Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:28 - ಪರಿಶುದ್ದ ಬೈಬಲ್‌

28 ಪರಿಶುದ್ಧವಾಗಿ ಆಳುವ ನಿನ್ನವರನ್ನು ನಾನು ಅಪರಿಶುದ್ಧ ಮಾಡುವೆನು. ಯಾಕೋಬನನ್ನು ಸಂಪೂರ್ಣವಾಗಿ ನಾಶಮಾಡುವೆನು. ಇಸ್ರೇಲಿಗೆ ಕೆಟ್ಟ ವಿಷಯಗಳು ಸಂಭವಿಸುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದಕಾರಣ ನಾನು ಪವಿತ್ರಾಲಯದ ಪ್ರಧಾನರನ್ನು ಹೊಲಸಿಗೆ ತಂದು ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗೂ ಒಪ್ಪಿಸಿಬಿಟ್ಟಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಎಂದೇ ಗುರಿಮಾಡಿದೆ ಯಕೋಬನ್ನು ಶಾಪಕ್ಕೆ ಈಡುಪಡಿಸಿದೆ ಇಸ್ರಯೇಲನ್ನು ನಿಂದೆದೂಷಣೆಗೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆದಕಾರಣ ನಾನು ಪವಿತ್ರಾಲಯದ ಅಧಿಪತಿಗಳನ್ನು ಹೊಲಸಿಗೆ ತಂದು ಯಾಕೋಬನ್ನು ಶಾಪಕ್ಕೂ ಇಸ್ರಾಯೇಲನ್ನು ದೂಷಣೆಗೂ ಗುರಿಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದಕಾರಣ ಪವಿತ್ರಾಲಯದ ಪ್ರಧಾನರನ್ನು ನಾಚಿಕೆಪಡಿಸಿ, ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:28
26 ತಿಳಿವುಗಳ ಹೋಲಿಕೆ  

ನಾನು ಆ ಜನರನ್ನು ದಂಡಿಸುವೆನು. ಆ ಶಿಕ್ಷೆಯು ಭೂಲೋಕದ ಎಲ್ಲಾ ಜನರಲ್ಲಿ ಭೀತಿಯನ್ನು ಉಂಟು ಮಾಡುವುದು. ಜನರು ಯೆಹೂದದ ಜನರನ್ನು ಗೇಲಿಮಾಡುವರು. ನಾನು ಅವರನ್ನು ತಳ್ಳಿದ ಎಲ್ಲಾ ದೇಶಗಳಲ್ಲಿ ಜನರು ಅವರ ಬಗ್ಗೆ ಪರಿಹಾಸ್ಯದ ಮಾತುಗಳನ್ನು ಆಡುವರು; ಅವರನ್ನು ಶಪಿಸುವರು.


ಜನರು ಇಸ್ರೇಲ್ ಮತ್ತು ಯೆಹೂದದ ಹೆಸರುಗಳನ್ನು ಶಾಪ ಇಡುವದಕ್ಕಾಗಿ ಉಪಯೋಗಿಸುವರು. ಆದರೆ ನಾನು ಇಸ್ರೇಲ್ ಮತ್ತು ಯೆಹೂದವನ್ನು ಸಂರಕ್ಷಿಸುವೆನು. ಆ ಹೆಸರುಗಳು ಆಶೀರ್ವದಿಸುವದಕ್ಕಾಗಿ ಉಪಯೋಗಿಸಲ್ಪಡುವದು. ಆದ್ದರಿಂದ ಭಯಪಡಬೇಡಿ, ಬಲಶಾಲಿಗಳಾಗಿರಿ.”


ನಿಮ್ಮ ಹೆಸರುಗಳು ನನ್ನ ಸೇವಕರಿಗೆ ಶಾಪವಾಗಿ ಉಪಯೋಗಿಸಲ್ಪಡುತ್ತವೆ.” ನನ್ನ ಒಡೆಯನಾದ ಯೆಹೋವನು ನಿಮ್ಮನ್ನು ಸಾಯಿಸುವನು. ಆತನು ತನ್ನ ಸೇವಕರನ್ನು ಹೊಸ ಹೆಸರಿನಿಂದ ಕರೆಯುವನು.


ಹೌದು, ಯೆಹೂದ್ಯರಲ್ಲದವರಿಗೆ ರಕ್ಷಣೆ ನೀಡುವ ಸುವಾರ್ತೆಯನ್ನು ನಾವು ಉಪದೇಶಿಸದಂತೆ ನಮ್ಮನ್ನು ತಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಹೀಗೆ ಅವರು ತಮ್ಮ ಪಾಪಗಳಿಗೆ ಮತ್ತಷ್ಟು ಪಾಪಗಳನ್ನು ಕೂಡಿಸುತ್ತಿದ್ದಾರೆ. ಕೊನೆಗೆ, ದೇವರ ಕೋಪವು ಅವರ ಮೇಲೆ ಬರುತ್ತದೆ.


ಯೆಹೋವನು ಯಾಕೋಬನ ಮನೆಗಳನ್ನು ನಾಶಪಡಿಸಿದನು. ಆತನು ಕನಿಕರವಿಲ್ಲದೆ ಅವುಗಳನ್ನು ನುಂಗಿಬಿಟ್ಟನು. ತನ್ನ ಕೋಪದಲ್ಲಿ ಆತನು ಯೆಹೂದದ ಮಗಳ ಕೋಟೆಗಳನ್ನು ನಾಶಪಡಿಸಿದನು. ಯೆಹೋವನು ಯೆಹೂದ ರಾಜ್ಯವನ್ನೂ ಮತ್ತು ಅದರ ಅಧಿಪತಿಗಳನ್ನೂ ನೆಲಕ್ಕೆ ಅಪ್ಪಳಿಸಿದನು. ಆತನು ಯೆಹೂದ ರಾಜ್ಯಕ್ಕೆ ಅವಮಾನ ಮಾಡಿದ್ದಾನೆ.


“ನನ್ನ ಜನರ ಮೇಲೆ ನಾನು ಸಿಟ್ಟಿಗೆದ್ದಿದ್ದೆನು. ಅವರು ನನಗೆ ಸೇರಿದವರಾಗಿದ್ದಾರೆ. ಆದರೆ ನಾನು ಅವರ ಮೇಲೆ ಸಿಟ್ಟಾದೆನು. ಆದ್ದರಿಂದ ನಾನು ಅವರನ್ನು ತಳ್ಳಿಬಿಟ್ಟೆನು. ಅವರನ್ನು ನಿನಗೆ ಕೊಟ್ಟೆನು; ನೀನು ಅವರನ್ನು ಶಿಕ್ಷಿಸಿದೆ. ಅವರ ಮೇಲೆ ಕರುಣೆ ತೋರಿಸಲಿಲ್ಲ. ವೃದ್ಧರೂ ಕಷ್ಟದ ಕೆಲಸ ಮಾಡುವಂತೆ ಮಾಡಿದೆ.


ನಮ್ಮ ನೆರೆಹೊರೆಯ ದೇಶಗಳವರು ನಮಗೆ ಅವಮಾನ ಮಾಡಿದರು. ನಮ್ಮ ಸುತ್ತಮುತ್ತಲಿನ ಜನರೆಲ್ಲರೂ ನಮ್ಮನ್ನು ನೋಡಿ ನಗುತ್ತಾ ಗೇಲಿ ಮಾಡಿದರು.


ಯೆಹೋವನಾದ ನೀನು ನಮಗೆ ಆಪತ್ತುಗಳನ್ನು ಸಿದ್ಧಪಡಿಸಿಟ್ಟಿದ್ದೆ. ಆ ಆಪತ್ತುಗಳು ನಮ್ಮ ಮೇಲೆ ಬರುವಂತೆ ನೀನು ಮಾಡಿದೆ. ಯೆಹೋವನಾದ ನೀನು ಎಲ್ಲವನ್ನು ನಿಷ್ಪಕ್ಷಪಾತವಾಗಿ ಮಾಡುವೆ. ಆದ್ದರಿಂದಲೇ ಇದೆಲ್ಲವನ್ನು ಮಾಡಿದೆ. ಆದರೆ ಇಂದಿಗೂ ನಾವು ನಿನ್ನ ಉಪದೇಶಕ್ಕೆ ಕಿವಿಗೊಟ್ಟಿಲ್ಲ.


ನಿನ್ನ ಸುತ್ತಲೂ ಇರುವ ಜನಾಂಗಗಳು ನಿನಗೆ ಅವಮಾನ ಮಾಡಿ ಗೇಲಿ ಮಾಡುತ್ತವೆ. ನೀನು ಅವರಿಗೆ ಎಚ್ಚರಿಕೆಯಾಗಿಯೂ ಭಯೋತ್ಪಾದಕಕಾರಿಯಾಗಿಯೂ ಇರುವಿ. ನಾನು ನನ್ನ ಮಹಾಕೋಪದಿಂದ ನಿನ್ನನ್ನು ದಂಡಿಸಿದಾಗ ಇದು ಸಂಭವಿಸುವುದು. ಯೆಹೋವನಾದ ನಾನೇ ಇದನ್ನು ಹೇಳಿದ್ದೇನೆ.


ನಮಗೆ ರಾಜನು ಬಹಳ ಮುಖ್ಯವಾಗಿದ್ದನು. ಅವನು ನಮಗೆ ಉಸಿರಿನಷ್ಟೇ ಅಮೂಲ್ಯವಾಗಿದ್ದನು. ಆದರೆ ಅವರು ರಾಜನನ್ನೇ ಸೆರೆಹಿಡಿದರು. ಯೆಹೋವನೇ, ಆ ರಾಜನನ್ನು ಆರಿಸಿಕೊಂಡಿದ್ದನು. “ನಾವು ಅವನ ನೆರಳಿನಲ್ಲಿ ಬದುಕುತ್ತೇವೆ. ಅವನು ನಮ್ಮನ್ನು ಜನಾಂಗಗಳವರಿಂದ ಸಂರಕ್ಷಿಸುವನು” ಎಂದು ನಾವು ರಾಜನ ಬಗ್ಗೆ ಹೇಳಿಕೊಂಡಿದ್ದೆವು.


ನೀನು ನಿನ್ನ ಒಡಂಬಡಿಕೆಯನ್ನು ತಿರಸ್ಕರಿಸಿ ಅವನ ಕಿರೀಟವನ್ನು ನೆಲದ ಮೇಲೆ ಎಸೆದುಬಿಟ್ಟೆ.


“ಗಿಲ್ಬೋವದ ಪರ್ವತಗಳಲ್ಲಿ ಮಂಜೂ ಮಳೆಯೂ ಸುರಿಯದಿರಲಿ. ಆ ಹೊಲಗಳಿಂದ ಕಾಣಿಕೆಯ ವಸ್ತುಗಳೂ ಬಾರದಿರಲಿ. ಅಲ್ಲಿನ ಶಕ್ತಿಸಂಪನ್ನರ ಗುರಾಣಿಗಳೆಲ್ಲ ತುಕ್ಕುಹಿಡಿದಿವೆ. ಸೌಲನ ಗುರಾಣಿಯು ಎಣ್ಣೆಯಿಲ್ಲದೆ ಬಿದ್ದಿದೆ.


ಆ ದೇಶದಲ್ಲಿ ವಾಸಿಸುವ ಜನರು ದೇವರಿಗೆ ವಿರುದ್ಧವಾಗಿ ನಡೆದರು. ಆದ್ದರಿಂದ ದೇವರು ಈ ದೇಶವನ್ನು ನಾಶಮಾಡಲು ತೀರ್ಮಾನಿಸಿದನು. ಜನರು ಶಿಕ್ಷಿಸಲ್ಪಡುವರು. ಕೆಲವೇ ಮಂದಿ ಮಾತ್ರ ಉಳಿಯುವರು.


“ಆಕಾಶದಲ್ಲಿರುವ ನನ್ನ ಖಡ್ಗವು ರಕ್ತದಲ್ಲಿ ಮುಳುಗಿದಾಗ ಇವೆಲ್ಲಾ ಸಂಭವಿಸುವದು” ಎಂದು ಯೆಹೋವನು ಅನ್ನುತ್ತಾನೆ. ಯೆಹೋವನ ಖಡ್ಗವು ಎದೋಮನ್ನು ತುಂಡರಿಸುವುದು. ಆತನು ಆ ಜನರನ್ನು ದೋಷಿಗಳೆಂದು ನ್ಯಾಯತೀರಿಸಿದ್ದಾನೆ. ಆದ್ದರಿಂದ ಅವರು ಸಾಯಬೇಕು.


ಇಸ್ರೇಲಿನ ಜನರಲ್ಲಿ ಒಬ್ಬರೂ ಸಹ ನಿನ್ನ ಉಪದೇಶವನ್ನು ಪಾಲಿಸಲಿಲ್ಲ. ಅವರೆಲ್ಲರೂ ಅದರಿಂದ ದೂರಾದರು. ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಶಾಪಗಳ ಮತ್ತು ವಾಗ್ದಾನಗಳ ಬಗ್ಗೆ ಹೇಳಲಾಗಿದೆ. (ಮೋಶೆಯು ದೇವರ ಸೇವಕನಾಗಿದ್ದನು) ಆ ಶಾಪಗಳು ಧರ್ಮಶಾಸ್ತ್ರವನ್ನು ಪಾಲಿಸದಿದ್ದವರಿಗೆ ಆಗುವ ಶಿಕ್ಷೆಯಾಗಿದೆ. ಆ ಎಲ್ಲಾ ಶಿಕ್ಷೆಗಳು ನಮಗೆ ಆಗಿವೆ. ನಾವು ಯೆಹೋವನಾದ ನಿನ್ನ ವಿರುದ್ಧ ಪಾಪ ಮಾಡಿದ್ದರಿಂದ ನಮಗೆ ಹೀಗಾಯಿತು.


ಆಗ ದೇವದೂತನು ನನಗೆ ಹೇಳಿದ್ದೇನೆಂದರೆ, “ಈ ಸುರುಳಿಯಲ್ಲಿ ಶಾಪವು ಬರೆಯಲ್ಪಟ್ಟಿದೆ. ಸುರುಳಿಯ ಒಂದು ಬದಿಯಲ್ಲಿ ಕದಿಯುವ ಜನರಿಗೆ ಶಾಪ ಬರೆಯಲ್ಪಟ್ಟಿದೆ. ಅದರ ಇನ್ನೊಂದು ಬದಿಯಲ್ಲಿ ವಾಗ್ದಾನ ಮಾಡಿಯೂ ಅದನ್ನು ಪಾಲಿಸದೆ ಸುಳ್ಳಾಡುವವರಿಗೆ ಶಾಪ ಬರೆಯಲ್ಪಟ್ಟಿದೆ.


ಪ್ರತಿಯೊಂದು ಕುಲದಿಂದ ಚೀಟುಹಾಕುವುದರ ಮೂಲಕ ಜನರನ್ನು ಆರಿಸಿಕೊಳ್ಳಲಾಯಿತು. ಕೆಲವರನ್ನು ಪವಿತ್ರ ಸ್ಥಳದ ಸೇವೆಗಾಗಿ ಆರಿಸಿಕೊಳ್ಳಲಾಯಿತು; ಇನ್ನು ಕೆಲವರನ್ನು ಯಾಜಕರಾಗಿ ಸೇವೆಮಾಡಲು ಆರಿಸಿಕೊಳ್ಳಲಾಯಿತು; ಇವರೆಲ್ಲರೂ ಎಲ್ಲಾಜಾರ್ ಮತ್ತು ಈತಾಮಾರನ ಕುಲದವರಾಗಿದ್ದರು.


ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.


“ನಮಗೂ ನಮ್ಮ ನಾಯಕರುಗಳಿಗೂ ನೀನು ಹೇಳಿದಂತೆಯೇ ಮಾಡಿರುವೆ. ನೀನು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿರುವೆ. ಜೆರುಸಲೇಮ್ ನಗರಕ್ಕೆ ಉಂಟಾದಷ್ಟು ಕೇಡು ಭೂಮಂಡಲದಲ್ಲಿ ಯಾವ ನಗರಕ್ಕೂ ಆಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು