Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:24 - ಪರಿಶುದ್ದ ಬೈಬಲ್‌

24 ಯುದ್ಧವೀರನು ಯುದ್ಧದಲ್ಲಿ ಕೊಳ್ಳೆಹೊಡೆದದ್ದನ್ನು ನೀನು ಅವನಿಂದ ಕಿತ್ತುಕೊಳ್ಳಲಾರೆ. ಬಲಿಷ್ಠ ಸೈನಿಕನು ಯುದ್ಧ ಕೈದಿಯನ್ನು ಕಾವಲು ಕಾಯುವಾಗ ಆ ಕೈದಿಯು ತಪ್ಪಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಶೂರನಿಂದ ಕೊಳ್ಳೆಯನ್ನು ತೆಗೆದುಕೊಳ್ಳಬಹುದೋ? ಭಯಂಕರನಿಂದ ಸೆರೆಯಾದವರನ್ನು ಬಿಡಿಸಬಹುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಬಲಾಢ್ಯನಿಂದ ಕೊಳ್ಳೆಯನ್ನು ಕಸಿದುಕೊಳ್ಳಲಾದೀತೆ? ಭೀಕರನಿಗೆ ಸೆರೆಯಾದವರನ್ನು ಬಿಡಿಸಲಾದೀತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಶೂರನಿಂದ ಕೊಳ್ಳೆಯನ್ನು ಕಸುಕೊಳ್ಳಬಹುದೇ? ಭೀಕರನಿಗೆ ಸೆರೆಯಾದವರನ್ನು ಬಿಡಿಸಲಾದೀತೇ [ಎಂದುಕೊಳ್ಳುತ್ತೀಯಾ]?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದುಕೊಳ್ಳಬಹುದೋ? ಭಯಂಕರನಿಂದ ಸೆರೆಯವರನ್ನು ಬಿಡಿಸಬಹುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:24
17 ತಿಳಿವುಗಳ ಹೋಲಿಕೆ  

ಒಬ್ಬ ವ್ಯಕ್ತಿಯು ಬಲಿಷ್ಠನೊಬ್ಬನ ಮನೆಗೆ ನುಗ್ಗಿ ಅವನ ಸ್ವತ್ತನ್ನು ಕದಿಯಬೇಕಿದ್ದರೆ, ಮೊದಲು ಅವನು ಆ ಬಲಿಷ್ಠನನ್ನು ಕಟ್ಟಿಹಾಕಬೇಕು. ಆಗ ಆ ಬಲಿಷ್ಠನ ಮನೆಯ ಸ್ವತ್ತನ್ನು ಕದಿಯಲು ಅವನಿಗೆ ಸಾಧ್ಯವಾಗುವುದು.


ಆಗ ನನ್ನ ಒಡೆಯನಾದ ಯೆಹೋವನು ನನ್ನೊಡನೆ ಹೀಗೆ ಹೇಳಿದನು, “ನರಪುತ್ರನೇ, ಈ ಎಲುಬುಗಳಿಗೆ ತಿರುಗಿ ಜೀವ ಬಂದೀತೋ?” ಅದಕ್ಕೆ ನಾನು, “ನನ್ನ ಒಡೆಯನಾದ ಯೆಹೋವನೇ, ನೀನೇ ಬಲ್ಲೆ. ಈ ಪ್ರಶ್ನೆಗೆ ಉತ್ತರ ನಿನಗೇ ಗೊತ್ತಿದೆ” ಎಂದು ಉತ್ತರಿಸಿದೆನು.


ಆದರೆ, ಜನರನ್ನು ನೋಡಿರಿ. ಅವರನ್ನು ಬೇರೆಯವರು ಸೋಲಿಸಿದ್ದಾರೆ. ಅವರಿಂದ ವಸ್ತುಗಳನ್ನು ದೋಚಿದ್ದಾರೆ. ತರುಣರೆಲ್ಲರೂ ಭಯಪಟ್ಟಿದ್ದಾರೆ; ಅವರನ್ನು ಸೆರೆಮನೆಯಲ್ಲಿ ಬಂಧಿಸಿದ್ದಾರೆ. ಅವರಿಂದ ಹಣವನ್ನು ಜನರು ಕಿತ್ತುಕೊಂಡಿದ್ದಾರೆ. ಅವರನ್ನು ರಕ್ಷಿಸಲು ಯಾರೂ ಇಲ್ಲ. ಅವರಲ್ಲಿ ಹಣವನ್ನು “ಹಿಂದಕ್ಕೆ ಕೊಡು” ಎಂದು ಹೇಳುವವರೇ ಇಲ್ಲ.


“ನಮಗೆ ಒದಗಿದ ಕೆಡುಕು, ಸಂಕಟಗಳಿಗೆ ನಾವೇ ಕಾರಣರು. ನಾವು ಅನೀತಿ ಕೆಲಸಗಳನ್ನು ಮಾಡಿದ್ದೆವು. ಅದಕ್ಕೆ ಅನುಭವಿಸಬೇಕಾಗಿದ್ದ ಶಿಕ್ಷೆಯನ್ನು ನೀನು ನಮಗೆ ವಿಧಿಸಲಿಲ್ಲ. ನಾವು ಅತಿಘೋರವಾದ ಪಾಪಗಳನ್ನು ಮಾಡಿದ್ದಕ್ಕೆ ಅತ್ಯಂತ ಘೋರ ಶಿಕ್ಷೆಯು ನಮಗೆ ದೊರಕ ಬೇಕಿತ್ತು. ಆದರೂ ನೀನು ನಮ್ಮವರಲ್ಲಿ ಕೆಲವರನ್ನು ಸೆರೆಯಿಂದ ತಪ್ಪಿಸಿಕೊಳ್ಳುವಂತೆ ಮಾಡಿದೆ.


ಹೌದು, ನಾವು ಗುಲಾಮರಾಗಿದ್ದೆವು. ಆದರೆ ಸದಾಕಾಲ ಗುಲಾಮರಾಗಲು ನೀನು ನಮ್ಮನ್ನು ಬಿಡಲಿಲ್ಲ. ನಮ್ಮ ಮೇಲೆ ನೀನು ದಯೆ ತೋರಿಸಿರುವೆ. ಪರ್ಶಿಯ ರಾಜರು ನಮಗೆ ಕರುಣೆತೋರುವಂತೆ ಮಾಡಿದೆ. ನಿನ್ನ ಆಲಯವು ಹಾಳಾಗಿತ್ತು. ನಿನ್ನ ಆ ಆಲಯವನ್ನು ಮತ್ತೆ ಹೊಸದಾಗಿ ಕಟ್ಟಲು ನೀನು ನಮಗೆ ಹೊಸ ಜೀವವನ್ನು ಕೊಟ್ಟಿರುವೆ. ದೇವರೇ, ಯೆಹೂದ ಮತ್ತು ಜೆರುಸಲೇಮ್‌ಗಳ ಸಂರಕ್ಷಣೆಗಾಗಿ ಗೋಡೆಯನ್ನು ಕಟ್ಟಲು ನೀನು ನಮಗೆ ಸಹಾಯಮಾಡಿದೆ.


ಆಗ ಒಡೆಯನಾದ ಯೆಹೋವನು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಈ ಎಲುಬುಗಳು ಇಸ್ರೇಲ್ ಜನಾಂಗ. ‘ನಮ್ಮ ಎಲುಬುಗಳು ಒಣಗಿಹೋಗಿವೆ. ನಮ್ಮ ನಿರೀಕ್ಷೆಯು ಮುಗಿದುಹೋಯಿತು. ನಾವು ಸಂಪೂರ್ಣವಾಗಿ ನಾಶವಾಗಿ ಹೋಗಿದ್ದೇವೆ’ ಎಂದು ಇಸ್ರೇಲರು ಹೇಳುತ್ತಾರೆ.


ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.


ಫಸಲು ಇಲ್ಲಿ ಉತ್ತಮವಾಗಿದೆ. ನಾವು ಪಾಪಮಾಡಿದ್ದರಿಂದ ನಮ್ಮ ಸುಗ್ಗಿಯು ನಮ್ಮನ್ನಾಳುವ ರಾಜರಿಗೆ ಹೋಗಿಬಿಡುತ್ತದೆ. ಆ ರಾಜರುಗಳು ನಮ್ಮನ್ನೂ ನಮ್ಮ ದನಕರುಗಳನ್ನೂ ತಮ್ಮ ಹತೋಟಿಯೊಳಗೆ ಇಟ್ಟಿರುತ್ತಾರೆ. ನಮ್ಮನ್ನು ತಮಗೆ ಇಷ್ಟಬಂದಂತೆ ನಡಿಸುತ್ತಾರೆ. ಆದ್ದರಿಂದ ನಾವು ಬಹಳ ಸಂಕಟದಲ್ಲಿ ಸಿಕ್ಕಿಕೊಂಡಿದ್ದೇವೆ.”


ಆದರೆ ದೇವರೇ, ನಮಗೆ ಸಂಭವಿಸುವ ಪ್ರತಿಯೊಂದರಲ್ಲೂ ನಿನ್ನದೇನೂ ತಪ್ಪಿಲ್ಲ. ನೀನು ನ್ಯಾಯವಂತನೇ ಸರಿ. ನಾವೇ ತಪ್ಪಿತಸ್ಥರು.


“ಒಬ್ಬ ವ್ಯಕ್ತಿಯು ಬಲಾಢ್ಯನ ಮನೆಗೆ ಪ್ರವೇಶಿಸಿ ಅವನ ವಸ್ತುಗಳನ್ನು ಕದಿಯಲು ಇಚ್ಛಿಸಿದರೆ, ಮೊದಲು ಅವನು ಬಲಾಢ್ಯನನ್ನು ಕಟ್ಟಿಹಾಕಬೇಕು. ಆಗ ಅವನು ಬಲಾಢ್ಯನ ಮನೆಯಿಂದ ವಸ್ತುಗಳನ್ನು ಕದಿಯಲು ಸಾಧ್ಯವಾಗುವುದು.


ಶತ್ರುಗಳು ಆರ್ಭಟಿಸುವರು, ಆ ಆರ್ಭಟವು ಪ್ರಾಯದ ಸಿಂಹಗಳ ಗರ್ಜನೆಯಂತಿರುವುದು. ಶತ್ರುಗಳು ಹೂಂಕರಿಸುತ್ತಾ ತಮ್ಮೊಂದಿಗೆ ಯುದ್ಧ ಮಾಡುತ್ತಿರುವವರನ್ನು ಹಿಡಿದುಬಿಡುವರು. ಜನರು ಹೋರಾಡಿ ಪಾರಾಗಲು ಪ್ರಯತ್ನಿಸುವರು. ಆದರೆ ಅವರನ್ನು ರಕ್ಷಿಸುವವರು ಯಾರೂ ಇರುವುದಿಲ್ಲ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಿನೆವೆಯೇ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ರಥಗಳನ್ನು ಸುಟ್ಟುಹಾಕುತ್ತೇನೆ. ನಿನ್ನ ಎಳೆ ಸಿಂಹಗಳನ್ನು ರಣರಂಗದಲ್ಲಿ ಸಾಯಿಸುತ್ತೇನೆ. ಈ ಭೂಮಿಯ ಮೇಲೆ ಇನ್ನು ಯಾರನ್ನೂ ಭೇಟಿ ಮಾಡದಿರುವೆ. ನಿನ್ನ ಸಂದೇಶವಾಹಕರಿಂದ ಕೆಟ್ಟ ಸಮಾಚಾರವನ್ನು ಜನರು ಇನ್ನು ಎಂದಿಗೂ ಕೇಳರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು