Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:2 - ಪರಿಶುದ್ದ ಬೈಬಲ್‌

2 ಸೈರಸನೇ, ನಿನ್ನ ಸೈನ್ಯವು ಮುನ್ನುಗ್ಗುವದು. ನಾನು ನಿನ್ನ ಮುಂದೆ ಹೋಗಿ ಪರ್ವತಗಳನ್ನು ನೆಲಸಮ ಮಾಡುವೆನು. ಹಿತ್ತಾಳೆಯ ನಗರ ದ್ವಾರಗಳನ್ನು ಪುಡಿಪುಡಿ ಮಾಡುವೆನು. ದ್ವಾರಗಳ ಕಬ್ಬಿಣದ ಅಗುಳಿಗಳನ್ನು ತುಂಡು ಮಾಡಿ ಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನಾನು ನಿನ್ನ ಮುಂದೆ ಹೋಗಿ, ದಿಣ್ಣೆಗಳನ್ನು ಸಮಮಾಡುವೆನು. ತಾಮ್ರದ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಿನ್ನ ಮುಂದೆ ಸಾಗುವೆನು ನಾನು ಸಮಮಾಡುವೆನು ಬೆಟ್ಟಗುಡ್ಡಗಳನು ಒಡೆದುಹಾಕುವೆನು ಕಂಚಿನ ಕದಗಳನು ಮುರಿದುಬಿಡುವೆನು ಕಬ್ಬಿಣದ ಅಗುಳಿಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ನಿನ್ನ ಮುಂದೆ ಹೋಗಿ ದಿಣ್ಣೆಗಳನ್ನು ಸಮಮಾಡುವೆನು, ತಾಮ್ರದ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ನಿನ್ನ ಮುಂದೆ ಹೋಗಿ ಬೆಟ್ಟಗುಡ್ಡಗಳನ್ನು ಸಮಮಾಡಿ, ಕಂಚಿನ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:2
17 ತಿಳಿವುಗಳ ಹೋಲಿಕೆ  

ತಗ್ಗುಗಳನ್ನು ಸಮತಟ್ಟು ಮಾಡಿರಿ. ಎಲ್ಲಾ ಬೆಟ್ಟಗುಡ್ಡಗಳನ್ನು ನೆಲಸಮ ಮಾಡಿರಿ. ಕೊರಕಲು ರಸ್ತೆಗಳನ್ನು ನೆಟ್ಟಗೆ ಮಾಡಿರಿ. ಏರುತಗ್ಗು ನೆಲವನ್ನು ಸಮಗೊಳಿಸಿರಿ.


ಪ್ರತಿಯೊಂದು ಕಣಿವೆಯು ಮುಚ್ಚಲ್ಪಡುವವು. ಪ್ರತಿಯೊಂದು ಬೆಟ್ಟಗುಡ್ಡಗಳು ಸಮನಾಗಿ ಮಾಡಲ್ಪಡುವವು. ಡೊಂಕಾದ ದಾರಿಗಳು ನೀಟಾಗುವವು. ಕೊರಕಲಾದ ದಾರಿಗಳು ಸಮವಾಗುವವು.


ಅವರು ಹಿಂದೆಂದೂ ತಿಳಿಯದ ರೀತಿಯಲ್ಲಿ ನಾನು ಕುರುಡರನ್ನು ನಡೆಸುವೆನು. ಕುರುಡರು ಹೋಗಿರದ ಸ್ಥಳಕ್ಕೆ ನಾನು ಅವರನ್ನು ನಡಿಸುವೆನು. ನಾನು ಅವರಿಗಾಗಿ ಕತ್ತಲೆಯನ್ನು ಬೆಳಕಾಗಿ ಮಾರ್ಪಡಿಸುವೆನು. ನಾನು ಕೊರಕಲು ನೆಲವನ್ನು ಸಮತಟ್ಟಾಗಿ ಮಾಡುವೆನು. ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು. ನನ್ನ ಜನರನ್ನು ನಾನು ಎಂದಿಗೂ ತೊರೆಯುವದಿಲ್ಲ.


ನಮ್ಮ ಶತ್ರುಗಳನ್ನು ಸೋಲಿಸಲು ದೇವರು ನಮಗೆ ಸಹಾಯಮಾಡುವನು. ಅವರ ತಾಮ್ರದ ಬಾಗಿಲುಗಳನ್ನು ಆತನು ಮುರಿದುಹಾಕಬಲ್ಲನು. ಅವರ ಬಾಗಿಲುಗಳ ಮೇಲಿರುವ ಕಬ್ಬಿಣದ ಸರಳುಗಳನ್ನು ಆತನು ನುಚ್ಚುನೂರು ಮಾಡಬಲ್ಲನು.


ಬಾಬಿಲೋನಿನ ಸೈನಿಕರು ಕಾದಾಡುವದನ್ನು ನಿಲ್ಲಿಸಿದ್ದಾರೆ. ಅವರು ತಮ್ಮ ಕೋಟೆಗಳಲ್ಲಿದ್ದಾರೆ. ಅವರ ಬಲ ನಷ್ಟವಾಗಿದೆ. ಅವರು ಭಯಪಟ್ಟ ಹೆಂಗಸಿನಂತಾಗಿದ್ದಾರೆ. ಬಾಬಿಲೋನಿನ ಮನೆಗಳು ಉರಿಯುತ್ತಿವೆ. ಅದರ ಬಾಗಿಲಿನ ಅಗುಳಿಗಳು ಮುರಿದುಹೋಗಿವೆ.


ಕೆಲವು ದಿನಗಳಾದ ಮೇಲೆ ವಿಶ್ವಾಸಿಗಳು ಸಭೆ ಸೇರಿದ್ದರು. (ಅಲ್ಲಿ ಸುಮಾರು ನೂರಿಪ್ಪತ್ತು ಮಂದಿ ಇದ್ದರು.) ಪೇತ್ರನು ಎದ್ದುನಿಂತುಕೊಂಡು ಹೀಗೆಂದನು:


ಮಹಾದ್ವಾರಗಳ ಬಳಿಯಲ್ಲಿರುವ ಜನರೇ, ಗೋಳಾಡಿರಿ! ಪಟ್ಟಣದೊಳಗಿರುವ ಜನರೇ, ಕೂಗಾಡಿರಿ! ಫಿಲಿಷ್ಟಿಯದಲ್ಲಿರುವವರೆಲ್ಲರೂ ಭಯಪಡುವರು. ನಿಮ್ಮ ಧೈರ್ಯವು ಮೇಣದಂತೆ ಕರಗಿಹೋಗುವದು. ಇಗೋ, ಉತ್ತರದಿಕ್ಕಿನಲ್ಲಿ ಧೂಳು ಏಳುತ್ತಿದೆ. ಅಶ್ಶೂರದ ಸೈನ್ಯವು ಬರುತ್ತಿದೆ. ಅವರೆಲ್ಲರೂ ಬಲಶಾಲಿಗಳಾದ ವೀರರು.


ನಗರಕ್ಕೆ ನಾಶನವು ಕಾದಿದೆ; ಪುರದ್ವಾರವು ನಜ್ಜುಗುಜ್ಜಾಗಿದೆ.


ನಾನು ಸೈರಸನಿಗೆ ಸುಕಾರ್ಯಗಳನ್ನು ಮಾಡಲು ಶಕ್ತಿಯನ್ನು ಕೊಟ್ಟಿದ್ದೇನೆ. ಅವನ ಕೆಲಸಗಳನ್ನೆಲ್ಲಾ ಸುಲಭಗೊಳಿಸುತ್ತೇನೆ. ಸೈರಸನು ನನ್ನ ಪಟ್ಟಣವನ್ನು ಮತ್ತೆ ಕಟ್ಟುವನು; ನನ್ನ ಜನರಿಗೆ ಸ್ವಾತಂತ್ರ್ಯವನ್ನು ಕೊಡುವನು. ನನ್ನ ಜನರನ್ನು ಸೈರಸನು ನನಗೆ ಮಾರಿಬಿಡುವದಿಲ್ಲ. ಈ ಕಾರ್ಯಗಳನ್ನೆಲ್ಲ ಮಾಡುವದಕ್ಕೆ ನಾನು ಅವನಿಗೆ ಹಣ ಕೊಡುವ ಅವಶ್ಯವಿಲ್ಲ. ಜನರು ಸ್ವತಂತ್ರರಾಗುವರು. ಇದಕ್ಕಾಗಿ ನನಗೇನೂ ಖರ್ಚು ಇಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


“ನಾನು ಅವನನ್ನು ಕರೆಯುವುದಾಗಿ ಹೇಳಿದ್ದೇನೆ. ನಾನು ಅವನನ್ನು ಕರೆದುತರುವೆನು; ಅವನಿಗೆ ಜಯವನ್ನು ಅನುಗ್ರಹಿಸುವೆನು.


ಯೆಹೋವನು ಯೆರೆಮೀಯನಿಗೆ ಹೀಗೆಂದನು: “ಹೋಗಿ ಹನನ್ಯನಿಗೆ ಹೀಗೆ ಹೇಳು: ‘ಯೆಹೋವನು ಹೀಗೆನ್ನುತ್ತಾನೆ. ನೀನು ಮರದ ನೊಗವನ್ನು ಮುರಿದೆ, ಆದರೆ ನಾನು ಮರದ ನೊಗಕ್ಕೆ ಬದಲಾಗಿ ಕಬ್ಬಿಣದ ನೊಗವನ್ನು ಮಾಡುವೆನು.


ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಬಾಬಿಲೋನಿನ ಅಗಲವಾದ ಮತ್ತು ಸುಭದ್ರವಾದ ಗೋಡೆಯನ್ನು ಬೀಳಿಸಲಾಗುವುದು. ಅದರ ಎತ್ತರವಾದ ಬಾಗಿಲುಗಳನ್ನು ಸುಟ್ಟುಹಾಕಲಾಗುವುದು. ಬಾಬಿಲೋನಿನ ಜನರು ನಗರವನ್ನು ರಕ್ಷಿಸಲು ಬಹಳ ಕಷ್ಟಪಡುವರು. ಆದರೆ ಅದು ನಿಷ್ಪ್ರಯೋಜಕವಾಗುವುದು. ನಗರವನ್ನು ರಕ್ಷಿಸುವ ಪ್ರಯತ್ನದಲ್ಲಿ ಅವರು ತುಂಬಾ ಶ್ರಮವಹಿಸುವರು. ಆದರೆ ಅವರು ಕೇವಲ ಅಗ್ನಿಗೆ ಆಹುತಿಯಾಗುವರು.”


ಉಪರ್ಸಿನ್ ಎಂದರೆ: ನಿನ್ನ ರಾಜ್ಯವನ್ನು ನಿನ್ನಿಂದ ತೆಗೆದುಕೊಂಡು ವಿಭಜಿಸಲಾಗಿದೆ. ಅದನ್ನು ಮೇದ್ಯಯರಿಗೂ ಪಾರಸಿಯರಿಗೂ ಕೊಡಲಾಗುವುದು” ಎಂದು ವಿವರಿಸಿದನು.


ನಿನೆವೆಯೇ, ನಿನ್ನ ಜನರೆಲ್ಲಾ ಹೆಂಗಸರಂತೆ, ವೈರಿ ಸೈನಿಕರು ಅವರನ್ನು ಹಿಡಿದುಕೊಳ್ಳಲು ತಯಾರಾಗಿದ್ದಾರೆ. ನಿನ್ನ ದೇಶದ ದ್ವಾರಗಳು, ವೈರಿಗಳು ಪ್ರವೇಶಿಸುವಂತೆ ಅಗಲವಾಗಿ ತೆರೆಯಲ್ಪಟ್ಟಿವೆ. ದ್ವಾರದ ಬಾಗಿಲಿನ ಅಡ್ಡಪಟ್ಟಿಯು ಬೆಂಕಿಯಿಂದ ಸುಟ್ಟಿರುತ್ತದೆ.


“ಬೋಳುಗುಡ್ಡದ ಮೇಲೆ ಧ್ವಜವನ್ನೆತ್ತಿರಿ. ಜನರನ್ನು ಕರೆಯಿರಿ; ಕೈಸನ್ನೆ ಮಾಡಿರಿ; ದ್ವಾರಗಳ ಮೂಲಕ ಪ್ರವೇಶಿಸಲು ಪ್ರಮುಖರಿಗೆ ಹೇಳಿರಿ.


ಆ ಟಗರು ತನ್ನ ಕೊಂಬುಗಳಿಂದ ಎಲ್ಲ ಕಡೆಗೂ ಹಾಯುತ್ತಿತ್ತು. ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಜಿಗಿದಾಡುತ್ತಿತ್ತು. ಯಾವ ಪ್ರಾಣಿಗೂ ಆ ಟಗರನ್ನು ತಡೆಯಲಾಗಲಿಲ್ಲ. ಮಿಕ್ಕ ಪ್ರಾಣಿಗಳನ್ನು ರಕ್ಷಿಸುವುದು ಯಾರಿಂದಲೂ ಆಗಲಿಲ್ಲ. ಆ ಟಗರು ತನ್ನ ಮನಸ್ಸಿಗೆ ಬಂದಂತೆ ಮಾಡಲು ಸಾಧ್ಯವಾಯಿತು. ಆ ಟಗರು ಬಹಳ ಪ್ರಬಲವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು