Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:28 - ಪರಿಶುದ್ದ ಬೈಬಲ್‌

28 ಸೈರಸನಿಗೆ ಯೆಹೋವನು ಹೀಗೆನ್ನುತ್ತಾನೆ, “ನೀನೇ ನನ್ನ ಕುರುಬನು. ನಾನು ಬಯಸುವ ಕಾರ್ಯಗಳನ್ನು ನೀನು ಮಾಡುವೆ. ನೀನು ಜೆರುಸಲೇಮಿಗೆ, ‘ನೀನು ಕಟ್ಟಲ್ಪಡುವೆ’ ಎಂದೂ ದೇವಾಲಯಕ್ಕೆ ‘ನಿನ್ನ ಅಸ್ತಿವಾರವು ಮತ್ತೆ ಹಾಕಲ್ಪಡುವದು’ ಎಂದೂ ಹೇಳುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಕೋರೆಷನ ವಿಷಯವಾಗಿ, ‘ಅವನು ನನ್ನ ಮಂದೆಯನ್ನು ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ’ ಎಂದು ಹೇಳಿ, ‘ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು’” ಎಂಬುದಾಗಿ ಮಾತನಾಡುವವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಕೋರೆಷನಿಗೆ ಇಂತೆನ್ನುವೆನು ನಾನು : ನನ್ನ ಮಂದೆ ಕಾಯುವವನು ನೀನು ನನ್ನ ಇಷ್ಟಾರ್ಥವನು ನೆರವೇರಿಸುವವನು ನೀನು; 'ಪುನಃ ನಿರ್ಮಾಣವಾಗುವೆ' ಎನ್ನುವೆ ಜೆರುಸಲೇಮಿಗೆ, ನೀನು; ‘ಪುನಃ ನಿನಗೆ ಅಸ್ತಿವಾರ ಹಾಕಿಸುವೆ’ ಎನ್ನುವೆ ಆ ದೇವಾಲಯಕೆ ನೀನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಮತ್ತು ಕೋರೆಷನ ವಿಷಯವಾಗಿ - ಅವನು ನನ್ನ ಮಂದೆ ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ ಎಂದು ಹೇಳಿ ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು ಎಂಬದಾಗಿ ಮಾತಾಡುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಕೋರೆಷನ ವಿಷಯವಾಗಿ ಹೀಗೆ ಹೇಳುವೆನು, ‘ನನ್ನ ಕುರುಬನು, ನನ್ನ ಇಷ್ಟವನ್ನೆಲ್ಲಾ ಪೂರೈಸುವವನು, ಯೆರೂಸಲೇಮಿಗೆ, “ನೀನು ಪುನಃ ನಿರ್ಮಾಣವಾಗುವೆ,” ದೇವಾಲಯಕ್ಕೆ, “ನಿನಗೆ ಅಸ್ತಿವಾರವು ಹಾಕಲಾಗುವುದು,” ಎಂದು ಅನ್ನುವವನೂ ನಾನೇ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:28
23 ತಿಳಿವುಗಳ ಹೋಲಿಕೆ  

ಪಾರಸಿ ರಾಜನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಯೆಹೋವನು ಅವನಿಂದ ಒಂದು ವಿಶೇಷ ಪ್ರಕಟನೆಯನ್ನು ಹೊರಡಿಸಿದನು. ಯೆರೆಮೀಯನು ಹೇಳಿದ ಮಾತು ನೆರವೇರುವಂತೆ ಇದಾಯಿತು. ಕೊರೇಷನು ತನ್ನ ಸಾಮ್ರಾಜ್ಯದ ಮೂಲೆಮೂಲೆಗಳಿಗೆ ಜನರನ್ನು ಕಳುಹಿಸಿ ಈ ಸಂದೇಶವನ್ನು ಕೊಟ್ಟನು:


ತಾನು ಆರಿಸಿರುವ ಅರಸನಾದ ಸೈರಸನಿಗೆ ಯೆಹೋವನು ಹೇಳುವುದೇನೆಂದರೆ: “ನಾನು ಸೈರಸನ ಬಲಗೈಯನ್ನು ಹಿಡಿಯುವೆನು. ಅರಸರುಗಳಿಂದ ಅವರ ಅಧಿಕಾರವನ್ನು ತೆಗೆದುಬಿಡುವಂತೆ ಅವನಿಗೆ ಸಹಾಯ ಮಾಡುವೆನು. ನಗರದ್ವಾರಗಳು ಅವನ ಮುನ್ನುಗ್ಗುವಿಕೆಯನ್ನು ನಿಲ್ಲಿಸದು. ನಗರದ್ವಾರವನ್ನು ತೆರೆದು ಸೈರಸನು ಒಳಗೆ ಪ್ರವೇಶಿಸುವಂತೆ ಮಾಡುವೆನು.”


ಕೋರೆಷನು ಪಾರಸಿಯ ರಾಜನಾಗಿದ್ದನು. ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. (ದಾನಿಯೇಲನ ಇನ್ನೊಂದು ಹೆಸರು ಬೇಲ್ತೆಶಚ್ಚರ.) ಈ ಸಂಗತಿ ಸತ್ಯವಾದುದು; ಆದರೆ ತಿಳಿದುಕೊಳ್ಳಲು ಬಹಳ ಕಷ್ಟಕರವಾಗಿತ್ತು. ದಾನಿಯೇಲನು ಈ ಸಂಗತಿಯನ್ನು ತಿಳಿದುಕೊಂಡನು. ಒಂದು ದರ್ಶನದಲ್ಲಿ ಅದರ ಬಗ್ಗೆ ಅವನಿಗೆ ವಿವರಿಸಲಾಯಿತು.


ನಾನು ಸೈರಸನಿಗೆ ಸುಕಾರ್ಯಗಳನ್ನು ಮಾಡಲು ಶಕ್ತಿಯನ್ನು ಕೊಟ್ಟಿದ್ದೇನೆ. ಅವನ ಕೆಲಸಗಳನ್ನೆಲ್ಲಾ ಸುಲಭಗೊಳಿಸುತ್ತೇನೆ. ಸೈರಸನು ನನ್ನ ಪಟ್ಟಣವನ್ನು ಮತ್ತೆ ಕಟ್ಟುವನು; ನನ್ನ ಜನರಿಗೆ ಸ್ವಾತಂತ್ರ್ಯವನ್ನು ಕೊಡುವನು. ನನ್ನ ಜನರನ್ನು ಸೈರಸನು ನನಗೆ ಮಾರಿಬಿಡುವದಿಲ್ಲ. ಈ ಕಾರ್ಯಗಳನ್ನೆಲ್ಲ ಮಾಡುವದಕ್ಕೆ ನಾನು ಅವನಿಗೆ ಹಣ ಕೊಡುವ ಅವಶ್ಯವಿಲ್ಲ. ಜನರು ಸ್ವತಂತ್ರರಾಗುವರು. ಇದಕ್ಕಾಗಿ ನನಗೇನೂ ಖರ್ಚು ಇಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಆದರೆ ಯೆಹೋವನು ಬಹಳ ಕಾಲದ ಹಿಂದೆ ನಡೆದುದನ್ನು ಇನ್ನೂ ಜ್ಞಾಪಕದಲ್ಲಿಟ್ಟುಕೊಂಡಿದ್ದಾನೆ. ಆತನು ಮೋಶೆಯನ್ನೂ ಅವನ ಜನರನ್ನೂ ನೆನಪುಮಾಡಿಕೊಳ್ಳುತ್ತಾನೆ. ಆ ಜನರನ್ನು ಸಮುದ್ರದ ಮೂಲಕ ಬರಮಾಡಿದವನು ಯೆಹೋವನೇ. ಆತನು ತನ್ನ ಕುರಿಮಂದೆಯನ್ನು ನಡೆಸಲು ತನ್ನ ಕುರುಬರನ್ನು ಉಪಯೋಗಿಸಿದನು. ಆದರೆ ಈಗ ಯೆಹೋವನೆಲ್ಲಿ? ಮೋಶೆಯಲ್ಲಿ ತನ್ನ ಪವಿತ್ರಾತ್ಮನನ್ನು ಇಟ್ಟ ಯೆಹೋವನೆಲ್ಲಿ?


ಪೂರ್ವದಿಕ್ಕಿನಿಂದ ಒಬ್ಬನನ್ನು ಕರೆಯುತ್ತೇನೆ. ಅವನು ಗಿಡುಗನಂತಿರುವನು. ಅವನು ಬಹು ದೂರದೇಶದಿಂದ ಬಂದು ನನ್ನ ಬಯಕೆಯನ್ನು ಈಡೇರಿಸುವನು. ನಾನು ಹೇಳಿದ ಸಂಗತಿಗಳನ್ನು ಮಾಡಿಮುಗಿಸುವೆನು. ನಾನು ಅವನನ್ನು ಸೃಷ್ಟಿಸಿದೆನು. ನಾನೇ ಅವನನ್ನು ಕರೆದುಕೊಂಡು ಬರುವೆನು.


ಕತ್ತಲೆಯಲ್ಲಿ ಕೂಡಿಸಿಟ್ಟಿದ್ದ ಐಶ್ವರ್ಯವನ್ನೂ ಗುಪ್ತವಾಗಿಟ್ಟಿದ್ದ ನಿಕ್ಷೇಪವನ್ನೂ ನಾನು ನಿನಗೆ ಕೊಡುವೆನು. ನಾನೇ ಯೆಹೋವನೆಂದು ನೀನು ತಿಳಿಯುವಂತೆ ಇದನ್ನು ಮಾಡುವೆನು. ನಾನೇ ಇಸ್ರೇಲರ ದೇವರಾದ ಯೆಹೋವನು. ನಿನ್ನನ್ನು ಹೆಸರೆತ್ತಿ ಕರೆಯುತ್ತಿದ್ದೇನೆ.


ಬೆಟ್ಟಗಳನ್ನೂ ಪರ್ವತಗಳನ್ನೂ ನಾಶಪಡಿಸುವೆನು. ಅಲ್ಲಿ ಬೆಳೆಯುವ ಸಸ್ಯಗಳನ್ನೆಲ್ಲಾ ಒಣಗಿಸಿಬಿಡುವೆನು. ನದಿಗಳನ್ನು ಒಣ ನೆಲವನ್ನಾಗಿ ಮಾರ್ಪಡಿಸುವೆನು; ನೀರಿನ ಹಳ್ಳಗಳನ್ನು ಒಣಗಿಸಿಬಿಡುವೆನು.


ಆ ಸೈನ್ಯದವರು ತಮ್ಮ ದೇಶಕ್ಕೆ ಸಂದೇಶವಾಹಕರನ್ನು ಕಳುಹಿಸುತ್ತಾರೆ. ಆ ಸಂದೇಶವು ಏನಿರಬಹುದು? “ಫಿಲಿಷ್ಟಿಯರು ಸೋತುಹೋದರು. ಆದರೆ ಯೆಹೋವನು ಚೀಯೋನನ್ನು ಬಲಪಡಿಸಿದ್ದಾನೆ. ಆತನ ಬಡಜನರು ರಕ್ಷಣೆಗಾಗಿ ಅಲ್ಲಿಗೆ ಹೋಗಿದ್ದಾರೆ” ಎಂಬುದೇ ಆ ಸಂದೇಶ.


ಪಾರಸಿ ರಾಜನಾದ ಕೋರೆಷನು ತಿಳಿಸುವದೇನೆಂದರೆ: ಪರಲೋಕದಲ್ಲಿರುವ ದೇವರಾದ ಯೆಹೋವನು ನನ್ನನ್ನು ಇಡೀ ಭೂಮಿಗೆ ಅರಸನನ್ನಾಗಿ ಮಾಡಿದ್ದಾನೆ. ಆತನು ಜೆರುಸಲೇಮಿನಲ್ಲಿರುವ ತನ್ನ ಆಲಯವನ್ನು ತಿರುಗಿ ಕಟ್ಟುವ ಜವಾಬ್ದಾರಿಕೆಯನ್ನು ನನಗೆ ಕೊಟ್ಟಿರುತ್ತಾನೆ. ಆದ್ದರಿಂದ ದೇವರ ಜನರೆಲ್ಲಾ ಜೆರುಸಲೇಮಿಗೆ ಹಿಂತಿರುಗಿ ಹೋಗಬಹುದು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗೆ ಇರಲಿ.


ಪರ್ಶಿಯಾದ ರಾಜನಾದ ಸೈರಸನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಒಂದು ಪ್ರಕಟನೆಯನ್ನು ಹೊರಡಿಸಲು ಯೆಹೋವನು ಅವನನ್ನು ಪ್ರೇರೇಪಿಸಿದನು. ಆ ಪ್ರಕಟನೆಯನ್ನು ಬರೆಯಿಸಿ ತನ್ನ ಸಾಮ್ರಾಜ್ಯದ ಎಲ್ಲಾ ಕಡೆಗಳಲ್ಲಿ ಅವನು ಅದನ್ನು ಓದಿಸಿದನು. ಯೆರೆಮೀಯನ ಮೂಲಕ ಯೆಹೋವನು ಹೇಳಿದ ವಿಷಯಗಳು ನೆರವೇರುವಂತೆ ಇದಾಯಿತು. ಆ ಪ್ರಕಟನೆ ಇಂತಿದೆ:


“ಪರ್ಶಿಯಾದ ರಾಜನಾದ ಸೈರಸನ ಪ್ರಕಟನೆ: “ಪರಲೋಕದ ದೇವರಾದ ಯೆಹೋವನು ಭೂಲೋಕದಲ್ಲಿರುವ ಎಲ್ಲಾ ದೇಶಗಳನ್ನು ನನ್ನ ವಶಕ್ಕೆ ಕೊಟ್ಟಿದ್ದಾನೆ. ಯೆಹೂದ ದೇಶದ ಜೆರುಸಲೇಮ್‌ನಲ್ಲಿ ತನಗೊಂದು ಆಲಯವನ್ನು ಕಟ್ಟಲು ಆತನು ನನ್ನನ್ನು ಆರಿಸಿಕೊಂಡಿದ್ದಾನೆ.


ಈ ವಿಷಯಗಳ ಬಗ್ಗೆ ತಿಳಿಸಿದವರಲ್ಲಿ ಯೆಹೋವನೆಂಬ ನಾನೇ ಮೊದಲನೆಯವನು. ‘ನೋಡು ನಿನ್ನ ಜನರು ಹಿಂತಿರುಗಿ ಬರುತ್ತಿದ್ದಾರೆ’ ಎಂಬ ಸಂದೇಶವನ್ನು ನಾನು ಜೆರುಸಲೇಮಿಗೆ ಕಳುಹಿಸಿದೆನು.”


“ಬಡನಗರಿಯೇ, ನಿನ್ನ ವೈರಿಗಳು ನಿನಗೆ ವಿರೋಧವಾಗಿ ಬಿರುಗಾಳಿಯಂತೆ ಬಂದಾಗ ಯಾರೂ ನಿನ್ನನ್ನು ಸಂತೈಸಲಿಲ್ಲ. ಆದರೆ ನಾನು ಮತ್ತೆ ನಿನ್ನನ್ನು ನಿರ್ಮಿಸುವೆನು. ನಿನ್ನ ಗೋಡೆಗಳ ಕಲ್ಲುಗಳನ್ನು ಕಟ್ಟಲು ಸುಂದರವಾದ ಗಾರೆಯನ್ನು ಉಪಯೋಗಿಸುವೆನು. ನಾನು ಅಡಿಪಾಯ ಹಾಕುವಾಗ ಮಾಣಿಕ್ಯಗಳನ್ನು ಹಾಕುವೆನು.


ಬಹಳ ವರ್ಷಗಳಿಂದ ನಿಮ್ಮ ಪಟ್ಟಣಗಳು ಹಾಳಾಗಿ ಬಿದ್ದಿವೆ. ಆದರೆ ಹೊಸ ಪಟ್ಟಣಗಳು ಏಳುವವು. ಅವುಗಳ ಅಸ್ತಿವಾರಗಳು ಬಹಳ ವರ್ಷ ಬಾಳುವವು. ನೀವು “ಬೇಲಿ ಸರಿಮಾಡುವವರು” ಎಂದು ಕರೆಯಲ್ಪಡುವಿರಿ; “ಮನೆಗಳನ್ನು, ರಸ್ತೆಗಳನ್ನು ನಿರ್ಮಿಸುವವರು” ಎಂದು ನೀವು ಕರೆಯಲ್ಪಡುವಿರಿ.


ಈಗ ನಾನು ನಿಮ್ಮೆಲ್ಲ ದೇಶಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸಿದ್ದೇನೆ. ಅವನು ನನ್ನ ಸೇವಕನಾಗಿದ್ದಾನೆ. ಕಾಡುಪ್ರಾಣಿಗಳು ಸಹ ಅವನ ಆಜ್ಞೆಯನ್ನು ಪಾಲಿಸುವಂತೆ ಮಾಡುವೆನು.


ನಿನ್ನನ್ನು ನೋಡುತ್ತಿದ್ದ ಆ ಯೆಹೂದ್ಯರಿಗೆ ಹೀಗೆ ಹೇಳು: ‘ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಇಲ್ಲಿಗೆ ಕರೆಸುತ್ತೇನೆ. ಅವನು ನನ್ನ ಸೇವಕನಾಗಿದ್ದಾನೆ. ನಾನು ಈ ಸ್ಥಳದಲ್ಲಿ ಹೂಳಿದ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಸ್ಥಾಪಿಸುತ್ತೇನೆ. ನೆಬೂಕದ್ನೆಚ್ಚರನು ಈ ಕಲ್ಲುಗಳ ಮೇಲೆ ತನ್ನ ಗುಡಾರವನ್ನು ಹಾಕುವನು.


ಆತನು ಜೆರುಸಲೇಮ್‌ನಲ್ಲಿರುವಾತನೂ ಇಸ್ರೇಲರ ದೇವರೂ ಆಗಿದ್ದಾನೆ. ದೇವಜನರಲ್ಲಿ ಯಾರಾದರೂ ನಿಮ್ಮೊಂದಿಗೆ ವಾಸಿಸುತ್ತಿದ್ದರೆ ದೇವರ ಆಶೀರ್ವಾದವು ಅವರ ಮೇಲಿರಲಿ. ಯೆಹೂದ ಪ್ರಾಂತ್ಯದಲ್ಲಿರುವ ಜೆರುಸಲೇಮಿಗೆ ಹೋಗಲು ಅವರಿಗೆ ಅವಕಾಶಕೊಡಿರಿ. ಅವರು ಹೋಗಿ ಯೆಹೋವನಿಗಾಗಿ ದೇವಾಲಯವನ್ನು ಕಟ್ಟಲಿ.


ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು