Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:23 - ಪರಿಶುದ್ದ ಬೈಬಲ್‌

23 ಯೆಹೋವನು ಮಹಾ ಕಾರ್ಯಗಳನ್ನು ಮಾಡಿದ್ದರಿಂದ ಆಕಾಶವು ಹರ್ಷಿಸುತ್ತದೆ. ಭೂಮಿಯೂ ಭೂಮಿಯ ಅಧೋಭಾಗವೂ ಸಂತೋಷಿಸುತ್ತದೆ. ಪರ್ವತಗಳು ಕೃತಜ್ಞತಾಸ್ತುತಿಗಳನ್ನು ಮಾಡುತ್ತವೆ. ಅರಣ್ಯದಲ್ಲಿರುವ ಎಲ್ಲಾ ಮರಗಳು ಹರ್ಷಿಸುತ್ತವೆ. ಯಾಕೆಂದರೆ ಯೆಹೋವನು ಯಾಕೋಬನನ್ನು ರಕ್ಷಿಸಿದನು, ಇಸ್ರೇಲಿಗೆ ಆತನು ಅದ್ಭುತಕಾರ್ಯವನ್ನು ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಜಯ ಜಯಕಾರ ಮಾಡು ಓ ಆಕಾಶವೇ, ಜಯಘೋಷ ಮಾಡು ಭೂ ತಳವೇ, ಹರ್ಷಧ್ವನಿಗೈಯಿರಿ ಬೆಟ್ಟಗುಡ್ಡಗಳೇ ವನವೃಕ್ಷಗಳೇ. ವಿಮೋಚಿಸಿದನು ಸರ್ವೇಶ್ವರ ಯಕೋಬನನು, ಇಸ್ರಯೇಲನ್ನು ರಕ್ಷಿಸಿ ಪ್ರಚಾರಗೊಳಿಸಿದನು ತನ್ನ ಮಹಿಮೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ; ಭೂವಿುಯ ಅಧೋಭಾಗವೇ, ಆರ್ಭಟಿಸು; ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಕೋಲಾಹಲಮಾಡಿರಿ; ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಕಾಶಗಳೇ, ಹರ್ಷಧ್ವನಿಗೈಯಿರಿ. ಏಕೆಂದರೆ ಯೆಹೋವ ದೇವರು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಕೆಳಭಾಗವೇ ಆರ್ಭಟಿಸು. ಪರ್ವತಗಳೇ, ವನವೇ, ಅದರಲ್ಲಿರುವ ಎಲ್ಲಾ ಮರಗಳೇ ಉತ್ಸಾಹಧ್ವನಿ ಮಾಡಿರಿ. ಏಕೆಂದರೆ ಯೆಹೋವ ದೇವರು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:23
40 ತಿಳಿವುಗಳ ಹೋಲಿಕೆ  

ಭೂಮ್ಯಾಕಾಶಗಳೇ, ಸಮುದ್ರವೇ, ಸಮುದ್ರದಲ್ಲಿರುವ ಸಮಸ್ತವೇ, ಯೆಹೋವನನ್ನು ಸ್ತುತಿಸಿರಿ!


ಆಗ ಭೂಮ್ಯಾಕಾಶಗಳು ಮತ್ತು ಅವುಗಳಲ್ಲಿರುವ ಸಮಸ್ತ ವಸ್ತುಗಳು ಬಾಬಿಲೋನಿನ ಬಗ್ಗೆ ಹರ್ಷಧ್ವನಿ ಮಾಡುವವು. ಏಕೆಂದರೆ ಸೈನ್ಯವು ಉತ್ತರದಿಂದ ಬಂದಿತು, ಬಾಬಿಲೋನಿನ ವಿರುದ್ಧ ಯುದ್ಧಮಾಡಿತು” ಇದು ಯೆಹೋವನ ನುಡಿ.


ಯೆಹೋವನು ಹೀಗೆಂದನು: “ಇಸ್ರೇಲೇ, ನೀನೇ ನನ್ನ ಸೇವಕನು. ನಾನು ನಿನಗೆ ಆಶ್ಚರ್ಯವಾದ ಕಾರ್ಯಗಳನ್ನು ಮಾಡುವೆನು.”


ಭೂಮ್ಯಾಕಾಶಗಳೇ, ಸಂತೋಷಪಡಿರಿ! ಪರ್ವತಗಳೇ, ಹರ್ಷಧ್ವನಿ ಮಾಡಿರಿ! ಯಾಕೆಂದರೆ ಯೆಹೋವನು ತನ್ನ ಜನರನ್ನು ಸಂತೈಸುತ್ತಾನೆ. ಆತನು ಬಡವರಿಗೆ ಕರುಣೆ ತೋರಿಸುತ್ತಾನೆ.


ಪರಲೋಕವೇ, ಇದರಿಂದ ನೀನೂ ಸಂತೋಷಪಡು! ದೇವರ ಪರಿಶುದ್ಧ ಜನರೇ, ಅಪೊಸ್ತಲರೇ, ಪ್ರವಾದಿಗಳೇ, ನೀವೂ ಸಂತೋಷಪಡಿರಿ! ಅವಳು ನಿಮಗೆ ಮಾಡಿದ ಕೇಡುಗಳಿಗಾಗಿ ದೇವರು ಅವಳನ್ನು ದಂಡಿಸಿದನು.’”


ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೆಲ್ಲರೇ, ಹರ್ಷಗೊಳ್ಳಿರಿ! ಆದರೆ ಭೂಮಿಯೇ, ಸಮುದ್ರವೇ, ಸೈತಾನನು ನಿಮ್ಮ ಬಳಿಗೆ ಬಂದಿರುವುದರಿಂದ ನಿಮಗೆ ದುರ್ಗತಿಯುಂಟಾಗುವುದು! ಸೈತಾನನು ಕೋಪದಿಂದ ತುಂಬಿಕೊಂಡಿದ್ದಾನೆ. ತನಗಿರುವುದು ಸ್ವಲ್ಪಕಾಲವೆಂಬುದು ಅವನಿಗೆ ತಿಳಿದಿದೆ.”


ಬೋಧಿಸುವವನು ದೇವರ ನುಡಿಗಳನ್ನೇ ಬೋಧಿಸಲಿ. ಸೇವೆ ಮಾಡುವವನು ದೇವರೇ ದಯಪಾಲಿಸಿದ ಶಕ್ತಿಯಿಂದ ಸೇವೆ ಮಾಡಲಿ. ನೀವು ಹೀಗೆ ಮಾಡಿದರೆ, ನೀವು ಮಾಡುವ ಪ್ರತಿಯೊಂದರಲ್ಲೂ ಯೇಸು ಕ್ರಿಸ್ತನ ಮೂಲಕ ದೇವರು ಸ್ತುತಿಸಲ್ಪಡುವನು. ಅಧಿಕಾರವೂ ಮಹಿಮೆಯೂ ಯುಗಯುಗಾಂತರಗಳಲ್ಲಿ ಆತನಿಗೆ ಸೇರಿದವುಗಳಾಗಿವೆ. ಆಮೆನ್.


ಆತನಿಗೆ ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಸ್ತೋತ್ರವಾಗಲಿ. ಆಮೆನ್.


“ಆದರೆ ಇಸ್ರೇಲಿನ ಪರ್ವತಗಳೇ, ನೀವು ಹೊಸ ಮರಗಳನ್ನು ಬೆಳೆಯಿಸಿ ನನ್ನ ಜನರಾದ ಇಸ್ರೇಲರಿಗೆ ಹಣ್ಣುಗಳನ್ನು ಒದಗಿಸುತ್ತೀರಿ.


“ನರಪುತ್ರನೇ, ನನ್ನ ಪರವಾಗಿ ಇಸ್ರೇಲಿನ ಪರ್ವತದೊಂದಿಗೆ ಮಾತನಾಡು. ಅವುಗಳಿಗೆ ಯೆಹೋವನ ಮಾತುಗಳನ್ನು ಕೇಳಲು ಹೇಳು.


ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”


“ನಿನ್ನ ಜನರೆಲ್ಲಾ ನೀತಿಯಲ್ಲಿ ಜೀವಿಸುವರು. ಅವರು ಭೂಮಿಗೆ ಶಾಶ್ವತವಾದ ಬಾಧ್ಯಸ್ತರಾಗುವರು. ಆ ಜನರನ್ನು ನಾನೇ ನಿರ್ಮಿಸಿದೆನು. ನಾನು ನನ್ನ ಸ್ವಂತ ಕೈಗಳಿಂದ ನಿರ್ಮಿಸಿದ ಆಶ್ಚರ್ಯಕರವಾದ ಸಸಿಗಳಂತೆ ಅವರಿರುವರು.


ನೀನು ಪ್ರೀತಿಸುವ ಜನಾಂಗಕ್ಕೆ ನೀನು ಸಹಾಯ ಮಾಡಿದೆ. ಬೇರೆ ಜನಾಂಗದವರು ಅವರನ್ನು ಸೋಲಿಸದಂತೆ ಮಾಡಿದೆ.


ಭೂಮಿಯ ಮೇಲಿರುವ ಸಮಸ್ತವೇ, ಯೆಹೋವನಿಗೆ ಸ್ತೋತ್ರಮಾಡಿರಿ! ಮಹಾಸಮುದ್ರ ಪ್ರಾಣಿಗಳೇ, ಆತನನ್ನು ಸ್ತುತಿಸಿರಿ!


ಸಾಮಾನ್ಯ ಜನರು ಶತ್ರು ಸೈನಿಕರನ್ನು ಹೂಣಿಡುವರು. ನಾನು ನನ್ನ ಹೆಸರನ್ನು ಪ್ರಸಿದ್ಧಿಗೆ ತರುವ ದಿವಸ ಆ ಜನರು ಪ್ರಸಿದ್ಧರಾಗುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


“ಆತನು ಉನ್ನತಸ್ಥಾನಕ್ಕೆ ಏರಿಹೋದನು” ಎಂದರೆ ಆತನು ಭೂಲೋಕಕ್ಕೆ ಇಳಿದುಬಂದು,


ಭೂಮ್ಯಾಕಾಶಗಳು ಹರ್ಷಿಸಲಿ! “ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ” ಎಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.


ಹುಲ್ಲುಗಾವಲುಗಳು ಕುರಿಗಳಿಂದ ತುಂಬಿಹೋಗಿವೆ. ಕಣಿವೆಗಳು ಧಾನ್ಯದಿಂದ ತುಂಬಿತುಳುಕುತ್ತಿವೆ. ಎಲ್ಲರೂ ಹಾಡುತ್ತಾ ಆನಂದಘೋಷ ಮಾಡುತ್ತಿದ್ದಾರೆ.


ಆತನು ಬೆಟ್ಟಗಳನ್ನೂ ಗುಡ್ಡಗಳನ್ನೂ ಹಣ್ಣಿನ ಮರಗಳನ್ನೂ ದೇವದಾರು ಮರಗಳನ್ನೂ ಸೃಷ್ಟಿಮಾಡಿದನು.


ಯೆಹೋವನಿಗೆ ಸ್ತೋತ್ರಗಾನ ಹಾಡಿರಿ. ಯಾಕೆಂದರೆ ಆತನು ಮಹಾಕಾರ್ಯಗಳನ್ನು ನಡೆಸಿದ್ದಾನೆ. ದೇವರ ಬಗ್ಗೆ ಎಲ್ಲರಿಗೂ ಪ್ರಕಟಿಸಿರಿ. ಇಡೀ ಲೋಕಕ್ಕೆ ಸಾರಿರಿ. ಎಲ್ಲಾ ಜನರು ಇದನ್ನು ತಿಳಿಯಲಿ.


ಯಾಕೋಬೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಇಸ್ರೇಲೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಈಗ ಆತನು ಹೇಳುವುದೇನೆಂದರೆ: “ಭಯಪಡಬೇಡ. ನಾನೇ ನಿನ್ನನ್ನು ರಕ್ಷಿಸಿದ್ದೇನೆ. ನಾನು ನಿನಗೆ ಹೆಸರಿಟ್ಟೆನು. ನೀನು ನನ್ನವನೇ.


ನನ್ನ ಹೆಸರನ್ನು ಹೊಂದಿರುವ ನನ್ನ ಜನರನ್ನೆಲ್ಲಾ ನನ್ನ ಬಳಿಗೆ ಕರೆದುಕೊಂಡು ಬಾ. ನನಗಾಗಿಯೇ ನಿರ್ಮಿಸಿದ ನನ್ನ ಜನರನ್ನು ನನ್ನ ಬಳಿಗೆ ಕರೆದುಕೊಂಡು ಬಾ. ಅವರನ್ನು ನಿರ್ಮಿಸಿದಾತನು ನಾನೇ, ಅವರು ನನ್ನವರೇ!


ನಾನು ಒಳ್ಳೆಯ ಕಾರ್ಯಗಳನ್ನು ಮಾಡುವೆನು. ನನ್ನ ಜನರನ್ನು ಬೇಗನೆ ರಕ್ಷಿಸುವೆನು. ಚೀಯೋನಿಗೆ, ಅಂದರೆ ನನ್ನ ಅದ್ಭುತವಾದ ಇಸ್ರೇಲಿಗೆ ರಕ್ಷಣೆಯನ್ನು ತರುವೆನು.”


ಜೆರುಸಲೇಮೇ, ನಿನ್ನ ಕೆಡವಲ್ಪಟ್ಟ ಕಟ್ಟಡಗಳು ಮತ್ತೆ ಸಂತೋಷಿಸುವವು. ನೀವೆಲ್ಲರೂ ಒಟ್ಟಾಗಿ ಹರ್ಷಿಸುವಿರಿ. ಯಾಕೆಂದರೆ ಯೆಹೋವನು ಜೆರುಸಲೇಮನ್ನು ಬಿಡಿಸಿ ತನ್ನ ಜನರನ್ನು ಸಂತೈಸುವನು.


ಯೆಹೋವನು ಯಾಕೋಬ್ಯರನ್ನು ಹಿಂದಕ್ಕೆ ಕರೆದುಕೊಂಡು ಬರುವನು. ಯೆಹೋವನು ತನ್ನ ಜನರನ್ನು ಅವರಿಗಿಂತಲೂ ಬಲಿಷ್ಠರಾದ ಜನರಿಂದ ರಕ್ಷಿಸುವನು.


ನನ್ನ ಒಡೆಯನಾದ ಯೆಹೋವನ ನುಡಿ ಇದು: “ಪ್ರಪಂಚದ ಎಲ್ಲಾ ದೇಶಗಳು ನಾನು ನಿನ್ನನ್ನು ನಾಶಮಾಡುವಾಗ ಸಂತೋಷಿಸುವವು.


ಯೆಹೋವನು ಇಸ್ರೇಲರಿಗೆ ಮಾಡಿದ ಒಳ್ಳೆಯ ಸಂಗತಿಗಳಿಗಾಗಿಯೂ ಈಜಿಪ್ಟಿನವರಿಂದ ಇಸ್ರೇಲರನ್ನು ಯೆಹೋವನು ಬಿಡುಗಡೆಗೊಳಿಸಿದ್ದಕ್ಕಾಗಿಯೂ ಇತ್ರೋನನು ಬಹಳ ಸಂತೋಷಪಟ್ಟನು.


ಸಮುದ್ರವೂ ಅದರೊಳಗಿರುವದೆಲ್ಲವೂ ಆರ್ಭಟಿಸಲಿ, ಹೊಲಗದ್ದೆಗಳು ತಮ್ಮ ಹರ್ಷವನ್ನು ವ್ಯಕ್ತಪಡಿಸಲಿ.


ಯೆಹೋವನ ಸನ್ನಿಧಿಯಲ್ಲಿ ಅಡವಿಯ ಮರಗಳು ಸಂತೋಷದಿಂದ ಗಾನಮಾಡಲಿ. ಯಾಕೆಂದರೆ ಆತನು ಬರುತ್ತಿದ್ದಾನೆ. ಲೋಕಕ್ಕೆ ನ್ಯಾಯತೀರಿಸಲು ಬರುತ್ತಿದ್ದಾನೆ.


ಯೆಹೋವನು ಚೀಯೋನನ್ನು ರಕ್ಷಿಸುವನು! ಆತನು ಯೆಹೂದದ ಪಟ್ಟಣಗಳನ್ನು ಮತ್ತೆ ಕಟ್ಟುವನು. ಆತನ ಜನರು ಅಲ್ಲಿ ವಾಸವಾಗಿದ್ದು ಸ್ವದೇಶವಾಗಿ ಮಾಡಿಕೊಳ್ಳುವರು!


ದೇವರೇ, ಬಲವು ನಿನ್ನಲ್ಲೇ ಇದೆ. ನಿನ್ನ ಬಲವು ಮಹಾ ಬಲವೇ ಸರಿ! ಜಯವಂತೂ ನಿನ್ನದೇ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು