Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 46:11 - ಪರಿಶುದ್ದ ಬೈಬಲ್‌

11 ಪೂರ್ವದಿಕ್ಕಿನಿಂದ ಒಬ್ಬನನ್ನು ಕರೆಯುತ್ತೇನೆ. ಅವನು ಗಿಡುಗನಂತಿರುವನು. ಅವನು ಬಹು ದೂರದೇಶದಿಂದ ಬಂದು ನನ್ನ ಬಯಕೆಯನ್ನು ಈಡೇರಿಸುವನು. ನಾನು ಹೇಳಿದ ಸಂಗತಿಗಳನ್ನು ಮಾಡಿಮುಗಿಸುವೆನು. ನಾನು ಅವನನ್ನು ಸೃಷ್ಟಿಸಿದೆನು. ನಾನೇ ಅವನನ್ನು ಕರೆದುಕೊಂಡು ಬರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮೂಡಲಿಂದ ಒಂದು ಪಕ್ಷಿಯನ್ನು ಬರಮಾಡು, ದೂರದೇಶದಿಂದ ನನ್ನ ಸಂಕಲ್ಪವನ್ನು ನೆರವೇರಿಸುವ ಮನುಷ್ಯನು ಬರಲಿ ಎಂದು ಕರೆದಿದ್ದೇನೆ. ಎಂದು ನಾನೇ ನುಡಿದಿದ್ದೇನೆ, ನಾನು ಅದನ್ನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಸಾಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮೂಡಲಿಂದ ಬೇಟೆಗಾಗಿ ರಣಹದ್ದನು ಕರೆದಂತೆ ಕರೆದಿಹೆನು ದೂರದೇಶದಿಂದ ನನ್ನ ಸಂಕಲ್ಪ ಈಡೇರಿಸಲೆಂದೇ. ನುಡಿದಿರುವೆನು ನಾನು; ಈಡೇರಿಸುವೆನು ಅದನ್ನು ಯೋಜಿಸಿರುವೆನು ನಾನು; ಸಾಧಿಸುವೆನು ಅದನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮೂಡಲಿಂದ ಹದ್ದು ಎರಗಲಿ ಎಂದು, ಅಂದರೆ ನನ್ನ ಸಂಕಲ್ಪವನ್ನು ನೆರವೇರಿಸತಕ್ಕವನು ದೂರದೇಶದಿಂದ ಬರಲಿ ಎಂದು ಕೂಗಿದ್ದೇನೆ; ನಾನು ನುಡಿದಿದ್ದೇನೆ, ಈಡೇರಿಸುವೆನು; ಆಲೋಚಿಸಿದ್ದೇನೆ, ಸಾಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಪೂರ್ವದಿಂದ ಒಂದು ಕ್ರೂರವಾದ ಪಕ್ಷಿಯೂ, ದೂರದೇಶದಿಂದ ನನ್ನ ಆಜ್ಞೆಯನ್ನು ನಡೆಸುವ ಮನುಷ್ಯನೂ ಬರಲಿ, ಎಂದು ಕರೆದಿದ್ದೇನೆ. ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 46:11
31 ತಿಳಿವುಗಳ ಹೋಲಿಕೆ  

ದೇವರು ಮನುಷ್ಯನಲ್ಲ; ಆತನು ಸುಳ್ಳಾಡುವುದಿಲ್ಲ. ದೇವರು ಮಾನವನಲ್ಲ; ಆತನ ಉದ್ದೇಶಗಳು ಬದಲಾಗುವುದಿಲ್ಲ. ಯೆಹೋವನು ತಾನು ಮಾಡುತ್ತೇನೆಂದು ಹೇಳಿದರೆ, ಅದನ್ನು ಮಾಡಿಯೇ ಮಾಡುತ್ತಾನೆ. ಯೆಹೋವನು ವಾಗ್ದಾನ ಮಾಡಿದರೆ, ಅದನ್ನು ನೆರವೇರಿಸುತ್ತಾನೆ.


“ದೇವರು ಎಂದಿಗೂ ಬದಲಾಗುವುದಿಲ್ಲ. ಯಾವನೂ ಆತನ ಮನಸ್ಸನ್ನು ಮಾರ್ಪಡಿಸಲಾರನು. ದೇವರು ತಾನು ಬಯಸಿದ್ದನ್ನೇ ಮಾಡುವನು.


ಈ ಪ್ರಶ್ನೆಗಳಿಗೆ ಉತ್ತರಿಸಿರಿ: ಪೂರ್ವದಿಕ್ಕಿನಿಂದ ಬರುವ ಮನುಷ್ಯನನ್ನು ಎಚ್ಚರಿಸಿದವರು ಯಾರು? ಅವನು ಒಳ್ಳೆಯತನವನ್ನು ತನ್ನೊಂದಿಗಿರಲು ಕೇಳುತ್ತಾನೆ. ತನ್ನ ಖಡ್ಗವನ್ನು ಉಪಯೋಗಿಸಿ ಜನಾಂಗಗಳನ್ನು ಸೋಲಿಸುವನು. ಅವರನ್ನು ಧೂಳಿನಂತೆ ಮಾಡುವನು. ತನ್ನ ಬಿಲ್ಲನ್ನು ಉಪಯೋಗಿಸಿ ರಾಜರನ್ನು ವಶಪಡಿಸಿಕೊಳ್ಳುತ್ತಾನೆ. ಅವರು ಗಾಳಿಯಲ್ಲಿ ತೂರಾಡುವ ಹುಲ್ಲಿನಂತೆ ಓಡಿಹೋಗುವರು.


ನಾವು ದೇವರ ಮಕ್ಕಳಾಗಿರಬೇಕೆಂದು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಳ್ಳಲಾಯಿತು. ನಾವು ತನ್ನ ಮಕ್ಕಳಾಗಿರಬೇಕೆಂದು ದೇವರು ತನ್ನ ಚಿತ್ತಾನುಸಾರವಾಗಿ ಮೊದಲೇ ಯೋಜನೆ ಮಾಡಿದ್ದನು. ತನ್ನ ನಿರ್ಧಾರ ಮತ್ತು ಇಷ್ಟಗಳಿಗನುಸಾರವಾಗಿ ಪ್ರತಿಯೊಂದನ್ನು ನೆರವೇರಿಸುವಾತನು ದೇವರೇ.


ಆದರೆ ಅದು ದೇವರಿಂದ ಬಂದದ್ದಾಗಿದ್ದರೆ, ನೀವು ಅವರನ್ನು ತಡೆಯಲು ಸಾಧ್ಯವಾಗುವುದಿಲ್ಲ. ನೀವು ದೇವರಿಗೇ ವಿರುದ್ಧವಾಗಿ ಹೋರಾಡಿದಂತಾದೀತು!” ಎಂದು ಹೇಳಿದನು. ಗಮಲಿಯೇಲನ ಸಲಹೆಗೆ ಯೆಹೂದ್ಯ ನಾಯಕರು ಒಪ್ಪಿಕೊಂಡರು.


ನಾನೇನು ಹೇಳಲಿ? ನನಗೆ ಸಂಭವಿಸಲಿರುವುದನ್ನು ನನ್ನ ಒಡೆಯನು ತಿಳಿಸಿದ್ದಾನೆ. ನನ್ನ ಒಡೆಯನು ಅದನ್ನು ನೆರವೇರಿಸುತ್ತಾನೆ. ನನ್ನ ಆತ್ಮದಲ್ಲಿ ಸಂಕಟಗಳೆಲ್ಲಾ ತುಂಬಿವೆ. ನಾನು ನನ್ನ ಜೀವಮಾನವೆಲ್ಲಾ ದೀನನಾಗುವೆನು.


“ಪರ್ಶಿಯಾದ ರಾಜನಾದ ಸೈರಸನ ಪ್ರಕಟನೆ: “ಪರಲೋಕದ ದೇವರಾದ ಯೆಹೋವನು ಭೂಲೋಕದಲ್ಲಿರುವ ಎಲ್ಲಾ ದೇಶಗಳನ್ನು ನನ್ನ ವಶಕ್ಕೆ ಕೊಟ್ಟಿದ್ದಾನೆ. ಯೆಹೂದ ದೇಶದ ಜೆರುಸಲೇಮ್‌ನಲ್ಲಿ ತನಗೊಂದು ಆಲಯವನ್ನು ಕಟ್ಟಲು ಆತನು ನನ್ನನ್ನು ಆರಿಸಿಕೊಂಡಿದ್ದಾನೆ.


ಅನಾದಿಕಾಲದಿಂದಲೂ ಇದೇ ದೇವರ ಯೋಜನೆಯಾಗಿತ್ತು. ದೇವರು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ತನ್ನ ಯೋಜನೆಗನುಸಾರವಾಗಿ ಮಾಡಿದನು.


ಯೆಹೋವನು ಬಾಬಿಲೋನಿನ ವಿರುದ್ಧ ಮಾಡಬೇಕೆಂದಿರುವುದನ್ನು ಕೇಳಿರಿ. “ಬಾಬಿಲೋನಿನ ಜನರ ವಿರುದ್ಧ ಯೆಹೋವನು ನಿಶ್ಚಯಿಸಿರುವುದನ್ನು ಕೇಳಿರಿ. ಶತ್ರುವು ಬಾಬಿಲೋನಿನ ಕುರಿಮರಿಗಳನ್ನು (ಜನರನ್ನು) ಕೊಂಡೊಯ್ಯುವನು. ಬಾಬಿಲೋನಿನ ಹುಲ್ಲುಗಾವಲುಗಳು ಸಂಭವಿಸಿದ ನಾಶನಕ್ಕೆ ಬೆದರುವವು.


“ಉತ್ತರದಿಕ್ಕಿನಲ್ಲಿರುವ ಒಬ್ಬ ಮನುಷ್ಯನನ್ನು ನಾನು ಎಚ್ಚರಪಡಿಸಿದೆನು. ಅವನು ಪೂರ್ವದಿಕ್ಕಿನಿಂದ ಬರುವನು. ನನ್ನ ನಾಮವನ್ನು ಅವನು ಆರಾಧಿಸುವನು. ಕುಂಬಾರನು ಜೇಡಿಮಣ್ಣನ್ನು ತುಳಿದು ಹದಗೊಳಿಸುವಂತೆ ಅವನು ಅರಸರುಗಳ ಮೇಲೆ ತುಳಿದಾಡುವನು.


ನಿನ್ನ ಒಡಂಬಡಿಕೆಯು ನನಗೆ ಉತ್ತಮ ಸ್ನೇಹಿತನಂತಿದೆ. ಅದು ನನಗೆ ಬುದ್ಧಿಮಾತನ್ನು ಹೇಳಿಕೊಡುವುದು.


ದೇವರೇ, ನೀನು ದುಷ್ಟರನ್ನು ದಂಡಿಸುವಾಗ ಜನರು ನಿನ್ನನ್ನು ಕೊಂಡಾಡುವರು; ನಿನ್ನ ಕೋಪವನ್ನು ತೋರಿಸುವಾಗ ಅಳಿದುಳಿದವರು ಬಲಿಷ್ಠರಾಗುವರು.


ಯೇಸುವಿನ ವಿರುದ್ಧ ಒಟ್ಟಾಗಿ ಬಂದ ಈ ಜನರು ನಿನ್ನ ಯೋಜನೆ ನೆರವೇರುವಂತೆ ಮಾಡಿದರು. ನಿನ್ನ ಶಕ್ತಿಯಿಂದಲೂ ನಿನ್ನ ಚಿತ್ತದಿಂದಲೂ ಇದು ನೆರವೇರಿತು.


ನೀನು ಇಸ್ರೇಲಿನ ಪರ್ವತದಲ್ಲಿ ಸಾಯುವೆ, ನೀನೂ, ನಿನ್ನ ಎಲ್ಲಾ ಸೈನ್ಯ, ನಿನ್ನೊಂದಿಗೆ ಬಂದಿದ್ದ ಇತರ ದೇಶದವರೆಲ್ಲಾ ರಣರಂಗದಲ್ಲಿ ಸಾಯುವರು. ನಿಮ್ಮ ಹೆಣಗಳನ್ನು ಆಕಾಶದ ಸಕಲ ಮಾಂಸಹಾರಿ ಪಕ್ಷಿಗಳಿಗೂ, ಕಾಡುಪ್ರಾಣಿಗಳಿಗೂ ಆಹಾರವಾಗಿ ಕೊಡುವೆನು.


“ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಲು ಬಿಲ್ಲುಗಾರರಿಗೆ ಹೇಳಿರಿ. ಆ ಜನರಿಗೆ ನಗರವನ್ನು ಮುತ್ತಲು ಹೇಳಿರಿ. ಯಾರೂ ತಪ್ಪಿಸಿಕೊಂಡು ಹೋಗದಂತೆ ನೋಡಿಕೊಳ್ಳಿ. ಅದು ಮಾಡಿದ ದುಷ್ಕೃತ್ಯಗಳಿಗಾಗಿ ಮುಯ್ಯಿತೀರಿಸಿರಿ. ಬೇರೆ ಜನಾಂಗಗಳಿಗೆ ಅದು ಮಾಡಿದಂತೆ ಅದಕ್ಕೆ ಮಾಡಿರಿ. ಬಾಬಿಲೋನ್ ಯೆಹೋವನನ್ನು ಗೌರವಿಸಲಿಲ್ಲ. ಪರಿಶುದ್ಧನಿಗೆ ಅವಮಾನ ಮಾಡಿದೆ. ಆದ್ದರಿಂದ ಬಾಬಿಲೋನನ್ನು ಶಿಕ್ಷಿಸಬೇಕು.


ನಾನು ಸೈರಸನಿಗೆ ಸುಕಾರ್ಯಗಳನ್ನು ಮಾಡಲು ಶಕ್ತಿಯನ್ನು ಕೊಟ್ಟಿದ್ದೇನೆ. ಅವನ ಕೆಲಸಗಳನ್ನೆಲ್ಲಾ ಸುಲಭಗೊಳಿಸುತ್ತೇನೆ. ಸೈರಸನು ನನ್ನ ಪಟ್ಟಣವನ್ನು ಮತ್ತೆ ಕಟ್ಟುವನು; ನನ್ನ ಜನರಿಗೆ ಸ್ವಾತಂತ್ರ್ಯವನ್ನು ಕೊಡುವನು. ನನ್ನ ಜನರನ್ನು ಸೈರಸನು ನನಗೆ ಮಾರಿಬಿಡುವದಿಲ್ಲ. ಈ ಕಾರ್ಯಗಳನ್ನೆಲ್ಲ ಮಾಡುವದಕ್ಕೆ ನಾನು ಅವನಿಗೆ ಹಣ ಕೊಡುವ ಅವಶ್ಯವಿಲ್ಲ. ಜನರು ಸ್ವತಂತ್ರರಾಗುವರು. ಇದಕ್ಕಾಗಿ ನನಗೇನೂ ಖರ್ಚು ಇಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಸೈರಸನಿಗೆ ಯೆಹೋವನು ಹೀಗೆನ್ನುತ್ತಾನೆ, “ನೀನೇ ನನ್ನ ಕುರುಬನು. ನಾನು ಬಯಸುವ ಕಾರ್ಯಗಳನ್ನು ನೀನು ಮಾಡುವೆ. ನೀನು ಜೆರುಸಲೇಮಿಗೆ, ‘ನೀನು ಕಟ್ಟಲ್ಪಡುವೆ’ ಎಂದೂ ದೇವಾಲಯಕ್ಕೆ ‘ನಿನ್ನ ಅಸ್ತಿವಾರವು ಮತ್ತೆ ಹಾಕಲ್ಪಡುವದು’ ಎಂದೂ ಹೇಳುವೆ.”


ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರಟಿಸ್ ಮಹಾನದಿಯ ಮೇಲೆ ಸುರಿಸಿದನು. ನದಿಯಲ್ಲಿದ್ದ ನೀರು ಬತ್ತಿಹೋಯಿತು. ಇದರಿಂದ ಪೂರ್ವದಲ್ಲಿದ್ದ ರಾಜರುಗಳು ಬರಲು ಮಾರ್ಗವು ಸಿದ್ಧವಾಯಿತು.


ಅವುಗಳನ್ನು ಅಡವಿಯ ಪ್ರಾಣಿಗಳಿಗೂ ಬೆಟ್ಟದಹಕ್ಕಿಗಳಿಗೂ ತಿನ್ನಲು ಬಿಡುವರು. ಪಕ್ಷಿಗಳು ಬೇಸಿಗೆಕಾಲದಲ್ಲಿ ದ್ರಾಕ್ಷಾಲತೆಗಳ ಮೇಲೆ ವಾಸಿಸುತ್ತವೆ; ಚಳಿಗಾಲದಲ್ಲಿ ಕಾಡುಪ್ರಾಣಿಗಳು ದ್ರಾಕ್ಷಾಲತೆಗಳನ್ನು ತಿನ್ನುತ್ತವೆ.”


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಹಲಗೆಗೆ ಬಲವಾಗಿ ಹೊಡೆಯಲ್ಪಟ್ಟ ಆ ಮೊಳೆಯು (ಶೆಬ್ನ) ಬಲಹೀನವಾಗಿ ತುಂಡಾಗುವದು. ಆ ಮೊಳೆಯು ನೆಲಕ್ಕೆ ಬಿದ್ದು ನಾಶವಾಗುವದು. ಆಗ ಆ ಮೊಳೆಗೆ ತೂಗುಹಾಕಿದ್ದೆಲ್ಲವೂ ಅದರೊಂದಿಗೆ ನೆಲಕ್ಕೆ ಬೀಳುವದು. ಆಗ ನಾನು ಈ ಸಂದೇಶದಲ್ಲಿ ಹೇಳಿದ್ದೆಲ್ಲವೂ ಸಂಭವಿಸುವದು. ಅವುಗಳು ನೆರವೇರುತ್ತವೆ ಯಾಕೆಂದರೆ ಅವುಗಳನ್ನು ಹೇಳಿದಾತನು ಯೆಹೋವನೇ.”


“ಆದರೆ ದೇವರು ಏನು ಹೇಳುತ್ತಾನೆಂದು ಕೇಳಿದೆಯಾ? ಬಹುಕಾಲದ ಹಿಂದೆ ನಾನು ಯೋಜನೆಯನ್ನು ಮಾಡಿದ್ದೆನು. ಪ್ರಾಚೀನ ಕಾಲದಿಂದ ಅದರ ವಿಷಯವಾಗಿ ಆಲೋಚನೆ ಮಾಡಿದ್ದೆನು. ಈಗ ಅದು ನೆರವೇರುವಂತೆ ಮಾಡಿದ್ದೇನೆ. ಬಲಿಷ್ಠವಾದ ನಗರಗಳನ್ನು ನಾಶಮಾಡಿ ಅವುಗಳನ್ನು ಕಲ್ಲಿನ ರಾಶಿಗಳನ್ನಾಗಿ ಮಾಡಲು ನಿನ್ನನ್ನು ಬಿಟ್ಟಿರುತ್ತೇನೆ.


ಕಾಡುಗಳಲ್ಲಿಯೂ ಹೊಲಗಳಲ್ಲಿಯೂ ಇರುವ ಪ್ರಾಣಿಗಳೇ, ಬಂದು ತಿನ್ನಿರಿ!


ಕೆಲವು ಯೆಹೂದಿಯರು ಖಡ್ಗದಿಂದ ತಪ್ಪಿಸಿಕೊಳ್ಳುವರು. ಅವರು ಈಜಿಪ್ಟಿನಿಂದ ಯೆಹೂದಕ್ಕೆ ಹಿಂದಿರುಗಿ ಬರುವರು. ಆದರೆ ಹಾಗೆ ತಪ್ಪಿಸಿಕೊಳ್ಳುವ ಯೆಹೂದಿಯರು ಬಹು ಕಡಿಮೆ. ಆಗ ಈಜಿಪ್ಟಿಗೆ ವಲಸೆ ಬಂದ ಆ ಅಳಿದುಳಿದ ಯೆಹೂದಿಯರಿಗೆ ಯಾರ ಮಾತು ನಿಜವೆಂಬುದು ತಿಳಿದು ಬರುತ್ತದೆ. ನನ್ನ ಮಾತು ನಿಜವಾಯಿತೋ ಅಥವಾ ಅವರ ಮಾತು ನಿಜವಾಯಿತೋ ಎಂಬುದು ಅವರಿಗೆ ಗೊತ್ತಾಗುತ್ತದೆ.


ಜೆರುಸಲೇಮಿಗೂ ಚೀಯೋನ್ ಪರ್ವತಕ್ಕೂ ಮಾಡಬೇಕೆಂದಿರುವ ಕಾರ್ಯಗಳನ್ನು ನನ್ನ ಒಡೆಯನು ಮಾಡಿ ತೀರಿಸುವನು. ಆ ಬಳಿಕ ಯೆಹೋವನು ಅಶ್ಶೂರವನ್ನು ಶಿಕ್ಷಿಸುವನು. ಅಶ್ಶೂರದ ಅರಸನು ಬಹಳವಾಗಿ ಉಬ್ಬಿಕೊಂಡಿರುತ್ತಾನೆ. ಅವನ ಗರ್ವವು ಅನೇಕ ದುಷ್ಕೃತ್ಯಗಳನ್ನು ನಡೆಸಿದೆ. ಅದಕ್ಕಾಗಿ ದೇವರು ಅವನನ್ನು ಶಿಕ್ಷಿಸುವನು.


ಯೆಹೋವನೇ, ನೀನೇ ನನ್ನ ದೇವರು. ನಿನ್ನನ್ನು ಗೌರವಿಸಿ ನಿನ್ನ ನಾಮವನ್ನು ಸ್ತುತಿಸುವೆನು. ನೀನು ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿರುವೆ. ಬಹಳ ಕಾಲದ ಹಿಂದೆ ನೀನು ಹೇಳಿರುವ ವಿಷಯಗಳು ಸತ್ಯವೇ ಸರಿ. ನೀನು ಮುಂತಿಳಿಸಿದಂತೆಯೇ ಎಲ್ಲವೂ ಸಂಭವಿಸಿದವು.


ಯೆಹೋವನು ಹೀಗೆನ್ನುತ್ತಾನೆ: “ಜೋರ್ಡನ್ ನದಿಯ ಸಮೀಪದ ದಟ್ಟವಾದ ಅರಣ್ಯದಿಂದ ಒಮ್ಮೆ ಒಂದು ಸಿಂಹವು ಬರುವುದು. ಆ ಸಿಂಹವು ಜನರ ಸಾಕುಪ್ರಾಣಿಗಳಿದ್ದ ಹೊಲಗಳಿಗೆ ನುಗ್ಗುವುದು. ಆ ಪ್ರಾಣಿಗಳೆಲ್ಲ ಓಡಿಹೋಗುವವು. ನಾನು ಆ ಸಿಂಹದಂತಾಗುವೆನು. ನಾನು ಬಾಬಿಲೋನನ್ನು ಅದರ ಪ್ರದೇಶದಿಂದ ಓಡಿಸಿಬಿಡುವೆನು. ಈ ಕಾರ್ಯ ಮಾಡಲು ನಾನು ಯಾರನ್ನು ಆರಿಸಲಿ? ನನ್ನತೆ ಯಾರೂ ಇಲ್ಲ. ನನ್ನನ್ನು ಪ್ರತಿಭಟಿಸುವವರು ಯಾರೂ ಇಲ್ಲ. ಆದ್ದರಿಂದ ನಾನೇ ಅದನ್ನು ಮಾಡುತ್ತೇನೆ. ನನ್ನನ್ನು ಓಡಿಸಲು ಯಾವ ಕುರುಬನೂ ಬರಲಾರನು. ನಾನು ಬಾಬಿಲೋನಿನ ಜನರನ್ನು ಓಡಿಸಿಬಿಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು