Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 46:10 - ಪರಿಶುದ್ದ ಬೈಬಲ್‌

10 “ನಾನು ಅಂತ್ಯದಲ್ಲಿ ನಡೆಯಲಿರುವ ವಿಷಯಗಳನ್ನು ಪ್ರಾರಂಭದಲ್ಲಿಯೇ ತಿಳಿಸಿರುತ್ತೇನೆ. ಬಹುಕಾಲದ ಹಿಂದೆ ಇನ್ನೂ ಸಂಭವಿಸದ ಸಂಗತಿಗಳನ್ನು ತಿಳಿಸಿದ್ದೇನೆ. ನಾನು ಯೋಜಿಸುವ ಸಂಗತಿಗಳು ನೆರವೇರುವವು. ನಾನು ಮಾಡಲು ಬಯಸುವ ಕಾರ್ಯಗಳನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆರಂಭದಲ್ಲಿಯೇ ಅಂತ್ಯವನು ತಿಳಿಸಿದವನು ನಾನು ಭೂತಕಾಲದಲ್ಲಿಯೆ ಭವಿಷ್ಯವನು ಅರುಹಿದವನು ನಾನು. ಸ್ಥಿರವಿರುವುದು ನನ್ನ ಸಂಕಲ್ಪ, ನೆರವೇರುವುದು ನನ್ನ ಇಷ್ಟಾರ್ಥ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ; ನನ್ನ ಸಂಕಲ್ಪವು ನಿಲ್ಲುವದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆರಂಭದಲ್ಲಿಯೇ ಅಂತ್ಯವನ್ನೂ, ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ. ನನ್ನ ಆಲೋಚನೆಯು ನಿಲ್ಲುವುದೆಂದೂ, ನನಗೆ ಮೆಚ್ಚಿದ್ದನ್ನು ಮಾಡುವೆನೆಂದೂ ಅರುಹಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 46:10
38 ತಿಳಿವುಗಳ ಹೋಲಿಕೆ  

ಜನರು ಅನೇಕ ಆಲೋಚನೆಗಳನ್ನು ಮಾಡಿಕೊಂಡರೂ ಯೆಹೋವನ ಇಚ್ಛೆಯೇ ನೆರವೇರುವುದು.


ಆದರೆ ಯೆಹೋವನ ಯೋಜನೆಗಳು ಶಾಶ್ವತವಾಗಿವೆ. ಆತನ ಆಲೋಚನೆಗಳು ಸದಾಕಾಲಕ್ಕೂ ಒಳ್ಳೆಯದಾಗಿವೆ.


“ನಾನು ಯಾವಾಗಲೂ ದೇವರಾಗಿದ್ದೇನೆ. ನನ್ನ ಕಾರ್ಯವನ್ನು ತಡೆಯಲು ಯಾರಿಗೆ ಸಾಧ್ಯ? ನನ್ನ ಬಲವಾದ ಹಸ್ತದಿಂದ ಯಾರು ಬಿಡಿಸಬಲ್ಲರು?”


ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ!


ಯೆಹೋವನೇ ವಿರೋಧವಾಗಿದ್ದರೆ, ಜಯಪ್ರಧವಾಗಬಲ್ಲ ಯೋಜನೆಯನ್ನು ಮಾಡುವಂಥ ಜ್ಞಾನ ಯಾರಿಗೂ ಇಲ್ಲ.


ಯೆಹೋವನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ಸಮುದ್ರಗಳಲ್ಲಿಯೂ ಆಳವಾದ ಸಾಗರಗಳಲ್ಲಿಯೂ ತನ್ನ ಇಷ್ಟಾನುಸಾರವಾಗಿ ಮಾಡುವನು.


ಆದರೆ ಅದು ದೇವರಿಂದ ಬಂದದ್ದಾಗಿದ್ದರೆ, ನೀವು ಅವರನ್ನು ತಡೆಯಲು ಸಾಧ್ಯವಾಗುವುದಿಲ್ಲ. ನೀವು ದೇವರಿಗೇ ವಿರುದ್ಧವಾಗಿ ಹೋರಾಡಿದಂತಾದೀತು!” ಎಂದು ಹೇಳಿದನು. ಗಮಲಿಯೇಲನ ಸಲಹೆಗೆ ಯೆಹೂದ್ಯ ನಾಯಕರು ಒಪ್ಪಿಕೊಂಡರು.


ನನ್ನಂತಹ ಬೇರೆ ದೇವರುಗಳಿಲ್ಲ. ಬೇರೆ ದೇವರುಗಳು ಇದ್ದರೆ ಅವು ಈಗ ಮಾತನಾಡಲಿ. ಆ ದೇವರುಗಳು ಬಂದು ತಾವು ನನ್ನಂತಿರುವುದಾಗಿ ರುಜುವಾತು ಮಾಡಲಿ. ಎಂದೆಂದಿಗೂ ಇರುವ ಈ ಜನರನ್ನು ನಾನು ಸೃಷ್ಟಿಸಿದಂದಿನಿಂದ ಏನಾಯಿತೆಂಬುದನ್ನು ನನಗೆ ತಿಳಿಸಬೇಕು. ಆ ದೇವರು ಮುಂದೆ ಸಂಭವಿಸಲಿಕ್ಕಿರುವ ವಿಷಯಗಳನ್ನು ತಿಳಿಸಬೇಕು.


ಪೂರ್ವದಿಕ್ಕಿನಿಂದ ಒಬ್ಬನನ್ನು ಕರೆಯುತ್ತೇನೆ. ಅವನು ಗಿಡುಗನಂತಿರುವನು. ಅವನು ಬಹು ದೂರದೇಶದಿಂದ ಬಂದು ನನ್ನ ಬಯಕೆಯನ್ನು ಈಡೇರಿಸುವನು. ನಾನು ಹೇಳಿದ ಸಂಗತಿಗಳನ್ನು ಮಾಡಿಮುಗಿಸುವೆನು. ನಾನು ಅವನನ್ನು ಸೃಷ್ಟಿಸಿದೆನು. ನಾನೇ ಅವನನ್ನು ಕರೆದುಕೊಂಡು ಬರುವೆನು.


ಹಾಗೆಯೇ ದೇವರು ತನ್ನ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವ ಜನರಿಗೆ ತನ್ನ ಸಂಕಲ್ಪವು ಸ್ಥಿರವಾದದ್ದು ಎಂಬುದನ್ನು ಸ್ಪಷ್ಟಪಡಿಸಲು ಆಣೆಯಿಟ್ಟು ನಿಶ್ಚಯಪಡಿಸಿದನು.


ಭೂಮಿಯ ಜನರು ಬಹು ಮುಖ್ಯರಲ್ಲ. ದೇವರು ಪರಲೋಕ ಸಮೂಹದವರಿಗೂ ಭೂಲೋಕದ ನಿವಾಸಿಗಳಿಗೂ ತನ್ನ ಚಿತ್ತಾನುಸಾರ ಮಾಡುತ್ತಾನೆ. ಯಾರೂ ಆತನನ್ನು ತಡೆಯಲಾರರು! ಯಾರೂ ಆತನನ್ನು ಪ್ರಶ್ನಿಸಲಾರರು!


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.


‘ಆದಿಯಿಂದಲೂ ಈ ಕಾರ್ಯಗಳನ್ನು ತಿಳಿಯಪಡಿಸಲಾಗಿದೆ.’


ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು ಒಬ್ಬರಿಗೊಬ್ಬರು ವೈರಿಗಳಾಗಿರುವರು. ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು.


ಆತನಿಗೆ ವಿಧೇಯನಾಗದವನು ದೇವಜನರಿಂದ ಬೇರ್ಪಟ್ಟು ಮರಣ ಹೊಂದುವನು.’


ಸರ್ವಶಕ್ತನಾದ ಯೆಹೋವನು ಒಂದು ವಾಗ್ದಾನವನ್ನು ಮಾಡಿದ್ದಾನೆ. ಆತನು ಹೇಳುವುದೇನೆಂದರೆ: “ನಾನು ಯೋಚಿಸಿದಂತೆಯೇ ಇವೆಲ್ಲವೂ ನೆರವೇರುವುದು ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ.


ಯೆಹೋವನೇ, ನೀನೇ ನನ್ನ ದೇವರು. ನಿನ್ನನ್ನು ಗೌರವಿಸಿ ನಿನ್ನ ನಾಮವನ್ನು ಸ್ತುತಿಸುವೆನು. ನೀನು ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿರುವೆ. ಬಹಳ ಕಾಲದ ಹಿಂದೆ ನೀನು ಹೇಳಿರುವ ವಿಷಯಗಳು ಸತ್ಯವೇ ಸರಿ. ನೀನು ಮುಂತಿಳಿಸಿದಂತೆಯೇ ಎಲ್ಲವೂ ಸಂಭವಿಸಿದವು.


ಜನರೆಲ್ಲರೂ ಹುಲ್ಲಿನಂತಿದ್ದಾರೆ. ಹುಲ್ಲು ಸಾಯುತ್ತದೆ. ಪುಷ್ಪಗಳು ಉದುರುತ್ತವೆ. ಆದರೆ ನಮ್ಮ ದೇವರ ಮಾತುಗಳು ಶಾಶ್ವತವಾಗಿವೆ” ಎಂದು ಹೇಳಿತು.


ಇವೆಲ್ಲಾ ನೆರವೇರುವಂತೆ ಮಾಡಿದವರು ಯಾರು? ಆದಿಯಿಂದ ಎಲ್ಲಾ ಜನರನ್ನು ಕರೆದವರು ಯಾರು? ಯೆಹೋವನೆಂಬ ನಾನೇ ಇವೆಲ್ಲವನ್ನು ಮಾಡಿದೆನು. ನಾನೇ ಮೊದಲನೆಯವನಾಗಿದ್ದೇನೆ. ಅನಾದಿಕಾಲಕ್ಕಿಂತ ಮೊದಲು ನಾನಿದ್ದೆನು. ಎಲ್ಲವೂ ಅಂತ್ಯವಾಗುವ ತನಕ ನಾನು ಇರುತ್ತೇನೆ.


“ಸಂಭವಿಸಲಿಕ್ಕಿರುವ ಸಂಗತಿಗಳ ಬಗ್ಗೆ ಬಹುಕಾಲದ ಹಿಂದೆಯೇ ನಿಮಗೆ ತಿಳಿಸಿದ್ದೆನು. ಫಕ್ಕನೇ ಅವು ನೆರವೇರುವಂತೆ ಮಾಡಿದೆನು.


“ನೀವೆಲ್ಲರೂ ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿರಿ. ಸುಳ್ಳುದೇವರುಗಳಲ್ಲಿ ಯಾರಾದರೂ ಈ ವಿಷಯಗಳು ಸಂಭವಿಸುತ್ತವೆಯೆಂದು ಹೇಳಿರುವರೇ? ಇಲ್ಲ!” ಯೆಹೋವನು ಆರಿಸಿದ ಮನುಷ್ಯನು ಬಾಬಿಲೋನಿಗೂ ಕಸ್ದೀಯರಿಗೂ ತನ್ನ ಇಷ್ಟಬಂದ ಹಾಗೆ ಮಾಡುವನು.


ಆತನನ್ನು ಬಾಧೆಯಿಂದ ಜಜ್ಜಬೇಕೆಂಬುದು ಯೆಹೋವನ ನಿರ್ಧಾರವಾಗಿತ್ತು. ಆದ್ದರಿಂದ ಈ ಸೇವಕನು ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. ಆದರೆ ಆತನು ತನ್ನ ಹೊಸ ಜೀವಿತದಲ್ಲಿ ಚಿರಂಜೀವಿಯಾಗುವನು. ಆತನು ತನ್ನ ಜನರನ್ನು ದೃಷ್ಟಿಸಿ ನೋಡುವನು. ಯೆಹೋವನ ಸಂಕಲ್ಪದ ಮೇರೆಗೆ ಎಲ್ಲವನ್ನೂ ಆತನು ಮಾಡುವನು.


ಅದೇ ಪ್ರಕಾರ ನನ್ನ ಬಾಯಿಂದ ಹೊರಟ ಮಾತುಗಳು ಯೋಚಿಸಿದ ಕಾರ್ಯಗಳನ್ನು ಮಾಡದೆ ಹಿಂತಿರುಗುವುದಿಲ್ಲ. ನನ್ನ ಮಾತುಗಳು ನನ್ನ ಆಲೋಚನೆಗೆ ಸರಿಯಾಗಿ ಕಾರ್ಯ ಮಾಡುವವು. ನನ್ನ ಮಾತುಗಳು ತಮಗೆ ನೇಮಕವಾದ ಆ ಕಾರ್ಯಗಳನ್ನು ಮಾಡಿಮುಗಿಸುವವು.


ಕೆಲವು ಯೆಹೂದಿಯರು ಖಡ್ಗದಿಂದ ತಪ್ಪಿಸಿಕೊಳ್ಳುವರು. ಅವರು ಈಜಿಪ್ಟಿನಿಂದ ಯೆಹೂದಕ್ಕೆ ಹಿಂದಿರುಗಿ ಬರುವರು. ಆದರೆ ಹಾಗೆ ತಪ್ಪಿಸಿಕೊಳ್ಳುವ ಯೆಹೂದಿಯರು ಬಹು ಕಡಿಮೆ. ಆಗ ಈಜಿಪ್ಟಿಗೆ ವಲಸೆ ಬಂದ ಆ ಅಳಿದುಳಿದ ಯೆಹೂದಿಯರಿಗೆ ಯಾರ ಮಾತು ನಿಜವೆಂಬುದು ತಿಳಿದು ಬರುತ್ತದೆ. ನನ್ನ ಮಾತು ನಿಜವಾಯಿತೋ ಅಥವಾ ಅವರ ಮಾತು ನಿಜವಾಯಿತೋ ಎಂಬುದು ಅವರಿಗೆ ಗೊತ್ತಾಗುತ್ತದೆ.


ಶಿಕ್ಷೆಯು ವಿಧಿಸಲ್ಪಡುವಾಗ ಎಫ್ರಾಯೀಮ್ ಬರಿದಾಗುವದು. ಇದು ಖಂಡಿತವಾಗಿಯೂ ನೆರವೇರುವದೆಂದು ಯೆಹೋವನಾದ ನಾನು ಇಸ್ರೇಲ್ ಕುಟುಂಬಗಳಿಗೆ ತಿಳಿಸುತ್ತಿದ್ದೇನೆ.


“ದೇವರು ಎಂದಿಗೂ ಬದಲಾಗುವುದಿಲ್ಲ. ಯಾವನೂ ಆತನ ಮನಸ್ಸನ್ನು ಮಾರ್ಪಡಿಸಲಾರನು. ದೇವರು ತಾನು ಬಯಸಿದ್ದನ್ನೇ ಮಾಡುವನು.


ಜೆರುಸಲೇಮಿಗೂ ಚೀಯೋನ್ ಪರ್ವತಕ್ಕೂ ಮಾಡಬೇಕೆಂದಿರುವ ಕಾರ್ಯಗಳನ್ನು ನನ್ನ ಒಡೆಯನು ಮಾಡಿ ತೀರಿಸುವನು. ಆ ಬಳಿಕ ಯೆಹೋವನು ಅಶ್ಶೂರವನ್ನು ಶಿಕ್ಷಿಸುವನು. ಅಶ್ಶೂರದ ಅರಸನು ಬಹಳವಾಗಿ ಉಬ್ಬಿಕೊಂಡಿರುತ್ತಾನೆ. ಅವನ ಗರ್ವವು ಅನೇಕ ದುಷ್ಕೃತ್ಯಗಳನ್ನು ನಡೆಸಿದೆ. ಅದಕ್ಕಾಗಿ ದೇವರು ಅವನನ್ನು ಶಿಕ್ಷಿಸುವನು.


ಯಾಕೋಬ್ಯರ ಅರಸನಾದ ಯೆಹೋವನು ಹೇಳುವುದೇನೆಂದರೆ: “ಬನ್ನಿ ನಿಮ್ಮ ವಾದಗಳನ್ನು ಮಂಡಿಸಿರಿ, ನಿಮ್ಮ ಆಧಾರಗಳನ್ನು ತೋರಿಸಿರಿ.


ಅದು ಸಂಭವಿಸುವ ಸಮಯವು ಹತ್ತಿರ ಬಂದಿತು.” ಇದು ಯೆಹೋವನ ನುಡಿ. “ಆ ದಿವಸದ ವಿಷಯವಾಗಿ ನಾನು ಮಾತನಾಡುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು