Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 46:9 - ಪರಿಶುದ್ದ ಬೈಬಲ್‌

9 ಬಹಳ ಸಮಯದ ಹಿಂದೆ ನಡೆದ ಸಂಗತಿಗಳನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ನಾನು ದೇವರೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ನನ್ನ ಹೊರತು ಬೇರೆ ದೇವರುಗಳಿಲ್ಲ. ಆ ಸುಳ್ಳುದೇವರುಗಳು ನನ್ನ ಹಾಗೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪುರಾತನವಾದ ಹಳೆಯ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ; ನಾನೇ ದೇವರು, ನನಗೆ ಸರಿಸಮಾನನು ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೆನಪಿಗೆ ತಂದುಕೊಳ್ಳಿ ಪ್ರಾಚೀನ ಘಟನೆಗಳನ್ನು ಅರಿತುಕೊಳ್ಳಿ ನಾನೇ ದೇವರು, ಇನ್ನಾರೂ ಇಲ್ಲ ಎಂಬುದನ್ನು ನಾನೇ ಪರಮದೇವರು, ನನಗೆ ಸರಿಸಮಾನವಿಲ್ಲ ಎಂಬುದನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಅಲ್ಲ; ನಾನೇ ಪರಮದೇವರು, ನನಗೆ ಸರಿಸಮಾನರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಪುರಾತನ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ. ಏಕೆಂದರೆ ನಾನೇ ದೇವರು, ಮತ್ತೊಬ್ಬನಿಲ್ಲ. ನಾನೇ ದೇವರು, ನನಗೆ ಸರಿಸಮಾನನು ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 46:9
28 ತಿಳಿವುಗಳ ಹೋಲಿಕೆ  

ಇಗೋ, ಆದಿಯಲ್ಲಿಯೇ ಮುಂದಿನ ಸಂಗತಿಗಳನ್ನು ತಿಳಿಸಿದೆನು. ಅವೆಲ್ಲವೂ ಸಂಭವಿಸಿದವು. ಈಗ ಕೆಲವು ವಿಷಯಗಳು ನಿನಗೆ ಪ್ರಕಟಿಸುತ್ತೇನೆ; ಸಂಭವಿಸುವ ಮೊದಲೇ ಅವುಗಳನ್ನು ನಿನಗೆ ತಿಳಿಸುವೆನು.”


ದೇವರು ಅಮೋಘವಾದ ಕಾರ್ಯಗಳನ್ನು ಮಾಡುವುದರಿಂದ ಆತನ ದಯೆಯನ್ನೂ ಕೃಪೆಯನ್ನೂ ಜ್ಞಾಪಿಸಿಕೊಳ್ಳುತ್ತೇವೆ.


“ನನ್ನನ್ನು ನೀವು ಬೇರೆಯವರಿಗೆ ಹೋಲಿಸುವಿರಾ? ಇಲ್ಲ. ಯಾರೂ ನನಗೆ ಸಮಾನರಲ್ಲ. ನನ್ನ ವಿಷಯವಾಗಿ ನೀವು ಸಂಪೂರ್ಣವಾಗಿ ಅರಿತುಕೊಳ್ಳುವುದಿಲ್ಲ. ನನ್ನಂತಿರಲು ಬೇರೆ ಯಾರಿಗಾದರೂ ಸಾಧ್ಯವೇ?


“ಹಿಂದೆ ಏನಾಯಿತೆಂದು ಜ್ಞಾಪಕಕ್ಕೆ ತಂದುಕೊಳ್ಳಿರಿ. ಬಹಳ ವರ್ಷಗಳ ಹಿಂದೆ ನಡೆದದ್ದನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ತಂದೆಗಳನ್ನು ಕೇಳಿ, ಅವರು ಹೇಳುವರು. ನಿಮ್ಮ ಹಿರಿಯರನ್ನು ವಿಚಾರಿಸಿ, ಅವರು ಹೇಳುವರು.


“ಯೆಶುರೂನೇ, ನಮ್ಮ ದೇವರ ಹಾಗೆ ಬೇರೆ ದೇವರುಗಳಿಲ್ಲ. ಆತನು ಮೋಡಗಳ ಮೇಲೆ ಮಹಿಮಾರೂಢನಾಗಿ ಸವಾರಿ ಮಾಡುತ್ತಾ ಆಕಾಶದಿಂದ ನಿಮ್ಮ ಸಹಾಯಕ್ಕೆ ಬರುವನು.


ಯೆಹೋವನು ದೇವರಾಗಿದ್ದಾನೆ. ಆತನು ಭೂಮ್ಯಾಕಾಶಗಳನ್ನು ಉಂಟುಮಾಡಿದ್ದಾನೆ. ಆತನು ಭೂಮಿಯನ್ನು ಅದರ ಸ್ಥಾನದಲ್ಲಿ ಇಟ್ಟಿದ್ದಾನೆ. ಆತನು ಈ ಲೋಕವನ್ನು ಸೃಷ್ಟಿಸಿದ್ದು ಅದು ಶೂನ್ಯವಾಗಿರಲೆಂದಲ್ಲ. ಅದು ಜನಭರಿತವಾಗಿರಲೆಂದೇ ಸೃಷ್ಟಿಸಿದನು. “ನಾನೇ ಯೆಹೋವನು, ನನ್ನ ಹೊರತು ಬೇರೆ ದೇವರುಗಳಿಲ್ಲ.


“ನಾನು ಹೊಸ ಭೂಮ್ಯಾಕಾಶಗಳನ್ನು ಸೃಷ್ಟಿಸುವೆನು. ಜನರು ಗತಿಸಿದ ದಿನಗಳನ್ನು ತಮ್ಮ ನೆನಪಿಗೆ ತರುವದಿಲ್ಲ. ಅವರು ಈ ಸಂಗತಿಗಳಲ್ಲಿ ಯಾವುದನ್ನೂ ಜ್ಞಾಪಿಸಿಕೊಳ್ಳುವದಿಲ್ಲ.


ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.


ನಮಗಾದರೋ ಒಬ್ಬನೇ ಒಬ್ಬ ದೇವರಿದ್ದಾನೆ. ಆತನು ನಮ್ಮ ತಂದೆ. ಸಮಸ್ತವನ್ನು ಆತನೇ ಸೃಷ್ಟಿ ಮಾಡಿದನು. ನಾವು ಆತನಿಗೋಸ್ಕರ ಜೀವಿಸುತ್ತೇವೆ. ಒಬ್ಬನೇ ಒಬ್ಬ ಪ್ರಭುವಿದ್ದಾನೆ. ಆತನೇ ಯೇಸು ಕ್ರಿಸ್ತನು. ಆತನ ಮೂಲಕವಾಗಿ ಸಮಸ್ತವು ಉಂಟಾಯಿತು. ಆತನ ಮೂಲಕವಾಗಿ ನಾವು ಜೀವವನ್ನು ಹೊಂದಿದ್ದೇವೆ.


ಅದಕ್ಕೆ ಫರೋಹನು, “ನಾಳೆ” ಅಂದನು. ಮೋಶೆ, “ನೀನು ಹೇಳಿದಂತೆಯೇ ಆಗುವುದು. ನಮ್ಮ ದೇವರಾದ ಯೆಹೋವನಿಗೆ ಸಮಾನನಾದ ದೇವರೇ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


ಇಲ್ಲವಾದರೆ, ನಾನು ನಿನ್ನ ವಿರುದ್ಧವಾಗಿಯೂ ನಿನ್ನ ಅಧಿಕಾರಿಗಳ ವಿರುದ್ಧವಾಗಿಯೂ ನಿನ್ನ ಜನರ ವಿರುದ್ಧವಾಗಿಯೂ ನನ್ನ ಪೂರ್ಣಶಕ್ತಿಯಿಂದ ಉಪದ್ರವಗಳನ್ನು ಕಳುಹಿಸುವೆನು. ಆಗ ನನ್ನಂಥ ದೇವರು ಲೋಕದಲ್ಲಿ ಇಲ್ಲವೇ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


“ಇವುಗಳು ಸಂಭವಿಸುವ ಮೊದಲೇ ಇವುಗಳನ್ನು ತಿಳಿಸಿದಾತನನ್ನೇ ದೇವರೆಂದು ಕರೆಯಬೇಕು. ನಿಮ್ಮ ವಿಗ್ರಹಗಳಲ್ಲಿ ಯಾವದಾದರೂ ನಮಗೆ ಇದನ್ನು ತಿಳಿಸಿತೋ? ಯಾವ ವಿಗ್ರಹವೂ ನಮಗೆ ಇವುಗಳ ವಿಷಯದಲ್ಲಿ ತಿಳಿಸಲಿಲ್ಲ. ಆ ವಿಗ್ರಹಗಳು ಒಂದು ಮಾತನ್ನಾದರೂ ಹೇಳಲಿಲ್ಲ; ಮತ್ತು ನೀವು ಹೇಳಿದ್ದನ್ನು ಆ ಸುಳ್ಳುದೇವರುಗಳು ಕೇಳಿಸಿಕೊಳ್ಳುವದೂ ಇಲ್ಲ.


ಈ ವಿಷಯಗಳ ಬಗ್ಗೆ ತಿಳಿಸಿದವರಲ್ಲಿ ಯೆಹೋವನೆಂಬ ನಾನೇ ಮೊದಲನೆಯವನು. ‘ನೋಡು ನಿನ್ನ ಜನರು ಹಿಂತಿರುಗಿ ಬರುತ್ತಿದ್ದಾರೆ’ ಎಂಬ ಸಂದೇಶವನ್ನು ನಾನು ಜೆರುಸಲೇಮಿಗೆ ಕಳುಹಿಸಿದೆನು.”


“ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.”


ಯೆಹೋವನು ಹೀಗೆನ್ನುತ್ತಾನೆ: “ಜೋರ್ಡನ್ ನದಿಯ ಸಮೀಪದ ದಟ್ಟವಾದ ಅರಣ್ಯದಿಂದ ಒಮ್ಮೆ ಒಂದು ಸಿಂಹವು ಬರುವುದು. ಆ ಸಿಂಹವು ಜನರ ಸಾಕುಪ್ರಾಣಿಗಳಿದ್ದ ಹೊಲಗಳಿಗೆ ನುಗ್ಗುವುದು. ಆ ಪ್ರಾಣಿಗಳೆಲ್ಲ ಓಡಿಹೋಗುವವು. ನಾನು ಆ ಸಿಂಹದಂತಾಗುವೆನು. ನಾನು ಬಾಬಿಲೋನನ್ನು ಅದರ ಪ್ರದೇಶದಿಂದ ಓಡಿಸಿಬಿಡುವೆನು. ಈ ಕಾರ್ಯ ಮಾಡಲು ನಾನು ಯಾರನ್ನು ಆರಿಸಲಿ? ನನ್ನತೆ ಯಾರೂ ಇಲ್ಲ. ನನ್ನನ್ನು ಪ್ರತಿಭಟಿಸುವವರು ಯಾರೂ ಇಲ್ಲ. ಆದ್ದರಿಂದ ನಾನೇ ಅದನ್ನು ಮಾಡುತ್ತೇನೆ. ನನ್ನನ್ನು ಓಡಿಸಲು ಯಾವ ಕುರುಬನೂ ಬರಲಾರನು. ನಾನು ಬಾಬಿಲೋನಿನ ಜನರನ್ನು ಓಡಿಸಿಬಿಡುವೆನು.”


“ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ಪರಿಶುದ್ಧತೆಯಲ್ಲಿ ನೀನೇ ಸರ್ವೋತ್ತಮನು. ಭಯಂಕರ ಕಾರ್ಯಗಳನ್ನು ಮಾಡಿ ಪ್ರಖ್ಯಾತಿಹೊಂದಿದವನೂ ನೀನೇ. ಅದ್ಭುತಕಾರ್ಯಗಳನ್ನು ಮಾಡುವಾತನೂ ನೀನೇ.


ಆದರೆ ನಿನ್ನ ಹೃದಯದಲ್ಲಿ ಮರೆಮಾಡಿಕೊಂಡಿದ್ದು ಇದನ್ನೇ; ನಿನ್ನ ಹೃದಯದಲ್ಲಿ ನೀನು ರಹಸ್ಯವಾಗಿ ಆಲೋಚಿಸಿದ್ದೂ ಇದನ್ನೇ. ಹೌದು, ನಿನ್ನ ಮನಸ್ಸಿನಲ್ಲಿ ಇದೇ ಇತ್ತೆಂದು ನನಗೆ ಗೊತ್ತಿದೆ:


ಯೆಹೋವನು ಹೇಳುವುದೇನೆಂದರೆ: “ನೀವು ನನ್ನ ಸಾಕ್ಷಿಗಳಾಗಿದ್ದೀರಿ. ನಾನು ಆರಿಸಿಕೊಂಡ ಸೇವಕನು ನೀನೇ. ಜನರು ನನ್ನನ್ನು ನಂಬುವಂತೆ ನಾನು ನಿಮ್ಮನ್ನು ಆರಿಸಿಕೊಂಡೆನು. ನಾನು ನಿಜ ದೇವರು ಎಂದು ನೀವು ತಿಳಿಯಬೇಕೆಂದು ನಿಮ್ಮನ್ನು ಆರಿಸಿಕೊಂಡೆನು. ನಾನೇ ನಿಜವಾದ ದೇವರು. ನನಗಿಂತ ಮೊದಲು ಯಾರೂ ಇರಲಿಲ್ಲ, ಇನ್ನು ಮುಂದೆಯೂ ನನ್ನ ಹೊರತು ಯಾವ ದೇವರೂ ಇರುವದಿಲ್ಲ.


“ಸಂಭವಿಸಲಿಕ್ಕಿರುವ ಸಂಗತಿಗಳ ಬಗ್ಗೆ ಬಹುಕಾಲದ ಹಿಂದೆಯೇ ನಿಮಗೆ ತಿಳಿಸಿದ್ದೆನು. ಫಕ್ಕನೇ ಅವು ನೆರವೇರುವಂತೆ ಮಾಡಿದೆನು.


ಯೆಹೋವನು ಹೀಗೆ ಹೇಳುತ್ತಾನೆ: “ಎರಡು ರಸ್ತೆಗಳು ಕೂಡುವಲ್ಲಿ ನಿಂತು ನೋಡಿರಿ. ‘ಒಳ್ಳೆಯ ರಸ್ತೆ ಎಲ್ಲಿದೆ?’ ಎಂದು ಕೇಳಿರಿ. ಆ ರಸ್ತೆಯನ್ನು ಹಿಡಿದು ನಡೆಯಿರಿ. ಹಾಗೆ ಮಾಡಿದರೆ ನಿಮಗೆ ವಿಶ್ರಾಂತಿ ಸಿಕ್ಕುವದು. ಆದರೆ ‘ನಾವು ಒಳ್ಳೆಯ ಹಾದಿಯ ಮೇಲೆ ನಡೆಯುವುದಿಲ್ಲ’ ಎಂದು ನೀವು ಹೇಳಿದ್ದೀರಿ.


ಇಸ್ರೇಲರೊಂದಿಗೆ ನಾನು ಇದ್ದೇನೆ ಎಂದು ನೀವು ತಿಳಿಯುವಿರಿ. ನಿಮ್ಮ ದೇವರಾದ ಯೆಹೋವನು ನಾನೇ ಎಂದು ನೀವು ತಿಳಿಯುವಿರಿ. ನನ್ನ ಹೊರತು ಬೇರೆ ದೇವರುಗಳಿಲ್ಲ. ನನ್ನ ಜನರು ಇನ್ನು ಮುಂದೆ ನಾಚಿಕೆಗೆ ಗುರಿಯಾಗುವುದಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು