Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:8 - ಪರಿಶುದ್ದ ಬೈಬಲ್‌

8 “ನೀವು ಭಯಪಡಬೇಡಿ, ಚಿಂತಿಸಬೇಡಿ. ನಾನು ಭವಿಷ್ಯದ ಸಂಭವಗಳನ್ನು ಯಾವಾಗಲೂ ನಿಮಗೆ ತಿಳಿಸುತ್ತಾ ಬಂದಿದ್ದೇನೆ. ನೀವೇ ನನ್ನ ಸಾಕ್ಷಿಗಳು. ನನ್ನ ಹೊರತು ಬೇರೆ ದೇವರುಗಳಿಲ್ಲ. ನನ್ನ ಹೊರತು ಬೇರೆ ಯಾವ ‘ಬಂಡೆ’ಯೂ ಇಲ್ಲ. ನಾನೊಬ್ಬನೇ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೆದರಬೇಡಿರಿ, ಭಯಪಡಬೇಡಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹೆದರಬೇಡಿ, ಅಂಜದಿರಿ, ನನ್ನ ಜನರೇ, ನನಗೆ ಸಾಕ್ಷಿಗಳು ನೀವೇ; ಪೂರ್ವಕಾಲದಿಂದ ನಡೆದವುಗಳನು ನಾ ನಿಮಗೆ ಮುಂತಿಳಿಸಿ ಶ್ರುತಪಡಿಸಿಲ್ಲವೆ? ನನ್ನ ಹೊರತು ಬೇರೆ ದೇವನಿರುವನೆ? ನನ್ನ ಹೊರತು ಬೇರೆ ಸೇನಾಧೀಶ್ವರನಿರುವನೆ? ಅಂಥವನಾರೋ ನಾನರಿಯೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೆದರಬೇಡಿರಿ, ಅಂಜದಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹೆದರಬೇಡ, ಇಲ್ಲವೆ ಭಯಪಡಬೇಡ! ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ ಮತ್ತು ಅದನ್ನು ಪ್ರಕಟಿಸಲಿಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಇಲ್ಲ, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:8
55 ತಿಳಿವುಗಳ ಹೋಲಿಕೆ  

ಯೆಹೋವನು ಹೇಳುವುದೇನೆಂದರೆ: “ನೀವು ನನ್ನ ಸಾಕ್ಷಿಗಳಾಗಿದ್ದೀರಿ. ನಾನು ಆರಿಸಿಕೊಂಡ ಸೇವಕನು ನೀನೇ. ಜನರು ನನ್ನನ್ನು ನಂಬುವಂತೆ ನಾನು ನಿಮ್ಮನ್ನು ಆರಿಸಿಕೊಂಡೆನು. ನಾನು ನಿಜ ದೇವರು ಎಂದು ನೀವು ತಿಳಿಯಬೇಕೆಂದು ನಿಮ್ಮನ್ನು ಆರಿಸಿಕೊಂಡೆನು. ನಾನೇ ನಿಜವಾದ ದೇವರು. ನನಗಿಂತ ಮೊದಲು ಯಾರೂ ಇರಲಿಲ್ಲ, ಇನ್ನು ಮುಂದೆಯೂ ನನ್ನ ಹೊರತು ಯಾವ ದೇವರೂ ಇರುವದಿಲ್ಲ.


ಯೆಹೋವನಂತಹ ಪವಿತ್ರ ದೇವರು ಬೇರೆ ಯಾರೂ ಇಲ್ಲ. ನಿನ್ನ ಹೊರತು ಅನ್ಯದೇವರಿಲ್ಲ! ನಮ್ಮ ದೇವರಿಗಿಂತ ಬೇರೊಂದು ಬಂಡೆಯಿಲ್ಲ.


ಯೆಹೋವನು ನಿಮಗೆ ಇವುಗಳನ್ನು ತೋರಿಸಿದ್ದಾನೆ, ಯಾಕೆಂದರೆ ಆತನೇ ದೇವರೆಂದೂ ಆತನಲ್ಲದೆ ಬೇರೆ ಯಾವ ದೇವರಿಲ್ಲವೆಂದೂ ನೀವು ತಿಳಿದುಕೊಳ್ಳಬೇಕೆಂಬುದು ಆತನ ಉದ್ದೇಶವಾಗಿತ್ತು.


“ಆದ್ದರಿಂದ ಈ ಹೊತ್ತು ನೀವೆಲ್ಲಾ ಯೆಹೋವನನ್ನು ದೇವರೆಂದು ಸ್ವೀಕರಿಸಬೇಕು. ಆತನು ಮೇಲಿರುವ ಆಕಾಶಕ್ಕೂ ಕೆಳಗಿರುವ ಭೂಮಿಗೂ ದೇವರಾಗಿದ್ದಾನೆ. ಆತನ ಹೊರತು ಬೇರೆ ದೇವರುಗಳಿಲ್ಲ.


ತಂದೆಯು ಮತ್ತು ನಾನು ಒಂದೇ ಆಗಿದ್ದೇವೆ” ಎಂದು ಉತ್ತರಕೊಟ್ಟನು.


ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ವಾಕ್ಯ ಎಂಬಾತನಿದ್ದನು. ಆ ವಾಕ್ಯ ಎಂಬಾತನು ದೇವರೊಂದಿಗೆ ಇದ್ದನು. ಆ ವಾಕ್ಯ ಎಂಬಾತನೇ ಸ್ವತಃ ದೇವರಾಗಿದ್ದನು.


ಇಸ್ರೇಲರೊಂದಿಗೆ ನಾನು ಇದ್ದೇನೆ ಎಂದು ನೀವು ತಿಳಿಯುವಿರಿ. ನಿಮ್ಮ ದೇವರಾದ ಯೆಹೋವನು ನಾನೇ ಎಂದು ನೀವು ತಿಳಿಯುವಿರಿ. ನನ್ನ ಹೊರತು ಬೇರೆ ದೇವರುಗಳಿಲ್ಲ. ನನ್ನ ಜನರು ಇನ್ನು ಮುಂದೆ ನಾಚಿಕೆಗೆ ಗುರಿಯಾಗುವುದಿಲ್ಲ.”


ಯೆಹೋವನು ಇಸ್ರೇಲರ ಅರಸನಾಗಿದ್ದಾನೆ. ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ರಕ್ಷಿಸುತ್ತಾನೆ. ಆತನು ಹೇಳುವುದೇನೆಂದರೆ: “ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.


ಯೆಹೋವನಲ್ಲದೆ ಬೇರೆ ಯಾವ ದೇವರೂ ಇಲ್ಲ. ನಮ್ಮ ದೇವರಲ್ಲದೆ ಬೇರೆ ಯಾವ ಬಂಡೆಯೂ ಇಲ್ಲ.


ಯೆಹೋವನ ಹೊರತು ಬೇರೆ ದೇವರಿಲ್ಲ. ನಮ್ಮ ದೇವರ ಹೊರತು ಬೇರೆ ಬಂಡೆಯಿಲ್ಲ.


“‘ನಾನೇ ದೇವರು, ನನ್ನ ಹೊರತು ಬೇರೆ ದೇವರಿಲ್ಲ. ಜನರಿಗೆ ಮರಣವನ್ನೂ ಜೀವವನ್ನೂ ಕೊಡುವವನು ನಾನೇ. ಅವರಿಗೆ ಗಾಯ ಮಾಡುವವನೂ ನಾನೇ, ಅದನ್ನು ಗುಣಮಾಡುವವನೂ ನಾನೇ. ನನ್ನ ಶಕ್ತಿಯ ಹಿಡಿತದಿಂದ ಇನ್ನೊಬ್ಬನನ್ನು ರಕ್ಷಿಸಲು ಯಾರಿಗೂ ಸಾಧ್ಯವಿಲ್ಲ.


ಬಹಳ ಸಮಯದ ಹಿಂದೆ ನಡೆದ ಸಂಗತಿಗಳನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ನಾನು ದೇವರೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ನನ್ನ ಹೊರತು ಬೇರೆ ದೇವರುಗಳಿಲ್ಲ. ಆ ಸುಳ್ಳುದೇವರುಗಳು ನನ್ನ ಹಾಗೆ ಇಲ್ಲ.


ನನ್ನ ದೇವರು ನನ್ನನ್ನು ರಕ್ಷಿಸುವುದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು. ಆ ದೇವದೂತನು ಸಿಂಹಗಳ ಬಾಯಿಯನ್ನು ಮುಚ್ಚಿದನು. ಸಿಂಹಗಳು ನನ್ನನ್ನು ಗಾಯಗೊಳಿಸಲಿಲ್ಲ. ಏಕೆಂದರೆ ನಾನು ತಪ್ಪಿತಸ್ಥನಲ್ಲವೆಂದು ನನ್ನ ದೇವರಿಗೆ ಗೊತ್ತುಂಟು. ರಾಜನೇ, ನಾನೆಂದೂ ನಿನಗೆ ತಪ್ಪು ಮಾಡಲಿಲ್ಲ” ಎಂದು ಉತ್ತರಿಸಿದನು.


ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.


“ನಿನ್ನ ದೇವರು ಸರ್ವಶ್ರೇಷ್ಠನು ಮತ್ತು ಪ್ರಬಲನು ಎನ್ನುವದು ನನಗೆ ಖಚಿತವಾಯಿತು. ಆತನು ಎಲ್ಲ ಅರಸರ ಒಡೆಯನಾಗಿದ್ದಾನೆ. ಆತನು ಜನರಿಗೆ ನಿಗೂಢವಾಗಿದ್ದ ರಹಸ್ಯವನ್ನು ತಿಳಿಸುತ್ತಾನೆ. ನೀನು ನನಗೆ ಈ ರಹಸ್ಯವನ್ನು ತಿಳಿಸಲು ಸಮರ್ಥನಾದುದರಿಂದ ಇದೆಲ್ಲ ನಿಜವೆಂದು ನಾನು ನಂಬುತ್ತೇನೆ” ಎಂದು ಹೇಳಿದನು.


ಆದರೆ ಪರಲೋಕದಲ್ಲಿ ಯೆಹೋವನು ಎಂಬಾತನಿದ್ದಾನೆ. ಆತನು ರಹಸ್ಯಗಳನ್ನು ಹೇಳುತ್ತಾನೆ. ಭವಿಷ್ಯದಲ್ಲಿ ನಡೆಯಲಿರುವುದನ್ನು ಅರಸನಾದ ನಿನಗೆ ಯೆಹೋವನು ತಿಳಿಯಪಡಿಸಿದ್ದಾನೆ. ಇದೇ ನೀನು ಕಂಡ ಕನಸು, ನೀನು ಹಾಸಿಗೆಯ ಮೇಲೆ ಮಲಗಿದ್ದಾಗ ಕಂಡ ಸಂಗತಿಗಳು ಇವು:


ದೇವರೇ, ಪ್ರತಿಯೊಬ್ಬರೂ ನಿನ್ನನ್ನು ಗೌರವಿಸಬೇಕು. ನೀನು ಪ್ರತಿಯೊಂದು ಜನಾಂಗಕ್ಕೂ ರಾಜನಾಗಿರುವೆ. ಅವರೆಲ್ಲರೂ ನಿನಗೆ ಗೌರವ ತೋರಿಸಬೇಕು. ಜನಾಂಗಗಳಲ್ಲಿ ಎಷ್ಟೋ ಮಂದಿ ಜ್ಞಾನಿಗಳಿದ್ದಾರೆ ಆದರೆ ಅವರಲ್ಲಿ ಒಬ್ಬರೂ ನಿನ್ನಷ್ಟು ಜ್ಞಾನಿಗಳಲ್ಲ.


ಸಂಭವಿಸಲಿರುವ ಸಂಗತಿಗಳನ್ನು ಬಹುಕಾಲದ ಮೊದಲೇ ನಿಮಗೆ ತಿಳಿಸಿದ್ದೆನು. ಅವು ಸಂಭವಿಸುವದಕ್ಕಿಂತ ಎಷ್ಟೋ ಕಾಲದ ಮೊದಲೇ ತಿಳಿಸಿದೆನು. ನೀವು, ‘ಇವುಗಳನ್ನು ಮಾಡಿದ್ದು ನಮ್ಮ ವಿಗ್ರಹಗಳೇ, ನಮ್ಮ ಮರ ಮತ್ತು ಲೋಹದ ದೇವರುಗಳೇ ಅವುಗಳನ್ನು ಮಾಡಿದ್ದು ಎಂದು ನೀವು ಹೇಳದಂತೆ ಮಾಡಿದೆನು.’”


ಯೆಹೋವನಾದ ನಾನೇ ನಿನ್ನನ್ನು ನಿರ್ಮಿಸಿದಾತನು. ನೀನು ತಾಯಿಯ ಗರ್ಭದಲ್ಲಿರುವಾಗಲೇ ನಾನು ನಿನಗೆ ಸಹಾಯ ಮಾಡಿದೆನು. ಯಾಕೋಬೇ, ನನ್ನ ಸೇವಕನೇ, ಹೆದರದಿರು. ಯೆಶುರೂನೇ (ಇಸ್ರೇಲೇ), ನಾನು ನಿನ್ನನ್ನು ಆರಿಸಿಕೊಂಡಿದ್ದೇನೆ.


ನಾನೇ ನಿಮ್ಮೊಂದಿಗೆ ಮಾತನಾಡಿದೆನು. ನಾನೇ ನಿಮ್ಮನ್ನು ರಕ್ಷಿಸಿದೆನು. ನಾನು ಆ ವಿಷಯಗಳನ್ನು ನಿಮಗೆ ತಿಳಿಸಿದೆನು. ನಿಮ್ಮೊಂದಿಗೆ ಇದ್ದಾತನು ಅಪರಿಚಿತನಾಗಿರಲಿಲ್ಲ. ನೀವು ನನ್ನ ಸಾಕ್ಷಿಗಳಾಗಿದ್ದೀರಿ. ನಾನೇ ನಿಮ್ಮ ದೇವರು.” (ಯೆಹೋವನು ತಾನೇ ಈ ವಿಷಯಗಳನ್ನು ಹೇಳಿದ್ದಾನೆ.)


ಇಗೋ, ಆದಿಯಲ್ಲಿಯೇ ಮುಂದಿನ ಸಂಗತಿಗಳನ್ನು ತಿಳಿಸಿದೆನು. ಅವೆಲ್ಲವೂ ಸಂಭವಿಸಿದವು. ಈಗ ಕೆಲವು ವಿಷಯಗಳು ನಿನಗೆ ಪ್ರಕಟಿಸುತ್ತೇನೆ; ಸಂಭವಿಸುವ ಮೊದಲೇ ಅವುಗಳನ್ನು ನಿನಗೆ ತಿಳಿಸುವೆನು.”


ಆ ಸಮಯದಲ್ಲಿ ನೀವು ಹರ್ಷಗಾನ ಹಾಡುವಿರಿ. ಅದು ಹಬ್ಬದ ರಾತ್ರಿಯ ಸಮಯದಂತಿರುವದು. ದೇವರ ಪರ್ವತದಲ್ಲಿ ನಡೆಯುತ್ತಿರುವಾಗ ನೀವು ಅತ್ಯಂತ ಸಂತೋಷಪಡುವಿರಿ. ಇಸ್ರೇಲಿನ ಬಂಡೆಯಾಗಿರುವ ಯೆಹೋವನನ್ನು ಆರಾಧಿಸಲು ಹೋಗುವಾಗ ಕೊಳಲಿನ ಗಾನವನ್ನು ಕೇಳಿ ಸಂತೋಷಿಸುವಿರಿ.


ನಾವು ಪ್ರಯಾಣ ಮಾಡುವಾಗ ದಾರಿಯಲ್ಲಿ ಶತ್ರುಗಳಿದ್ದುದರಿಂದ ನಮ್ಮ ಸಂರಕ್ಷಣೆಗಾಗಿ ಸಿಪಾಯಿಗಳನ್ನು ಮತ್ತು ರಾಹುತರನ್ನು ಅರಸನಿಂದ ಕೇಳಲು ನನಗೆ ಸಂಕೋಚವಾಯಿತು. ಯಾಕೆಂದರೆ, “ನಮ್ಮ ದೇವರು ತನ್ನನ್ನು ನಂಬಿದವರೊಂದಿಗಿದ್ದಾನೆ; ಆತನಿಂದ ದೂರಹೋಗುವವರ ಮೇಲೆ ಆತನು ಕೋಪವುಳ್ಳವನಾಗಿದ್ದಾನೆ” ಎಂದು ರಾಜನಾದ ಅರ್ತಷಸ್ತನಿಗೆ ನಾವು ಹೇಳಿದ್ದೆವು.


“ಪರ್ಶಿಯಾದ ರಾಜನಾದ ಸೈರಸನ ಪ್ರಕಟನೆ: “ಪರಲೋಕದ ದೇವರಾದ ಯೆಹೋವನು ಭೂಲೋಕದಲ್ಲಿರುವ ಎಲ್ಲಾ ದೇಶಗಳನ್ನು ನನ್ನ ವಶಕ್ಕೆ ಕೊಟ್ಟಿದ್ದಾನೆ. ಯೆಹೂದ ದೇಶದ ಜೆರುಸಲೇಮ್‌ನಲ್ಲಿ ತನಗೊಂದು ಆಲಯವನ್ನು ಕಟ್ಟಲು ಆತನು ನನ್ನನ್ನು ಆರಿಸಿಕೊಂಡಿದ್ದಾನೆ.


ನಮ್ಮ ವೈರಿಗಳ ಬಂಡೆಯು ನಮ್ಮ ಬಂಡೆಯಂತೆ ಬಲಶಾಲಿಯಲ್ಲ. ವೈರಿಗಳಿಗೂ ಇದು ಗೊತ್ತಿದೆ.


“ಯೆಹೋವನ ಕಾರ್ಯವು ನಿಷ್ಕಳಂಕವಾದದ್ದು. ಯಾಕೆಂದರೆ ಆತನ ಮಾರ್ಗವೆಲ್ಲವೂ ಸರಿಯಾದದ್ದೇ. ದೇವರು ಸತ್ಯವಂತನೂ ನಂಬಿಗಸ್ತನೂ ಆಗಿದ್ದಾನೆ. ಆತನು ಒಳ್ಳೆಯವನೂ ಪ್ರಾಮಾಣಿಕನೂ ಆಗಿದ್ದಾನೆ.


ಅದಕ್ಕೆ ಅವನ ತಂದೆಯು, “ನನಗೆ ಗೊತ್ತು ಮಗನೇ, ನನಗೆ ಗೊತ್ತು. ಮನಸ್ಸೆ ಮೊದಲು ಹುಟ್ಟಿದವನು. ಅವನು ಮಹಾವ್ಯಕ್ತಿಯಾಗುವನು. ಅವನು ಅನೇಕ ಜನರಿಗೆ ತಂದೆಯಾಗುವನು. ಆದರೆ ತಮ್ಮನು ಅಣ್ಣನಿಗಿಂತ ಮಹಾವ್ಯಕ್ತಿಯಾಗುವನು. ಅವನ ಕುಟುಂಬವು ತುಂಬ ದೊಡ್ಡದಾಗುವುದು” ಎಂದು ಹೇಳಿದನು.


ದೇವರು ಅವನಿಗೆ, “ನಾನೇ ದೇವರು, ನಾನೇ ನಿನ್ನ ತಂದೆಯ ದೇವರು. ನೀನು ಈಜಿಪ್ಟಿಗೆ ಹೋಗಲು ಹೆದರಬೇಡ. ಈಜಿಪ್ಟಿನಲ್ಲಿ ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡುವೆ.


ಆ ಜೀವವು ನಮಗೆ ಪ್ರತ್ಯಕ್ಷವಾಯಿತು. ನಾವು ಅದನ್ನು ನೋಡಿದ್ದರಿಂದ ಅದರ ಬಗ್ಗೆ ಸಾಕ್ಷಿ ಹೇಳ ಬಲ್ಲೆವು. ನಾವೀಗ ನಿಮಗೆ ಆ ಜೀವದ ಬಗ್ಗೆ ಸಾಕ್ಷಿ ಹೇಳುತ್ತೇವೆ. ಅದು ತಂದೆಯಾದ ದೇವರ ಸಂಗಡವಿದ್ದ ನಿತ್ಯವಾದ ಜೀವ. ದೇವರು ಈ ಜೀವವನ್ನು ನಮಗೆ ತೋರಿಸಿದನು.


ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.


“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲಹೊಂದಿ ಜೆರುಸಲೇಮಿನಲ್ಲಿಯೂ ಇಡೀ ಜುದೇಯದಲ್ಲಿಯೂ ಸಮಾರ್ಯದಲ್ಲಿಯೂ ಮತ್ತು ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಎಂದನು.


ಯೇಸು, “ಜನರಿಗೆ ಕುಳಿತುಕೊಳ್ಳಲು ಹೇಳಿರಿ” ಎಂದು ತಿಳಿಸಿದನು. ಆ ಸ್ಥಳದಲ್ಲಿ ಹುಲ್ಲು ಹುಲುಸಾಗಿ ಬೆಳೆದಿತ್ತು. ಅಲ್ಲಿ ಕುಳಿತುಕೊಂಡವರಲ್ಲಿ ಸುಮಾರು ಐದುಸಾವಿರ ಮಂದಿ ಗಂಡಸರಿದ್ದರು.


ದೇವರೇ, ನೀನು ಮಹೋನ್ನತನಾಗಿರುವೆ! ನೀನು ಅದ್ಭುತಕಾರ್ಯಗಳನ್ನು ಮಾಡುವಾತನಾಗಿರುವೆ! ನೀನೇ, ಹೌದು, ನೀನೊಬ್ಬನೇ ದೇವರು!


ನೀವು ನಿಮ್ಮ ರಕ್ಷಕನಾದ ದೇವರನ್ನು ಮರೆತುಬಿಟ್ಟಿದ್ದರಿಂದ ನಿಮಗೆ ಹೀಗೆ ಆಗುವದು. ದೇವರು ನಿಮ್ಮ ಆಶ್ರಯದುರ್ಗವಾಗಿದ್ದಾನೆಂಬುದನ್ನು ನೀವು ನೆನಪು ಮಾಡಿಕೊಳ್ಳಲಿಲ್ಲ. ದೂರದ ಪ್ರಾಂತ್ಯದಿಂದ ನೀವು ಉತ್ತಮ ತಳಿಯ ದ್ರಾಕ್ಷಿಯನ್ನು ತಂದಿರಿ. ಅದನ್ನು ನೀವು ನೆಟ್ಟರೂ ಅವು ಚಿಗುರುವದಿಲ್ಲ.


ಆದ್ದರಿಂದ ಯೆಹೋವನ ಮೇಲೆ ಯಾವಾಗಲೂ ಭರವಸವಿಡಿರಿ. ಯಾಕೆಂದರೆ ನಿಮಗೆ ದೇವರಾದ ಯೆಹೋವನಲ್ಲಿ ಸುರಕ್ಷತೆಯ ಸ್ಥಳವಿದೆ.


ಮುಂದೆ ಸಂಭವಿಸುವುದನ್ನು ತಿಳಿದುಕೊಳ್ಳಲು ನಾವು ಯಾವ ಸೂಚನೆಗಳಿಗಾಗಿ ಎದುರು ನೋಡಬೇಕು? ತಿಳಿಸಿರಿ. ನೀವೇ ದೇವರುಗಳೆಂದು ಆಗ ನಮಗೆ ಖಚಿತವಾಗುವುದು. ಏನನ್ನಾದರೂ ಮಾಡಿರಿ. ಯಾವದನ್ನಾದರೂ ಮಾಡಿರಿ. ಒಳ್ಳೆಯದನ್ನು, ಕೆಟ್ಟದ್ದನ್ನು ಮಾಡಿರಿ. ಆಗ ನೀವು ಜೀವವುಳ್ಳವರೆಂದು ತಿಳಿದು ನಿಮಗೆ ಗೌರವಿಸಿ, ಭಯಪಟ್ಟು ನಿಮ್ಮನ್ನು ಹಿಂಬಾಲಿಸುವೆವು.


ನಾನೇ, ನಾನೇ ಯೆಹೋವನು! ನನ್ನ ಹೊರತು ಬೇರೆ ರಕ್ಷಕನಿಲ್ಲ!


ನಾನು ಗುಪ್ತವಾಗಿ ಮಾತನಾಡದೆ ಬಹಿರಂಗವಾಗಿಯೇ ಮಾತನಾಡಿದ್ದೇನೆ. ಈ ಭೂಮಿಯ ಕತ್ತಲೆಯ ಸ್ಥಳದಲ್ಲಿ ನನ್ನ ಮಾತುಗಳನ್ನು ಅಡಗಿಸಿಡಲಿಲ್ಲ. ನನ್ನನ್ನು ಕಂಡುಹಿಡಿಯಲು ಗುಪ್ತಸ್ಥಳದಲ್ಲಿ ಹುಡುಕಿರಿ ಎಂದು ನಾನು ಯಾಕೋಬನ ಜನರಿಗೆ ಹೇಳಲಿಲ್ಲ. ನಾನೇ ಯೆಹೋವನು. ನಾನು ಸತ್ಯವನ್ನೇ ಆಡುವೆನು.


“ಸಂಭವಿಸಲಿಕ್ಕಿರುವ ಸಂಗತಿಗಳ ಬಗ್ಗೆ ಬಹುಕಾಲದ ಹಿಂದೆಯೇ ನಿಮಗೆ ತಿಳಿಸಿದ್ದೆನು. ಫಕ್ಕನೇ ಅವು ನೆರವೇರುವಂತೆ ಮಾಡಿದೆನು.


ಆತನೇ, ನನಗೆ ಬಲವನ್ನು ಕೊಡುವನು; ಶುದ್ಧ ಜೀವನವನ್ನು ನಡೆಸಲು ನನಗೆ ಸಹಾಯಮಾಡುವನು.


ಎಲ್ಲಾ ಜನಾಂಗದವರೂ ಎಲ್ಲಾ ಜನರೂ ಒಟ್ಟುಗೂಡಬೇಕು. ಅವರ ಸುಳ್ಳುದೇವರಲ್ಲಿ ಒಬ್ಬನು ಆದಿಯಲ್ಲಿ ಸಂಭವಿಸಿದ್ದನ್ನು ಹೇಳುವದಾಗಿದ್ದರೆ ತನ್ನ ಸಾಕ್ಷಿಗಳನ್ನು ಕರೆದು ತರಲಿ. ಆ ಸಾಕ್ಷಿಗಳು ಸತ್ಯವನ್ನಾಡಲಿ. ಆಗ ಅವರು ಸತ್ಯವಂತರೋ ಇಲ್ಲವೋ ಎಂದು ಗೊತ್ತಾಗುವದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು