Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 47:7 - ಪರಿಶುದ್ದ ಬೈಬಲ್‌

7 ‘ನಾನು ನಿತ್ಯಕಾಲಕ್ಕೂ ವಾಸಿಸುತ್ತೇನೆ. ನಾನು ಯಾವಾಗಲೂ ರಾಣಿಯಾಗಿಯೇ ಇರುವೆನು’ ಎಂದು ನೀನು ಹೇಳುವೆ. ಅವರಿಗೆ ನೀನು ಮಾಡಿದ ದುಷ್ಟಕ್ರಿಯೆಗಳನ್ನು ನೀನು ಗಮನಿಸಲೇ ಇಲ್ಲ. ಅದರ ಪರಿಣಾಮವನ್ನು ನೀನು ಆಲೋಚಿಸಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ನಾನು ಶಾಶ್ವತವಾದ ರಾಣಿ” ಎಂದು ನೀನು ಅಂದುಕೊಂಡು ಅವರ ಹಿಂಸೆಗಳನ್ನು ಮನಸ್ಸಿಗೆ ತಾರದೆ, ಅವುಗಳಿಂದ ನಿನಗಾಗುವ ಪರಿಣಾಮವನ್ನು ನೆನಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನನ್ನ ಜನರ ಹಿಂಸೆಬಾಧೆಗಳನ್ನು ಗಮನಿಸದೆ ಬರಲಿರುವ ಪರಿಣಾಮವನ್ನು ನೆನೆಸಿಕೊಳ್ಳದೆ ನೀನೇ ಶಾಶ್ವತ ರಾಣಿಯೆಂದು ಮೆರೆದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ಶಾಶ್ವತವಾದ ರಾಣಿ ಎಂದು ನೀನು ಅಂದುಕೊಂಡು ಅವರ ಹಿಂಸೆಗಳನ್ನು ಮನಸ್ಸಿಗೆ ತಾರದೆ, ಅವುಗಳಿಂದ ನಿನಗಾಗುವ ಪರಿಣಾಮವನ್ನು ನೆನಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ‘ನಾನು ಶಾಶ್ವತವಾದ ರಾಣಿ’ ಎಂದು ನೀನು ಅಂದುಕೊಂಡದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೊಳ್ಳಲಿಲ್ಲ. ಅವರ ಅಂತ್ಯವನ್ನೂ ನೆನಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 47:7
18 ತಿಳಿವುಗಳ ಹೋಲಿಕೆ  

ಅವರು ಬುದ್ಧಿವಂತರಾಗಿದ್ದಲ್ಲಿ ಅವರಿಗೆ ಏನು ಸಂಭವಿಸುವುದೆಂದು ಅವರು ತಿಳಿಯುತ್ತಿದ್ದರು.


“ಆದ್ದರಿಂದ ಬಾಬಿಲೋನೇ, ಅಲ್ಲಿ ಸುಮ್ಮನೆ ಕುಳಿತಿರು. ಕಸ್ದೀಯರ ಕುಮಾರಿಯೇ ಕತ್ತಲೆಯೊಳಗೆ ಹೋಗಿ ಇರು, ಯಾಕೆಂದರೆ ನೀನು ‘ಜನಾಂಗಗಳ ರಾಣಿ’ ಎಂದು ಇನ್ನು ಮುಂದೆ ಕರೆಯಲ್ಪಡುವದಿಲ್ಲ.


ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.


ಕನಸು ಕಂಡ ಹನ್ನೆರಡು ತಿಂಗಳುಗಳಾದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಬಾಬಿಲೋನಿನಲ್ಲಿದ್ದ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಮಾಳಿಗೆಯ ಮೇಲಿದ್ದಾಗ ಅರಸನು, “ಈ ಬಾಬಿಲೋನ್ ನಗರವನ್ನು ನೋಡಿ, ನಾನು ಈ ಮಹಾನಗರವನ್ನು ಕಟ್ಟಿದೆ. ಇದು ನನ್ನ ಅರಮನೆ. ನಾನು ನನ್ನ ಸಾಮರ್ಥ್ಯದಿಂದ ಈ ಅರಮನೆಯನ್ನು ಕಟ್ಟಿದೆ. ನಾನು ಎಂಥಾ ದೊಡ್ಡವನು ಎಂದು ಲೋಕಕ್ಕೆ ತೋರಿಸಲು ನಾನು ಈ ಅರಮನೆಯನ್ನು ಕಟ್ಟಿದೆ” ಎಂದು ತನ್ನಷ್ಟಕ್ಕೆ ತಾನೇ ಹೇಳಿಕೊಳ್ಳುತ್ತಿದ್ದನು.


‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದ್ದಾನೆ ಎಂದು ಅವರಿಗೆ ತಿಳಿಸು, “‘ಈಜಿಪ್ಟಿನ ರಾಜನಾದ ಫರೋಹನೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನೀನು ನೈಲ್ ನದಿಯ ದಡದಲ್ಲಿ ಮಲಗಿರುವ ಪೇರ್ಮೊಸಳೆ, “ಇದು ನಾನು ನಿರ್ಮಿಸಿದ ಹೊಳೆ” ಎಂದು ನೀನು ಹೇಳಿಕೊಳ್ಳುವೆ.


“ನರಪುತ್ರನೇ, ತೂರಿನ ರಾಜನಿಗೆ ಹೀಗೆ ಹೇಳು, ‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “‘ನೀನು ಬಹಳ ಹೆಮ್ಮೆಯುಳ್ಳವನು. “ನಾನು ದೇವರು ಎಂದು ಹೇಳುವೆ. ಸಾಗರದ ಮಧ್ಯದಲ್ಲಿ ದೇವರುಗಳ ಸಿಂಹಾಸನದಲ್ಲಿ ನಾನು ಕೂತಿರುತ್ತೇನೆ ಎಂದು ಅನ್ನುವೆ.” “‘ಆದರೆ ನೀನು ಮನುಷ್ಯನು, ದೇವರಲ್ಲ. ನೀನು ದೇವರೆಂದು ನೀನೇ ನೆನಸಿಕೊಳ್ಳುವೆ.


ಆದ್ದರಿಂದ ಯೆಹೋವನು ಅವರ ಮೇಲೆ ಕೋಪಗೊಂಡನು. ಅವರಿಗೆ ವಿರುದ್ಧವಾಗಿ ಬಲವಾದ ಯುದ್ಧಗಳು ನಡೆಯುವಂತೆ ಮಾಡಿದನು. ಇಸ್ರೇಲ್ ಜನರ ಸುತ್ತಲೂ ಬೆಂಕಿಯು ಆವರಿಸಿಕೊಂಡಿರುವಂತಿದ್ದರೂ ಅವರಿಗೆ ಅದರ ಪ್ರಜ್ಞೆಯಿರಲಿಲ್ಲ. ಅವರೇ ಉರಿಯುತ್ತಿರುವಂತೆ ಅದಿತ್ತು. ಆದರೆ ಅವರು ವಿಷಯಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಲಿಲ್ಲ.


ಅವಳು ತನ್ನನ್ನು ಘನಪಡಿಸಿಕೊಂಡು ವೈಭವದಿಂದ ಜೀವಿಸಿದಳು. ಆದ್ದರಿಂದ ಅದಕ್ಕೆ ತಕ್ಕಂತೆ ಸಂಕಟವನ್ನೂ ದುಃಖವನ್ನೂ ಅವಳಿಗೆ ಬರಮಾಡಿರಿ. ‘ನಾನು ನನ್ನ ಸಿಂಹಾಸನದ ಮೇಲೆ ಕುಳಿತಿರುವ ರಾಣಿ. ನಾನು ವಿಧವೆಯಲ್ಲ, ನಾನು ಎಂದೆಂದಿಗೂ ದುಃಖಿಸುವುದಿಲ್ಲ’ ಎಂದು ಅವಳು ತನಗೆ ತಾನೇ ಹೇಳಿಕೊಳ್ಳುತ್ತಾಳೆ.


ನೀತಿವಂತರು ಇಲ್ಲವಾಗುವರು; ಯಾರೂ ಅದನ್ನು ಗಮನಿಸರು. ಸದ್ಭಕ್ತರು ಗತಿಸಿಹೋಗುವರು; ಅದಕ್ಕೆ ಕಾರಣವೇನೆಂದು ಯಾರೂ ಗ್ರಹಿಸರು. ಕೇಡಿನಿಂದ ಪಾರಾಗಲೆಂದೇ ಸದ್ಭಕ್ತರಿಗೆ ಹೀಗಾಯಿತು ಎಂದು ಯಾರೂ ಯೋಚಿಸರು.


ನೀವು ನನ್ನನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ. ನನ್ನನ್ನು ಗಮನಕ್ಕೇ ತರಲಿಲ್ಲ. ಹೀಗಿರಲು ನೀವು ಯಾರ ಬಗ್ಗೆ ಚಿಂತಿಸುತ್ತಿದ್ದಿರಿ? ನೀವು ಯಾರಿಗೆ ಭಯಪಡುತ್ತಿದ್ದಿರಿ? ನೀವು ಸುಳ್ಳಾಡಿದ್ದು ಯಾಕೆ? ನೋಡಿ, ನಾನು ಬಹಳ ಸಮಯದಿಂದ ಸುಮ್ಮನಿದ್ದೆನು. ಆದರೆ ನೀವು ನನ್ನನ್ನು ಗೌರವಿಸಲಿಲ್ಲ.


ಜೆರುಸಲೇಮಿನ ಲಂಗಗಳು ಮಲಿನವಾಗಿದ್ದವು. ಅವಳಿಗೆ ಮುಂದೆ ಏನಾಗುವದೆಂಬುದರ ಬಗ್ಗೆ ಅವಳು ಯೋಚಿಸಲಿಲ್ಲ. ಅವಳ ಪತನ ವಿಸ್ಮಯಕಾರಿಯಾಗಿತ್ತು. ಅವಳನ್ನು ಸಂತೈಸಲು ಯಾರೂ ಇರಲಿಲ್ಲ. “ಅಯ್ಯೋ, ಯೆಹೋವನೇ, ನನಗೆಷ್ಟು ನೋವಾಗಿದೆ. ನೋಡು! ನನ್ನ ಶತ್ರು ತನ್ನನ್ನು ಎಷ್ಟು ದೊಡ್ಡವನೆಂದು ಭಾವಿಸಿಕೊಂಡಿದ್ದಾನೆ.” ಎಂದು ಆಕೆ ಹೇಳುತ್ತಾಳೆ.


ಆತನು ಹೇಳಿದ್ದೇನೆಂದರೆ: “ನರಪುತ್ರನೇ, ನನ್ನ ಒಡೆಯನಾದ ಯೆಹೋವನ ಸಂದೇಶವಿದು. ಈ ಸಂದೇಶವನ್ನು ಇಸ್ರೇಲ್ ದೇಶಕ್ಕೆ ನೀಡು. “ಅಂತ್ಯ, ಅಂತ್ಯವು ಬರುವುದು. ಇಡೀ ದೇಶವು ಹಾಳಾಗಿಹೋಗುವದು.


ನೆಬೂಕದ್ನೆಚ್ಚರನಾದ ನಾನು ಅರಮನೆಯಲ್ಲಿದ್ದೆ; ಸುಖಸಂತೋಷದಿಂದ ಇದ್ದೆ.


ಫರೋಹನು ತನ್ನ ಮನೆಗೆ ಹೊರಟುಹೋದನು. ಮೋಶೆ ಆರೋನರು ಮಾಡಿದ ಮಹತ್ಕಾರ್ಯಗಳನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು