Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:5 - ಪರಿಶುದ್ದ ಬೈಬಲ್‌

5 ಯೆಹೋವನೆಂಬ ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನೀನು ಬಟ್ಟೆಗಳನ್ನು ಧರಿಸಿಕೊಳ್ಳುವಂತೆ ಮಾಡಿದವನು ನಾನೇ. ಆದರೂ ನೀನು ನನ್ನನ್ನು ತಿಳಿದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನೇ ಯೆಹೋವನು, ಇನ್ನು ಯಾರೂ ಇಲ್ಲ, ನನ್ನ ಹೊರತು ಯಾವ ದೇವರೂ ಇಲ್ಲ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರ ನಾನಲ್ಲದೆ ಬೇರಾರು ಅಲ್ಲ ನನ್ನ ಹೊರತು ಯಾವ ದೇವರು ಇಲ್ಲ. ನೀನು ನನ್ನನ್ನು ಅರಿಯದವನಾಗಿರುವೆ ಆದರೂ ನಿನ್ನನ್ನು ಶಸ್ತ್ರಧಾರಿಯಾಗಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನೇ ಯೆಹೋವ, ಇನ್ನು ಯಾವನೂ ಅಲ್ಲ, ನಾನು ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನೇ ಯೆಹೋವ ದೇವರು, ಮತ್ತೊಬ್ಬನಿಲ್ಲ. ನನ್ನ ಹೊರತು ಯಾವ ದೇವರೂ ಇಲ್ಲ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನ್ನನ್ನು ಬಲಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:5
28 ತಿಳಿವುಗಳ ಹೋಲಿಕೆ  

ಬಹಳ ಸಮಯದ ಹಿಂದೆ ನಡೆದ ಸಂಗತಿಗಳನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ನಾನು ದೇವರೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ನನ್ನ ಹೊರತು ಬೇರೆ ದೇವರುಗಳಿಲ್ಲ. ಆ ಸುಳ್ಳುದೇವರುಗಳು ನನ್ನ ಹಾಗೆ ಇಲ್ಲ.


“ನೀವು ಭಯಪಡಬೇಡಿ, ಚಿಂತಿಸಬೇಡಿ. ನಾನು ಭವಿಷ್ಯದ ಸಂಭವಗಳನ್ನು ಯಾವಾಗಲೂ ನಿಮಗೆ ತಿಳಿಸುತ್ತಾ ಬಂದಿದ್ದೇನೆ. ನೀವೇ ನನ್ನ ಸಾಕ್ಷಿಗಳು. ನನ್ನ ಹೊರತು ಬೇರೆ ದೇವರುಗಳಿಲ್ಲ. ನನ್ನ ಹೊರತು ಬೇರೆ ಯಾವ ‘ಬಂಡೆ’ಯೂ ಇಲ್ಲ. ನಾನೊಬ್ಬನೇ!”


ಯೆಹೋವನು ಇಸ್ರೇಲರ ಅರಸನಾಗಿದ್ದಾನೆ. ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ರಕ್ಷಿಸುತ್ತಾನೆ. ಆತನು ಹೇಳುವುದೇನೆಂದರೆ: “ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.


ಇಸ್ರೇಲರೊಂದಿಗೆ ನಾನು ಇದ್ದೇನೆ ಎಂದು ನೀವು ತಿಳಿಯುವಿರಿ. ನಿಮ್ಮ ದೇವರಾದ ಯೆಹೋವನು ನಾನೇ ಎಂದು ನೀವು ತಿಳಿಯುವಿರಿ. ನನ್ನ ಹೊರತು ಬೇರೆ ದೇವರುಗಳಿಲ್ಲ. ನನ್ನ ಜನರು ಇನ್ನು ಮುಂದೆ ನಾಚಿಕೆಗೆ ಗುರಿಯಾಗುವುದಿಲ್ಲ.”


ಆಗ ಯೆಹೋವನೇ ನಿಜವಾದ ದೇವರೆಂದು ಪ್ರಪಂಚದ ಜನರೆಲ್ಲರಿಗೂ ತಿಳಿಯುತ್ತದೆ.


“‘ನಾನೇ ದೇವರು, ನನ್ನ ಹೊರತು ಬೇರೆ ದೇವರಿಲ್ಲ. ಜನರಿಗೆ ಮರಣವನ್ನೂ ಜೀವವನ್ನೂ ಕೊಡುವವನು ನಾನೇ. ಅವರಿಗೆ ಗಾಯ ಮಾಡುವವನೂ ನಾನೇ, ಅದನ್ನು ಗುಣಮಾಡುವವನೂ ನಾನೇ. ನನ್ನ ಶಕ್ತಿಯ ಹಿಡಿತದಿಂದ ಇನ್ನೊಬ್ಬನನ್ನು ರಕ್ಷಿಸಲು ಯಾರಿಗೂ ಸಾಧ್ಯವಿಲ್ಲ.


ಯೆಹೋವನು ನಿಮಗೆ ಇವುಗಳನ್ನು ತೋರಿಸಿದ್ದಾನೆ, ಯಾಕೆಂದರೆ ಆತನೇ ದೇವರೆಂದೂ ಆತನಲ್ಲದೆ ಬೇರೆ ಯಾವ ದೇವರಿಲ್ಲವೆಂದೂ ನೀವು ತಿಳಿದುಕೊಳ್ಳಬೇಕೆಂಬುದು ಆತನ ಉದ್ದೇಶವಾಗಿತ್ತು.


ದೇವರು ಪ್ರಮುಖರಿಗೆ ಅವಮಾನ ಮಾಡುವನು; ಅಧಿಪತಿಗಳ ಶಕ್ತಿಯನ್ನು ತೆಗೆದುಹಾಕುವನು.


ದೇವರೇ, ಯುದ್ಧದಲ್ಲಿ ನೀನು ನನ್ನನ್ನು ಬಲಿಷ್ಠನನ್ನಾಗಿ ಮಾಡಿದೆ; ಎಲ್ಲಾ ಶತ್ರುಗಳು ನನ್ನ ಎದುರಿನಲ್ಲಿ ಬೀಳುವಂತೆ ಮಾಡಿದೆ.


“ಆದ್ದರಿಂದ ಈ ಹೊತ್ತು ನೀವೆಲ್ಲಾ ಯೆಹೋವನನ್ನು ದೇವರೆಂದು ಸ್ವೀಕರಿಸಬೇಕು. ಆತನು ಮೇಲಿರುವ ಆಕಾಶಕ್ಕೂ ಕೆಳಗಿರುವ ಭೂಮಿಗೂ ದೇವರಾಗಿದ್ದಾನೆ. ಆತನ ಹೊರತು ಬೇರೆ ದೇವರುಗಳಿಲ್ಲ.


ಆತನೇ, ನನಗೆ ಬಲವನ್ನು ಕೊಡುವನು; ಶುದ್ಧ ಜೀವನವನ್ನು ನಡೆಸಲು ನನಗೆ ಸಹಾಯಮಾಡುವನು.


ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ವಾಕ್ಯ ಎಂಬಾತನಿದ್ದನು. ಆ ವಾಕ್ಯ ಎಂಬಾತನು ದೇವರೊಂದಿಗೆ ಇದ್ದನು. ಆ ವಾಕ್ಯ ಎಂಬಾತನೇ ಸ್ವತಃ ದೇವರಾಗಿದ್ದನು.


“ಪರ್ಶಿಯಾದ ರಾಜನಾದ ಸೈರಸನ ಪ್ರಕಟನೆ: “ಪರಲೋಕದ ದೇವರಾದ ಯೆಹೋವನು ಭೂಲೋಕದಲ್ಲಿರುವ ಎಲ್ಲಾ ದೇಶಗಳನ್ನು ನನ್ನ ವಶಕ್ಕೆ ಕೊಟ್ಟಿದ್ದಾನೆ. ಯೆಹೂದ ದೇಶದ ಜೆರುಸಲೇಮ್‌ನಲ್ಲಿ ತನಗೊಂದು ಆಲಯವನ್ನು ಕಟ್ಟಲು ಆತನು ನನ್ನನ್ನು ಆರಿಸಿಕೊಂಡಿದ್ದಾನೆ.


ನಿನ್ನ ಬಟ್ಟೆಯನ್ನು ತೆಗೆದು ಆ ಸೇವಕನಿಗೆ ಕೊಡುವೆನು. ನಿನ್ನ ರಾಜದಂಡವನ್ನು ಅವನಿಗೆ ಕೊಡುವೆನು. ನಿನ್ನ ವಿಶೇಷ ಹುದ್ದೆಯನ್ನು ಅವನಿಗೆ ಕೊಡುವೆನು. ಆ ಸೇವಕನು ಯೆಹೂದದ ಜನರಿಗೂ ಜೆರುಸಲೇಮಿನ ಜನರಿಗೂ ತಂದೆಯಂತಿರುವನು.


ರಾಜರುಗಳು ಜನರಿಗೆ ಬೇಡಿಗಳನ್ನು ಹಾಕಿಸಿದರೆ ದೇವರು ಅವುಗಳನ್ನು ಕಿತ್ತೊಗೆದು ರಾಜರುಗಳ ಸೊಂಟಕ್ಕೆ ಚಿಂದಿಬಟ್ಟೆಯನ್ನು ಕಟ್ಟಿಸುವನು.


ಇಲ್ಲವಾದರೆ, ನಾನು ನಿನ್ನ ವಿರುದ್ಧವಾಗಿಯೂ ನಿನ್ನ ಅಧಿಕಾರಿಗಳ ವಿರುದ್ಧವಾಗಿಯೂ ನಿನ್ನ ಜನರ ವಿರುದ್ಧವಾಗಿಯೂ ನನ್ನ ಪೂರ್ಣಶಕ್ತಿಯಿಂದ ಉಪದ್ರವಗಳನ್ನು ಕಳುಹಿಸುವೆನು. ಆಗ ನನ್ನಂಥ ದೇವರು ಲೋಕದಲ್ಲಿ ಇಲ್ಲವೇ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


ಯೆಹೋವನಲ್ಲದೆ ಬೇರೆ ಯಾವ ದೇವರೂ ಇಲ್ಲ. ನಮ್ಮ ದೇವರಲ್ಲದೆ ಬೇರೆ ಯಾವ ಬಂಡೆಯೂ ಇಲ್ಲ.


ಯೆಹೋವನು ಹೇಳುವುದೇನೆಂದರೆ: “ನೀವು ನನ್ನ ಸಾಕ್ಷಿಗಳಾಗಿದ್ದೀರಿ. ನಾನು ಆರಿಸಿಕೊಂಡ ಸೇವಕನು ನೀನೇ. ಜನರು ನನ್ನನ್ನು ನಂಬುವಂತೆ ನಾನು ನಿಮ್ಮನ್ನು ಆರಿಸಿಕೊಂಡೆನು. ನಾನು ನಿಜ ದೇವರು ಎಂದು ನೀವು ತಿಳಿಯಬೇಕೆಂದು ನಿಮ್ಮನ್ನು ಆರಿಸಿಕೊಂಡೆನು. ನಾನೇ ನಿಜವಾದ ದೇವರು. ನನಗಿಂತ ಮೊದಲು ಯಾರೂ ಇರಲಿಲ್ಲ, ಇನ್ನು ಮುಂದೆಯೂ ನನ್ನ ಹೊರತು ಯಾವ ದೇವರೂ ಇರುವದಿಲ್ಲ.


ತಾನು ಆರಿಸಿರುವ ಅರಸನಾದ ಸೈರಸನಿಗೆ ಯೆಹೋವನು ಹೇಳುವುದೇನೆಂದರೆ: “ನಾನು ಸೈರಸನ ಬಲಗೈಯನ್ನು ಹಿಡಿಯುವೆನು. ಅರಸರುಗಳಿಂದ ಅವರ ಅಧಿಕಾರವನ್ನು ತೆಗೆದುಬಿಡುವಂತೆ ಅವನಿಗೆ ಸಹಾಯ ಮಾಡುವೆನು. ನಗರದ್ವಾರಗಳು ಅವನ ಮುನ್ನುಗ್ಗುವಿಕೆಯನ್ನು ನಿಲ್ಲಿಸದು. ನಗರದ್ವಾರವನ್ನು ತೆರೆದು ಸೈರಸನು ಒಳಗೆ ಪ್ರವೇಶಿಸುವಂತೆ ಮಾಡುವೆನು.”


ನಾನೊಬ್ಬನೇ ದೇವರೆಂದು ಎಲ್ಲರೂ ತಿಳಿದುಕೊಳ್ಳಲಿ ಎಂದು ನಾನು ಇದನ್ನೆಲ್ಲಾ ಮಾಡುತ್ತಿದ್ದೇನೆ. ಪೂರ್ವದಿಂದ ಪಶ್ಚಿಮದ ತನಕ ಜನರೆಲ್ಲರೂ ನಾನೇ ದೇವರೆಂದೂ ನನ್ನ ಹೊರತು ಬೇರೆ ದೇವರಿಲ್ಲವೆಂದೂ ತಿಳಿದುಕೊಳ್ಳುವರು.


ಆದ್ದರಿಂದ ‘ಕೋಮಲ ಸ್ತ್ರೀಯೇ,’ ನನ್ನ ಮಾತನ್ನು ಕೇಳು. ಸುರಕ್ಷಿತಳಾಗಿರುವೆ ಎಂದು ನೆನಸಿಕೊಂಡು ಹೀಗೆ ನಿನ್ನೊಳಗೆ, ‘ನಾನೇ ಮಹಾವ್ಯಕ್ತಿ. ನನ್ನಂಥ ಮಹಾವ್ಯಕ್ತಿ ಯಾರೂ ಇಲ್ಲ. ನಾನೆಂದಿಗೂ ವಿಧವೆಯಾಗುವದಿಲ್ಲ. ಯಾವಾಗಲೂ ನನಗೆ ಮಕ್ಕಳಿರುವರು’ ಎಂದುಕೊಳ್ಳುವೆ.


ಬಾಬಿಲೋನಿನ ರಾಜನ ಕೈಗಳನ್ನು ನಾನು ಬಲಪಡಿಸುವೆನು. ನನ್ನ ಖಡ್ಗವನ್ನು ನಾನು ಅವನ ಕೈಯಲ್ಲಿಡುವೆನು. ಆದರೆ ಫರೋಹನ ಕೈಗಳನ್ನು ನಾನು ಮುರಿಯುವೆನು. ಆಗ ನೋವಿನಿಂದ ಫರೋಹನು ಕಿರುಚುವನು. ಒಬ್ಬ ಸಾಯುವ ಮನುಷ್ಯನು ಕಿರುಚುವಂತೆ ಆ ಶಬ್ದವು ಇರುವುದು.


ಆತನು ನನ್ನ ಪಾದಗಳನ್ನು ಜಿಂಕೆಯಂತೆ ವೇಗಗೊಳಿಸುವನು. ಆತನು ನನ್ನನ್ನು ಸ್ಥಿರಗೊಳಿಸುವನು; ಎತ್ತರವಾದ ಸ್ಥಳಗಳಲ್ಲಿ ಬೀಳದಂತೆ ದೃಢಪಡಿಸುವನು.


ದೇವರೇ, ನೀನು ಮಹೋನ್ನತನಾಗಿರುವೆ! ನೀನು ಅದ್ಭುತಕಾರ್ಯಗಳನ್ನು ಮಾಡುವಾತನಾಗಿರುವೆ! ನೀನೇ, ಹೌದು, ನೀನೊಬ್ಬನೇ ದೇವರು!


ಆದರೆ ನೀನು ನಮ್ಮ ದೇವರಾದ ಯೆಹೋವನು. ಆದ್ದರಿಂದ ದಯಮಾಡಿ ನಮ್ಮನ್ನು ಅಶ್ಶೂರದ ಅರಸನ ಕೈಯಿಂದ ರಕ್ಷಿಸು. ಆಗ ಭೂಮಿಯ ಎಲ್ಲಾ ರಾಜ್ಯಗಳೂ ಯೆಹೋವನಾದ ನೀನೇ ದೇವರೆಂದು ತಿಳಿದುಕೊಳ್ಳುವವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು