Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:12 - ಪರಿಶುದ್ದ ಬೈಬಲ್‌

12 ನೀವು ಕುಡಿಯುತ್ತಾ ಹಾರ್ಪ್‌ವಾದ್ಯಗಳನ್ನೂ ದಮ್ಮಡಿಗಳನ್ನೂ ಕೊಳಲುಗಳನ್ನೂ ಬಾರಿಸುತ್ತಾ ನೃತ್ಯಮಾಡುವಿರಿ. ಆದರೆ ಯೆಹೋವನು ಮಾಡಿದ ಕಾರ್ಯಗಳನ್ನು ನೀವು ಗಮನಿಸುವುದಿಲ್ಲ. ಯೆಹೋವನ ಹಸ್ತವು ಅನೇಕಾನೇಕ ಕಾರ್ಯಗಳನ್ನು ಮಾಡಿದೆ. ಆದರೆ ನೀವು ಅವುಗಳನ್ನು ಲಕ್ಷಿಸುವುದಿಲ್ಲ. ಆದ್ದರಿಂದ ನಿಮಗೆ ಕೇಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕಿನ್ನರಿ, ವೀಣೆ, ತಬಲ, ಕೊಳಲು, ಮದ್ಯಪಾನ ಇವೇ ಅವರ ದುಂದೌತಣದ ಸೊಬಗು. ಸ್ವಾಮಿಯ ಕಾರ್ಯಗಳನ್ನು ಅವರು ಲಕ್ಷಿಸರು. ಸ್ವಾಮಿಯ ಕೃತಿಗಳನ್ನವರು ಧ್ಯಾನಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕಿನ್ನರಿ, ವೀಣೆ, ದಮ್ಮಡಿ, ಕೊಳಲು, ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು; ಯೆಹೋವನ ಕೆಲಸವನ್ನೋ ಅವರು ಲಕ್ಷಿಸರು, ಆತನ ಹಸ್ತಕಾರ್ಯವನ್ನು ಆಲೋಚಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ಮತ್ತು ಮದ್ಯಪಾನ ಇರುವುವು. ಆದರೆ ಯೆಹೋವ ದೇವರ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಅವರ ಕೈಗೆಲಸವನ್ನು ಲಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:12
20 ತಿಳಿವುಗಳ ಹೋಲಿಕೆ  

ಯೆಹೋವನ ಕಾರ್ಯಗಳನ್ನೂ ಆತನ ಕೈಕೆಲಸಗಳನ್ನೂ ಕೆಡುಕರು ವಿವೇಚಿಸಿ ತಿಳಿದುಕೊಳ್ಳುವುದಿಲ್ಲ. ಆದ್ದರಿಂದ ಆತನು ಅವರನ್ನು ದಂಡಿಸಿ ನಿತ್ಯನಾಶಮಾಡುವನು.


ಯಾಕೆಂದರೆ ದುಷ್ಟರು ದೇವರಿಗೆ ವಿಧೇಯರಾಗಲಿಲ್ಲ; ಆತನ ಮಾರ್ಗಗಳನ್ನು ಲಕ್ಷಿಸಲಿಲ್ಲ.


ನಿಮ್ಮ ಅನ್ಯೋನ್ಯತೆಯ ಭೋಜನದಲ್ಲಿ ಈ ಜನರು ಮುಳುಗಿಹೋದ ಬಂಡೆಗಳಂತಿದ್ದಾರೆ. ಅವರು ಭಯವಿಲ್ಲದೆ ನಿಮ್ಮ ಜೊತೆಯಲ್ಲಿ ತಿನ್ನುತ್ತಾರೆ. ಅವರು ತಮ್ಮ ಬಗ್ಗೆ ಮಾತ್ರ ಚಿಂತಿಸುವ ಕುರುಬರಾಗಿದ್ದಾರೆ. ಅವರು ನೀರಿಲ್ಲದ ಮೋಡಗಳಂತಿದ್ದಾರೆ. ಗಾಳಿಯು ಆ ಮೋಡಗಳನ್ನು ಬಡಿದುಕೊಂಡು ಹೋಗುವುದು. ಅವರು ಕಾಲಕ್ಕೆ ತಕ್ಕಂತೆ ಫಲಬಿಡದ ಮತ್ತು ಬೇರುಸಹಿತ ಕಿತ್ತುಬಂದು ಉರುಳಿಹೋದ ಮರಗಳಿಂತಿದ್ದಾರೆ.


ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.


ಯೇಸು ಹೀಗೆಂದನು: “ಒಬ್ಬ ಐಶ್ವರ್ಯವಂತನಿದ್ದನು. ಅವನು ಯಾವಾಗಲೂ ಉತ್ತಮವಾದ ಉಡುಪುಗಳನ್ನು ಧರಿಸುತ್ತಿದ್ದನು. ಅವನು ಬಹಳ ಐಶ್ವರ್ಯವಂತನಾಗಿದ್ದುದರಿಂದ ಪ್ರತಿದಿನವೂ ವೈಭವದೊಡನೆ ಊಟಮಾಡುತ್ತಾ ಸಂತೋಷಪಡುತ್ತಿದ್ದನು.


ಇಗೋ, ಈಗ ಜನರು ಸಂತೋಷಪಡುತ್ತಿದ್ದಾರೆ. ಅವರು ಹರ್ಷಿಸುತ್ತಾ: “ದನಕುರಿಗಳನ್ನು ಕೊಯ್ಯಿರಿ, ನಾವು ಹಬ್ಬ ಆಚರಿಸೋಣ, ಊಟಮಾಡಿ ದ್ರಾಕ್ಷಾರಸ ಕುಡಿಯೋಣ, ತಿಂದು, ಕುಡಿದು ಸಂತೋಷವಾಗಿರೋಣ. ಯಾಕೆಂದರೆ ನಾಳೆ ನಾವು ಸಾಯುವೆವು” ಎಂದು ಹೇಳುವರು.


ಅವರು, “ದೇವರು ತಾನು ಮಾಡಲಿಕ್ಕಿರುವುದನ್ನು ಬೇಗನೇ ಮಾಡಿಮುಗಿಸಲಿ. ಆಗ ಏನಾಗುವದೋ ನೋಡೋಣ. ಆತನ ಯೋಜನೆ ಬೇಗನೆ ಕಾರ್ಯರೂಪಕ್ಕೆ ಬರಲಿ. ಆಗ ಆತನ ಯೋಜನೆ ಏನೆಂಬುದು ನಮಗೆ ತಿಳಿಯುವುದು” ಎಂದು ಹೇಳುತ್ತಿದ್ದಾರೆ.


ನೀನು ನನಗೆ ಹೇಳದೆ ಓಡಿಬಂದದ್ದೇಕೆ? ನೀನು ನನ್ನನ್ನು ಕೇಳಿದ್ದರೆ ನಾನು ನಿನಗಾಗಿ ಒಂದು ಔತಣಕೂಟವನ್ನೇರ್ಪಡಿಸುತ್ತಿದ್ದೆ. ಅಲ್ಲಿ ಗಾಯನ, ನೃತ್ಯ ಮತ್ತು ವಾದ್ಯಗೋಷ್ಠಿಗಳಿರುತ್ತಿದ್ದವು.


ನಾದವನ್ನು ಹೊರಹೊಮ್ಮಿಸುವ ಕೊಳಲು ಅಥವಾ ವೀಣೆ ಮುಂತಾದ ನಿರ್ಜೀವ ವಸ್ತುಗಳಿಗೆ ಇದು ಸರಿಹೋಲುತ್ತದೆ. ವಿವಿಧ ಧ್ವನಿಗಳು ಸ್ಪಷ್ಟವಾಗಿಲ್ಲದಿದ್ದರೆ ಯಾವ ಹಾಡನ್ನು ನುಡಿಸಲಾಗುತ್ತಿದೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳಲಾರಿರಿ. ಪ್ರತಿಯೊಂದು ಧ್ವನಿಯನ್ನು ಸ್ಪಷ್ಟವಾಗಿ ನುಡಿಸಿದಾಗ ಮಾತ್ರ ನೀವು ಸ್ವರವನ್ನು ಅರ್ಥಮಾಡಿಕೊಳ್ಳುವಿರಿ.


ಆದರೆ ನೀವು ಯೆಹೋವನನ್ನು ಗೌರವಿಸಬೇಕು. ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವನ ಸೇವೆಯನ್ನು ನಿಜವಾಗಿಯೂ ಮಾಡಬೇಕು. ಆತನು ನಿಮಗಾಗಿ ಮಾಡಿದ ಮಹತ್ಕಾರ್ಯಗಳನ್ನು ನೆನಸಿಕೊಳ್ಳಿರಿ.


ನನಗೀಗ ಎಂಭತ್ತು ವರ್ಷ. ಒಳಿತು ಕೆಡುಕುಗಳಿಗಿರುವ ವ್ಯತ್ಯಾಸ ಈಗ ನನಗೆ ತಿಳಿಯುವುದಿಲ್ಲ. ನಾನು ತಿನ್ನುವ ಇಲ್ಲವೆ ಕುಡಿಯುವ ವಸ್ತುಗಳ ರುಚಿಯೂ ನನಗೆ ಗೊತ್ತಾಗುವುದಿಲ್ಲ. ಹಾಡುತ್ತಿರುವ ಗಂಡಸರ ಮತ್ತು ಹೆಂಗಸರ ಯಾವುದೇ ಧ್ವನಿಯೂ ನನಗೆ ಕೇಳಿಸುವುದಿಲ್ಲ. ನನ್ನ ಒಡೆಯನಾದ ರಾಜನಿಗೆ ನಾನೇಕೆ ಭಾರವಾಗಬೇಕು?


ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವದಿಲ್ಲ. ಸಂತಸದ ಗದ್ದಲವು ಕೇಳಿಸುವದಿಲ್ಲ. ಆ ಶಬ್ದಗಳೆಲ್ಲಾ ನಿಂತುಹೋಗಿವೆ. ಹಾರ್ಪ್‌ವಾದ್ಯದ ಮತ್ತು ದಮ್ಮಡಿಗಳ ಶಬ್ದವು ನಿಂತಿದೆ.


ದೇವರು ಹೇಳುವುದೇನೆಂದರೆ, “ಅರೀಯೇಲನ್ನು ನೋಡು. ಅಲ್ಲಿ ದಾವೀದನು ಪಾಳೆಯಮಾಡಿಕೊಂಡಿದ್ದನು. ಆಕೆಯ ಹಬ್ಬಗಳು ಪ್ರತಿ ವರ್ಷವೂ ನಡೆಯುತ್ತಿವೆ.


ಅವರು ಬಂದು, “ನಾನು ಸ್ವಲ್ಪ ದ್ರಾಕ್ಷಾರಸ ಕುಡಿಯುತ್ತೇನೆ. ಅಥವಾ ನಾನು ಸ್ವಲ್ಪ ಮದ್ಯವನ್ನು ಕುಡಿಯುತ್ತೇನೆ. ನಾನು ನಾಳೆಯೂ ಹೀಗೆ ಮಾಡುವೆನು. ನಾನು ಇನ್ನೂ ಹೆಚ್ಚಾಗಿ ಕುಡಿಯುವೆನು” ಎಂದು ಹೇಳುವರು.


ನಿನ್ನ ಸಂತಸದ ಹಾಡುಗಳನ್ನು ನಾನು ನಿಲ್ಲಿಸಿಬಿಡುವೆನು. ನಿನ್ನ ಕಿನ್ನರಿ ಸ್ವರವನ್ನು ಜನರು ಇನ್ನೆಂದೂ ಕೇಳರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು