Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:19 - ಪರಿಶುದ್ದ ಬೈಬಲ್‌

19 ನೀವು ನನಗೆ ವಿಧೇಯರಾಗಿದ್ದರೆ, ನಿಮ್ಮ ಸಂತಾನವು ಅಭಿವೃದ್ಧಿಯಾಗುತ್ತಿತ್ತು. ಅವರು ಸಮುದ್ರದ ಮರಳಿನಂತೆ ಅಸಂಖ್ಯಾತರಾಗಿರುತ್ತಿದ್ದರು. ನೀವು ನನಗೆ ವಿಧೇಯರಾಗಿದ್ದರೆ, ನೀವು ನಾಶವಾಗಿರುತ್ತಿರಲಿಲ್ಲ ಮತ್ತು ನನ್ನೆದುರಿನಿಂದ ನಿಮ್ಮ ಹೆಸರು ತೆಗೆದುಹಾಕಲ್ಪಡುತ್ತಿರಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ, ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳಂತೆ ಅಸಂಖ್ಯಾತರಾಗುತ್ತಿದ್ದರು. ಅವರ ಹೆಸರು ನನ್ನ ಮುಂದೆ ನಿರ್ಮೂಲವಾಗಿ ಹಾಳಾಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅಗಣಿತವಾಗಿರುತ್ತಿತ್ತು ನಿನ್ನ ಸಂತತಿ ಕಡಲ ಮರಳಿನಂತೆ, ನಿನ್ನ ಕರುಳಿನ ಕುಡಿಗಳು ಉಸುಬಿನ ಅಣುರೇಣುಗಳಂತೆ, ಅವರ ಹೆಸರುಗಳು ಕೆಟ್ಟು ಅಳಿದುಹೋಗುತ್ತಿರಲಿಲ್ಲ ನನ್ನ ಮುಂದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳ ಪ್ರಕಾರವೂ ಅಸಂಖ್ಯಾತರಾಗುತ್ತಿದ್ದರು; ಅವರ ಹೆಸರು ನನ್ನ ಮುಂದೆ ನಿರ್ಮೂಲವಾಗಿ ಹಾಳಾಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಿನ್ನ ಸಂತಾನವು ಸಹ ಮರಳಿನಂತೆಯೂ, ನಿನ್ನ ಮಕ್ಕಳು ಅಸಂಖ್ಯಾತ ಧಾನ್ಯಗಳಂತೆಯೂ ಇರುವರು. ಅವರ ಹೆಸರುಗಳು ನನ್ನ ಸಮ್ಮುಖದಿಂದ, ಅಳಿದುಹೋಗದೆ ಇರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:19
22 ತಿಳಿವುಗಳ ಹೋಲಿಕೆ  

ನಿನ್ನ ಜನರು ಸಮುದ್ರದ ಮರಳಿನಂತೆ ಬಹಳವಿರುವರು. ಆದರೆ ಅವರಲ್ಲಿ ಕೆಲವರೇ ಉಳಿದು ಕರ್ತನ ಬಳಿಗೆ ಬರುವರು. ಆ ಜನರು ದೇವರ ಬಳಿಗೆ ಹಿಂತಿರುಗುವರು. ಅದಕ್ಕಿಂತ ಮೊದಲು ನಿನ್ನ ದೇಶವು ನಾಶವಾಗುವದು. ದೇಶವು ನಾಶವಾಗುವದೆಂದು ದೇವರು ಪ್ರಕಟಿಸಿದ್ದಾನೆ. ಆ ಬಳಿಕ ದೇವರ ಒಳ್ಳೆತನವು ಆ ದೇಶಕ್ಕೆ ಬರುವದು. ಅದು ದಡತುಂಬಿ ಹರಿಯುವ ನದಿಯೋಪಾದಿಯಲ್ಲಿರುವದು.


ನಾನು ನಿನ್ನನ್ನು ಖಂಡಿತವಾಗಿಯೂ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಖಂಡಿತವಾಗಿಯೂ ಹೆಚ್ಚಿಸುವೆನು; ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಮರಳಿನಂತೆಯೂ ಅಸಂಖ್ಯಾತರನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ಇದಲ್ಲದೆ ಯೆಶಾಯನು ಇಸ್ರೇಲಿನ ಬಗ್ಗೆ ಕೂಗಿ ಹೇಳಿದ್ದಾನೆ: “ಸಮುದ್ರ ತೀರದ ಮರಳಿನಂತೆ ಇಸ್ರೇಲರು ಅಸಂಖ್ಯಾತವಾಗಿರುವರು. ಆದರೆ ಆ ಜನರಲ್ಲಿ ಕೆಲವರು ಮಾತ್ರ ರಕ್ಷಣೆ ಹೊಂದುವರು.


“ಇನ್ನು ಮುಂದೆ ಇಸ್ರೇಲರ ಜನಸಂಖ್ಯೆಯು ಸಮುದ್ರದ ಮರಳಿನಂತಿರುವದು. ನೀವು ಮರಳನ್ನು ಅಳತೆಮಾಡಲೂ ಅದನ್ನು ಲೆಕ್ಕಿಸಲೂ ಸಾಧ್ಯವಿಲ್ಲ. ಆಗ, ‘ನೀವು ನನ್ನ ಜನರಲ್ಲ’ ಎಂಬ ಹೇಳಿಕೆಯ ಬದಲಾಗಿ, ‘ನೀವು ಜೀವಸ್ವರೂಪನಾದ ದೇವರ ಮಕ್ಕಳು’ ಎಂಬುದಾಗಿ ಕರೆಯಲ್ಪಡುವಿರಿ.


ಆದರೆ ನಾನು ನನ್ನ ಸೇವಕನಾದ ದಾವೀದನಿಗೂ ಲೇವಿಯರಿಗೂ ಅಸಂಖ್ಯಾತ ಸಂತಾನವನ್ನು ಕೊಡುತ್ತೇನೆ. ಅವರು ಆಕಾಶದ ನಕ್ಷತ್ರಗಳಂತೆಯೂ ಸಮುದ್ರದ ತೀರದ ಮರಳಿನಂತೆಯೂ ಅಸಂಖ್ಯಾತರಾಗುವರು.”


ಯೆಹೋವನು ಹೀಗೆ ನುಡಿದನು: “ನಾನು ಯೆಹೂದವನ್ನೂ ಜೆರುಸಲೇಮಿನಲ್ಲಿ ವಾಸಿಸುವ ಜನರನ್ನೂ ದಂಡಿಸುವೆನು. ಬಾಳನ ಪೂಜೆಯ ಪ್ರತಿಯೊಂದು ಚಿಹ್ನೆಯನ್ನೂ ಅದನ್ನು ಪೂಜಿಸುವ ಪುರೋಹಿತರನ್ನೂ ಮತ್ತು ಯಾವ ಜನರು


“ನಾನು ಹೊಸ ಪ್ರಪಂಚವನ್ನು ಸೃಷ್ಟಿಸುವೆನು; ಹೊಸ ಆಕಾಶವೂ ಹೊಸ ಭೂಮಿಯೂ ಶಾಶ್ವತವಾಗಿರುವವು. ಹಾಗೆಯೇ ನಿಮ್ಮ ಹೆಸರುಗಳು ಯಾವಾಗಲೂ ನನ್ನೊಂದಿಗೆ ಇರುತ್ತವೆ; ನಿಮ್ಮ ಮಕ್ಕಳು ನನ್ನೊಂದಿಗೆ ಯಾವಾಗಲೂ ಇರುತ್ತಾರೆ.


“ಆದರೆ ನಾನು ತಾಳ್ಮೆಯಿಂದಿರುವೆನು. ನಾನು ಇದನ್ನು ನನ್ನ ಹೆಸರಿನ ನಿಮಿತ್ತ ಮಾಡುವೆನು. ನಾನು ನಿಮ್ಮ ಮೇಲೆ ಕೋಪಗೊಂಡು ನಾನು ನಾಶಮಾಡದೆ ಇದ್ದುದಕ್ಕಾಗಿ ಜನರು ನನ್ನನ್ನು ಸ್ತುತಿಸುವರು. ನನ್ನ ತಾಳ್ಮೆಗಾಗಿ ನೀವು ನನ್ನನ್ನು ಕೊಂಡಾಡುವಿರಿ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಾನು ಎದ್ದುನಿಂತು ಅವರಿಗೆ ವಿರುದ್ಧವಾಗಿ ಹೋರಾಡುವೆನು. ನಾನು ಹೆಸರುವಾಸಿಯಾದ ಬಾಬಿಲೋನ್ ನಗರವನ್ನು ನಾಶಮಾಡುವೆನು. ಬಾಬಿಲೋನಿನ ಎಲ್ಲಾ ಜನರನ್ನು ನಾಶಮಾಡುವೆನು. ಅವರ ಮಕ್ಕಳನ್ನು ಮತ್ತು ಮರಿಮಕ್ಕಳನ್ನು ನಾಶಮಾಡುವೆನು” ಯೆಹೋವನೇ ಈ ಮಾತುಗಳನ್ನು ನುಡಿದಿದ್ದಾನೆ.


ಆದ್ದರಿಂದ ಯೆಹೋವನು ಇಸ್ರೇಲರ ತಲೆಯನ್ನೂ ಬಾಲವನ್ನೂ ಕತ್ತರಿಸುವನು. ಒಂದೇ ದಿವಸದಲ್ಲಿ ಯೆಹೋವನು ಮರದ ಕಾಂಡವನ್ನೂ ಕೊಂಬೆಗಳನ್ನೂ ಕತ್ತರಿಸಿಬಿಡುವನು.


ಅವನನ್ನು ಸಂಪೂರ್ಣವಾಗಿ ನಾಶಮಾಡು. ಮುಂದಿನ ತಲೆಮಾರಿನಲ್ಲಿಯೇ ಅವನ ಹೆಸರು ಇಲ್ಲವಾಗಲಿ.


ನೀನು ಜನಾಂಗಗಳನ್ನು ಟೀಕಿಸಿ ಆ ದುಷ್ಟರನ್ನು ನಾಶಮಾಡಿದೆ. ನೀನು ಅವರ ಹೆಸರುಗಳನ್ನು ಜೀವಿತರ ಪಟ್ಟಿಯಿಂದ ಶಾಶ್ವತವಾಗಿ ಅಳಿಸಿಹಾಕಿರುವೆ.


ಮೋವಾಬ್ಯಳೂ ಮಹ್ಲೋನನ ಹೆಂಡತಿಯೂ ಆಗಿದ್ದ ರೂತಳನ್ನು ನನ್ನ ಹೆಂಡತಿಯನ್ನಾಗಿ ತೆಗೆದುಕೊಳ್ಳುತ್ತೇನೆ. ಸತ್ತುಹೋದ ಮನುಷ್ಯನ ಆಸ್ತಿಯು ಅವನ ಹೆಸರಿನಲ್ಲಿ ಉಳಿಯಲೆಂದು ನಾನು ಹೀಗೆ ಮಾಡುತ್ತಿದ್ದೇನೆ. ಹೀಗೆ ಮಾಡುವುದರಿಂದ ಸತ್ತವನ ಹೆಸರು ಅವನ ಕುಟುಂಬದಲ್ಲಿಯೂ ಅವನ ಆಸ್ತಿಯಲ್ಲಿಯೂ ಉಳಿಯುವುದು. ಇದಕ್ಕೆ ನೀವೇ ಸಾಕ್ಷಿಯಾಗಿದ್ದೀರಿ” ಎಂದು ನುಡಿದನು.


ಈ ವಿಷಯವು ಕಾನಾನ್ಯರಿಗೂ ದೇಶದ ಉಳಿದ ಎಲ್ಲಾ ಜನರಿಗೂ ತಿಳಿಯುವುದು. ಆಗ ಅವರು ನಮ್ಮ ಮೇಲೆ ಧಾಳಿಮಾಡಿ ನಮ್ಮೆಲ್ಲರನ್ನು ಕೊಂದು ಹಾಕುತ್ತಾರೆ. ಆಗ ನೀನು ನಿನ್ನ ಕೀರ್ತಿಯನ್ನು ಉಳಿಸಿಕೊಳ್ಳಲು ಏನು ಮಾಡುವೆ?” ಎಂದು ಪ್ರಲಾಪಿಸಿದನು.


ನಾನು ನಿನ್ನ ಜನರನ್ನು ಭೂಮಿಯ ಮೇಲಿರುವ ಧೂಳಿನಷ್ಟು ಹೆಚ್ಚಿಸುವೆನು. ಯಾವನಾದರೂ ಭೂಮಿಯ ಮೇಲಿರುವ ಧೂಳಿನ ಕಣಗಳನ್ನು ಲೆಕ್ಕಮಾಡಬಹುದಾದರೆ ನಿನ್ನ ಸಂತತಿಯವರ ಸಂಖ್ಯೆಯು ಅದರಷ್ಟೇ ಇರುವುದು.


ನೀನು ಅನೇಕ ಮಕ್ಕಳನ್ನು ಪಡೆದುಕೊಳ್ಳುವೆ. ಅವರು ಭೂಮಿಯ ಮೇಲಿರುವ ಹುಲ್ಲಿನ ಗರಿಗಳಷ್ಟಿರುವರು.


“ಬಾಯಾರಿದ ಜನರಿ ಗೆ ನಾನು ನೀರು ಹೊಯ್ಯುವೆನು. ಬಂಜ ರು ಭೂಮಿಯಲ್ಲಿ ನಾನು ಹೊಳೆ ಹರಿಯುವಂತೆ ಮಾಡುವೆನು. ನಿನ್ನ ಸಂತಾನದ ಮೇಲೆ ನಾನು ನನ್ನ ಆತ್ಮವನ್ನು ಸುರಿಸುವೆನು; ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು. ಅದು ಹರಿಯುವ ಬುಗ್ಗೆಯ ನೀರಿನಂತಿರುವುದು.


ಅವರು ಈ ಲೋಕದ ಜನರೊಂದಿಗೆ ಬೆಳೆಯುವರು. ಅವರು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದಂತಿರುವರು.


ಯಾಕೆಂದರೆ ನೀನು ಅಧಿಕವಾಗಿ ಬೆಳೆಯುವಿ. ನಿನ್ನ ಮಕ್ಕಳು ಅನೇಕ ಜನಾಂಗಗಳನ್ನು ವಶಮಾಡಿಕೊಳ್ಳುವರು. ಕೆಡವಿಹಾಕಿದ ಪಟ್ಟಣಗಳಲ್ಲಿ ನಿನ್ನ ಮಕ್ಕಳು ತಿರಿಗಿ ವಾಸಿಸುವರು.


ಇವರನ್ನು ನಾನು ಸಂಪೂರ್ಣವಾಗಿ ನಾಶಮಾಡುತ್ತೇನೆ. ಅವರ ಹೆಸರುಗಳನ್ನು ಯಾರೂ ನೆನಪಿನಲ್ಲಿಟ್ಟುಕೊಳ್ಳದಂತೆ ಮಾಡುತ್ತೇನೆ. ಆಮೇಲೆ ನಾನು ನಿನ್ನಿಂದ ಬಲಿಷ್ಠವಾದ ಮಹಾಜನಾಂಗವನ್ನು ನಿರ್ಮಿಸುತ್ತೇನೆ’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು