊ.


ಪ್ರತಿ ಸಾಲಿನಲ್ಲಿ ಶುದ್ಧವಾದ ಧೂಪದ್ರವ್ಯವನ್ನಿಡಬೇಕು. ಇದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿತವಾದ ಸಮರ್ಪಣೆಯನ್ನು ಯೆಹೋವನ ಜ್ಞಾಪಕಕ್ಕೆ ತರುವುದು.


ನಿನಗೆ ಬರುವ ಆದಾಯದಿಂದಲೂ ಬೆಳೆಯ ಪ್ರಥಮ ಫಲದಿಂದಲೂ ಯೆಹೋವನನ್ನು ಸನ್ಮಾನಿಸು.


ಸರ್ವಶಕ್ತನೂ ಇಸ್ರೇಲಿನ ದೇವರೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: “ಹೋಗಿರಿ, ನಿಮ್ಮ ಮನಸ್ಸಿಗೆ ಬಂದಷ್ಟು ಸರ್ವಾಂಗಹೋಮಗಳನ್ನು ಮತ್ತು ಯಜ್ಞಗಳನ್ನು ಅರ್ಪಿಸಿರಿ. ಆ ಯಜ್ಞಗಳ ಮಾಂಸವನ್ನು ನೀವೇ ತಿನ್ನಿರಿ.


ಯೆಹೋವನು ಹೇಳುವುದೇನೆಂದರೆ, “ನನ್ನ ಜನರೇ, ನಾನು ಮಾಡಿದ್ದೇನು ತಿಳಿಸಿರಿ. ನಿಮಗೆ ವಿರೋಧವಾಗಿ ನಾನು ಏನಾದರೂ ಮಾಡಿದ್ದೇನೋ? ನಿಮಗೆ ಜೀವಿಸಲು ಕಷ್ಟವಾಗುವಂತೆ ಮಾಡಿದ್ದೇನೋ?


ಲೇವಿಯರಿಗೆ ಸಲ್ಲತಕ್ಕ ಪಾಲನ್ನು ಜನರು ಕೊಡಲಿಲ್ಲವೆಂಬ ಕಾರಣದಿಂದಾಗಿ ಲೇವಿಯರೂ ಗಾಯಕರೂ ಹೊಲದಲ್ಲಿ ಕೆಲಸ ಮಾಡಲು ತಮ್ಮ ಊರುಗಳಿಗೆ ಹೊರಟುಹೋದರೆಂಬ ವಿಷಯ ನನಗೆ ತಿಳಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು