Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:26 - ಪರಿಶುದ್ದ ಬೈಬಲ್‌

26 ಯೆಹೋವನು ತನ್ನ ಸೇವಕರನ್ನು ಜನರಿಗೆ ಸಂದೇಶ ತಿಳಿಸುವದಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾನೆ. ಆತನ ಸಂದೇಶಗಳು ಸತ್ಯವಾದವುಗಳಾಗಿವೆ. ಜನರು ಮಾಡಬೇಕಾದ ಕಾರ್ಯಗಳ ಬಗ್ಗೆ ಯೆಹೋವನು ಸಂದೇಶಕರನ್ನು ಕಳುಹಿಸುತ್ತಾನೆ. ಅವರ ಸಲಹೆಯು ಒಳ್ಳೆಯದೆಂದು ಯೆಹೋವನು ತೋರಿಸಿಕೊಡುತ್ತಾನೆ. ಯೆಹೋವನು ಜೆರುಸಲೇಮಿಗೆ, “ಜನರು ನಿನ್ನಲ್ಲಿ ಮತ್ತೆ ವಾಸಮಾಡುವರು” ಎಂತಲೂ ಯೆಹೂದದ ನಗರಗಳಿಗೆ, “ನೀವು ತಿರುಗಿ ಕಟ್ಟಲ್ಪಡುವಿರಿ” ಎಂತಲೂ ಕೆಡವಲ್ಪಟ್ಟ ನಗರಗಳಿಗೆ, “ನಾನು ತಿರುಗಿ ನಿಮ್ಮನ್ನು ನಗರಗಳನ್ನಾಗಿ ಮಾಡುತ್ತೇನೆ” ಎಂತಲೂ ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ. ಯೆರೂಸಲೇಮಿಗೆ, ‘ನೀನು ಜನ ನಿವಾಸವಾಗುವಿ’ ಎಂದು ಯೆಹೂದದ ಪಟ್ಟಣಗಳಿಗೆ, ‘ಅವು ತಿರುಗಿ ಕಟ್ಟಲ್ಪಡುವವು, ಅಲ್ಲಿನ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು’ ಎಂದು ಮುಂತಿಳಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನನ್ನ ದಾಸನ ಮಾತನ್ನಾದರೋ ದೃಢೀಕರಿಸುವವನು ನಾನೆ ನನ್ನ ದೂತರ ಯೋಜನೆಯನ್ನು ಸಫಲಗೊಳಿಸುವವನು ನಾನೆ ಜನನಿವಾಸವಾಗುವುದು ಜೆರುಸಲೇಮ್ ನಗರವು ಪುನಃ ಕಟ್ಟಲ್ಪಡುವುವು ಜುದೇಯ ಪಟ್ಟಣಗಳು. ಅಲ್ಲಿ ಹಾಳುಬಿದ್ದವುಗಳು ಮರಳಿ ಎದ್ದು ನಿಲ್ಲುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ; ಯೆರೂಸಲೇಮು ಜನನಿವಾಸವಾಗುವದು, ಯೆಹೂದದ ಪಟ್ಟಣಗಳು ತಿರಿಗಿ ಕಟ್ಟಲ್ಪಡುವವು, ಅಲ್ಲಿನ ಹಾಳನ್ನು ಹಸನುಮಾಡುವೆನು ಎಂದು ನಾನು ಮುಂತಿಳಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ತನ್ನ ಸೇವಕನ ಮಾತುಗಳನ್ನು ಸ್ಥಾಪಿಸುವವನು, ಮತ್ತು ತನ್ನ ದೂತರ ಆಲೋಚನೆಯನ್ನು ಪೂರೈಸುವವನು. “ಯೆರೂಸಲೇಮಿಗೆ, ‘ನೀನು ನಿವಾಸವಾಗುವೆ,’ ಯೆಹೂದ ಪಟ್ಟಣಗಳಿಗೆ, ‘ಅವು ಪುನಃ ಕಟ್ಟಲಾಗುವುದು,’ ಮತ್ತು ಅದರ ಹಾಳು ಸ್ಥಳಗಳಿಗೆ, ‘ನಾನು ಪುನಃಸ್ಥಾಪಿಸುವೆನು,’ ಎಂದು ಹೇಳುವವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:26
53 ತಿಳಿವುಗಳ ಹೋಲಿಕೆ  

ಪ್ರವಾದಿಗಳು ನನ್ನ ಸೇವಕರು. ನಿಮ್ಮ ಪೂರ್ವಿಕರಿಗೆ ನ್ಯಾಯಪ್ರಮಾಣಗಳನ್ನು ಬೋಧಿಸಲು ನಾನು ಅವರನ್ನು ಉಪಯೋಗಿಸಿದೆನು. ನಿಮ್ಮ ಪೂರ್ವಿಕರು ಕಟ್ಟಕಡೆಗೆ ಪಾಠವನ್ನು ಕಲಿತರು. ಅವರು, ‘ಸರ್ವಶಕ್ತನಾದ ಯೆಹೋವನು ತಾನು ಹೇಳಿದ್ದನ್ನು ನೆರವೇರಿಸಿದನು. ನಮ್ಮ ದುಷ್ಕೃತ್ಯಗಳಿಗಾಗಿ ನಮ್ಮನ್ನು ಶಿಕ್ಷಿಸಿದನು’ ಎಂದು ಹೇಳಿದರು ಮತ್ತು ದೇವರ ಕಡೆಗೆ ತಿರುಗಿದರು.”


ಬೇರೆ ದೇಶದ ಮಕ್ಕಳು ನಿನ್ನ ಗೋಡೆಗಳನ್ನು ಮತ್ತೆ ಕಟ್ಟುವರು. ಅವರ ಅರಸರುಗಳು ನಿನ್ನ ಸೇವೆ ಮಾಡುವರು. “ನಾನು ಕೋಪಗೊಂಡಾಗ ನಿನ್ನನ್ನು ಬಾಧಿಸಿದೆನು. ಆದರೆ ಈಗ ನಿನಗೆ ಕರುಣೆ ತೋರುವೆನು. ನಿನ್ನನ್ನು ಆದರಿಸುವೆನು.


ಯೆಹೂದ ಮತ್ತು ಇಸ್ರೇಲುಗಳಿಗೆ ಮತ್ತೊಮ್ಮೆ ಒಳ್ಳೆಯದಾಗುವಂತೆ ಮಾಡುವೆನು. ಅವರನ್ನು ನಾನು ಮೊದಲಿನಂತೆ ಶಕ್ತಿಶಾಲಿಗಳನ್ನಾಗಿ ಮಾಡುವೆನು.


ಯೆಹೋವನು ಹೀಗೆನ್ನುತ್ತಾನೆ, “ಯಾಕೋಬಿನ ಜನರು ಈಗ ಬಂಧಿಗಳಾಗಿದ್ದಾರೆ. ಆದರೆ ಅವರು ಹಿಂತಿರುಗಿ ಬರುವರು. ಯಾಕೋಬಿನ ಮನೆಗಳ ಮೇಲೆ ನಾನು ಕನಿಕರ ತೋರುವೆನು. ನಗರವು ಈಗ ಕೇವಲ ಹಾಳುಬಿದ್ದ ಮನೆಗಳಿಂದ ಕೂಡಿದ ಒಂದು ದಿಬ್ಬವಾಗಿದೆ. ಆದರೆ ಆ ನಗರವು ಮತ್ತೆ ನಿರ್ಮಿಸಲ್ಪಡುವುದು. ಮುಂಚೆ ಇದ್ದ ಸ್ಥಳದಲ್ಲಿ ಅರಮನೆಯನ್ನು ಕಟ್ಟಲಾಗುವುದು.


ಇಗೋ, ಆದಿಯಲ್ಲಿಯೇ ಮುಂದಿನ ಸಂಗತಿಗಳನ್ನು ತಿಳಿಸಿದೆನು. ಅವೆಲ್ಲವೂ ಸಂಭವಿಸಿದವು. ಈಗ ಕೆಲವು ವಿಷಯಗಳು ನಿನಗೆ ಪ್ರಕಟಿಸುತ್ತೇನೆ; ಸಂಭವಿಸುವ ಮೊದಲೇ ಅವುಗಳನ್ನು ನಿನಗೆ ತಿಳಿಸುವೆನು.”


ಆಗ ಹನಾನೀ ಮತ್ತು ಅವನ ಜೊತೆಗಾರರು, “ನೆಹೆಮೀಯನೇ, ಸೆರೆಯಿಂದ ತಪ್ಪಿಸಿಕೊಂಡು ಯೆಹೂದ ಪ್ರಾಂತ್ಯಕ್ಕೆ ಹೋಗಿರುವವರು ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಅವರು ಅನೇಕ ಸಮಸ್ಯೆಗಳಲ್ಲಿ ಸಿಕ್ಕಿಕೊಂಡು ಅವಮಾನಕ್ಕೀಡಾಗಿದ್ದಾರೆ. ಯಾಕೆಂದರೆ ಜೆರುಸಲೇಮಿನ ಪೌಳಿಗೋಡೆಗಳು ಕೆಡವಲ್ಪಟ್ಟಿವೆ; ಅದರ ಬಾಗಿಲುಗಳೆಲ್ಲಾ ಸುಟ್ಟುಹೋಗಿವೆ” ಎಂದು ಹೇಳಿದರು.


ಅವರಲ್ಲಿದ್ದ ಯಾಜಕರು, ಲೇವಿಯರು ಮತ್ತು ಇನ್ನಿತರರು ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೆಲೆಸಿದರು. ಇವರೊಳಗೆ ಗಾಯಕರೂ ದ್ವಾರಪಾಲಕರೂ ದೇವಾಲಯದ ಸೇವಕರೂ ಇದ್ದರು. ಉಳಿದ ಇಸ್ರೇಲ್ ಜನರು ತಮ್ಮತಮ್ಮ ಊರುಗಳಲ್ಲಿ ವಾಸಿಸಿದರು.


ಆದರೆ ಪ್ರವಾದಿಗಳು ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಆಕಾಶ ಮತ್ತು ಭೂಮಿ ಅಳಿದುಹೋಗುವವರೆಗೂ ಧರ್ಮಶಾಸ್ತ್ರದಿಂದ ಏನೂ ಅಳಿದುಹೋಗುವುದಿಲ್ಲ. ಎಲ್ಲಾ ನೆರವೇರುವ ತನಕ ಧರ್ಮಶಾಸ್ತ್ರದ ಒಂದು ಅಕ್ಷರವಾಗಲಿ ಅಥವಾ ಅದರ ಒಂದು ಚುಕ್ಕೆಯಾಗಲಿ ಅಳಿದುಹೋಗುವುದಿಲ್ಲ.


ಆ ಸಮಯದಲ್ಲಿ ಯೆಹೂದದ ಕುಲ ಪ್ರಧಾನರನ್ನು ನಾನು ಕಾಡಿನಲ್ಲಿ ಉರಿಯುವ ಬೆಂಕಿಯಂತೆ ಮಾಡುವೆನು. ಅವರು ಹುಲ್ಲು ಸುಡುವ ಬೆಂಕಿಯೋಪಾದಿಯಲ್ಲಿ ತಮ್ಮ ವೈರಿಗಳನ್ನು ನಾಶಮಾಡುವರು. ತಮ್ಮ ಸುತ್ತಮುತ್ತಲಿರುವ ವೈರಿಗಳನ್ನು ನಾಶಮಾಡುವರು. ಜೆರುಸಲೇಮಿನ ಜನರು ಮತ್ತೆ ನೆಮ್ಮದಿಯಿಂದ ವಾಸಿಸುವರು.”


ಅವನು, “ಓಡಿಹೋಗಿ ಆ ಯೌವನಸ್ಥನಿಗೆ ಜೆರುಸಲೇಮು ಅಳತೆ ಮಾಡಲು ಸಾಧ್ಯವಾಗದಷ್ಟು ದೊಡ್ಡದಾಗಿದೆ ಎಂದು ಹೇಳು. ಅಲ್ಲದೆ ಅವನಿಗೆ ಈ ವಿಷಯವನ್ನೂ ತಿಳಿಸು: ‘ಜೆರುಸಲೇಮ್ ಗೋಡೆಗಳಿಲ್ಲದ ಪಟ್ಟಣವಾಗುವದು. ಯಾಕೆಂದರೆ ಅಷ್ಟೊಂದು ಜನರೂ ಪಶುಗಳೂ ಅಲ್ಲಿ ವಾಸಿಸುವವು.’


ಸೆರೆಯಿಂದ ಬಿಡಿಸಿ ನನ್ನ ಜನರಾದ ಇಸ್ರೇಲನ್ನು ಹಿಂದಕ್ಕೆ ಕರೆತರುವೆನು. ಪಾಳುಬಿದ್ದ ಪಟ್ಟಣಗಳನ್ನು ತಿರುಗಿ ಕಟ್ಟಿ ಅದರಲ್ಲಿ ವಾಸಿಸುವರು. ದ್ರಾಕ್ಷಿತೋಟವನ್ನು ಮಾಡಿ ಅದರಿಂದ ಸಿಗುವ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅದರ ಫಲಗಳನ್ನು ಭೋಗಿಸುವರು.


“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.


ಇದು ನನ್ನ ಒಡೆಯನಾದ ಯೆಹೋವನ ನುಡಿ: “ಆಗ ನಾನು ನಿನ್ನ ವಿಷಯದಲ್ಲಿ ಹೇಳಿದ್ದು ಜನರು ಜ್ಞಾಪಕಕ್ಕೆ ಬರುವದು. ನಾನು ಇದನ್ನು ನನ್ನ ಸೇವಕರಾದ ಪ್ರವಾದಿಗಳಿಗೆ ತಿಳಿಸಿರುತ್ತೇನೆ ಎಂದು ಅರಿಯುವರು. ಹಿಂದಿನ ಕಾಲದಲ್ಲಿ ಇಸ್ರೇಲ್ ಪ್ರವಾದಿಗಳು ನನ್ನ ಪರವಾಗಿ ಮಾತನಾಡಿ ನೀವು ಅವರ ವಿರುದ್ಧವಾಗಿ ಯುದ್ಧಕ್ಕೆ ಬರುವಿರೆಂದು ಹೇಳಿರುತ್ತೇನೆ ಎಂಬುದನ್ನು ತಮ್ಮ ಜ್ಞಾಪಕಕ್ಕೆ ತರುವರು.”


ನಿನ್ನಲ್ಲಿ ಅನೇಕಾನೇಕ ಮಂದಿ ವಾಸಿಸುವರು. ಇಡೀ ಇಸ್ರೇಲ್ ಜನಾಂಗದವರು ಅಲ್ಲಿ ವಾಸಮಾಡುವರು. ಪಟ್ಟಣಗಳು ಜನಭರಿತವಾಗುವವು. ಹಾಳಾದ ಸ್ಥಳಗಳೆಲ್ಲಾ ತಿರುಗಿ ಕಟ್ಟಲ್ಪಡುವವು.


ನಾನು ಭಯದಿಂದಲೇ, “ಅರಸನೇ ಚಿರಂಜೀವಿಯಾಗಿರು. ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳುದಿಬ್ಬವಾಗಿರುವುದರಿಂದ ನಾನು ದುಃಖಿತನಾಗಿದ್ದೇನೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ” ಅಂದೆನು.


ಯೇಸು ಅವರಿಗೆ, “ನಾನು ಮೊದಲು ನಿಮ್ಮ ಸಂಗಡ ಇದ್ದುದನ್ನು ಜ್ಞಾಪಕಮಾಡಿಕೊಳ್ಳಿರಿ. ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವಾದಿಗಳ ಗ್ರಂಥಗಳಲ್ಲಿ, ಕೀರ್ತನೆಗಳಲ್ಲಿ ಬರೆದಿರುವ ಪ್ರತಿಯೊಂದು ಸಂಗತಿಯೂ ನೆರವೇರಬೇಕಾಗಿದೆ ಎಂದು ನಾನು ಹೇಳಿದೆನು” ಅಂದನು.


ಜನರು ಹಣ ಕೊಟ್ಟು ಭೂಮಿಯನ್ನು ಕೊಂಡುಕೊಳ್ಳುವರು. ಅವರು ಕರಾರುಪತ್ರಗಳಿಗೆ ಸಹಿಹಾಕುವರು. ಜನರು ಕ್ರಯಪತ್ರಗಳಿಗೆ ಸಹಿ ಹಾಕುವದನ್ನು ಬೇರೆಯವರು ನೋಡುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಲ್ಲಿ ಜನರು ಪುನಃ ಹೊಲಗಳನ್ನು ಕೊಂಡುಕೊಳ್ಳುವರು. ಜೆರುಸಲೇಮಿನ ಸುತ್ತಲಿನ ಪ್ರದೇಶದಲ್ಲಿ ಅವರು ಹೊಲಗಳನ್ನು ಕೊಂಡುಕೊಳ್ಳುವರು. ಅವರು ಯೆಹೂದ ಪ್ರದೇಶದ ಊರುಗಳಲ್ಲಿಯೂ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶದಲ್ಲಿಯೂ ದಕ್ಷಿಣದ ಮರಳುಗಾಡಿನಲ್ಲಿಯೂ ಹೊಲಗಳನ್ನು ಕೊಂಡುಕೊಳ್ಳುವರು. ನಾನು ನಿಮ್ಮ ಜನರನ್ನು ನಿಮ್ಮ ಪ್ರದೇಶಕ್ಕೆ ಪುನಃ ಕರೆದುಕೊಂಡು ಬರುವದರಿಂದ ಹೀಗಾಗುವುದು.” ಇದು ಯೆಹೋವನ ನುಡಿ.


ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು, ‘ಮುಂದಿನಕಾಲದಲ್ಲಿ ಇಸ್ರೇಲ್ ದೇಶದಲ್ಲಿ ನನ್ನ ಜನರು ಪುನಃ ಮನೆಗಳನ್ನು, ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಂಡುಕೊಳ್ಳುವರು’ ಎಂದು ಅನ್ನುತ್ತಾನೆ.”


ನನ್ನ ವಧುವಾದ ಇಸ್ರೇಲೇ, ನಾನು ನಿನ್ನನ್ನು ಮತ್ತೆ ನಿರ್ಮಿಸುವೆನು, ಆಗ ನೀನು ಮತ್ತೆ ಒಂದು ಜನಾಂಗವಾಗುವೆ. ನೀನು ಮೊದಲಿನಂತೆ ನಿನ್ನ ದಮ್ಮಡಿಯನ್ನು ತೆಗೆದುಕೊಂಡು ಸಂತೋಷದಿಂದ ನೃತ್ಯ ಮಾಡುವವರೊಡನೆ ನೃತ್ಯ ಮಾಡುವೆ.


ಬಹಳ ವರ್ಷಗಳಿಂದ ನಿಮ್ಮ ಪಟ್ಟಣಗಳು ಹಾಳಾಗಿ ಬಿದ್ದಿವೆ. ಆದರೆ ಹೊಸ ಪಟ್ಟಣಗಳು ಏಳುವವು. ಅವುಗಳ ಅಸ್ತಿವಾರಗಳು ಬಹಳ ವರ್ಷ ಬಾಳುವವು. ನೀವು “ಬೇಲಿ ಸರಿಮಾಡುವವರು” ಎಂದು ಕರೆಯಲ್ಪಡುವಿರಿ; “ಮನೆಗಳನ್ನು, ರಸ್ತೆಗಳನ್ನು ನಿರ್ಮಿಸುವವರು” ಎಂದು ನೀವು ಕರೆಯಲ್ಪಡುವಿರಿ.


ಯಾಕೆಂದರೆ ನೀನು ಅಧಿಕವಾಗಿ ಬೆಳೆಯುವಿ. ನಿನ್ನ ಮಕ್ಕಳು ಅನೇಕ ಜನಾಂಗಗಳನ್ನು ವಶಮಾಡಿಕೊಳ್ಳುವರು. ಕೆಡವಿಹಾಕಿದ ಪಟ್ಟಣಗಳಲ್ಲಿ ನಿನ್ನ ಮಕ್ಕಳು ತಿರಿಗಿ ವಾಸಿಸುವರು.


ಯೆಹೋವನು ಜೆರುಸಲೇಮನ್ನು ಕಟ್ಟಿದನು. ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದ್ದ ಇಸ್ರೇಲರನ್ನು ಆತನು ಹಿಂದಕ್ಕೆ ಕರೆತಂದನು.


ಆ ಸಮಯದಲ್ಲಿ ಹಾಳುಬಿದ್ದ ಹಳೇ ಪಟ್ಟಣಗಳು ಮತ್ತೆ ಕಟ್ಟಲ್ಪಡುವವು. ಅವುಗಳು ಮುಂಚೆ ಹೇಗಿದ್ದವೋ ಹಾಗೆಯೇ ಹೊಸದಾಗಿ ಕಾಣಿಸುವವು. ಹಲವು ವರ್ಷಗಳ ಕಾಲ ಕೆಡವಲ್ಪಟ್ಟು ಹಾಳುಬಿದ್ದ ಪಟ್ಟಣಗಳು ಹೊಸದಾಗಿ ಕಾಣಿಸುವವು.


ಯೆಹೋವನು ಚೀಯೋನನ್ನು ರಕ್ಷಿಸುವನು! ಆತನು ಯೆಹೂದದ ಪಟ್ಟಣಗಳನ್ನು ಮತ್ತೆ ಕಟ್ಟುವನು. ಆತನ ಜನರು ಅಲ್ಲಿ ವಾಸವಾಗಿದ್ದು ಸ್ವದೇಶವಾಗಿ ಮಾಡಿಕೊಳ್ಳುವರು!


ಚೀಯೋನೇ, ಸಾರಿ ತಿಳಿಸಲು ನಿನಗೆ ಒಂದು ಶುಭವಾರ್ತೆಯಿದೆ. ಉನ್ನತ ಪರ್ವತಕ್ಕೆ ಏರಿಹೋಗಿ ಶುಭವಾರ್ತೆಯನ್ನು ಗಟ್ಟಿಯಾಗಿ ಸಾರು! ಜೆರುಸಲೇಮೇ, ನಿನಗೆ ತಿಳಿಸಲು ಒಳ್ಳೆಯ ವಾರ್ತೆ ಇದೆ. ಹೆದರಬೇಡ, ಅದನ್ನು ಗಟ್ಟಿಯಾಗಿ ಸಾರು. ಯೆಹೂದದ ಎಲ್ಲಾ ನಗರಗಳಲ್ಲಿ ತಿಳಿಸು: “ಇಗೋ! ನಿನ್ನ ದೇವರು ಇಲ್ಲಿದ್ದಾನೆ.”


ಬೇರೆ ಎಲ್ಲರಿಗಿಂತ ನನ್ನ ಸೇವಕನು ಕುರುಡನಾಗಿದ್ದಾನೆ. ಬೇರೆ ಎಲ್ಲರಿಗಿಂತ ನನ್ನ ದೂತನು ಕಿವುಡನಾಗಿದ್ದಾನೆ. ನಾನು ಒಡಂಬಡಿಕೆ ಮಾಡಿಕೊಂಡ ನನ್ನ ಸೇವಕನು ಪೂರ್ಣ ಕುರುಡನಾಗಿದ್ದಾನೆ.


ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.


ಜೆರುಸಲೇಮೇ, ನಿನ್ನ ಕೆಡವಲ್ಪಟ್ಟ ಕಟ್ಟಡಗಳು ಮತ್ತೆ ಸಂತೋಷಿಸುವವು. ನೀವೆಲ್ಲರೂ ಒಟ್ಟಾಗಿ ಹರ್ಷಿಸುವಿರಿ. ಯಾಕೆಂದರೆ ಯೆಹೋವನು ಜೆರುಸಲೇಮನ್ನು ಬಿಡಿಸಿ ತನ್ನ ಜನರನ್ನು ಸಂತೈಸುವನು.


ಅದೇ ಪ್ರಕಾರ ನನ್ನ ಬಾಯಿಂದ ಹೊರಟ ಮಾತುಗಳು ಯೋಚಿಸಿದ ಕಾರ್ಯಗಳನ್ನು ಮಾಡದೆ ಹಿಂತಿರುಗುವುದಿಲ್ಲ. ನನ್ನ ಮಾತುಗಳು ನನ್ನ ಆಲೋಚನೆಗೆ ಸರಿಯಾಗಿ ಕಾರ್ಯ ಮಾಡುವವು. ನನ್ನ ಮಾತುಗಳು ತಮಗೆ ನೇಮಕವಾದ ಆ ಕಾರ್ಯಗಳನ್ನು ಮಾಡಿಮುಗಿಸುವವು.


ಕಿತ್ತುಹಾಕಲು, ಕೆಡವಲು, ನಾಶಪಡಿಸಲು, ಹಾಳುಮಾಡಲು, ಕಟ್ಟಲು, ನೆಡಲು, ಜನಾಂಗಗಳ ಮೇಲೂ ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ” ಅಂದನು.


“ನಮಗೂ ನಮ್ಮ ನಾಯಕರುಗಳಿಗೂ ನೀನು ಹೇಳಿದಂತೆಯೇ ಮಾಡಿರುವೆ. ನೀನು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿರುವೆ. ಜೆರುಸಲೇಮ್ ನಗರಕ್ಕೆ ಉಂಟಾದಷ್ಟು ಕೇಡು ಭೂಮಂಡಲದಲ್ಲಿ ಯಾವ ನಗರಕ್ಕೂ ಆಗಿಲ್ಲ.


ದೇವರು ತನ್ನ ಈ ಸಂದೇಶವನ್ನು ಜನರಿಗೆ ತಲುಪಿಸುವಂತೆ ಹಗ್ಗಾಯನನ್ನು ಉಪಯೋಗಿಸಿದನು. ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮೊಂದಿಗಿದ್ದೇನೆ.”


ಆಗ ದೂತನು: “ಈ ವಿಷಯವನ್ನು ಜನರಿಗೆ ತಿಳಿಸು, ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: ‘ನನ್ನ ಪಟ್ಟಣಗಳು ತಿರುಗಿ ಐಶ್ವರ್ಯದಿಂದ ತುಂಬುವವು. ಚೀಯೋನನ್ನು ನಾನು ಸಂತೈಸುವೆನು. ನಾನು ಜೆರುಸಲೇಮನ್ನು ನನ್ನ ವಿಶೇಷ ನಗರವನ್ನಾಗಿ ಆರಿಸಿಕೊಳ್ಳುವೆನು’” ಎಂದನು.


ಆಗ ಜನರು ಅರಾಮ್ಯರ ಪಾಳೆಯಕ್ಕೆ ಓಡುತ್ತಾ ಹೋಗಿ, ಅಲ್ಲಿನ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡರು. ಪ್ರತಿಯೊಬ್ಬರಿಗೂ ಹೇರಳವಾಗಿ ದೊರೆಯಿತು. ಯೆಹೋವನು ಹೇಳಿದಂತೆಯೇ ಇದಾಯಿತು. ಒಬ್ಬನು ಉತ್ತಮವಾದ ಒಂದು ಬುಟ್ಟಿ ಹಿಟ್ಟನ್ನು ಮತ್ತು ಎರಡು ಬುಟ್ಟಿ ಜವೆಗೋಧಿಯನ್ನು ಕೇವಲ ಒಂದು ರೂಪಾಯಿಗೆ ಕೊಳ್ಳಬಹುದಾಗಿತ್ತು!


ಎಲೀಷನು, “ಒಂದು ರೂಪಾಯಿಗೆ ಒಂದು ಬುಟ್ಟಿ ಹಿಟ್ಟನ್ನೂ ಎರಡು ಬುಟ್ಟಿ ಜವೆಗೋಧಿಯನ್ನೂ ಸಮಾರ್ಯನಗರದ ಊರು ಬಾಗಿಲಿನಲ್ಲಿರುವ ಮಾರುಕಟ್ಟೆಯ ಸ್ಥಳದಲ್ಲಿ ಮಾರಲ್ಪಡುವುದು” ಎಂದು ಮೊದಲೇ ಹೇಳಿದ್ದನು.


ಆ ಅಧಿಕಾರಿಗೆ ಅಂದು ಹೇಳಿದಂತೆಯೇ ಆಯಿತು. ಅವನು ಊರ ಬಾಗಿಲಿನಲ್ಲಿ ಜನರ ತುಳಿತಕ್ಕೆ ಸಿಕ್ಕಿಕೊಂಡು ಸತ್ತುಹೋದನು.


ಆತನ ಸೇವಕರ ಸಂತತಿಗಳವರು ಆ ದೇಶವನ್ನು ಪಡೆದುಕೊಳ್ಳುವರು. ಆತನ ಹೆಸರನ್ನು ಪ್ರೀತಿಸುವ ಜನರು ಅಲ್ಲಿ ವಾಸಿಸುವರು.


ಆತನು ನಿರ್ಗತಿಕರ ಪ್ರಾರ್ಥನೆಗಳಿಗೆ ಉತ್ತರ ಕೊಡುವನು. ಅವರ ಮೊರೆಗಳನ್ನು ಆತನು ತಿರಸ್ಕರಿಸುವುದಿಲ್ಲ.


ಕೊಲ್ಲುವ ಸಮಯ, ವಾಸಿಮಾಡುವ ಸಮಯ. ನಾಶಮಾಡುವ ಸಮಯ, ಕಟ್ಟುವ ಸಮಯ.


ಆದರೆ ನಾವು ನೆಮ್ಮದಿಯಿಂದ ಇರುವೆವು ಎಂದು ಪ್ರವಾದಿಸುವ ಪ್ರವಾದಿಯು ನಿಜವಾಗಿಯೂ ಯೆಹೋವನಿಂದ ಕಳುಹಿಸಲ್ಪಟ್ಟಿರುವನೇ ಎಂಬುದನ್ನು ನಾವು ಪರೀಕ್ಷಿಸಬೇಕು. ಆ ಪ್ರವಾದಿಯ ಸಂದೇಶವು ಸತ್ಯವಾಗಿ ಪರಿಣಮಿಸಿದರೆ ಅವನು ನಿಜವಾಗಿ ಯೆಹೋವನಿಂದ ಕಳುಹಿಸಲ್ಪಟ್ಟವನೆಂದು ಜನರು ತಿಳಿದುಕೊಳ್ಳಬಹುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು