Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:21 - ಪರಿಶುದ್ದ ಬೈಬಲ್‌

21 ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹೇಳಿ, ನ್ಯಾಯಸ್ಥಾನಕ್ಕೆ ಬಂದು ನಿಮ್ಮ ವಾದವನ್ನು ಮಂಡಿಸಿ; ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಪರ್ಯಾಲೋಚಿಸಿ ನೋಡಲಿ. ಪ್ರಾರಂಭದಿಂದಲೂ ಈ ವಿಷಯವನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮುಂಚೆಯೇ ತಿಳಿಸಿದವನು ನಾನಲ್ಲದೆ ಇನ್ಯಾರು? ನನ್ನ ಹೊರತು ಇನ್ನು ಯಾವ ದೇವರೂ ಇಲ್ಲ; ನಾನಲ್ಲದೆ ಸತ್ಯಸ್ವರೂಪನು, ಉದ್ಧಾರಕನು ಆದ ದೇವನಿಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವದಕ್ಕೆ ಮುಂಚೆ ಯಾರು ತಿಳಿಸಿದರು? ಯೆಹೋವನೆಂಬ ನಾನಲ್ಲವೆ. ನಾನು ಹೊರತು ಇನ್ನು ಯಾವ ದೇವರೂ ಇಲ್ಲ, ನನ್ನ ವಿನಹ ಸತ್ಯಸ್ವರೂಪನೂ ರಕ್ಷಕನೂ ಆದ ದೇವರು ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀವು ಏನು ಸಾರಬೇಕೋ ಅದನ್ನು ಈಗ ತನ್ನಿರಿ ಹೌದು, ಒಟ್ಟಿಗೆ ಅವರು ಆಲೋಚಿಸಲಿ ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಪ್ರಾರಂಭದಿಂದ ಇದನ್ನು ತಿಳಿಸಿದವರು ಯಾರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲ. ನನ್ನ ಹೊರತಾಗಿ ನೀತಿಯುಳ್ಳ ದೇವರೂ, ರಕ್ಷಕನೂ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:21
33 ತಿಳಿವುಗಳ ಹೋಲಿಕೆ  

ಯೆಹೋವನೆಂಬ ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನೀನು ಬಟ್ಟೆಗಳನ್ನು ಧರಿಸಿಕೊಳ್ಳುವಂತೆ ಮಾಡಿದವನು ನಾನೇ. ಆದರೂ ನೀನು ನನ್ನನ್ನು ತಿಳಿದಿಲ್ಲ.


ನಾನೇ, ನಾನೇ ಯೆಹೋವನು! ನನ್ನ ಹೊರತು ಬೇರೆ ರಕ್ಷಕನಿಲ್ಲ!


ಎಲ್ಲಾ ಜನಾಂಗದವರೂ ಎಲ್ಲಾ ಜನರೂ ಒಟ್ಟುಗೂಡಬೇಕು. ಅವರ ಸುಳ್ಳುದೇವರಲ್ಲಿ ಒಬ್ಬನು ಆದಿಯಲ್ಲಿ ಸಂಭವಿಸಿದ್ದನ್ನು ಹೇಳುವದಾಗಿದ್ದರೆ ತನ್ನ ಸಾಕ್ಷಿಗಳನ್ನು ಕರೆದು ತರಲಿ. ಆ ಸಾಕ್ಷಿಗಳು ಸತ್ಯವನ್ನಾಡಲಿ. ಆಗ ಅವರು ಸತ್ಯವಂತರೋ ಇಲ್ಲವೋ ಎಂದು ಗೊತ್ತಾಗುವದು.”


ನಿನ್ನ ದೇವರಾದ ಯೆಹೋವನು ನಿನ್ನೊಂದಿಗಿದ್ದಾನೆ. ಆತನು ರಣಶೂರನು. ನಿನ್ನನ್ನು ರಕ್ಷಿಸಿ ನಿನ್ನ ಮೇಲಿನ ತನ್ನ ಪ್ರೀತಿಯನ್ನು ತೋರ್ಪಡಿಸುವನು. ನಿನ್ನೊಂದಿಗೆ ಎಷ್ಟು ಸಂತೋಷದಲ್ಲಿರುವನೆಂದು ತೋರಿಸುವನು. ನಿನ್ನೊಂದಿಗೆ ನಗಾಡುತ್ತಾ ಹರ್ಷಿಸುವನು.


“ನೀವೆಲ್ಲರೂ ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿರಿ. ಸುಳ್ಳುದೇವರುಗಳಲ್ಲಿ ಯಾರಾದರೂ ಈ ವಿಷಯಗಳು ಸಂಭವಿಸುತ್ತವೆಯೆಂದು ಹೇಳಿರುವರೇ? ಇಲ್ಲ!” ಯೆಹೋವನು ಆರಿಸಿದ ಮನುಷ್ಯನು ಬಾಬಿಲೋನಿಗೂ ಕಸ್ದೀಯರಿಗೂ ತನ್ನ ಇಷ್ಟಬಂದ ಹಾಗೆ ಮಾಡುವನು.


ಇಸ್ರೇಲರು ಧರ್ಮದಲ್ಲಿ ನಡೆಯುವಂತೆ ಯೆಹೋವನು ಮಾಡುವನು. ಜನರು ಯೆಹೋವನ ಬಗ್ಗೆ ಬಹಳವಾಗಿ ಹೆಚ್ಚಳಪಡುವರು.


ಯೆಹೋವನು ದೇವರಾಗಿದ್ದಾನೆ. ಆತನು ಭೂಮ್ಯಾಕಾಶಗಳನ್ನು ಉಂಟುಮಾಡಿದ್ದಾನೆ. ಆತನು ಭೂಮಿಯನ್ನು ಅದರ ಸ್ಥಾನದಲ್ಲಿ ಇಟ್ಟಿದ್ದಾನೆ. ಆತನು ಈ ಲೋಕವನ್ನು ಸೃಷ್ಟಿಸಿದ್ದು ಅದು ಶೂನ್ಯವಾಗಿರಲೆಂದಲ್ಲ. ಅದು ಜನಭರಿತವಾಗಿರಲೆಂದೇ ಸೃಷ್ಟಿಸಿದನು. “ನಾನೇ ಯೆಹೋವನು, ನನ್ನ ಹೊರತು ಬೇರೆ ದೇವರುಗಳಿಲ್ಲ.


ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.


ಯಾಕೆಂದರೆ ಯೆಹೋವನಾದ ನಾನೇ ನಿನ್ನ ದೇವರು. ಇಸ್ರೇಲಿನ ಪರಿಶುದ್ಧನಾದ ನಾನೇ ನಿನ್ನ ರಕ್ಷಕನು. ಈಜಿಪ್ಟನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ; ನಿನ್ನನ್ನು ನನ್ನವನನ್ನಾಗಿ ಮಾಡಿಕೊಳ್ಳಲು ನಿನಗೆ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟೆನು.


ಎದೋಮಿನಿಂದ ಬರುತ್ತಿರುವ ಇವನು ಯಾರು? ಅವನು ಬೊಜ್ರದಿಂದ ಬರುತ್ತಿದ್ದಾನೆ. ಆತನ ಬಟ್ಟೆಯು ಕಡುಕೆಂಪು ಬಣ್ಣದಿಂದ ತುಂಬಿದೆ. ತನ್ನ ಬಟ್ಟೆಯಲ್ಲಿ ಆತನು ಮಹಿಮಾಸ್ವರೂಪನಾಗಿ ಕಾಣುತ್ತಿದ್ದಾನೆ. ಆತನು ತನ್ನ ಬಲಸಾಮರ್ಥ್ಯಗಳಿಂದಾಗಿ ನೇರವಾಗಿ ನಡೆಯುತ್ತಿದ್ದಾನೆ. ಆತನು, “ನಾನು ಸತ್ಯವನ್ನೇ ಹೇಳುತ್ತೇನೆ, ನಿನ್ನನ್ನು ರಕ್ಷಿಸಲು ನನಗೆ ಸಾಮರ್ಥ್ಯ ಉಂಟು” ಎಂದು ಹೇಳುವನು.


“ಸಂಭವಿಸಲಿಕ್ಕಿರುವ ಸಂಗತಿಗಳ ಬಗ್ಗೆ ಬಹುಕಾಲದ ಹಿಂದೆಯೇ ನಿಮಗೆ ತಿಳಿಸಿದ್ದೆನು. ಫಕ್ಕನೇ ಅವು ನೆರವೇರುವಂತೆ ಮಾಡಿದೆನು.


“ಇವುಗಳು ಸಂಭವಿಸುವ ಮೊದಲೇ ಇವುಗಳನ್ನು ತಿಳಿಸಿದಾತನನ್ನೇ ದೇವರೆಂದು ಕರೆಯಬೇಕು. ನಿಮ್ಮ ವಿಗ್ರಹಗಳಲ್ಲಿ ಯಾವದಾದರೂ ನಮಗೆ ಇದನ್ನು ತಿಳಿಸಿತೋ? ಯಾವ ವಿಗ್ರಹವೂ ನಮಗೆ ಇವುಗಳ ವಿಷಯದಲ್ಲಿ ತಿಳಿಸಲಿಲ್ಲ. ಆ ವಿಗ್ರಹಗಳು ಒಂದು ಮಾತನ್ನಾದರೂ ಹೇಳಲಿಲ್ಲ; ಮತ್ತು ನೀವು ಹೇಳಿದ್ದನ್ನು ಆ ಸುಳ್ಳುದೇವರುಗಳು ಕೇಳಿಸಿಕೊಳ್ಳುವದೂ ಇಲ್ಲ.


ಯೆಹೋವನೇ ರಾಜನೆಂದು ಜನಾಂಗಗಳಿಗೆ ಪ್ರಕಟಿಸಿರಿ. ಭೂಮಿಯು ಸ್ಥಿರವಾಗಿರುವುದು. ಯೆಹೋವನೇ ನೀತಿಯಿಂದ ಅದನ್ನು ಆಳುವನು.


ನಾನು ನಿನಗೆ ಸ್ತುತಿಗೀತೆಗಳನ್ನು ಹಾಡುವೆನು. ನಿನ್ನ ಅದ್ಭುತಕಾರ್ಯಗಳ ಕುರಿತು ಹಾಡುವೆನು.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


“ಎಲ್ಲಾ ಜನಾಂಗಗಳಲ್ಲಿ ಪ್ರಚಾರಪಡಿಸಿರಿ, ಒಂದು ಧ್ವಜವನ್ನು ಹಾರಿಸಿ ಈ ಸಂದೇಶವನ್ನೆಲ್ಲಾ ಸಾರಿರಿ. ‘ಬಾಬಿಲೋನ್ ಜನಾಂಗವನ್ನು ವಶಪಡಿಸಿಕೊಳ್ಳಲಾಗುವುದು. ಬೇಲ್ ದೇವತೆ ನಾಚಿಕೆಪಡುವುದು. ಮೆರೋದಾಕ್ ದೇವತೆಯು ಭಯಪಡುವುದು. ಬಾಬಿಲೋನಿನ ವಿಗ್ರಹಗಳು ನಾಚಿಕೆಪಡುವವು. ಅಲ್ಲಿಯ ದೇವತೆಗಳು ಹೆದರಿಕೊಳ್ಳುವವು.’


ಆದರೆ ದೇವರು ಇನ್ನೂ ಆ ನಗರದಲ್ಲಿದ್ದಾನೆ. ಅವರಿಗೆ ಇನ್ನೂ ಒಳ್ಳೆಯದನ್ನೇ ಮಾಡುತ್ತಿದ್ದಾನೆ. ಆತನು ತಪ್ಪು ಕಾರ್ಯಗಳನ್ನು ಮಾಡುವವನಲ್ಲ. ತನ್ನ ಜನರಿಗೆ ಸಹಾಯ ಮಾಡುತ್ತಿರುತ್ತಾನೆ. ಪ್ರತಿ ದಿನವೂ ಸರಿಯಾದ ತೀರ್ಮಾನ ಮಾಡಲು ತನ್ನ ಜನರಿಗೆ ಸಹಾಯ ಮಾಡುತ್ತಾನೆ. ಆದರೆ ಆ ದುಷ್ಟಜನರು ತಮ್ಮ ದುಷ್ಟತನಕ್ಕಾಗಿ ನಾಚಿಕೆಪಡುತ್ತಿಲ್ಲ.


‘ಆದಿಯಿಂದಲೂ ಈ ಕಾರ್ಯಗಳನ್ನು ತಿಳಿಯಪಡಿಸಲಾಗಿದೆ.’


ಆಗ ಅವರು ನೀನೊಬ್ಬನೇ ದೇವರೆಂದೂ ನಿನ್ನ ಹೆಸರು ಯೆಹೋವನೆಂದೂ ತಿಳಿದುಕೊಳ್ಳುವರು. ಭೂಲೋಕಕ್ಕೆಲ್ಲಾ ಮಹೋನ್ನತನಾದ ದೇವರೊಬ್ಬನೇ ದೇವರೆಂದು ಅವರು ಅರಿತುಕೊಳ್ಳುವರು.


ಇದು ಸರ್ವಶಕ್ತನಾದ ಯೆಹೋವನು ಅದ್ಭುತವನ್ನು ನಡಿಸುತ್ತಾನೆಂಬುದಕ್ಕೆ ಗುರುತಾಗಿದೆ. ಜನರು ಯಾವಾಗಲಾದರೂ ಸರಿಯೇ ಸಹಾಯಕ್ಕಾಗಿ ಮೊರೆಯಿಟ್ಟರೆ ಆತನು ಸಹಾಯವನ್ನು ಕಳುಹಿಸುವನು. ಯೆಹೋವನು ಅವರನ್ನು ರಕ್ಷಿಸಲೂ ಕಾಪಾಡಲೂ ಒಬ್ಬನನ್ನು ಕಳುಹಿಸುವನು. ಆ ಮನುಷ್ಯನು ಬೇರೆಯವರಿಂದ ಶೋಷಿತರಾದವರನ್ನು ಸಂರಕ್ಷಿಸುವನು.


ಜನಾಂಗಗಳು ನಿನಗೆ ಬೇಕಾದದ್ದೆಲ್ಲವನ್ನು ಕೊಡುವರು. ಒಂದು ಮಗು ಹೇಗೆ ತಾಯಿಯ ಹಾಲನ್ನು ಕುಡಿಯುವದೋ ಅದೇ ರೀತಿಯಲ್ಲಿ ಅರಸರುಗಳಿಂದ ನೀನು ಧನವನ್ನು ಕುಡಿಯುವಿ. ಆಗ ಯೆಹೋವನಾದ ನಾನೇ ನಿನ್ನನ್ನು ರಕ್ಷಿಸಿದೆನೆಂದು ತಿಳಿದುಕೊಳ್ಳುವಿ. ಆಗ ಯಾಕೋಬ್ಯರ ಮಹಾದೇವರು ನಿಮ್ಮನ್ನು ಕಾಪಾಡುವನೆಂದು ತಿಳಿದುಕೊಳ್ಳುವಿರಿ.


“ನೀವು ಈಜಿಪ್ಟಿನಲ್ಲಿದ್ದ ದಿವಸಗಳಿಂದ ನಾನೇ ನಿಮ್ಮ ಯೆಹೋವನಾಗಿದ್ದೇನೆ. ನನ್ನ ಹೊರತು ಬೇರೆ ಯಾವ ದೇವರನ್ನೂ ನೀವು ತಿಳಿದಿರಲಿಲ್ಲ. ನನ್ನ ಹೊರತು ಬೇರೆ ಯಾವ ರಕ್ಷಕನೂ ಇಲ್ಲ.


ಆ ಸಮಯದಲ್ಲಿ ಯೆಹೋವನು ಇಡೀ ಭೂಲೋಕದ ಅರಸನಾಗುವನು. ಆತನು ಒಬ್ಬನೇ. ಆತನ ಹೆಸರು ಒಂದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು