Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 46:12 - ಪರಿಶುದ್ದ ಬೈಬಲ್‌

12 “ನಿಮ್ಮಲ್ಲಿ ಕೆಲವರು ತಾವು ಬಲಿಷ್ಠರೆಂದು ತಿಳಿದುಕೊಂಡಿದ್ದಾರೆ; ಆದರೆ ನೀವು ಯಾವ ಒಳ್ಳೆಯ ಕಾರ್ಯಗಳನ್ನು ಮಾಡುವದಿಲ್ಲ. ನನ್ನ ಮಾತನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕಠಿಣ ಹೃದಯದವರೇ, ನೀತಿಗೆ ದೂರವಾದವರೇ, ನನ್ನ ಮಾತಿಗೆ ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಧರ್ಮಕ್ಕೆ ದೂರವಾದ ಹಟಮಾರಿಗಳೇ, ಕಿವಿಗೊಡಿರಿ ನೀವು ನನ್ನ ಮಾತಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಧರ್ಮಕ್ಕೆ ದೂರರಾದ ಹಟಗಾರರೇ, ನನ್ನ ಮಾತಿಗೆ ಕಿವಿಗೊಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕಠಿಣ ಹೃದಯವುಳ್ಳವರೇ, ನೀತಿಗೆ ದೂರವಾದವರೇ, ನನಗೆ ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 46:12
26 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ: “ನಾನು ನಿಮ್ಮ ಪೂರ್ವಿಕರಿಗೆ ಅನ್ಯಾಯ ಮಾಡಿದೆನೇ? ಅದಕ್ಕಾಗಿ ಅವರು ನನ್ನನ್ನು ತಿರಸ್ಕರಿಸಿದರೇ? ನಿಮ್ಮ ಪೂರ್ವಿಕರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಪೂಜಿಸಿ ತಾವು ಸಹ ನಿಷ್ಪ್ರಯೋಜಕರಾದರು.


“ಯಾಕೋಬನ ವಂಶದವರೇ, ನನ್ನ ಮಾತನ್ನು ಕೇಳಿರಿ. ಇಸ್ರೇಲರಲ್ಲಿ ಉಳಿದಿರುವವರೇ, ನನ್ನ ಮಾತುಗಳನ್ನು ಕೇಳಿರಿ. ನಾನು ನಿಮ್ಮನ್ನು ಹೊರುತ್ತಿದ್ದೇನೆ. ನೀವು ತಾಯಿಯ ಗರ್ಭದಲ್ಲಿರುವಾಗಲೇ ನಾನು ನಿಮ್ಮನ್ನು ಹೊರುತ್ತಿದ್ದೇನೆ.


ಜನರು ನನಗೆ ವಿರೋಧವಾಗಿ ಸಂಚುಗಳನ್ನು ಮಾಡುತ್ತಿದ್ದಾರೆ. ಅವರು ನಿನ್ನ ಉಪದೇಶಗಳನ್ನು ಅನುಸರಿಸುವುದಿಲ್ಲ.


ಹೌದು, ಒಂದು ಕಾಲದಲ್ಲಿ ನೀವು ದೇವರಿಗೆ ಬಹು ದೂರವಾಗಿದ್ದಿರಿ. ಆದರೆ ಈಗ ನೀವು ಕ್ರಿಸ್ತ ಯೇಸುವಿನ ರಕ್ತದ ಮೂಲಕ ದೇವರಿಗೆ ಸಮೀಪಸ್ಥರಾದಿರಿ.


ನೀವು ಹಠಮಾರಿಗಳಾಗಿದ್ದು ನಾನು ಹೇಳಿದ್ದನ್ನು ನಂಬದೆ ಹೋದದ್ದರಿಂದ ನಾನು ಹಾಗೆ ಮಾಡಿದೆನು. ನೀವು ಕಬ್ಬಿಣದಂತೆ ಬಗ್ಗದ ಹಠಮಾರಿಗಳಾಗಿದ್ದೀರಿ. ಹಿತ್ತಾಳೆಯಂತೆ ಗಟ್ಟಿಯಾಗಿದ್ದೀರಿ.


ನಾನು ಹೇಳುವ ಸಂದೇಶಕ್ಕೆ ಜಾಗ್ರತೆಯಿಂದ ಕಿವಿಗೊಡಿರಿ.


ದುಷ್ಟರು ನಿನ್ನ ಕಟ್ಟಳೆಗಳನ್ನು ಅನುಸರಿಸದ ಕಾರಣ ಅವರಿಗೆ ಜಯವಾಗುವುದಿಲ್ಲ.


ಆ ಸೈನಿಕರು ತಾವೇ ಶಕ್ತಿವಂತರೆಂದುಕೊಂಡಿದ್ದರು. ಆದರೆ ಈಗ ಅವರು ಬಯಲುಗಳಲ್ಲಿ ಸತ್ತುಬಿದ್ದಿದ್ದಾರೆ. ಅವರು ಧರಿಸಿಕೊಂಡಿದ್ದವುಗಳನ್ನೆಲ್ಲ ಸುಲಿಗೆ ಮಾಡಲಾಗಿದೆ. ಆ ಸೈನಿಕರಲ್ಲಿ ಯಾರೂ ತಮ್ಮನ್ನು ಸಂರಕ್ಷಿಸಿಕೊಳ್ಳಲಾಗಲಿಲ್ಲ.


ಸರ್ವಜನಾಂಗಗಳೇ, ಕೇಳಿರಿ, ಭೂನಿವಾಸಿಗಳೆಲ್ಲರೇ, ಆಲಿಸಿರಿ.


ಪ್ರತಿಯೊಂದನ್ನು ಸ್ಪಷ್ಟವಾಗಿ ತೋರಿಸುವಂಥದ್ದೇ ಬೆಳಕು. ಆದ್ದರಿಂದಲೇ ಹೀಗೆ ಬರೆದದೆ: “ನಿದ್ರೆಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”


ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!


ಯೆಹೋವನು ಹೇಳುವುದೇನೆಂದರೆ, “ಯಾಕೋಬನ ಮನೆತನದವರೇ, ನನ್ನ ಮಾತುಗಳನ್ನು ಕೇಳಿರಿ. ಜನರು ನಿಮ್ಮನ್ನು ಇಸ್ರೇಲ್ ಎಂದು ಕರೆಯುತ್ತಾರೆ. ನೀವು ಯೆಹೂದದ ಕುಟುಂಬದವರು. ನೀವು ಯೆಹೋವನ ಹೆಸರಿನಲ್ಲಿ ಒಡಂಬಡಿಕೆ ಮಾಡಿಕೊಳ್ಳುವಿರಿ. ನೀವು ಯೆಹೋವನ ನಾಮವನ್ನು ಸ್ತುತಿಸುವಿರಿ, ಆದರೆ ನೀವು ಇವುಗಳನ್ನು ಮಾಡುವಾಗ ನಂಬಿಗಸ್ತರಾಗಿರುವದಿಲ್ಲ; ಯಥಾರ್ಥರಾಗಿರುವುದಿಲ್ಲ.


“ಬೇರೆ ದೇಶಗಳಿಂದ ಪಾರಾಗಿ ಬಂದ ಜನರೇ, ಒಟ್ಟಾಗಿ ಸೇರಿಕೊಂಡು ನನ್ನ ಮುಂದೆ ಬನ್ನಿರಿ. (ಈ ಜನರು ಮರದ ವಿಗ್ರಹಗಳನ್ನು ಇಟ್ಟುಕೊಂಡಿದ್ದಾರೆ. ತಮ್ಮನ್ನು ರಕ್ಷಿಸಲಾರದ ವಿಗ್ರಹಕ್ಕೆ ಅವರು ಪ್ರಾರ್ಥಿಸುತ್ತಿದ್ದಾರೆ. ಅವರು ಮಾಡುವದು ಅವರಿಗೇ ತಿಳಿಯದು.


ಆಗ ಎಫ್ರಾಯೀಮಿನಲ್ಲಿರುವ (ಇಸ್ರೇಲಿನಲ್ಲಿರುವ) ಪ್ರತಿಯೊಬ್ಬನೂ, ಸಮಾರ್ಯದ ನಾಯಕರೂ, ದೇವರು ತಮ್ಮನ್ನು ಶಿಕ್ಷಿಸಿದ್ದಾನೆಂದು ತಿಳಿದುಕೊಳ್ಳುವರು. ಅವರು ಬಹು ಗರ್ವಿಷ್ಠರಾಗಿ ಹೆಚ್ಚಳಪಡುತ್ತಿದ್ದಾರೆ. ಅವರು ಹೇಳುವುದೇನೆಂದರೆ,


ನ್ಯಾಯವು ನಮ್ಮಿಂದ ತೊಲಗಿಹೋಗಿದೆ. ಸತ್ಯವು ಬೀದಿ ಪಾಲಾಗಿದೆ. ನೀತಿಯು ಪಟ್ಟಣದೊಳಕ್ಕೆ ಪ್ರವೇಶಿಸಲಾರದು.


ನಾವೆಲ್ಲರೂ ಪಾಪದಿಂದ ಮಲಿನರಾಗಿದ್ದೇವೆ. ನಮ್ಮ ಸುಕಾರ್ಯಗಳೆಲ್ಲಾ ಹಳೇ ಕೊಳಕು ಬಟ್ಟೆಯಂತಿವೆ. ನಾವೆಲ್ಲಾ ಒಣಗಿಹೋದ ಎಲೆಗಳಂತಿದ್ದೇವೆ. ನಮ್ಮ ಪಾಪಗಳು ಬಿರುಗಾಳಿಯಂತೆ ನಮ್ಮನ್ನು ಬಡಿದುಕೊಂಡುಹೋಗಿವೆ.


ಸರ್ವಶಕ್ತನಾದ ಯೆಹೋವನ ದ್ರಾಕ್ಷಿತೋಟವೇ ಇಸ್ರೇಲ್ ದೇಶ. ಯೆಹೋವನು ಪ್ರೀತಿಸುವ ದ್ರಾಕ್ಷಿಬಳ್ಳಿಯೇ ಯೆಹೂದದ ಪ್ರಜೆ. ಯೆಹೋವನು ನ್ಯಾಯವನ್ನು ಅಪೇಕ್ಷಿಸಿದರೂ ಸಿಕ್ಕಿದ್ದು ನರಹತ್ಯವೇ. ಯೆಹೋವನು ಧರ್ಮವನ್ನು ಅಪೇಕ್ಷಿಸಿದರೂ ದೊರಕಿದ್ದು ಗೋಳಾಟವೇ.


ಆದಕಾರಣ ಜೆರುಸಲೇಮಿನಲ್ಲಿರುವ ಅಧಿಪತಿಗಳೇ, ಯೆಹೋವನ ಸಂದೇಶವನ್ನು ನೀವು ಕೇಳಬೇಕು. ಆದರೆ ನೀವು ಅದನ್ನು ಕೇಳಲು ನಿರಾಕರಿಸುತ್ತಿದ್ದೀರಿ.


ಸತ್ಯವು ಹೊರಟುಹೋಯಿತು. ಒಳ್ಳೆಯದನ್ನು ಮಾಡುವವರು ಲೂಟಿಗೆ ಗುರಿಯಾಗಿದ್ದಾರೆ. ಒಳ್ಳೆಯವರು ಇಲ್ಲದೆ ಇರುವುದನ್ನು ಕಂಡು ಯೆಹೋವನು ಬೇಸರಗೊಂಡಿದ್ದಾನೆ.


ನೀನು ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಬೇಕು. ದೇವರು ನಕ್ಷತ್ರಪುಂಜಗಳನ್ನು ನಿರ್ಮಿಸಿದ್ದಾನೆ. ಆತನು ಕತ್ತಲೆಯನ್ನು ಮುಂಜಾನೆಯ ಬೆಳಕನ್ನಾಗಿ ಮಾಡುತ್ತಾನೆ. ಹಗಲನ್ನು ಕಾರ್ಗತ್ತಲೆಯನ್ನಾಗಿ ಮಾರ್ಪಡಿಸುತ್ತಾನೆ. ಆತನು ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಹೊಯ್ಯುತ್ತಾನೆ. ಆತನ ಹೆಸರು ಯೆಹೋವನು. ಆತನು ಒಂದು ಬಲವಾದ ನಗರವನ್ನು ರಕ್ಷಿಸಿ ಇನ್ನೊಂದನ್ನು ನಾಶನಕ್ಕೆ ಒಪ್ಪಿಸುತ್ತಾನೆ.” ನೀನು ಒಳ್ಳೆಯತನವನ್ನು ವಿಷಕಾರಿಯನ್ನಾಗಿ ಮಾಡಿದಿ. ನ್ಯಾಯವನ್ನು ಕೊಲೆಮಾಡಿದಿ. ಅದು ನೆಲದ ಮೇಲೆ ಬೀಳುವಂತೆ ಮಾಡಿದಿ.


ಜನರು ವಸ್ತುಗಳನ್ನು ಕದ್ದುಕೊಂಡು ಇತರರನ್ನು ಗಾಯಗೊಳಿಸುತ್ತಿದ್ದಾರೆ. ಜನರು ಜಗಳ ಮಾಡುತ್ತಾ ಕಾದಾಡುತ್ತಿದ್ದಾರೆ. ಇಂಥಾ ಭಯಂಕರ ಸಂಗತಿಗಳನ್ನು ನೋಡುವಂತೆ ಯಾಕೆ ಮಾಡುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು