Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 47:2 - ಪರಿಶುದ್ದ ಬೈಬಲ್‌

2 ಈಗ ನೀನು ದಾಸಿಯಾಗಿ ಕೆಲಸ ಮಾಡಬೇಕು. ನಿನ್ನ ಮನೋಹರವಾದ ಉಡುಪನ್ನು ತೆಗೆದುಹಾಕು. ಬೀಸುವ ಕಲ್ಲನ್ನು ತೆಗೆದುಕೊಂಡು ಧಾನ್ಯವನ್ನು ಬೀಸು. ಜನರು ನಿನ್ನ ತೊಡೆಗಳನ್ನು ನೋಡುವ ತನಕ ನಿನ್ನ ಉಡುಪನ್ನು ಎತ್ತಿ ಹೊಳೆಯನ್ನು ದಾಟು. ನಿನ್ನ ದೇಶವನ್ನು ಬಿಟ್ಟುಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ, ಈಜಾಡುವ ಬಟ್ಟೆಯ ನೆರಿಗೆಯನ್ನು ಹರಿದುಬಿಟ್ಟು, ಬೆತ್ತಲಾಗಿ ನದಿಗಳನ್ನು ಹಾದುಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಬೀಸುವ ಕಲ್ಲನು ಹಿಡಿ, ಹಿಟ್ಟಿಗಾಗಿ ನೆರಿಗೆಯನ್ನು ಹರಿ, ಮುಸುಕನ್ನು ತೆಗೆದುಹಾಕಿ ಹೊಳೆಗಳನ್ನು ಹಾದುಹೋಗು, ನಡೆ ಬರೆಗಾಲಿನಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಬೀಸುವ ಕಲ್ಲನ್ನು ಹಿಡಿದು ಹಿಟ್ಟು ಬೀಸು, ಮುಸುಕನ್ನು ತೆಗೆದುಹಾಕಿ ಈಜಾಡುವ ನೆರಿಗೆಯನ್ನು ಹರಿದುಬಿಟ್ಟು ಬೆತ್ತಲೆಕಾಲಾಗಿ ಹೊಳೆಗಳನ್ನು ಹಾದುಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಬೀಸುವ ಕಲ್ಲನ್ನು ಹಿಡಿದು, ಹಿಟ್ಟನ್ನು ಬೀಸು. ಮುಸುಕನ್ನು ತೆಗೆದುಹಾಕಿ, ನಿನ್ನ ಕಾಲನ್ನು ಬರಿದುಮಾಡಿ, ತೊಡೆಯನ್ನು ಮುಚ್ಚದೆ, ನದಿಗಳನ್ನು ಹಾದುಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 47:2
22 ತಿಳಿವುಗಳ ಹೋಲಿಕೆ  

ಇಬ್ಬರು ಹೆಂಗಸರು ಬೀಸುವ ಕಲ್ಲಿನಲ್ಲಿ ಧಾನ್ಯ ಬೀಸುತ್ತಿದ್ದರೆ ಅವರಲ್ಲಿ ಒಬ್ಬಳನ್ನು ತೆಗೆದುಕೊಳ್ಳಲಾಗುವುದು ಮತ್ತೊಬ್ಬಳನ್ನು ಬಿಡಲಾಗುವುದು.


ಅಶ್ಶೂರದ ಅರಸನು ಈಜಿಪ್ಟನ್ನೂ ಇಥಿಯೋಪ್ಯವನ್ನೂ ಸೋಲಿಸುವನು. ಅಶ್ಶೂರವು ಜನರನ್ನು ಸೆರೆಹಿಡಿದು ಅವರ ರಾಜ್ಯಗಳಿಂದ ಹೊರಗೆ ಕೊಂಡುಹೋಗುವದು. ವೃದ್ಧರೂ ಬಾಲಕರೂ ಬಟ್ಟೆಯಿಲ್ಲದೆಯೂ ಪಾದರಕ್ಷೆಗಳಿಲ್ಲದೆಯೂ ಇರುವರು. ಅವರು ಪೂರ್ಣ ಬೆತ್ತಲೆಯಾಗಿರುವರು. ಈಜಿಪ್ಟಿನ ಜನರು ನಾಚಿಕೆಗೆ ತುತ್ತಾಗುವರು.


ಫಿಲಿಷ್ಟಿಯರು ಸಂಸೋನನನ್ನು ಬಂಧಿಸಿ ಅವನ ಕಣ್ಣುಗಳನ್ನು ಕಿತ್ತು ಗಾಜಾ ನಗರಕ್ಕೆ ತೆಗೆದುಕೊಂಡು ಹೋದರು. ಅವನು ಓಡಿಹೋಗದಂತೆ ಅವನಿಗೆ ಸಂಕೋಲೆಗಳನ್ನು ಬಿಗಿದರು. ಅವರು ಸಂಸೋನನನ್ನು ಒಂದು ಸೆರೆಮನೆಯಲ್ಲಿಟ್ಟು ಧಾನ್ಯಬೀಸುವ ಕೆಲಸಕ್ಕೆ ಹಚ್ಚಿದರು.


ಈಜಿಪ್ಟಿನ ಚೊಚ್ಚಲು ಮಕ್ಕಳೆಲ್ಲರೂ ಅಂದರೆ ಫರೋಹನ ಚೊಚ್ಚಲು ಮಗನಿಂದಿಡಿದು ಧಾನ್ಯವನ್ನು ಬೀಸುವ ಸೇವಕಿಯ ಚೊಚ್ಚಲು ಮಗನವರೆಗೂ ಇರುವ ಚೊಚ್ಚಲು ಮಕ್ಕಳೆಲ್ಲರೂ ಸಾಯುವರು. ಇದಲ್ಲದೆ ಚೊಚ್ಚಲು ಪಶುಗಳೂ ಸಾಯುತ್ತವೆ.


ಇಬ್ಬರು ಸ್ತ್ರೀಯರು ಒಟ್ಟಿಗೆ ಕೆಲಸಮಾಡುತ್ತಿದ್ದರೂ ಅವರಲ್ಲಿ ಒಬ್ಬಳನ್ನು ತೆಗೆದುಕೊಳ್ಳಲಾಗುವುದು, ಇನ್ನೊಬ್ಬಳನ್ನು ಬಿಡಲಾಗುವುದು.”


ನನ್ನ ಹೆಂಡತಿಯು ಬೇರೊಬ್ಬನಿಗೆ ಸೇವಕಿಯಾಗಲಿ; ಬೇರೆಯವರು ಆಕೆಯೊಂದಿಗೆ ಮಲಗಿಕೊಳ್ಳಲಿ.


ಶಾಫೀರ್‌ನಲ್ಲಿ ವಾಸಿಸುವವರೇ, ಬೆತ್ತಲೆಯಾಗಿ ನಾಚಿಕೆಯಿಂದ ನಡೆಯಿರಿ. ಚಾನಾನ್‌ನಲ್ಲಿ ವಾಸಿಸುವವರು ಹೊರಗೆ ಬರುವದಿಲ್ಲ. ಬೇತೇಚೆಲಿನ ಜನರು ಅಳುವರು, ನಿಮಗೆ ಅವರು ನೀಡುತ್ತಿದ್ದ ಬೆಂಬಲವನ್ನು ಹಿಂತೆಗೆದುಕೊಳ್ಳುವರು.


ಆಕೆ ವ್ಯಭಿಚಾರ ಮಾಡುವದನ್ನು ನಿಲ್ಲಿಸದೆ ಹೋದರೆ ನಾನು ಆಕೆಯನ್ನು ಬೆತ್ತಲೆ ಮಾಡಿ, ಆಕೆ ಜನ್ಮ ತಾಳಿದಾಗ ಹೇಗೆ ಇದ್ದಳೋ ಹಾಗೆ ಮಾಡುವೆನು. ಆಕೆಯ ಜನರನ್ನು ಆಕೆಯಿಂದ ತೊಲಗಿಸಿ ಆಕೆಯನ್ನು ಒಣ ಮರುಭೂಮಿಯಂತೆ ಬೆಂಗಾಡಾಗಿ ಮಾಡುವೆನು. ಆಕೆ ಬಾಯಾರಿ ಸಾಯುವಂತೆ ಮಾಡುವೆನು.


ನಮ್ಮ ಯುವಕರನ್ನು ಬೀಸುವ ಕಲ್ಲುಗಳಿಂದ ದವಸಧಾನ್ಯಗಳನ್ನು ಬೀಸುವವರನ್ನಾಗಿ ವೈರಿಗಳು ಮಾಡಿದರು. ನಮ್ಮ ಯುವಕರು ಶ್ರಮದ ಕೆಲಸದಿಂದ ಮುಗ್ಗರಿಸಿದ್ದಾರೆ.


ಎಲ್ಲಾ ಜನಾಂಗಗಳು ನೆಬೂಕದ್ನೆಚ್ಚರನ, ಅವನ ಮಗನ ಮತ್ತು ಅವನ ಮೊಮ್ಮಗನ ಸೇವೆಮಾಡುವವು. ಆಮೇಲೆ ಬಾಬಿಲೋನನ್ನು ಸೋಲಿಸುವ ಸಮಯ ಬರುತ್ತದೆ. ಅನೇಕ ಜನಾಂಗಗಳು ಮತ್ತು ದೊಡ್ಡ ರಾಜರು ಬಾಬಿಲೋನನ್ನು ತಮ್ಮ ಸೇವಕನನ್ನಾಗಿ ಮಾಡಿಕೊಳ್ಳುವರು.


ಜೆರುಸಲೇಮ್ ನಗರವೇ, ನಾನು ನಿನ್ನ ಲಂಗವನ್ನು ನಿನ್ನ ಮುಖದವರೆಗೆ ಎತ್ತಿಬಿಡುತ್ತೇನೆ. ಎಲ್ಲರೂ ನಿನ್ನನ್ನು ನೋಡುತ್ತಾರೆ. ನಿನಗೆ ನಾಚಿಕೆಯಾಗುತ್ತದೆ.


“ಇಂಥ ಕೇಡು ನನಗೆ ಏಕೆ ಉಂಟಾಯಿತು?” ಎಂದು ನಿನ್ನನ್ನು ನೀನೇ ಕೇಳಿಕೊಳ್ಳಬಹುದು. ನೀನು ಮಾಡಿದ ಅನೇಕ ಪಾಪಗಳ ಫಲದಿಂದಲೇ ಆಯಿತು. ನಿನ್ನ ಪಾಪಗಳ ಫಲವಾಗಿ ನಿನ್ನ ಲಂಗವನ್ನು ಹರಿಯಲಾಯಿತು. ನಿನ್ನ ಪಾದರಕ್ಷೆಯನ್ನು ಕಿತ್ತುಕೊಳ್ಳಲಾಯಿತು. ನಿನ್ನನ್ನು ಕಂಗೆಡಿಸುವದಕ್ಕಾಗಿ ಅವರು ಹೀಗೆ ಮಾಡಿದರು.


ಸ್ತ್ರೀಯರೇ, ನೀವೀಗ ಶಾಂತರಾಗಿದ್ದೀರಿ. ಆದರೆ ನೀವು ಭಯಪಡುವವರಾಗಿರಬೇಕು. ನೀವು ಈಗ ಸುರಕ್ಷಿತರಾಗಿದ್ದೀರಿ, ಆದರೆ ನೀವು ಚಿಂತಿಸುವವರಾಗಿರಬೇಕು. ನಿಮ್ಮ ಒಳ್ಳೆಯ ವಸ್ತ್ರಗಳನ್ನು ತೆಗೆದಿಟ್ಟು ಶೋಕಬಟ್ಟೆಯನ್ನು ಧರಿಸಿರಿ. ಆ ಬಟ್ಟೆಗಳನ್ನು ನಿಮ್ಮ ಸೊಂಟಕ್ಕೆ ಕಟ್ಟಿಕೊಳ್ಳಿರಿ.


ನನ್ನ ಒಡೆಯನಾದ ಯೆಹೋವನು ಚೀಯೋನಿನ ಸ್ತ್ರೀಯರ ತಲೆಯ ಮೇಲೆ ಹುಣ್ಣುಗಳನ್ನು ಬರಮಾಡಿ ಅವರ ತಲೆಕೂದಲು ಉದುರಿ ತಲೆಬೋಳಾಗುವಂತೆ ಮಾಡುವನು.


ಆಕೆ, ಆ ಸೇವಕನಿಗೆ, “ನಮ್ಮನ್ನು ಭೇಟಿಯಾಗಲು ಹೊಲದಲ್ಲಿ ಬರುತ್ತಿರುವ ಆ ಯೌವನಸ್ಥನು ಯಾರು?” ಎಂದು ಕೇಳಿದಳು. ಆ ಸೇವಕನು, “ಅವನು ನನ್ನ ಒಡೆಯನ ಮಗನು” ಎಂದು ಹೇಳಿದನು. ಆ ಕೂಡಲೇ ರೆಬೆಕ್ಕಳು ತನ್ನ ಮುಖಕ್ಕೆ ಮುಸುಕನ್ನು ಹಾಕಿಕೊಂಡಳು.


ಆದರೆ ಸ್ತ್ರೀಯು ಪ್ರಾರ್ಥಿಸುವಾಗ ಅಥವಾ ಪ್ರವಾದಿಸುವಾಗ ತನ್ನ ತಲೆಗೆ ಮುಸುಕನ್ನು ಹಾಕಿಕೊಂಡಿರಬೇಕು. ಆಕೆಯು ತನ್ನ ತಲೆಗೆ ಮುಸುಕು ಹಾಕಿಲ್ಲದಿದ್ದರೆ, ಅದು ಆಕೆಯ ಶಿರಸ್ಸಾದ ಪುರುಷನಿಗೆ ಅಪಮಾನಕರವಾಗಿದೆ. ಅವಳಿಗೂ ತಲೆಯನ್ನು ಬೋಳಿಸಿಕೊಂಡಿರುವ ಸ್ತ್ರೀಗೂ ಯಾವ ವ್ಯತ್ಯಾಸವಿಲ್ಲ.


ನಿನ್ನ ಕಿವಿ ಮಂದವಾಗುತ್ತದೆ. ನೀನು ಮಾರುಕಟ್ಟೆಯ ಶಬ್ದವನ್ನೂ ಕೇಳಲಾರೆ. ಅರೆಯುವ ಕಲ್ಲು ಸಹ ನಿನಗೆ ತುಂಬ ಮೌನವಾಗಿದೆಯೋ ಎಂಬಂತೆ ತೋರುವುದು. ಗಾಯನವೂ ನಿನಗೆ ಕೇಳುವುದಿಲ್ಲ. ನಿನಗೆ ನಿದ್ರೆಬಾರದಿರುವುದರಿಂದ ಕೇವಲ ಒಂದು ಹಕ್ಕಿಯ ಧ್ವನಿಯು ನಿನ್ನನ್ನು ಹೊತ್ತಾರೆಯಲ್ಲಿ ಎಬ್ಬಿಸುವುದು.


ಕೈಗನ್ನಡಿಗಳನ್ನು, ಪೋಷಾಕುಗಳನ್ನು, ಮುಂಡಾಸಗಳನ್ನು ಮತ್ತು ಉದ್ದವಾದ ಶಾಲುಗಳನ್ನು ಅವರಿಂದ ತೆಗೆದುಬಿಡುವನು.


ಆ ಸ್ಥಳಗಳಲ್ಲಿ ನಾನು ಸಂತೋಷದ ಮತ್ತು ಸಂಭ್ರಮದ ಧ್ವನಿಗಳು ಕೇಳಿಬರದಂತೆ ಮಾಡುವೆನು. ವಧುವರರ ಸಂತೋಷದ ಧ್ವನಿಗಳು ಇನ್ನು ಮೇಲೆ ಕೇಳಿಬರುವದಿಲ್ಲ. ನಾನು ಬೀಸುವಕಲ್ಲಿನ ಸದ್ದನ್ನು ತೆಗೆದುಕೊಳ್ಳುವೆನು. ನಾನು ದೀಪದ ಬೆಳಕನ್ನು ತೆಗೆದುಕೊಳ್ಳುವೆನು.


ಆಗ ಹಾನೂನನು ದಾವೀದನ ಸೇವಕರನ್ನು ಬಂಧಿಸಿ ಅವರ ಗಡ್ಡಗಳನ್ನು ಬೋಳಿಸಿ ಅವರ ವಸ್ತ್ರಗಳನ್ನು ಸೊಂಟದಿಂದ ಕೆಳಭಾಗದವರೆಗೆ ಕತ್ತರಿಸಿಬಿಟ್ಟು ಅವರನ್ನು ಹಿಂದಕ್ಕೆ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು