Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:7 - ಪರಿಶುದ್ದ ಬೈಬಲ್‌

7 ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ, ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ, “ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ ಅನ್ಯಜನಾಂಗಕ್ಕೆ ಅಸಹ್ಯನೂ ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾವಿುಯೂ ಆದ ಯೆಹೋವನು ಹೀಗೆ ಹೇಳುತ್ತಾನೆ - ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನನ್ನು ಪರಿಗ್ರಹಿಸಿರುವದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮನಃಪೂರ್ವಕವಾಗಿ ತಿರಸ್ಕೃತನಾದವನೂ ಜನಾಂಗಕ್ಕೆ ಅಸಹ್ಯನೂ, ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೋವ ದೇವರ ನಂಬಿಗಸ್ತಿಕೆಯನ್ನೂ, ನೀನು ಆಯ್ದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ಕಂಡು ಅರಸರು ಎದ್ದು ನಿಲ್ಲುತ್ತಾರೆ, ಅಧಿಪತಿಗಳು ಸಹ ಆರಾಧಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:7
41 ತಿಳಿವುಗಳ ಹೋಲಿಕೆ  

ನಂತರ ಜನರು ಅಲ್ಲಿಯೇ ಯೇಸುವಿನ ಮುಖದ ಮೇಲೆ ಉಗುಳಿದರು. ಮುಷ್ಠಿಯಿಂದ ಆತನನ್ನು ಗುದ್ದಿದರು. ಆತನ ಕೆನ್ನೆಗೆ ಹೊಡೆದರು.


ಪ್ರಭುವಾದ ಯೇಸುವೇ ಜೀವವುಳ್ಳ “ಕಲ್ಲು.” ಈ ಲೋಕದ ಜನರು ತಮಗೆ ಆ “ಕಲ್ಲು” (ಯೇಸು) ಬೇಡವೆಂದು ತೀರ್ಮಾನಿಸಿದರು. ಆದರೆ ಆತನು ದೇವರಿಂದ ಆರಿಸಲ್ಪಟ್ಟ “ಕಲ್ಲು.” ಆತನು ದೇವರಿಗೆ ಅಮೂಲ್ಯನಾಗಿದ್ದಾನೆ. ಆದ್ದರಿಂದ ಆತನ ಹತ್ತಿರಕ್ಕೆ ಬನ್ನಿರಿ.


ಜನರು ಆತನನ್ನು ಪರಿಹಾಸ್ಯ ಮಾಡಿದರು. ಆತನ ಸ್ನೇಹಿತರು ಆತನನ್ನು ತೊರೆದರು. ಆತನು ನೋವಿನಿಂದ ಬಳಲಿದನು. ಆತನು ಕಾಯಿಲೆಯಿಂದ ಬಾಧಿತನಾಗಿದ್ದನು. ಜನರು ಆತನ ಕಡೆಗೆ ನೋಡಲೂ ಇಲ್ಲ. ನಾವು ಆತನನ್ನು ಗಮನಕ್ಕೆ ತರಲೇ ಇಲ್ಲ.


ಇದೇ ನಿಯಮ ಮನುಷ್ಯಕುಮಾರನಿಗೂ ಅನ್ವಯಿಸುತ್ತದೆ. ಮನುಷ್ಯಕುಮಾರನು ಬೇರೆಯವರಿಂದ ಸೇವೆ ಮಾಡಿಸಿಕೊಳ್ಳಲು ಬರದೆ ಬೇರೆಯವರಿಗೆ ಸೇವೆ ಮಾಡುವುದಕ್ಕಾಗಿ ಮತ್ತು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು.


ರಕ್ಷಕನೂ ಇಸ್ರೇಲರ ಪರಿಶುದ್ಧನೂ ಆಗಿರುವ ಯೆಹೋವನು ಹೇಳುವುದೇನೆಂದರೆ, “ನಾನೇ ನಿಮ್ಮ ದೇವರಾದ ಯೆಹೋವನು. ಯಾವದು ಒಳ್ಳೆಯದೋ, ಪ್ರಯೋಜನಕರವೋ ಅದನ್ನು ಮಾಡಲು ನಿಮಗೆ ಕಲಿಸುತ್ತೇನೆ. ನೀವು ಹೋಗಲೇಬೇಕಾದ ದಾರಿಯಲ್ಲಿ ನಿಮ್ಮನ್ನು ನಡಿಸುವೆನು.


ನಿನ್ನ ಮಕ್ಕಳಿಗೆ ಅರಸರು ಉಪಾಧ್ಯಾಯರಾಗಿರುವರು. ರಾಜಪುತ್ರಿಯರು ನಿನ್ನ ಮಕ್ಕಳನ್ನು ನೋಡಿಕೊಳ್ಳುವರು. ಆ ಅರಸರೂ ರಾಜಪುತ್ರಿಯರೂ ನಿನಗೆ ಅಡ್ಡಬೀಳುವರು. ನಿನ್ನ ಕಾಲಿನ ಧೂಳಿಗೆ ಮುತ್ತು ಕೊಡುವರು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವಿ. ನನ್ನ ಮೇಲೆ ಭರವಸವಿಡುವವನು ಆಶಾಭಂಗಪಡನು ಎಂದು ಆಗ ನೀನು ತಿಳಿದುಕೊಳ್ಳುವಿ.”


ದೂರದೇಶದಲ್ಲಿರುವ ಜನರೇ, ನನ್ನ ಮಾತುಗಳಿಗೆ ಕಿವಿಗೊಡಿರಿ; ಭೂಮಿಯ ಮೇಲೆ ವಾಸಿಸುವ ಜನರೇ, ನನ್ನ ಮಾತುಗಳನ್ನು ಕೇಳಿರಿ. ನಾನು ಹುಟ್ಟುವ ಮೊದಲೇ ಯೆಹೋವನು ನನ್ನನ್ನು ತನ್ನ ಸೇವೆಗಾಗಿ ಕರೆದನು. ನಾನು ತಾಯಿಯ ಗರ್ಭದಲ್ಲಿರುವಾಗಲೇ ಯೆಹೋವನು ನನ್ನ ಹೆಸರೆತ್ತಿ ಕರೆದನು.


ಒಂದೇ ತಿಂಗಳೊಳಗೆ ಮೂರು ಮಂದಿ ಕುರುಬರನ್ನು ನಾನು ಕೆಲಸದಿಂದ ಬಿಡಿಸಿದೆನು. ನಾನು ಕುರಿಗಳ ಮೇಲೆ ಸಿಟ್ಟುಗೊಳ್ಳಲಾರಂಭಿಸಿದೆನು. ಅವು ನನ್ನನ್ನು ಹಗೆ ಮಾಡಲಾರಂಭಿಸಿದವು.


ಅನೇಕ ಜನಾಂಗಗಳವರು ಆತನನ್ನು ಕಂಡು ಆಶ್ಚರ್ಯಪಡುವರು. ಅರಸರು ದಿಗ್ಭ್ರಮೆಯಿಂದ ಆತನನ್ನು ದೃಷ್ಟಿಸಿ ನೋಡುವರು. ಅವರು ನನ್ನ ಸೇವಕನ ಬಗ್ಗೆ ಕೇಳಲಿಲ್ಲ. ಆತನಿಗೆ ಸಂಭವಿಸಿದ್ದನ್ನೇ ನೋಡಿದರು. ಅವರು ಆತನ ವಿಚಾರ ಕೇಳದಿದ್ದರೂ ಅವರಿಗೆ ತಿಳಿದುಬಂತು.”


“ನನ್ನ ಸೇವಕನನ್ನು ನೋಡಿರಿ! ನಾನು ಆತನಿಗೆ ಬೆಂಬಲ ನೀಡುತ್ತೇನೆ. ನಾನು ಆರಿಸಿಕೊಂಡಿದ್ದು ಆತನನ್ನೇ. ನಾನು ಆತನನ್ನು ಮೆಚ್ಚಿಕೊಂಡಿದ್ದೇನೆ. ನನ್ನ ಆತ್ಮವನ್ನು ಆತನಲ್ಲಿರಿಸುವೆನು. ಆತನು ಜನಾಂಗಗಳನ್ನು ನ್ಯಾಯವಾಗಿ ತೀರ್ಪು ಮಾಡುವನು.


ಯೆಹೂದ್ಯರು, “ಕೊಲ್ಲಿರಿ, ಕೊಲ್ಲಿರಿ; ಅವನನ್ನು ಶಿಲುಬೆಗೇರಿಸಿರಿ!” ಎಂದು ಕಿರುಚಿದರು. ಪಿಲಾತನು ಯೆಹೂದ್ಯರಿಗೆ, “ನಿಮ್ಮ ರಾಜನನ್ನು ಶಿಲುಬೆಗೇರಿಸಬೇಕೇ?” ಎಂದು ಕೇಳಿದನು. ಮಹಾಯಾಜಕರು, “ನಮಗಿರುವ ಒಬ್ಬನೇ ರಾಜನೆಂದರೆ ಸೀಸರ್!” ಎಂದು ಉತ್ತರಕೊಟ್ಟರು.


ಜನರು ನೋಡುತ್ತಾ ಅಲ್ಲಿ ನಿಂತಿದ್ದರು. ಯೆಹೂದ್ಯನಾಯಕರು ಯೇಸುವನ್ನು ನೋಡಿ ಗೇಲಿಮಾಡಿದರು. ಅವರು, “ಇವನು ದೇವರಿಂದ ಆರಿಸಲ್ಪಟ್ಟ ಕ್ರಿಸ್ತನಾಗಿದ್ದರೆ ತನ್ನನ್ನು ರಕ್ಷಿಸಿಕೊಳ್ಳಲಿ. ಇವನು ಬೇರೆಯವರನ್ನು ರಕ್ಷಿಸಿದನಲ್ಲವೇ?” ಅಂದರು.


ಆದರೆ ಅವರು ಕೂಗಾಟವನ್ನು ಮುಂದುವರಿಸಿ ಯೇಸುವನ್ನು ಶಿಲುಬೆಗೆ ಹಾಕಿ ಕೊಲ್ಲಿಸಬೇಕೆಂದು ಬಲವಂತಪಡಿಸಿದರು. ಅವರ ಕೂಗಾಟ ಬಹಳ ಹೆಚ್ಚಾದದ್ದರಿಂದ,


ಬೇರೆ ದೇಶದ ಮಕ್ಕಳು ನಿನ್ನ ಗೋಡೆಗಳನ್ನು ಮತ್ತೆ ಕಟ್ಟುವರು. ಅವರ ಅರಸರುಗಳು ನಿನ್ನ ಸೇವೆ ಮಾಡುವರು. “ನಾನು ಕೋಪಗೊಂಡಾಗ ನಿನ್ನನ್ನು ಬಾಧಿಸಿದೆನು. ಆದರೆ ಈಗ ನಿನಗೆ ಕರುಣೆ ತೋರುವೆನು. ನಿನ್ನನ್ನು ಆದರಿಸುವೆನು.


ಜನಾಂಗಗಳು ನಿನ್ನ ಬೆಳಕಿನ ಕಡೆಗೆ ಬರುವರು. ಅರಸರುಗಳು ನಿನ್ನ ಪ್ರಕಾಶಮಾನವಾದ ಬೆಳಕಿನತ್ತ ಬರುವರು.


ನನ್ನ ಬೆನ್ನಿಗೆ ಹೊಡೆಯಲೂ ನನ್ನ ಗಡ್ಡವನ್ನು ಕೀಳಲೂ ಅವರಿಗೆ ನನ್ನನ್ನು ಒಪ್ಪಿಸಿಕೊಡುತ್ತೇನೆ. ಅವರು ನನ್ನನ್ನು ಬೈದು ನನ್ನ ಮುಖಕ್ಕೆ ಉಗುಳಿದರೂ ನಾನು ನನ್ನ ಮುಖವನ್ನು ಅಡಗಿಸುವದಿಲ್ಲ.


ಇವು ಬಹಳ ಕಾಲದ ಹಿಂದೆ ನಡೆದ ವಿಷಯಗಳಲ್ಲ. ಇವು ಈಗ ಸಂಭವಿಸುವ ವಿಷಯಗಳು. ಈ ದಿವಸಕ್ಕೆ ಮೊದಲು ನೀವು ಇದನ್ನು ಕೇಳಲಿಲ್ಲ. ಆದ್ದರಿಂದ ‘ನಮಗೆ ಇದೆಲ್ಲಾ ಗೊತ್ತಿದೆ’ ಎಂದು ನೀವು ಹೇಳಲಾಗದು.


ಅವರು ಈಜಿಪ್ಟಿನಿಂದ ಐಶ್ವರ್ಯವನ್ನು ನಿನಗೆ ತಂದುಕೊಡುವಂತೆ ಮಾಡು. ದೇವರೇ, ಇಥಿಯೋಪಿಯದವರು ತಮ್ಮ ಐಶ್ವರ್ಯವನ್ನು ನಿನಗೆ ತಂದುಕೊಡುವಂತೆ ಮಾಡು.


ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಪವಿತ್ರನೂ ಸತ್ಯವಂತನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಬೀಗದ ಕೈ ನನ್ನಲ್ಲಿದೆ. ನಾನು ತೆರೆದದ್ದನ್ನು ಯಾರೂ ಮುಚ್ಚಲಾರರು; ಮುಚ್ಚಿದ್ದನ್ನು ಯಾರೂ ತೆರೆಯಲಾರರು.


ಮಹಾಯಾಜಕರು ಮತ್ತು ಯೆಹೂದ್ಯ ಕಾವಲುಗಾರರು ಯೇಸುವನ್ನು ಕಂಡು, “ಅವನನ್ನು ಶಿಲುಬೆಗೆ ಹಾಕಿಸು! ಅವನನ್ನು ಶಿಲುಬೆಗೆ ಹಾಕಿಸು!” ಎಂದು ಕೂಗಿದರು. ಆದರೆ ಪಿಲಾತನು, “ನೀವೇ ಆತನನ್ನು ಶಿಲುಬೆಗೆ ಹಾಕಿರಿ. ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ” ಎಂದು ಉತ್ತರಕೊಟ್ಟನು.


ಯೆಹೂದ್ಯರು, “ಇಲ್ಲ, ಅವನನ್ನಲ್ಲ! ಬರಬ್ಬನಿಗೆ ಬಿಡುಗಡೆಯಾಗಲಿ!” ಎಂದು ಕೂಗಿದರು. (ಬರಬ್ಬನು ಒಬ್ಬ ದರೋಡೆಕೋರ.)


ಆದರೆ ಜನರೆಲ್ಲರೂ, “ಅವನನ್ನು ಕೊಲ್ಲಿಸು! ಬರಬ್ಬನನ್ನು ಬಿಟ್ಟುಕೊಡು” ಎಂದು ಕೂಗಿದರು.


ಶ್ರೇಷ್ಠನಾದವನು ಯಾರು? ಊಟಕ್ಕೆ ಕುಳಿತವನೋ? ಅಥವಾ ಅವನಿಗೆ ಸೇವೆ ಮಾಡುವವನೋ? ಊಟಕ್ಕೆ ಕುಳಿತಿರುವವನೇ ಶ್ರೇಷ್ಠನೆಂದು ನೀವು ಭಾವಿಸುತ್ತೀರೋ? ಆದರೆ ನಾನು ನಿಮ್ಮಲ್ಲಿ ಸೇವಕನಂತಿದ್ದೇನೆ!


ಜನಾಂಗಗಳು ನಿನಗೆ ಬೇಕಾದದ್ದೆಲ್ಲವನ್ನು ಕೊಡುವರು. ಒಂದು ಮಗು ಹೇಗೆ ತಾಯಿಯ ಹಾಲನ್ನು ಕುಡಿಯುವದೋ ಅದೇ ರೀತಿಯಲ್ಲಿ ಅರಸರುಗಳಿಂದ ನೀನು ಧನವನ್ನು ಕುಡಿಯುವಿ. ಆಗ ಯೆಹೋವನಾದ ನಾನೇ ನಿನ್ನನ್ನು ರಕ್ಷಿಸಿದೆನೆಂದು ತಿಳಿದುಕೊಳ್ಳುವಿ. ಆಗ ಯಾಕೋಬ್ಯರ ಮಹಾದೇವರು ನಿಮ್ಮನ್ನು ಕಾಪಾಡುವನೆಂದು ತಿಳಿದುಕೊಳ್ಳುವಿರಿ.


ನನ್ನ ನಾಚಿಕೆ ನಿನಗೆ ಗೊತ್ತಿದೆ. ಶತ್ರುಗಳು ನನಗೆ ಮಾಡಿದ ಅವಮಾನ ನಿನಗೆ ಗೊತ್ತಿದೆ. ಅವರು ಮಾಡಿದ್ದನ್ನೆಲ್ಲಾ ನೀನು ಕಣ್ಣಾರೆ ನೋಡಿರುವೆ.


ದೇವರು ನಂಬಿಗಸ್ತನಾಗಿದ್ದಾನೆ. ದೇವರ ಮಗನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಜೀವದಲ್ಲಿ ಪಾಲುಹೊಂದಬೇಕೆಂದು ನಮ್ಮನ್ನು ಕರೆದಿರುವಾತನು ದೇವರೇ.


ಎಲ್ಲಾ ಜನರು ನಿನ್ನ ಸೇವೆಮಾಡಲಿ; ಜನಾಂಗಗಳು ನಿನಗೆ ತಲೆಬಾಗಲಿ. ನೀನು ನಿನ್ನ ಸಹೋದರರ ಮೇಲೆ ಆಡಳಿತ ಮಾಡುವೆ. ನಿನ್ನ ತಾಯಿಯ ಗಂಡುಮಕ್ಕಳು ನಿನಗೆ ತಲೆಬಾಗಿ ವಿಧೇಯರಾಗುವರು. ನಿನ್ನನ್ನು ಶಪಿಸುವ ಪ್ರತಿಯೊಬ್ಬನು ಶಾಪಗ್ರಸ್ಥನಾಗುವನು. ನಿನ್ನನ್ನು ಆಶೀರ್ವದಿಸುವ ಪ್ರತಿಯೊಬ್ಬನು ಆಶೀರ್ವದಿಸಲ್ಪಡುವನು.”


“ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರ ತಲೆಮಾರುಗಳವರೆಗೂ ಮುಂದುವರಿಯುವವು.


ಜನಾಂಗಗಳ ನಾಯಕರು ಅಬ್ರಹಾಮನ ದೇವಜನರೊಡನೆ ಕೂಡಿಬರುವರು. ಎಲ್ಲಾ ಜನಾಂಗಗಳ ಎಲ್ಲಾ ನಾಯಕರುಗಳು ದೇವರಿಗೆ ಅಧೀನರಾಗಿದ್ದಾರೆ. ದೇವರು ಅವರಿಗೆ ಸರ್ವಾಧಿಕಾರಿ!


ಮುಂದಿನ ದಿವಸಗಳಲ್ಲಿ ಯೆಹೋವನು ಯಾಕೋಬನ ಮೇಲೆ ಮತ್ತೆ ಪ್ರೀತಿತೋರುವನು. ಯೆಹೋವನು ಮತ್ತೆ ಇಸ್ರೇಲರನ್ನು ಆರಿಸುವನು. ಆ ಸಮಯದಲ್ಲಿ ಅವರ ದೇಶವನ್ನು ಅವರಿಗೆ ಹಿಂತಿರುಗಿಸುವನು. ಆಗ ಯೆಹೂದ್ಯರಲ್ಲದವರು ಯೆಹೂದ್ಯರೊಂದಿಗೆ ಸೇರಿಕೊಳ್ಳುವರು. ಅವರೆಲ್ಲರೂ ಒಂದೇ ವಂಶದವರಾಗುವರು. ಅದು ಯಾಕೋಬನ ವಂಶ.


ಆ ಸಮಯದಲ್ಲಿ ಈಜಿಪ್ಟಿನ ಜನರು ಯೆಹೋವನನ್ನು ನಿಜವಾಗಿಯೂ ಅರಿತುಕೊಳ್ಳುವರು. ಅವರು ದೇವರನ್ನು ಪ್ರೀತಿಸುವರು. ಅವರು ಯೆಹೋವನನ್ನು ಸೇವಿಸಿ ಅನೇಕ ಯಜ್ಞಗಳನ್ನು ಸಮರ್ಪಿಸುವರು. ಯೆಹೋವನಿಗೆ ಹರಕೆ ಹೊತ್ತು ಸಲ್ಲಿಸುವರು.


ಆ ಸಮಯದಲ್ಲಿ ಈಜಿಪ್ಟಿನಿಂದ ಅಶ್ಶೂರದವರೆಗೆ ಹೆದ್ದಾರಿ ಇರುವುದು. ಆಗ ಅಶ್ಶೂರದವರು ಈಜಿಪ್ಟಿಗೂ, ಈಜಿಪ್ಟಿನವರು ಅಶ್ಶೂರಕ್ಕೂ ಪ್ರಯಾಣ ಮಾಡುವರು. ಈಜಿಪ್ಟಿನವರು ಅಶ್ಶೂರದವರೊಟ್ಟಿಗೆ ಕೆಲಸ ಮಾಡುವರು.


ನನ್ನ ಜನರಲ್ಲಿ ಹೆಚ್ಚಿನವರು ಅಶ್ಶೂರದಲ್ಲಿ ಈಗ ಕಳೆದುಹೋಗಿರುತ್ತಾರೆ; ಕೆಲವರು ಈಜಿಪ್ಟಿಗೆ ಓಡಿಹೋಗಿದ್ದಾರೆ. ಆ ಸಮಯದಲ್ಲಿ ಮಹಾದೊಡ್ಡ ತುತ್ತೂರಿಯ ಶಬ್ದವು ಕೇಳಿಸುವದು. ಆಗ ಆ ಜನರೆಲ್ಲರೂ ಜೆರುಸಲೇಮಿಗೆ ಹಿಂತಿರುಗುವರು. ಆ ಜನರು ಪರಿಶುದ್ಧ ಪರ್ವತದ ಮೇಲೆ ಯೆಹೋವನ ಮುಂದೆ ಅಡ್ಡಬೀಳುವರು.


ನಿನ್ನನ್ನು ಹಿಂಸಿಸುವವರು ತಮ್ಮ ದೇಹದ ಮಾಂಸವನ್ನೇ ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವಂತೆ ತಮ್ಮ ಸ್ವಂತ ರಕ್ತವನ್ನೇ ಕುಡಿಸಿ ಅಮಲೇರಿಸುವೆನು; ಆಗ ಯೆಹೋವನೇ ನಿನ್ನನ್ನು ರಕ್ಷಿಸಿದನೆಂದು ಜನರೆಲ್ಲರೂ ತಿಳಿದುಕೊಳ್ಳುವರು. ಯಾಕೋಬ್ಯರ ಸರ್ವಶಕ್ತನಾದ ದೇವರು ನಿಮ್ಮನ್ನು ರಕ್ಷಿಸಿದನೆಂದು ಎಲ್ಲರೂ ತಿಳಿಯುವರು.”


ಪ್ರತಿಯೊಂದು ಆರಾಧನಾ ದಿನದಲ್ಲಿ ಪ್ರತಿಯೊಬ್ಬರೂ ಬಂದು ನನ್ನನ್ನು ಆರಾಧಿಸುವರು. ಪ್ರತಿಯೊಂದು ಸಬ್ಬತ್ ದಿನದಲ್ಲೂ ತಿಂಗಳ ಮೊದಲ ದಿನದಲ್ಲೂ ಅವರು ನನ್ನ ಬಳಿಗೆ ಬರುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು