Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:3 - ಪರಿಶುದ್ದ ಬೈಬಲ್‌

3 “ಬಾಯಾರಿದ ಜನರಿ ಗೆ ನಾನು ನೀರು ಹೊಯ್ಯುವೆನು. ಬಂಜ ರು ಭೂಮಿಯಲ್ಲಿ ನಾನು ಹೊಳೆ ಹರಿಯುವಂತೆ ಮಾಡುವೆನು. ನಿನ್ನ ಸಂತಾನದ ಮೇಲೆ ನಾನು ನನ್ನ ಆತ್ಮವನ್ನು ಸುರಿಸುವೆನು; ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು. ಅದು ಹರಿಯುವ ಬುಗ್ಗೆಯ ನೀರಿನಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮಳೆಗರೆವೆನು ಬತ್ತಿದ ಭೂಮಿಯಲಿ ಹರಿಸುವೆನು ಕಾಲುವೆಗಳನು ಒಣನೆಲದಲಿ. ಮಳೆಗರೆವೆನು ನನ್ನಾತ್ಮವನು ನಿನ್ನ ಸಂತಾನದ ಮೇಲೆ ನನ್ನ ಆಶೀರ್ವಾದವನು ನಿನ್ನ ಸಂತತಿಯ ಮೇಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬತ್ತಿದ ಭೂವಿುಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು, ಸುರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ನಾನು ಬಾಯಾರಿದ ಭೂಮಿಯ ಮೇಲೆ ನೀರನ್ನು ಸುರಿಸುವೆನು. ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು. ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ, ನಿನ್ನಿಂದ ಹುಟ್ಟುವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:3
38 ತಿಳಿವುಗಳ ಹೋಲಿಕೆ  

“ಆ ಬಳಿಕ ನಾನು ನನ್ನ ಆತ್ಮವನ್ನು ಎಲ್ಲಾ ತರದ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಹೆಣ್ಣು ಮಕ್ಕಳು ಪ್ರವಾದಿಸುವರು. ನಿಮ್ಮ ವೃದ್ಧರು ಕನಸು ಕಾಣುವರು. ನಿಮ್ಮ ಯುವಕರಿಗೆ ದರ್ಶನಗಳಾಗುವವು.


‘ದೇವರು ಹೀಗೆನ್ನುತ್ತಾನೆ: ಕೊನೆಯ ದಿನಗಳಲ್ಲಿ, ನಾನು ನನ್ನ ಆತ್ಮವನ್ನು ಎಲ್ಲಾ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಮಕ್ಕಳು, ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಯುವಜನರು ದರ್ಶನಗಳನ್ನು ಕಾಣುವರು. ನಿಮ್ಮ ವಯೋವೃದ್ಧರು ವಿಶೇಷ ಕನಸುಗಳನ್ನು ಕಾಣುವರು.


ಯೆಹೋವನು ಹೇಳುವುದೇನೆಂದರೆ: “ನಾನಂತೂ ಆ ಜನರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡುವೆನು. ನನ್ನ ವಾಗ್ದಾನದ ಮಾತುಗಳೂ ನಾನು ಇರಿಸಿದ ನನ್ನ ಆತ್ಮವೂ ನಿಮ್ಮಿಂದ ಎಂದಿಗೂ ತೊಲಗದು. ಅವು ನಿಮ್ಮ ಮೊಮ್ಮಕ್ಕಳ ತನಕವೂ ಇರುವವು. ಅವು ನಿನ್ನೊಂದಿಗೆ ಈಗಲೂ ಸದಾಕಾಲವೂ ಇರುವವು.


ನೀವು ನನ್ನ ಗದರಿಕೆಗೆ ಕಿವಿಗೊಟ್ಟರೆ, ನನ್ನ ಮನಸ್ಸಿನಲ್ಲಿರುವುದನ್ನೆಲ್ಲ ತಿಳಿಸುವೆನು; ನನ್ನ ಆಲೋಚನೆಗಳನ್ನು ನಿಮಗೆ ಗೊತ್ತುಪಡಿಸುವೆನು.


ಸಿಂಹಾಸನದ ಮೇಲೆ ಕುಳಿತಿದ್ದಾತನು ನನಗೆ ಹೀಗೆ ಹೇಳಿದನು: “ಎಲ್ಲವೂ ನೆರವೇರಿತು! ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ಬಾಯಾರಿದವರಿಗೆ ನಾನು ಜೀವಜಲದ ಬುಗ್ಗೆಯಿಂದ ನೀರನ್ನು ಉಚಿತವಾಗಿ ಕೊಡುತ್ತೇನೆ.


ಈ ವಾಗ್ದಾನವನ್ನು ನಿಮಗೂ ನಿಮ್ಮ ಮಕ್ಕಳಿಗೂ ಬಹು ದೂರದಲ್ಲಿರುವ ಜನರಿಗೂ ಕೊಡಲಾಗಿದೆ. ನಮ್ಮ ದೇವರಾದ ಪ್ರಭುವು ತನ್ನ ಬಳಿಗೆ ಕರೆಯುವ ಪ್ರತಿಯೊಬ್ಬರಿಗೂ ಈ ವಾಗ್ದಾನವನ್ನು ಕೊಟ್ಟಿದ್ದಾನೆ” ಎಂದು ಹೇಳಿದನು.


ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು.


ನಾನು ಇಸ್ರೇಲ್ ಜನಾಂಗದವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ಅನಂತರ ನಾನು ಎಂದಿಗೂ ಅವರಿಗೆ ವಿಮುಖನಾಗಿರುವದಿಲ್ಲ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ದೇವರು ನಮಗೆ ತನ್ನ ಆತ್ಮವನ್ನು ಸುರಿಸುವತನಕ ಇದು ಮುಂದುವರಿಯುವದು. ಈಗ ಯಾವ ಒಳ್ಳೆಯ ಸಂಗತಿಗಳು ನಡಿಯದೆ ಇರುವದರಿಂದ ದೇಶವು ಮರುಭೂಮಿಯಂತಿದೆ. ಆದರೆ ಮುಂದಿನ ದಿವಸಗಳಲ್ಲಿ ಮರುಭೂಮಿಯು ಕರ್ಮೆಲ್ ಪ್ರಾಂತ್ಯದಂತೆ ಆಗಿ ನ್ಯಾಯಧರ್ಮಗಳು ಅಲ್ಲಿ ನೆಲೆಸುವವು. ಕರ್ಮೆಲ್ ಹಸಿರು ಕಾಡಾಗಿದ್ದು ಶುಭವು ನೆಲೆಸಿರುವುದು.


ಪೇತ್ರನೊಂದಿಗೆ ಬಂದಿದ್ದ ಯೆಹೂದ್ಯ ವಿಶ್ವಾಸಿಗಳು ವಿಸ್ಮಿತರಾದರು. ಯೆಹೂದ್ಯರಲ್ಲದ ಜನರಿಗೂ ಸಹ ಪವಿತ್ರಾತ್ಮಧಾರೆಯಾದದ್ದನ್ನು ಕಂಡು ಅವರು ಆಶ್ಚರ್ಯಪಟ್ಟರು.


ಆತನು ಮರಳುಗಾಡನ್ನು ಸರೋವರಗಳುಳ್ಳ ನಾಡನ್ನಾಗಿ ಪರಿವರ್ತಿಸಿದನು; ಒಣನೆಲದಿಂದ ನೀರಿನ ಒರತೆಗಳನ್ನು ಹರಿಯಮಾಡಿದನು.


“ಬಡಜನರು ನೀರಿಗಾಗಿ ಹುಡುಕಾಡುವರು. ಆದರೆ ನೀರು ಅವರಿಗೆ ದೊರಕುವದಿಲ್ಲ. ಅವರು ದಾಹಗೊಂಡಿದ್ದಾರೆ, ಅವರ ನಾಲಿಗೆ ಒಣಗಿಹೋಗಿದೆ. ನಾನು ಅವರ ಮೊರೆಯನ್ನು ಕೇಳುವೆನು. ನಾನು ಅವರನ್ನು ತೊರೆಯುವುದಿಲ್ಲ, ಅವರನ್ನು ಸಾಯಲು ಬಿಡುವುದಿಲ್ಲ.


ಆ ದಿವಸ ಸಿಹಿ ದ್ರಾಕ್ಷಾರಸವು ಬೆಟ್ಟಗಳಿಂದ ಹರಿಯುವುದು. ಬೆಟ್ಟಗಳಲ್ಲಿ ಹಾಲು ಹರಿಯುವುದು. ಮತ್ತು ಯೆಹೂದದ ಬತ್ತಿದ ನದಿಗಳಲ್ಲಿ ನೀರು ತುಂಬಿ ಹರಿಯುವದು. ಯೆಹೋವನ ಆಲಯದಿಂದ ಬುಗ್ಗೆಯು ಹೊರಡುವದು. ಅಕಾಸಿಯ ಕಣಿವೆಗೆ ನೀರನ್ನು ಕೊಡುವದು.


ಯೇಸು ಪರಲೋಕಕ್ಕೆ ಎತ್ತಲ್ಪಟ್ಟನು. ಈಗ ಯೇಸು ದೇವರೊಂದಿಗಿದ್ದಾನೆ, ದೇವರ ಬಲಗಡೆಯಲ್ಲಿದ್ದಾನೆ. ಈಗ ತಂದೆಯು (ದೇವರು) ಪವಿತ್ರಾತ್ಮನನ್ನು ಯೇಸುವಿಗೆ ಕೊಟ್ಟಿದ್ದಾನೆ. ಪವಿತ್ರಾತ್ಮನನ್ನು ಕೊಡುವುದಾಗಿ ದೇವರು ವಾಗ್ದಾನ ಮಾಡಿದ್ದನು. ಆದ್ದರಿಂದ ಯೇಸು ಈಗ ಆ ಆತ್ಮನನ್ನು ಸುರಿಸಿದ್ದಾನೆ. ನೀವು ನೋಡುತ್ತಿರುವುದು ಮತ್ತು ಕೇಳುತ್ತಿರುವುದು ಇದನ್ನೇ.


ನಾನು ನನ್ನ ಕುರಿಗಳನ್ನೂ ನನ್ನ ಬೆಟ್ಟದ ಸುತ್ತಲೂ ಇರುವ ಸ್ಥಳಗಳನ್ನೂ ಆಶೀರ್ವದಿಸುವೆನು. ಸರಿಯಾದ ಸಮಯಕ್ಕೆ ಮಳೆ ಬೀಳುವಂತೆ ಮಾಡುವೆನು. ಮತ್ತು ಅದನ್ನು ಆಶೀರ್ವಾದದ ಸುರಿಮಳೆಯಂತೆ ಸುರಿಸುವೆನು.


ಎಲ್ಲಾ ಜನಾಂಗಗಳವರು ನನ್ನ ಜನರನ್ನೂ ನನ್ನ ದೇಶದ ಮಕ್ಕಳನ್ನೂ ತಿಳಿದುಕೊಳ್ಳುವರು. ಅವರನ್ನು ಜನರು ನೋಡಿದಾಗ ಯೆಹೋವನು ಅವರನ್ನು ಆಶೀರ್ವದಿಸುತ್ತಿದ್ದಾನೆ ಎಂದು ತಿಳಿಯುವರು.


ಆತ್ಮನೂ ಮದುಮಗಳೂ, “ಬಾ!” ಎನ್ನುತ್ತಾರೆ. ಇದನ್ನು ಕೇಳುವ ಪ್ರತಿಯೊಬ್ಬ ವ್ಯಕ್ತಿಯೂ, “ಬಾ!” ಎಂದು ಹೇಳಬೇಕು. ಬಾಯಾರಿದವನು ನನ್ನ ಬಳಿಗೆ ಬರಲಿ; ಅವನಿಗೆ ಇಷ್ಟವಿದ್ದರೆ ಜೀವಜಲವನ್ನು ಉಚಿತವಾಗಿ ಪಡೆದುಕೊಳ್ಳಲಿ.


ಯೆಹೋವನು ತನ್ನ ಜನರನ್ನು ಮರುಭೂಮಿಯಲ್ಲಿ ನಡೆಸಿಕೊಂಡು ಬಂದನು. ಜನರು ಬಾಯಾರಲಿಲ್ಲ; ಯಾಕೆಂದರೆ ಆತನು ಬಂಡೆಯಿಂದ ನೀರು ಹರಿಯುಂತೆ ಮಾಡಿದನು. ಆತನು ಬಂಡೆಯನ್ನು ಇಬ್ಭಾಗ ಮಾಡಿದಾಗ ನೀರು ಅದರೊಳಗಿಂದ ಹರಿಯಿತು.


ಇನ್ನು ಮುಂದೆ ಜನರು ಬಿಟ್ಟೀಕೆಲಸ ಮಾಡುವದಿಲ್ಲ. ಇನ್ನು ಮುಂದೆ ಮಕ್ಕಳನ್ನು ಹೆರುವಾಗ ಕೇಡಾಗುತ್ತದೆಯೆಂಬ ಭಯವಿರುವುದಿಲ್ಲ. ನನ್ನ ಎಲ್ಲಾ ಜನರು ಮತ್ತು ಅವರ ಮಕ್ಕಳು ಯೆಹೋವನಿಂದ ಆಶೀರ್ವದಿಸಲ್ಪಡುವರು.


ದೇವರೇ, ನೀನೇ ನನ್ನ ದೇವರು. ನಿನಗಾಗಿ ಕುತೂಹಲದಿಂದ ಎದುರು ನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂಮಿಯಂತೆ ನನ್ನ ಆತ್ಮವು ನಿನಗಾಗಿ ಬಾಯಾರಿದೆ; ನನ್ನ ದೇಹವು ನಿನಗಾಗಿ ಬಯಸಿದೆ.


ಜನರಿಗೆ ಹಸಿವೆಯಾಗದು, ಬಾಯಾರಿಕೆಯಾಗದು. ಸೂರ್ಯನ ಉರಿ ಬಿಸಿಲಾಗಲಿ ಗಾಳಿಯಾಗಲಿ ಅವರಿಗೆ ಹಾನಿಮಾಡದು. ಯಾಕೆಂದರೆ ದೇವರು ತಾನೇ ಅವರನ್ನು ಸಂತೈಸುವನು, ಅವರನ್ನು ಬುಗ್ಗೆಗಳ ಬಳಿಗೆ ನಡಿಸುವನು.


ಹೀಗಿದ್ದಲ್ಲಿ ರಾಜನು ಮಳೆಯಲ್ಲಿ ಆಶ್ರಯ ಸ್ಥಳವಾಗಿಯೂ ಗಾಳಿಯಲ್ಲಿ ಮರೆಯಂತೆಯೂ ಮರುಭೂಮಿಯಲ್ಲಿ ಒರತೆಯಂತೆಯೂ ಬೆಂಗಾಡಿನಲ್ಲಿ ಬಂಡೆಯ ನೆರಳಿನಂತೆಯೂ ಇರುವನು.


“ದುರಾತ್ಮವು ಮನುಷ್ಯನಿಂದ ಹೊರಗೆ ಬಂದಾಗ ವಿಶ್ರಾಂತಿಗಾಗಿ ಸ್ಥಳವನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ಪ್ರಯಾಣ ಮಾಡುತ್ತದೆ. ಆದರೆ ಆ ದುರಾತ್ಮಕ್ಕೆ ಬೇಕಾದ ವಿಶ್ರಾಂತಿ ಸ್ಥಳ ಸಿಕ್ಕುವುದಿಲ್ಲ.


ನೀನು ಅನೇಕ ಮಕ್ಕಳನ್ನು ಪಡೆದುಕೊಳ್ಳುವೆ. ಅವರು ಭೂಮಿಯ ಮೇಲಿರುವ ಹುಲ್ಲಿನ ಗರಿಗಳಷ್ಟಿರುವರು.


ನೀವು ನನಗೆ ವಿಧೇಯರಾಗಿದ್ದರೆ, ನಿಮ್ಮ ಸಂತಾನವು ಅಭಿವೃದ್ಧಿಯಾಗುತ್ತಿತ್ತು. ಅವರು ಸಮುದ್ರದ ಮರಳಿನಂತೆ ಅಸಂಖ್ಯಾತರಾಗಿರುತ್ತಿದ್ದರು. ನೀವು ನನಗೆ ವಿಧೇಯರಾಗಿದ್ದರೆ, ನೀವು ನಾಶವಾಗಿರುತ್ತಿರಲಿಲ್ಲ ಮತ್ತು ನನ್ನೆದುರಿನಿಂದ ನಿಮ್ಮ ಹೆಸರು ತೆಗೆದುಹಾಕಲ್ಪಡುತ್ತಿರಲಿಲ್ಲ.”


“ಎಲೈ ಬಾಯಾರಿದ ಜನರೆಲ್ಲರೇ, ಬಂದು ನೀರನ್ನು ಕುಡಿಯಿರಿ. ನಿಮ್ಮಲ್ಲಿ ಹಣವಿಲ್ಲವೆಂದು ಚಿಂತೆಮಾಡಬೇಡಿರಿ. ಬಂದು ಹೊಟ್ಟೆತುಂಬಾ ತಿಂದು ಕುಡಿಯಿರಿ. ನೀವು ಹಣ ಕೊಡಬೇಕಿಲ್ಲ. ಹೊಟ್ಟೆತುಂಬಾ ತಿಂದು ಕುಡಿಯಿರಿ ಹಾಲಿಗೂ ದ್ರಾಕ್ಷಾರಸಕ್ಕೂ ಕ್ರಯವಿಲ್ಲ.


ನಾನು ನನ್ನ ಆತ್ಮವನ್ನು ನಿಮ್ಮಲ್ಲಿರಿಸುವೆನು. ನೀವು ನನ್ನ ನಿಯಮಗಳಿಗೆ ವಿಧೇಯರಾಗುವಷ್ಟು ನಿಮ್ಮ ಮನಸ್ಸನ್ನು ಬದಲಾಯಿಸುವೆನು. ಆಗ ನೀವು ನನ್ನ ಆಜ್ಞೆಗಳನ್ನು ಜಾಗ್ರತೆಯಿಂದ ಪಾಲಿಸುವಿರಿ.


ಅವನು ನನ್ನೊಡನೆ, “ಈ ನದಿಯು ಪೂರ್ವಕ್ಕೆ ಹೊರಟು ಅರಾಬಾ ತಗ್ಗಿನ ಕಡೆ ಹರಿಯುತ್ತಿದೆ.


ನೀನು ಒಳ್ಳೆಯತನವನ್ನು ಬಿತ್ತಿದರೆ ಪ್ರೀತಿಯೆಂಬ ಬೆಳೆಯನ್ನು ಕೊಯ್ಯುವೆ. ನಿನ್ನ ನೆಲವನ್ನು ಉಳುಮೆ ಮಾಡು. ಆಗ ನೀನು ಯೆಹೋವನೊಂದಿಗೆ ಬೆಳೆಯನ್ನು ಕೊಯ್ಯುವೆ. ಆತನು ಬರುವನು. ಮತ್ತು ಆತನ ಒಳ್ಳೆಯತನವು ನಿನ್ನ ಮೇಲೆ ಮಳೆಯಂತೆ ಸುರಿಯುವದು.


ಆದರೆ ಜನಾಂಗಗಳಲ್ಲಿ ಚದರಿರುವ ಇಸ್ರೇಲಿನ ಅಳಿದುಳಿದವರು ಯೆಹೋವನಿಂದ ಹೊರಡುವ ಮಂಜಿನಂತಿರುವರು. ಅದು ಯಾರನ್ನೂ ಕಾಯುವದಿಲ್ಲ. ಅವರು ಹುಲ್ಲಿನ ಮೇಲೆ ಬಿದ್ದಿರುವ ಮಳೆಯಂತಿರುವರು. ಆ ಮಳೆಯು ಯಾರನ್ನೂ ಕಾಯುವದಿಲ್ಲ.


“ಯೆಹೋವನಾದ ನಾನು ಆ ತೋಟವನ್ನು ಚೆನ್ನಾಗಿ ನೋಡಿಕೊಳ್ಳುವೆನು; ಸರಿಯಾದ ಕಾಲದಲ್ಲಿ ತೋಟಕ್ಕೆ ನೀರು ಹೊಯ್ಯುವೆನು. ಹಗಲಿರುಳು ತೋಟವನ್ನು ಕಾಯುವೆನು. ಆ ತೋಟವನ್ನು ಯಾರೂ ಹಾಳುಮಾಡುವದಿಲ್ಲ.


ಇಸ್ರೇಲರೊಂದಿಗೆ ನಾನು ಇದ್ದೇನೆ ಎಂದು ನೀವು ತಿಳಿಯುವಿರಿ. ನಿಮ್ಮ ದೇವರಾದ ಯೆಹೋವನು ನಾನೇ ಎಂದು ನೀವು ತಿಳಿಯುವಿರಿ. ನನ್ನ ಹೊರತು ಬೇರೆ ದೇವರುಗಳಿಲ್ಲ. ನನ್ನ ಜನರು ಇನ್ನು ಮುಂದೆ ನಾಚಿಕೆಗೆ ಗುರಿಯಾಗುವುದಿಲ್ಲ.”


“ಆ ಸಮಯದಲ್ಲಿ ನಾನು ಯೆಹೂದ ಮತ್ತು ಜೆರುಸಲೇಮನ್ನು ಸೆರೆಯಿಂದ ಹಿಂದಕ್ಕೆ ತರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು