Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:25 - ಪರಿಶುದ್ದ ಬೈಬಲ್‌

25 ಆದರೆ ಯೆಹೋವನು ಹೇಳುವುದೇನೆಂದರೆ, “ಕೈದಿಗಳು ತಪ್ಪಿಸಿಕೊಳ್ಳುವರು. ಬಲಿಷ್ಠ ಸೈನಿಕನಿಂದ ಯಾರೋ ಒಬ್ಬನು ಕೈದಿಯನ್ನು ಬಿಡಿಸಿಕೊಳ್ಳುವನು. ಇದು ಹೇಗೆ ಸಾಧ್ಯ? ಹೇಗೆಂದರೆ, ನಾನೇ ನಿನ್ನ ಬದಲಾಗಿ ಯುದ್ಧ ಮಾಡುವೆನು; ನಿನ್ನ ಮಕ್ಕಳನ್ನು ರಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೋವನು ಹೀಗೆನ್ನುತ್ತಾನೆ, “ಶೂರನ ಸೆರೆಯವರೂ ಅಪಹರಿಸಲ್ಪಡುವರು. ಭಯಂಕರನ ಕೊಳ್ಳೆಯೂ ತೆಗೆಯಲ್ಪಡುವುದು. ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸರ್ವೇಶ್ವರ ಹೀಗೆನ್ನುತ್ತಾರೆ : “ಹೌದು, ಅಪಹರಿಸಲಾಗುವುದು ಬಲಾಢ್ಯನ ಸೆರೆಯಾಳುಗಳನು ಕಸಿದುಕೊಳ್ಳಲಾಗುವುದು ಭೀಕರನ ಕೊಳ್ಳೆಯನು. ನಿನ್ನೊಡನೆ ಹೋರಾಡುವವನ ಸಂಗಡ ಹೊರಾಡುವೆ ನಾನೇ. ಅಷ್ಟೇ ಅಲ್ಲ, ನಿನ್ನ ಮಕ್ಕಳನು ಉದ್ಧರಿಸುವೆ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯೆಹೋವನು ಹೀಗನ್ನುತ್ತಾನೆ - ಶೂರನ ಸೆರೆಯವರೂ ಅಪಹರಿಸಲ್ಪಡುವರು, ಭೀಕರನ ಕೊಳ್ಳೆಯೂ ತೆಗೆಯಲ್ಪಡುವದು; ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಯೆಹೋವ ದೇವರು ಹೀಗೆನ್ನುತ್ತಾರೆ: “ಶೂರನ ಸೆರೆಯವರು ಅಪಹರಿಸಲಾಗುವರು. ಭೀಕರನ ಕೊಳ್ಳೆ ಕಸಿದುಕೊಳ್ಳಲಾಗುವುದು. ಏಕೆಂದರೆ ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ, ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:25
39 ತಿಳಿವುಗಳ ಹೋಲಿಕೆ  

ಜನರು ಭಯದಿಂದ ಗಲಿಬಿಲಿಗೊಂಡಿದ್ದಾರೆ. ಅವರಿಗೆ ಹೀಗೆ ಹೇಳು, “ಧೈರ್ಯಗೊಳ್ಳಿರಿ, ಭಯಪಡಬೇಡಿ.” ಇಗೋ, ನಿಮ್ಮ ದೇವರು ಬಂದು ನಿಮ್ಮ ವೈರಿಗಳನ್ನು ಶಿಕ್ಷಿಸುವನು. ಆತನು ಬಂದು ನಿಮಗೆ ಪ್ರತಿಫಲವನ್ನು ಕೊಡುವನು. ಯೆಹೋವನು ನಿಮ್ಮನ್ನು ಕಾಪಾಡುತ್ತಾನೆ.


ನಿನ್ನ ಮಕ್ಕಳು ದೇವರನ್ನು ಅನುಸರಿಸುವರು. ಆತನು ಅವರಿಗೆ ಬೋಧಿಸುವನು. ನಿನ್ನ ಮಕ್ಕಳಿಗೆ ನಿಜವಾದ ಶಾಂತಿ ಇರುವದು.


ಆದರೆ ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧ ಮಾಡಿದ ಜನಾಂಗಗಳನ್ನೆಲ್ಲಾ ಯೆಹೋವನು ಶಿಕ್ಷಿಸುವನು. ಅವರಿಗೆ ಭಯಂಕರ ರೋಗವನ್ನು ಬರಮಾಡುವನು. ಅವರು ಜೀವಂತರಾಗಿರುವಾಗಲೇ ಅವರ ಚರ್ಮವು ಕೊಳೆತುಹೋಗುವದು. ಅವರ ಕಣ್ಣುಗಳು ಅವು ಇರುವಲ್ಲಿಯೇ ಕೊಳೆತುಹೋಗುವವು. ಅವರ ಬಾಯೊಳಗೆ ಅವರ ನಾಲಿಗೆಗಳು ಕೊಳೆತುಹೋಗುವವು.


ಆ ಜನಾಂಗಗಳವರು ಇಸ್ರೇಲರನ್ನು ಇಸ್ರೇಲ್ ದೇಶಕ್ಕೆ ನಡಿಸುವರು. ಆ ಪರಜನಾಂಗಗಳ ಗಂಡಸರು ಹೆಂಗಸರು ಇಸ್ರೇಲರ ಗುಲಾಮರಾಗಿರುವರು. ಹಿಂದಿನ ದಿವಸಗಳಲ್ಲಿ ಆ ಜನರು ಇಸ್ರೇಲರನ್ನು ಬಲವಂತದಿಂದ ತಮ್ಮ ಗುಲಾಮರನ್ನಾಗಿ ಮಾಡಿದರು. ಆದರೆ ಈಗ ಇಸ್ರೇಲರು ಆ ಜನಾಂಗಗಳನ್ನು ಸೋಲಿಸಿ ಅವರನ್ನು ಆಳುವರು.


ಅಶ್ಶೂರವು ನಿಮಗೆ ಸಂಕಟವನ್ನು ಉಂಟುಮಾಡುವದು. ಅದು ನಿಮಗೆ ನಿತ್ಯವೂ ಹೊರುವ ಭಾರವಾಗಿ ಪರಿಣಮಿಸುವದು. ನಿಮ್ಮ ಹೆಗಲಿನ ಮೇಲೆ ನೊಗವನ್ನು ಹಾಕುವದು. ಆದರೆ ಅದು ತೆಗೆದುಹಾಕಲ್ಪಡುವದು. ಅದು ನಿನ್ನ ದೇವರ ಶಕ್ತಿಯಿಂದ ಮುರಿಯಲ್ಪಡುವದು.


ನಿನಗೆ ಒಳ್ಳೆಯದನ್ನು ಮಾಡುವವರನ್ನು ಆಶೀರ್ವದಿಸುವೆನು; ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ನಿನ್ನ ನಿಮಿತ್ತವಾಗಿ ಲೋಕದವರೆಲ್ಲರೂ ಆಶೀರ್ವಾದ ಹೊಂದುವರು” ಎಂದು ಹೇಳಿದನು.


ಸೈತಾನನು ಆರಂಭದಿಂದಲೂ ಪಾಪಗಳನ್ನು ಮಾಡುತ್ತಿದ್ದಾನೆ. ಪಾಪಗಳನ್ನು ಮಾಡುತ್ತಲೇ ಇರುವವನು ಸೈತಾನನಿಗೆ ಸೇರಿದವನಾಗಿದ್ದಾನೆ. ದೇವರ ಮಗನಾದ ಕ್ರಿಸ್ತನು ಸೈತಾನನ ಕಾರ್ಯವನ್ನು ನಾಶಪಡಿಸುವುದಕ್ಕಾಗಿಯೇ ಬಂದನು.


ಜೆರುಸಲೇಮೇ, ನಾವು ನಿನ್ನ ಒಡಂಬಡಿಕೆಗೆ ಮುದ್ರೆ ಹಾಕಲು ರಕ್ತವನ್ನು ಉಪಯೋಗಿಸಿದೆವು. ಆದ್ದರಿಂದ ನೆಲದ ಹೊಂಡದೊಳಗಿಂದ ಜನರನ್ನು ಬಿಡುಗಡೆ ಮಾಡಿದ್ದೇನೆ.


ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನ್ ಎಪ್ಪತ್ತು ವರ್ಷಗಳವರೆಗೆ ಬಲಿಷ್ಠವಾಗಿರುವುದು. ಅನಂತರ ನಾನು ಬಾಬಿಲೋನಿನಲ್ಲಿ ವಾಸಮಾಡುತ್ತಿರುವ ನಿಮ್ಮ ಬಳಿಗೆ ಬಂದು ನನ್ನ ವಾಗ್ದಾನದಂತೆ ನಿಮ್ಮನ್ನು ಜೆರುಸಲೇಮಿಗೆ ಮತ್ತೆ ಕರೆದುಕೊಂಡು ಬರುವೆನು.


ಆ ಸಮಯದಲ್ಲಿ ಜನರು, “ನಮ್ಮ ದೇವರು ಇಲ್ಲಿದ್ದಾನೆ. ಆತನಿಗಾಗಿಯೇ ನಾವು ಕಾಯುತ್ತಿದ್ದೆವು. ಆತನು ನಮ್ಮನ್ನು ರಕ್ಷಿಸಲು ಬಂದಿದ್ದಾನೆ. ನಾವು ನಮ್ಮ ದೇವರಾದ ಯೆಹೋವನಿಗಾಗಿ ಕಾಯುತ್ತಿದ್ದೆವು. ಆತನು ನಮ್ಮನ್ನು ರಕ್ಷಿಸುವಾಗ ನಾವು ಹರ್ಷಭರಿತರಾಗಿ ಸಂತೋಷಿಸುವೆವು” ಎಂದು ಹೇಳುವರು.


ಪರಲೋಕವೇ, ಇದರಿಂದ ನೀನೂ ಸಂತೋಷಪಡು! ದೇವರ ಪರಿಶುದ್ಧ ಜನರೇ, ಅಪೊಸ್ತಲರೇ, ಪ್ರವಾದಿಗಳೇ, ನೀವೂ ಸಂತೋಷಪಡಿರಿ! ಅವಳು ನಿಮಗೆ ಮಾಡಿದ ಕೇಡುಗಳಿಗಾಗಿ ದೇವರು ಅವಳನ್ನು ದಂಡಿಸಿದನು.’”


ಆದರೆ ಪರಲೋಕದಲ್ಲಿರುವ ಜೆರುಸಲೇಮ್ ಸ್ವತಂತ್ರಳಾದ ಸ್ತ್ರೀಯಂತಿದೆ. ಇದೇ ನಮ್ಮ ತಾಯಿ.


ಆಗ ಯೆಹೋವನು ಆ ಜನಾಂಗಗಳ ವಿರುದ್ಧವಾಗಿ ಯುದ್ಧ ಮಾಡುವನು. ಅದು ಭಯಂಕರವಾದ ಕಾದಾಟವಾಗಿರುವದು.


“ಒಬ್ಬ ವ್ಯಕ್ತಿಯು ಬಲಾಢ್ಯನ ಮನೆಗೆ ಪ್ರವೇಶಿಸಿ ಅವನ ವಸ್ತುಗಳನ್ನು ಕದಿಯಲು ಇಚ್ಛಿಸಿದರೆ, ಮೊದಲು ಅವನು ಬಲಾಢ್ಯನನ್ನು ಕಟ್ಟಿಹಾಕಬೇಕು. ಆಗ ಅವನು ಬಲಾಢ್ಯನ ಮನೆಯಿಂದ ವಸ್ತುಗಳನ್ನು ಕದಿಯಲು ಸಾಧ್ಯವಾಗುವುದು.


ಯೆಹೋವನೇ, ನನ್ನ ವ್ಯಾಜ್ಯಗಳಲ್ಲಿ ವಾದಿಸು! ನನ್ನ ಯುದ್ಧಗಳಲ್ಲಿ ಹೋರಾಡು!


ಶತ್ರುಗಳು ಆರ್ಭಟಿಸುವರು, ಆ ಆರ್ಭಟವು ಪ್ರಾಯದ ಸಿಂಹಗಳ ಗರ್ಜನೆಯಂತಿರುವುದು. ಶತ್ರುಗಳು ಹೂಂಕರಿಸುತ್ತಾ ತಮ್ಮೊಂದಿಗೆ ಯುದ್ಧ ಮಾಡುತ್ತಿರುವವರನ್ನು ಹಿಡಿದುಬಿಡುವರು. ಜನರು ಹೋರಾಡಿ ಪಾರಾಗಲು ಪ್ರಯತ್ನಿಸುವರು. ಆದರೆ ಅವರನ್ನು ರಕ್ಷಿಸುವವರು ಯಾರೂ ಇರುವುದಿಲ್ಲ.


ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯುದ್ಧಮಾಡಲು ನಾನು ಅಶ್ಶೂರವನ್ನು ಕಳುಹಿಸುವೆನು. ನಾನು ಅವರ ಮೇಲೆ ಕೋಪಗೊಂಡಿರುವೆನು. ಅಶ್ಶೂರಕ್ಕೆ ಅವರ ಮೇಲೆ ಯುದ್ಧ ಮಾಡುವಂತೆ ಆಜ್ಞಾಪಿಸುವೆನು. ಅಶ್ಶೂರವು ಅವರನ್ನು ಸೋಲಿಸಿ ಅವರ ಐಶ್ವರ್ಯವನ್ನೆಲ್ಲಾ ಸೂರೆಮಾಡುವದು. ಇಸ್ರೇಲು ಅಶ್ಶೂರದವರಿಗೆ ಬೀದಿಯ ಧೂಳಿನಂತಾಗುವದು.


ಮುಂದಿನ ದಿವಸಗಳಲ್ಲಿ ಯೆಹೋವನು ಯಾಕೋಬನ ಮೇಲೆ ಮತ್ತೆ ಪ್ರೀತಿತೋರುವನು. ಯೆಹೋವನು ಮತ್ತೆ ಇಸ್ರೇಲರನ್ನು ಆರಿಸುವನು. ಆ ಸಮಯದಲ್ಲಿ ಅವರ ದೇಶವನ್ನು ಅವರಿಗೆ ಹಿಂತಿರುಗಿಸುವನು. ಆಗ ಯೆಹೂದ್ಯರಲ್ಲದವರು ಯೆಹೂದ್ಯರೊಂದಿಗೆ ಸೇರಿಕೊಳ್ಳುವರು. ಅವರೆಲ್ಲರೂ ಒಂದೇ ವಂಶದವರಾಗುವರು. ಅದು ಯಾಕೋಬನ ವಂಶ.


ಇದು ಸರ್ವಶಕ್ತನಾದ ಯೆಹೋವನು ಅದ್ಭುತವನ್ನು ನಡಿಸುತ್ತಾನೆಂಬುದಕ್ಕೆ ಗುರುತಾಗಿದೆ. ಜನರು ಯಾವಾಗಲಾದರೂ ಸರಿಯೇ ಸಹಾಯಕ್ಕಾಗಿ ಮೊರೆಯಿಟ್ಟರೆ ಆತನು ಸಹಾಯವನ್ನು ಕಳುಹಿಸುವನು. ಯೆಹೋವನು ಅವರನ್ನು ರಕ್ಷಿಸಲೂ ಕಾಪಾಡಲೂ ಒಬ್ಬನನ್ನು ಕಳುಹಿಸುವನು. ಆ ಮನುಷ್ಯನು ಬೇರೆಯವರಿಂದ ಶೋಷಿತರಾದವರನ್ನು ಸಂರಕ್ಷಿಸುವನು.


ಯೆಹೋವನೇ, ನೀನೇ ನಮ್ಮ ಆಶ್ರಯವು. ಬಡವರಿಗೆ ನೀನೇ ಆಧಾರ. ಅವರ ಸಮಸ್ಯೆಗಳು ಅವರನ್ನು ಕಷ್ಟಕ್ಕೆ ಗುರಿಪಡಿಸುವವು. ಆದರೆ ನೀನು ಅವರನ್ನು ಸಂರಕ್ಷಿಸುವೆ. ಯೆಹೋವನೇ, ಒಂದು ಮನೆಯ ಜನರನ್ನು ಪ್ರವಾಹದಿಂದಲೂ, ಬಿಸಿಲಿನ ತಾಪದಿಂದಲೂ ಕಾಪಾಡುವಂತೆ ನೀನಿರುವೆ. ಮುಂದಿನ ತೊಂದರೆಗಳು ಬಿರುಗಾಳಿಯಂತೆಯೂ ಮಳೆಯಂತೆಯೂ ಇವೆ. ಮಳೆಯು ಗೋಡೆಗೆ ಬಡಿದು ಕೆಳಗೆ ಇಳಿಯುವದು. ಆದರೆ ಮನೆಯೊಳಗಿರುವವರಿಗೆ ಹಾನಿಯೇ ಆಗದು.


ಜೆರುಸಲೇಮಿನೊಂದಿಗೆ ಕರುಣೆಯಿಂದ ಮಾತಾಡು. ಜೆರುಸಲೇಮಿಗೆ ಹೀಗೆ ಹೇಳು, ‘ನಿನ್ನ ಸೆರೆವಾಸದ ಸಮಯವು ಅಂತ್ಯವಾಯಿತು. ನೀನು ನಿನ್ನ ಪಾಪಗಳ ಶಿಕ್ಷೆಯನ್ನು ಅನುಭವಿಸಿದೆ.’ ಜೆರುಸಲೇಮ್ ಮಾಡಿದ ಪ್ರತಿಯೊಂದು ಪಾಪಕೃತ್ಯಗಳಿಗಾಗಿ ಯೆಹೋವನು ಎರಡು ಬಾರಿ ಶಿಕ್ಷಿಸಿದನು.”


ನಿನ್ನ ದೇವರೂ ಒಡೆಯನೂ ಆಗಿರುವ ಯೆಹೋವನು ತನ್ನ ಜನರಿಗಾಗಿ ಯುದ್ಧ ಮಾಡುವನು. ಅವನು ನಿನಗೆ ಹೇಳುವುದೇನೆಂದರೆ, “ಇಗೋ, ನಾನು ನಿನ್ನಿಂದ ವಿಷದ ಪಾತ್ರೆಯನ್ನು (ಶಿಕ್ಷೆ) ತೆಗೆದುಬಿಡುತ್ತೇನೆ. ಇನ್ನು ಮುಂದೆ ನನ್ನ ಸಿಟ್ಟಿನಿಂದ ನೀನು ಶಿಕ್ಷಿಸಲ್ಪಡುವದಿಲ್ಲ.


“ನಾನು ನಿನ್ನನ್ನು ಆ ದುಷ್ಟ ಜನರಿಂದ ರಕ್ಷಿಸುತ್ತೇನೆ. ಆ ಜನರು ನಿನ್ನನ್ನು ಬೆದರಿಸುತ್ತಾರೆ. ಆದರೆ ನಾನು ನಿನ್ನನ್ನು ಆ ಜನರಿಂದ ರಕ್ಷಿಸುತ್ತೇನೆ.”


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಿನೆವೆಯೇ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ರಥಗಳನ್ನು ಸುಟ್ಟುಹಾಕುತ್ತೇನೆ. ನಿನ್ನ ಎಳೆ ಸಿಂಹಗಳನ್ನು ರಣರಂಗದಲ್ಲಿ ಸಾಯಿಸುತ್ತೇನೆ. ಈ ಭೂಮಿಯ ಮೇಲೆ ಇನ್ನು ಯಾರನ್ನೂ ಭೇಟಿ ಮಾಡದಿರುವೆ. ನಿನ್ನ ಸಂದೇಶವಾಹಕರಿಂದ ಕೆಟ್ಟ ಸಮಾಚಾರವನ್ನು ಜನರು ಇನ್ನು ಎಂದಿಗೂ ಕೇಳರು.”


“ಯಾರೂ ಅವನನ್ನು ಬಿಡಿಸದಿದ್ದರೂ ಜ್ಯೂಬಿಲಿ ವರ್ಷದಲ್ಲಿ ಅವನು ಮತ್ತು ಅವನ ಮಕ್ಕಳು ಬಿಡುಗಡೆ ಹೊಂದುವರು.


ಸೆರೆಯಲ್ಲಿರುವವರು ಬೇಗನೆ ಬಿಡುಗಡೆ ಹೊಂದುವರು. ಅವರು ಸೆರೆಮನೆಯಲ್ಲಿ ಸತ್ತು ಕೊಳೆಯುವುದಿಲ್ಲ. ಅವರಿಗೆ ತಿನ್ನಲು ಬೇಕಾದಷ್ಟು ಊಟವಿರುವದು.


ಯೆಹೋವನು ಯಾಕೋಬ್ಯರನ್ನು ಹಿಂದಕ್ಕೆ ಕರೆದುಕೊಂಡು ಬರುವನು. ಯೆಹೋವನು ತನ್ನ ಜನರನ್ನು ಅವರಿಗಿಂತಲೂ ಬಲಿಷ್ಠರಾದ ಜನರಿಂದ ರಕ್ಷಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು