Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:12 - ಪರಿಶುದ್ದ ಬೈಬಲ್‌

12 ಒಬ್ಬನು ಕುಲಿಮೆಯ ಬೆಂಕಿಯ ಮೇಲೆ ಕಬ್ಬಿಣವನ್ನು ಕಾಯಿಸುತ್ತಾನೆ. ಅವನು ತನ್ನ ಸುತ್ತಿಗೆಯಿಂದ ಆ ಲೋಹವನ್ನು ವಿಗ್ರಹವನ್ನಾಗಿ ಮಾಡುತ್ತಾನೆ. ಅವನು ಅದನ್ನು ತನ್ನ ತೋಳ್ಬಲದಿಂದ ಮಾಡುತ್ತಾನೆ. ಆದರೆ ಅವನು ಹಸಿದಾಗ ಅವನ ಶಕ್ತಿಯು ಕಡಿಮೆಯಾಗುತ್ತದೆ. ಆ ಮನುಷ್ಯನು ನೀರನ್ನು ಕುಡಿಯದಿದ್ದರೆ ಅವನು ಬಲಹೀನನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕಮ್ಮಾರನು ತನ್ನ ಸಲಕರಣೆಗಳನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ, ಚಮಟಿಕೆಗಳಿಂದ ಬಡಿದು ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುವನು. ಅವನು ಹಸಿದು ಬಳಲುವನು, ನೀರಿಲ್ಲದೆ ದಣಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕಮ್ಮಾರನು ಮುಟ್ಟನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸ ಮಾಡುತ್ತಾನೆ; ಬಲವಾದ ತೋಳಿನಿಂದ ಚಮಟಿಕೆ ಹಿಡಿದು ಬಡಿದು ವಿಗ್ರಹವನ್ನು ರೂಪಿಸುತ್ತಾನೆ; ಹಸಿದು ಬಳಲುತ್ತಾನೆ, ಬಾಯಾರಿ ಸೊರಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕಮ್ಮಾರನು ಮುಟ್ಟನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ ಚಮಟಿಕೆಗಳಿಂದ ಬಡಿದು ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುವನು; ಅವನೂ ಹಸಿದು ಬಳಲುವನು, ನೀರಿಲ್ಲದೆ ಕಂಗೆಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕಮ್ಮಾರನು ಸಲಕರಣೆಯನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸ ಮಾಡುತ್ತಾನೆ; ಅವನು ಸುತ್ತಿಗೆ ಹಿಡಿದು ತನ್ನ ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುತ್ತಾನೆ; ಅವನು ಹಸಿದು ಬಲಹೀನನಾಗಿದ್ದರೂ, ನೀರು ಕುಡಿಯದೇ ದಣಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:12
11 ತಿಳಿವುಗಳ ಹೋಲಿಕೆ  

ಇಲ್ಲ, ಆದರೆ ಕೆಲವರು ವಿಗ್ರಹಗಳನ್ನು ಕಲ್ಲಿನಿಂದ ಅಥವಾ ಮರದಿಂದ ತಯಾರಿಸುತ್ತಾರೆ. ಅವುಗಳನ್ನು ಅವರು ದೇವರು ಎಂದು ಕರೆಯುತ್ತಾರೆ. ಒಬ್ಬನು ಒಂದು ವಿಗ್ರಹವನ್ನು ಮಾಡುತ್ತಾನೆ. ಇನ್ನೊಬ್ಬನು ಅದಕ್ಕೆ ಬಂಗಾರದ ತಗಡನ್ನು ಹೊದಿಸುತ್ತಾನೆ ಮತ್ತು ಬೆಳ್ಳಿಹಾರವನ್ನು ಮಾಡಿಹಾಕುತ್ತಾನೆ.


ಆ ಜನರು ಕಟ್ಟುವ ಪ್ರತಿಯೊಂದನ್ನೂ ಸರ್ವಶಕ್ತನಾದ ಯೆಹೋವನು ಬೆಂಕಿಯಿಂದ ನಾಶಮಾಡುವ ತೀರ್ಮಾನವನ್ನು ಮಾಡಿರುತ್ತಾನೆ. ಅವರು ಮಾಡಿದ ಕೆಲಸವೆಲ್ಲವೂ ವ್ಯರ್ಥವಾಗುವದು.


ನಾನು ಅವರಿಗೆ ಆಜ್ಞಾಪಿಸಿದವುಗಳಿಗೆ ಬಹುಬೇಗನೆ ಅವಿಧೇಯರಾಗಿದ್ದಾರೆ. ಚಿನ್ನವನ್ನು ಕರಗಿಸಿ ಅದರಿಂದ ಬಸವನನ್ನು ಮಾಡಿಕೊಂಡು ಅದನ್ನು ಪೂಜಿಸುತ್ತಾ ಅದಕ್ಕೆ ಯಜ್ಞಗಳನ್ನು ಸಮರ್ಪಿಸುತ್ತಿದ್ದಾರೆ. ‘ಇಸ್ರೇಲರೇ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳು’ ಎಂದು ಜನರು ಹೇಳುತ್ತಿದ್ದಾರೆ” ಎಂದನು.


ಆರೋನನು ಬಸವನ ಮೂರ್ತಿಯನ್ನು ಚಿನ್ನದಿಂದ ಎರಕಹೊಯ್ಯಿಸಿದನು. ಬಳಿಕ ಅವರು, “ಇಸ್ರೇಲರೇ, ನಿಮ್ಮ ದೇವರುಗಳು ಇಲ್ಲಿವೆ! ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳೇ” ಎಂದು ಹೇಳಿದರು.


ಅಲ್ಲಿ, ಮನುಷ್ಯರು ಕೈಯಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಅವು ಮರಕಲ್ಲುಗಳಿಂದ ರೂಪಿಸಲ್ಪಟ್ಟಿವೆ. ಅವು ನೋಡಲಾರವು, ಕೇಳಲಾರವು, ತಿನ್ನಲಾರವು ಮತ್ತು ಮೂಸಿನೋಡಲಾರವು!


ಅದರ ಪೀಠಕ್ಕಾಗಿ ವಿಶೇಷ ಜಾತಿಯ ಮರವನ್ನು ಆರಿಸುವನು. ಈ ಬಗೆಯ ಮರವು ಕೊಳೆತುಹೋಗುವದಿಲ್ಲ. ಆ ಬಳಿಕ ಅವನು ಒಳ್ಳೆಯ ಬಡಗಿಯನ್ನು ನೇಮಿಸುವನು. ಆ ಬಡಗಿಯು ವಿಗ್ರಹ ನಿಲ್ಲಿಸಿದಾಗ ಅದು ಪಕ್ಕಕ್ಕೆ ವಾಲಿ ಬೀಳದಂತೆ ಮಾಡುವನು.


ಆ ಮನುಷ್ಯನ ಸುಳ್ಳು ದೇವರು ಅವನಿಗೆ ಸಹಾಯ ಮಾಡಲಾರದು. ಯಾಕೆಂದರೆ ಅದು ಒಬ್ಬನು ಲೋಹದಿಂದ ಮಾಡಿದ ಕೇವಲ ವಿಗ್ರಹವಷ್ಟೆ. ಅದು ಕೇವಲ ಜಡಮೂರ್ತಿ. ಅದನ್ನು ಮಾಡಿದವನು, ಅದು ಅವನಿಗೆ ಸಹಾಯ ಮಾಡುವದೆಂದು ಯೋಚಿಸುವದು ಶುದ್ಧ ಮೂರ್ಖತನ. ಆ ಮೂರ್ತಿಯು ಮಾತಾಡುವೂದೂ ಇಲ್ಲ.


ಯೆಹೋವನು ನನಗೆ ನಾಲ್ಕು ಮಂದಿ ಕೆಲಸಗಾರರನ್ನು ತೋರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು