Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:21 - ಪರಿಶುದ್ದ ಬೈಬಲ್‌

21 “ಯಾಕೋಬೇ, ಈ ವಿಷಯಗಳನ್ನು ನೆನಪಿನಲ್ಲಿಟ್ಟುಕೊ! ಇಸ್ರೇಲೇ, ನೀನು ನನ್ನ ಸೇವಕನೆಂಬುದನ್ನು ನೆನಪಿನಲ್ಲಿಟ್ಟುಕೊ! ನಾನೇ ನಿನ್ನನ್ನು ನಿರ್ಮಿಸಿದೆನು; ನೀನೇ ನನ್ನ ಸೇವಕನು. ಆದ್ದರಿಂದ ಇಸ್ರೇಲೇ, ನನ್ನನ್ನು ಮರೆತುಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯಾಕೋಬೇ, ಇಸ್ರಾಯೇಲೇ, ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನನ್ನ ಸೇವಕನಾಗಿದ್ದೀಯಲ್ಲವೇ. ಇಸ್ರಾಯೇಲೇ, ನಾನು ನಿನ್ನನ್ನು ನಿರ್ಮಿಸಿದೆನು, ನೀನು ನನ್ನ ಸೇವಕನು, ನಿನ್ನನ್ನು ಮರೆತುಬಿಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಯಕೋಬೇ, ಇಸ್ರಯೇಲೇ, ನೆನಪಿನಲ್ಲಿಡು ಇದನ್ನು : ನೀನೆನ್ನ ದಾಸನು, ಇಸ್ರಯೇಲ್, ನಿನ್ನ ನಿರ್ಮಿಸಿದವನು ನಾನು; ನೀನೆನ್ನ ದಾಸನು, ನಿನ್ನನ್ನು ನಾನು ಮರೆತುಬಿಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯಾಕೋಬೇ, ಇಸ್ರಾಯೇಲೇ, ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನನ್ನ ಸೇವಕನಾಗಿದ್ದೀಯಲ್ಲವೇ; ಇಸ್ರಾಯೇಲೇ, ನಾನು ನಿನ್ನನ್ನು ನಿರ್ಮಿಸಿದೆನು, ನೀನು ನನ್ನ ಸೇವಕನು, ನಿನ್ನನ್ನು ಮರೆತುಬಿಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಯಾಕೋಬೇ, ಇಸ್ರಾಯೇಲೇ! ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನೀನು ನನ್ನ ಸೇವಕನಾಗಿದ್ದೀ. ನಾನು ನಿನ್ನನ್ನು ನಿರ್ಮಿಸಿದೆನು. ನೀನು ನನ್ನ ಸೇವಕನು. ಇಸ್ರಾಯೇಲೇ, ನಾನು ನಿನ್ನನ್ನು ಮರೆತುಬಿಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:21
16 ತಿಳಿವುಗಳ ಹೋಲಿಕೆ  

ಹೌದು, ನಾನು ನನ್ನ ಜನರನ್ನು ಎಲ್ಲಾ ರಾಜ್ಯಗಳಿಗೆ ಚದರಿಸಿಬಿಟ್ಟಿರುತ್ತೇನೆ. ಆದರೆ ಆ ಬಹುದೂರದ ರಾಜ್ಯಗಳಲ್ಲಿ ಅವರು ನನ್ನನ್ನು ನೆನಪು ಮಾಡುವರು. ಅವರೂ ಅವರ ಮಕ್ಕಳೂ ಉಳಿಯುವರು ಮತ್ತು ಅವರು ಹಿಂತಿರುಗಿ ಬರುವರು.


ನಾನೇ ನಿಮ್ಮ ಪರಿಶುದ್ಧನಾದ ಯೆಹೋವನು. ನಾನು ಇಸ್ರೇಲನ್ನು ಸೃಷ್ಟಿಸಿದೆನು; ನಾನೇ ನಿಮ್ಮ ಅರಸನು.”


ಯಾಕೋಬೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಇಸ್ರೇಲೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಈಗ ಆತನು ಹೇಳುವುದೇನೆಂದರೆ: “ಭಯಪಡಬೇಡ. ನಾನೇ ನಿನ್ನನ್ನು ರಕ್ಷಿಸಿದ್ದೇನೆ. ನಾನು ನಿನಗೆ ಹೆಸರಿಟ್ಟೆನು. ನೀನು ನನ್ನವನೇ.


ನನ್ನ ಹೆಸರನ್ನು ಹೊಂದಿರುವ ನನ್ನ ಜನರನ್ನೆಲ್ಲಾ ನನ್ನ ಬಳಿಗೆ ಕರೆದುಕೊಂಡು ಬಾ. ನನಗಾಗಿಯೇ ನಿರ್ಮಿಸಿದ ನನ್ನ ಜನರನ್ನು ನನ್ನ ಬಳಿಗೆ ಕರೆದುಕೊಂಡು ಬಾ. ಅವರನ್ನು ನಿರ್ಮಿಸಿದಾತನು ನಾನೇ, ಅವರು ನನ್ನವರೇ!


ನನ್ನ ಜನರಲ್ಲಿ ಯಾರಾದರೂ ದೇವರ ಮಾತನ್ನು ಕೇಳಿದ್ದಾರೋ? ಇಲ್ಲ! ಆದರೆ ನೀವು ಆತನ ಮಾತುಗಳಿಗೆ ಲಕ್ಷ್ಯಗೊಟ್ಟು ಕೇಳಿ ಸಂಭವಿಸಿರುವದನ್ನು ಗಮನಿಸಬೇಕು.


ನೀವು ನಿಮ್ಮನ್ನು ನಿರ್ಮಿಸಿದ ಬಂಡೆಯಂತಿರುವ ದೇವರನ್ನು ತೊರೆದುಬಿಟ್ಟಿರಿ; ನಿಮಗೆ ಪ್ರಾಣವನ್ನು ಕೊಟ್ಟ ದೇವರನ್ನು ನೀವು ಮರೆತುಬಿಟ್ಟಿರಿ.


ನೀವು ಆ ದೇಶದಲ್ಲಿ ವಾಸಿಸುವಾಗ ನಿಮ್ಮ ದೇವರಾದ ಯೆಹೋವನೊಡನೆ ನೀವು ಮಾಡಿರುವ ಒಡಂಬಡಿಕೆಯನ್ನು ಮರೆಯಬೇಡಿರಿ. ನೀವು ಆತನ ಕಟ್ಟಳೆಗಳಿಗೆ ವಿಧೇಯರಾಗಿರಿ. ಯಾವ ವಿಗ್ರಹಗಳನ್ನಾಗಲಿ ಮಾಡಿಕೊಳ್ಳಬೇಡಿರಿ.


ಆದರೆ ನೀವು ನೋಡಿದ್ದನ್ನು ನಿಮ್ಮ ಜೀವಮಾನವೆಲ್ಲಾ ಜಾಗ್ರತೆಯುಳ್ಳವರಾಗಿದ್ದು ಮರೆಯದೆ ಅದನ್ನು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸಬೇಕು.


ದ್ರಾಕ್ಷಿಬಳ್ಳಿ ಒಣಗಿಹೋಗುವದು. ಅದರ ಕೊಂಬೆಗಳು ಮುರಿದುಬೀಳುವವು. ಹೆಂಗಸರು ಆ ಕೊಂಬೆಗಳನ್ನು ಸೌದೆಯಾಗಿ ಉಪಯೋಗಿಸುವರು. ಜನರು ತಿಳಿದುಕೊಳ್ಳುವದಕ್ಕೆ ಮನಸ್ಸು ಕೊಡುವದಿಲ್ಲ. ಆದ್ದರಿಂದ ಅವರ ನಿರ್ಮಾಣಿಕನಾದ ದೇವರು ಅವರನ್ನು ಸಂತೈಸುವದಿಲ್ಲ. ಅವರ ನಿರ್ಮಾಣಿಕನು ಅವರಿಗೆ ದಯೆ ತೋರುವದಿಲ್ಲ.


ಯಾಕೋಬೇ, ಇದು ಸತ್ಯ! ಇಸ್ರೇಲೇ, ನೀನದನ್ನು ನಂಬಬೇಕು. ಹೀಗಿರಲು ನೀನು, “ಯೆಹೋವನು ನನ್ನ ನಡತೆಯನ್ನು ಗಮನಿಸುವದಿಲ್ಲ. ನನ್ನನ್ನು ಕಂಡುಹಿಡಿದು ಶಿಕ್ಷಿಸುವದಿಲ್ಲ” ಎಂದು ಹೇಳುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು