Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:2 - ಪರಿಶುದ್ದ ಬೈಬಲ್‌

2 ಆತನು ಭೂಮಿಯನ್ನು ಅಗೆದು ಹಸನು ಮಾಡಿದನು; ಅದರಲ್ಲಿ ಉತ್ತಮವಾದ ದ್ರಾಕ್ಷಿಯ ಸಸಿಗಳನ್ನು ನೆಟ್ಟನು. ತೋಟದ ಮಧ್ಯದಲ್ಲಿ ಒಂದು ಗೋಪುರವನ್ನು ಕಟ್ಟಿಸಿ ದ್ರಾಕ್ಷಿಯ ತೊಟ್ಟಿಯನ್ನು ಮಾಡಿಸಿದನು. ತೋಟವು ಒಳ್ಳೆಯ ದ್ರಾಕ್ಷಿಹಣ್ಣನ್ನು ಕೊಡುವುದೆಂದು ಎದುರುನೋಡತೊಡಗಿದನು. ಆದರೆ ಅದು ಹೊಲಸು ಹಣ್ಣನ್ನು ಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಅದನ್ನು ಅಗೆದು, ಕಲ್ಲುಗಳನ್ನು ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿಯ ಸಸಿಗಳನ್ನು ನೆಟ್ಟು, ಮಧ್ಯದಲ್ಲಿ ಗೋಪುರವನ್ನು ಕಟ್ಟಿ, ದ್ರಾಕ್ಷಿಯ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ಸಿಹಿ ದ್ರಾಕ್ಷಿಯ ಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನೆಟ್ಟನು ಒಳ್ಳೊಳ್ಳೆ ದ್ರಾಕ್ಷಿಯ ಸಸಿಗಳನು ಕಟ್ಟಿದನು ಕಾವಲಿಗಾಗಿ ಅಟ್ಟಣೆಯೊಂದನು ಕಟ್ಟಿದನು ಅದರೊಳಗೆ ಆಲೆಯೊಂದನು. ನಿರೀಕ್ಷಿಸುತ್ತಿರೆ ಆತ ಸಿಹಿದ್ರಾಕ್ಷಿ ಹಣ್ಣನು, ಬಿಟ್ಟಿತದೋ ಅವನಿಗೆ ಹುಳಿ ಹಣ್ಣನು !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಅದನ್ನು ಅಗತೆಮಾಡಿ ಕಲ್ಲುಗಳನ್ನು ತೆಗೆದುಹಾಕಿ ಒಳ್ಳೊಳ್ಳೇ ದ್ರಾಕ್ಷೆಯ ಸಸಿಗಳನ್ನು ನೆಟ್ಟು ಮಧ್ಯದಲ್ಲಿ ಬುರುಜನ್ನು ಕಟ್ಟಿ ದ್ರಾಕ್ಷೆಯ ತೊಟ್ಟಿಯನ್ನು ಕೊರೆಯಿಸಿ ಮಾಡಿಕೊಂಡು ತೋಟವು [ಒಳ್ಳೇ] ದ್ರಾಕ್ಷೆಯ ಹಣ್ಣನ್ನು ಕೊಡುವದೆಂದು ಎದುರುನೋಡುತ್ತಿರಲು ಅದು ಹೊಲಸುಹಣ್ಣನ್ನು ಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಅದಕ್ಕೆ ಬೇಲಿಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿ ಸಸಿಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷಿ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ದ್ರಾಕ್ಷಿಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:2
31 ತಿಳಿವುಗಳ ಹೋಲಿಕೆ  

ಯೆಹೂದವೇ, ನಾನು ನಿನ್ನನ್ನು ಅತ್ಯುತ್ತಮ ದ್ರಾಕ್ಷಾಲತೆಯಂತೆ ನೆಟ್ಟೆ. ನೀನು ಒಳ್ಳೆಯ ಬೀಜದಂತಿದ್ದಿ. ನೀನು ಕೆಟ್ಟ ಫಲಗಳನ್ನು ಫಲಿಸುವ ಬೇರೆ ದ್ರಾಕ್ಷಿಯ ಬಳ್ಳಿಯಾದದ್ದು ಹೇಗೆ?


ಸೈನ್ಯದಲ್ಲಿ ಸೇವೆಮಾಡುವ ಯಾವ ಸೈನಿಕನಾದರೂ ತನಗೆ ತಾನೇ ಸಂಬಳವನ್ನು ಕೊಡುವುದಿಲ್ಲ. ಯಾವ ದ್ರಾಕ್ಷಿತೋಟಗಾರನಾಗಲಿ ತಾನು ಬೆಳೆದ ಹಣ್ಣಿನಲ್ಲಿ ಸ್ವಲ್ಪವನ್ನು ತಿನ್ನದೆ ಇರುವುದಿಲ್ಲ. ಹಸುಗಳನ್ನು ಸಾಕಿದ ಯಾವನೇ ಆಗಲಿ ಅವುಗಳ ಹಾಲಿನಲ್ಲಿ ಸ್ವಲ್ಪವನ್ನು ಕುಡಿಯದೆ ಇರುವುದಿಲ್ಲ.


ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ನೋಡಿದನು. ಆದ್ದರಿಂದ ಆ ಮರದಲ್ಲಿ ಅಂಜೂರದ ಹಣ್ಣೇನಾದರೂ ಸಿಕ್ಕಬಹುದೆಂದು ಅದರ ಬಳಿಗೆ ಹೋದನು. ಆದರೆ ಆತನು ಆ ಮರದಲ್ಲಿ ಅಂಜೂರದ ಹಣ್ಣುಗಳನ್ನು ಕಾಣಲಿಲ್ಲ. ಅಲ್ಲಿ ಎಲೆಗಳು ಮಾತ್ರ ಇದ್ದವು. ಏಕೆಂದರೆ ಅದು ಅಂಜೂರ ಹಣ್ಣಿನ ಕಾಲವಾಗಿರಲಿಲ್ಲ.


ಅವರು ಇಸ್ರೇಲಿನ ಜನರು. ಅವರು ದೇವರಿಂದ ಆರಿಸಲ್ಪಟ್ಟ ಮಕ್ಕಳು. ಅವರು ದೇವರ ಮಹಿಮೆಯನ್ನು ಮತ್ತು ದೇವರು ಅವರೊಂದಿಗೆ ಮಾಡಿಕೊಂಡ ಒಡಂಬಡಿಕೆಗಳನ್ನು ಹೊಂದಿದ್ದಾರೆ. ದೇವರು ಅವರಿಗೆ ಮೋಶೆಯ ಧರ್ಮಶಾಸ್ತ್ರವನ್ನೂ ಸರಿಯಾದ ಆರಾಧನೆಯ ಕ್ರಮವನ್ನೂ ತನ್ನ ವಾಗ್ದಾನಗಳನ್ನೂ ಕೊಟ್ಟನು.


“ತರುವಾಯ ಫಲಕಾಲವು ಬಂದಾಗ ತನ್ನ ಪಾಲಿನ ದ್ರಾಕ್ಷಿಯನ್ನು ತರುವುದಕ್ಕಾಗಿ ಒಬ್ಬ ಸೇವಕನನ್ನು ಕಳುಹಿಸಿದನು.


ದ್ರಾಕ್ಷಿಹಣ್ಣನ್ನು ಕೀಳುವ ಸಮಯ ಬಂದಾಗ ತನ್ನ ಪಾಲನ್ನು ತೆಗೆದುಕೊಂಡು ಬರಲು ಸೇವಕರನ್ನು ರೈತರ ಬಳಿಗೆ ಕಳುಹಿಸಿದನು.


ಆತನು ದಾರಿಯ ಪಕ್ಕದಲ್ಲಿದ್ದ ಒಂದು ಅಂಜೂರದ ಮರವನ್ನು ನೋಡಿ ಹಣ್ಣನ್ನು ತಿನ್ನಲು ಅದರ ಬಳಿಗೆ ಹೋದನು. ಆದರೆ ಮರದಲ್ಲಿ ಬರೀ ಎಲೆಗಳೇ ಇದ್ದವು. ಆದ್ದರಿಂದ ಯೇಸು ಆ ಮರಕ್ಕೆ, “ಇನ್ನು ಮೇಲೆ ನೀನೆಂದಿಗೂ ಹಣ್ಣುಬಿಡದಂತಾಗಲಿ!” ಎಂದನು. ಆ ಕೂಡಲೇ ಅಂಜೂರದ ಮರ ಒಣಗಿಹೋಯಿತು.


ಹಿಂಡುಗಳ ಗೋಪುರವೇ, ನಿನ್ನ ಸಮಯವು ಬರುವದು. ಚೀಯೋನಿನ ಒಫೆಲ್ ಗುಡ್ಡವೇ, ನಿನಗೆ ತಿರುಗಿ ಅಧಿಕಾರ ದೊರಕುವುದು. ಹೌದು, ಮೊದಲಿನಂತೆಯೇ ಜೆರುಸಲೇಮಿನಲ್ಲೇ ರಾಜ್ಯವಿರುವುದು.


ಇಸ್ರೇಲ್ ಅಧಿಕ ಹಣ್ಣುಗಳನ್ನು ಕೊಡುವ ದ್ರಾಕ್ಷಿಬಳ್ಳಿಯಂತಿದೆ. ಆದರೆ ಇಸ್ರೇಲ್ ಅಭಿವೃದ್ಧಿ ಹೊಂದಿದ ಹಾಗೆ ಅವರು ಸುಳ್ಳುದೇವರುಗಳನ್ನು ಪೂಜಿಸಲು ಹೆಚ್ಚುಹೆಚ್ಚು ವೇದಿಕೆಗಳನ್ನು ಕಟ್ಟಿದರು. ಅವರ ದೇಶವು ಉತ್ತಮವಾಗುತ್ತಾ ಬರುತ್ತಿರುವಾಗ ಅವರು ತಮ್ಮ ಸುಳ್ಳುದೇವರುಗಳಿಗೆ ಉತ್ತಮ ಕಲ್ಲುಗಳಿಂದ ವೇದಿಕೆಗಳನ್ನು ಕಟ್ಟಲು ಪ್ರಾರಂಭಿಸಿದರು.


ಸರ್ವಶಕ್ತನಾದ ಯೆಹೋವನ ದ್ರಾಕ್ಷಿತೋಟವೇ ಇಸ್ರೇಲ್ ದೇಶ. ಯೆಹೋವನು ಪ್ರೀತಿಸುವ ದ್ರಾಕ್ಷಿಬಳ್ಳಿಯೇ ಯೆಹೂದದ ಪ್ರಜೆ. ಯೆಹೋವನು ನ್ಯಾಯವನ್ನು ಅಪೇಕ್ಷಿಸಿದರೂ ಸಿಕ್ಕಿದ್ದು ನರಹತ್ಯವೇ. ಯೆಹೋವನು ಧರ್ಮವನ್ನು ಅಪೇಕ್ಷಿಸಿದರೂ ದೊರಕಿದ್ದು ಗೋಳಾಟವೇ.


ಚೀಯೋನ್ ನಗರಿಯು ದ್ರಾಕ್ಷಿತೋಟದಲ್ಲಿರುವ ಜನಶೂನ್ಯವಾದ ಡೇರೆಯಂತಿದೆ; ಸೌತೆಯ ಹೊಲದಲ್ಲಿ ಪಾಳುಬಿದ್ದಿರುವ ಮನೆಯಂತಿದೆ; ಶತ್ರುಗಳಿಗೆ ಸೋತುಹೋದ ನಗರದಂತಿದೆ.


ಆ ದಿವಸಗಳಲ್ಲಿ ಯೆಹೂದದ ಜನರು ಸಬ್ಬತ್ ದಿನದಲ್ಲಿ ಕೆಲಸ ಮಾಡುವುದನ್ನು ನೋಡಿದೆನು. ಅವರು ದ್ರಾಕ್ಷಿಯನ್ನು ತುಳಿದು ದ್ರಾಕ್ಷಾರಸ ತಯಾರಿಸುತ್ತಿದ್ದರು. ದವಸಧಾನ್ಯಗಳನ್ನು ಕತ್ತೆಗಳ ಮೇಲೆ ಹೇರಿಸಿಕೊಂಡು ಹೋಗುತ್ತಿದ್ದರು. ಬೆಳೆಯನ್ನು ಮಾರಲು ಜೆರುಸಲೇಮಿಗೆ ಬರುತ್ತಿದ್ದರು. ನಾನು ಅವರನ್ನು ಕಟುವಾಗಿ ಎಚ್ಚರಿಸಿ ಇನ್ನು ಮುಂದೆ ಸಬ್ಬತ್ ದಿನದಲ್ಲಿ ಪಟ್ಟಣದೊಳಗೆ ಏನನ್ನೂ ತರಬಾರದೆಂದು ಆಜ್ಞಾಪಿಸಿದೆನು.


ತರುವಾಯ ಸಂಸೋನನು ದೆಲೀಲಾ ಎಂಬ ಸ್ತ್ರೀಯನ್ನು ಪ್ರೀತಿಸಿದನು. ಅವಳು ಸೋರೇಕ್ ಕಣಿವೆಯವಳು.


ಹೀಗೆ ಆತನು ನಿಮಗೆ ಮಾಡಿದ ಒಳ್ಳೆಯದಕ್ಕೆ ಉಪಕಾರ ತೋರಿಸುವಿರಾ? ಇಲ್ಲ! ನೀವು ಬುದ್ಧಿಹೀನರಾಗಿದ್ದೀರಿ. ಯೆಹೋವನು ನಿಮ್ಮ ತಂದೆಯಾಗಿದ್ದಾನೆ. ಆತನೇ ನಿಮ್ಮನ್ನು ನಿರ್ಮಿಸಿದಾತನು. ಆತನೇ ನಿಮ್ಮನ್ನು ಉಂಟುಮಾಡಿದಾತನು. ಆತನೇ ಆಧಾರ ನೀಡುವಾತನು.


ಬೆಟ್ಟದ ಶಿಖರದಿಂದ ಅವರನ್ನು ನಾನು ನೋಡಿದೆನು; ಗುಡ್ಡದಿಂದ ಅವರನ್ನು ಕಂಡೆನು. ಅವರು ತಮ್ಮನ್ನು ಇತರ ಜನಾಂಗಗಳಿಗಿಂತ ಬೇರೆಯಾದವರು ಎಂದು ಪರಿಗಣಿಸಿಕೊಂಡಿದ್ದಾರೆ.


ಮಾತ್ರವಲ್ಲದೆ ನನಗೂ ಈ ಜನರಿಗೂ ನಿನ್ನ ದಯೆ ದೊರಕಿದೆಯೆಂದು ನಾವು ತಿಳಿದುಕೊಳ್ಳುವುದಾದರೂ ಹೇಗೆ? ನೀನು ನಮ್ಮೊಡನೆ ಬಂದರೆ, ಆಗ ನಾವು ಇದನ್ನು ಖಚಿತವಾಗಿ ತಿಳಿದುಕೊಳ್ಳುವೆವು. ನೀನು ನಮ್ಮೊಡನೆ ಬಾರದಿದ್ದರೆ, ಆಗ ನಮಗೂ ಭೂಮಿಯ ಮೇಲಿರುವ ಇತರ ಜನರಿಗೂ ಯಾವ ವ್ಯತ್ಯಾಸವಿರುವುದಿಲ್ಲ” ಎಂದು ಹೇಳಿದನು.


“ಈ ಸಾಮ್ಯವನ್ನು ಕೇಳಿರಿ: ಒಬ್ಬ ಮನುಷ್ಯನಿಗೆ ಒಂದು ಸ್ವಂತ ತೋಟವಿತ್ತು. ಅವನು ತೋಟದಲ್ಲಿ ದ್ರಾಕ್ಷಿಯನ್ನು ಬೆಳೆಸಿದನು; ತೋಟದ ಸುತ್ತಲೂ ಗೋಡೆ ಕಟ್ಟಿ ದ್ರಾಕ್ಷಾರಸ ತಯಾರಿಸಲು ಆಲೆಯನ್ನು ಹೂಡಿಸಿದನು. ಕಾವಲಿಗಾಗಿ ಅಟ್ಟಣೆಯನ್ನೂ ಕಟ್ಟಿಸಿದನು. ಅವನು ಆ ತೋಟವನ್ನು ಕೆಲವು ರೈತರಿಗೆ ಗುತ್ತಿಗೆಗೆ ಕೊಟ್ಟು ವಿದೇಶಕ್ಕೆ ಹೊರಟುಹೋದನು.


ಯೇಸು ಜನರಿಗೆ ಸಾಮ್ಯಗಳ ಮೂಲಕ ಉಪದೇಶಿಸುತ್ತಾ ಅವರಿಗೆ ಹೇಳಿದ್ದೇನೆಂದರೆ: “ಒಬ್ಬನು ದ್ರಾಕ್ಷಿಯ ತೋಟವನ್ನು ಮಾಡಿ, ಸುತ್ತಲೂ ಗೋಡೆ ಹಾಕಿಸಿ, ದ್ರಾಕ್ಷಾರಸವನ್ನು ತೆಗೆಯಲು ಅಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದನು. ಅವನು ಕೆಲವು ರೈತರಿಗೆ ತೋಟವನ್ನು ಗುತ್ತಿಗೆಗೆ ಕೊಟ್ಟು ಪ್ರವಾಸಕ್ಕೆ ಹೊರಟನು.


ನಾನು ನನ್ನ ಜನರಾದ ಇಸ್ರೇಲರಿಗೆ ಒಂದು ಸ್ಥಳವನ್ನು ಆರಿಸಿಕೊಂಡು ಅವರನ್ನು ನೆಲೆಗೊಳಿಸಿದ್ದೇನೆ. ವಾಸಿಸುವುದಕ್ಕಾಗಿ ಅವರ ಸ್ವಂತ ಸ್ಥಳವನ್ನು ಅವರಿಗೆ ಕೊಟ್ಟಿದ್ದೇನೆ. ಆದ್ದರಿಂದ ಈಗ ಅವರು ಅಲೆದಾಡುವ ಅಗತ್ಯವೇ ಇಲ್ಲ. ಮೊದಲು ನನ್ನ ಜನರಾದ ಇಸ್ರೇಲರನ್ನು ಮುನ್ನಡೆಸಲು ನ್ಯಾಯಾಧಿಪತಿಗಳನ್ನು ಕಳುಹಿಸಿದೆನು. ದುಷ್ಟಜನರು ಅವರಿಗೆ ತೊಂದರೆ ಕೊಟ್ಟರು. ಆದರೆ ಅದು ಈಗ ಸಂಭವಿಸುವುದಿಲ್ಲ. ನಿನಗೆ ಶತ್ರು ಭಯವಿಲ್ಲದಂತೆ ಮಾಡುತ್ತೇನೆ; ನಿನ್ನ ಕುಟುಂಬದಿಂದಲೇ ರಾಜರುಗಳನ್ನು ಬರಮಾಡುತ್ತೇನೆ.


ಹಿಂದಿನ ಕಾಲದಲ್ಲಿ ನೀನು ನಮ್ಮನ್ನು ಅಮೂಲ್ಯವಾದ ಸಸಿಯಂತೆ ನೋಡಿಕೊಂಡೆ. ನಿನ್ನ “ದ್ರಾಕ್ಷಾಲತೆ”ಯನ್ನು ಈಜಿಪ್ಟಿನಿಂದ ತೆಗೆದುಕೊಂಡು ಬಂದೆ. ನೀನು ಬೇರೆ ಜನರನ್ನು ಈ ನಾಡಿನಿಂದ ಹೊರಗಟ್ಟಿ ನಿನ್ನ “ದ್ರಾಕ್ಷಾಲತೆ”ಯನ್ನು ನೆಟ್ಟೆ.


“ದ್ರಾಕ್ಷಾಲತೆ”ಯು ಬೆಳೆಯಲೆಂದು ಭೂಮಿಯನ್ನು ಹದ ಮಾಡಿದೆ. ಅದರ ಬೇರುಗಳು ಬಲವಾಗಿ ಬೆಳೆಯಲು ಸಹಾಯಮಾಡಿದೆ. ಬಹುಬೇಗನೆ “ದ್ರಾಕ್ಷಾಲತೆ”ಯು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.


ಸರ್ವಶಕ್ತನಾದ ಯೆಹೋವನು ನಿಮ್ಮನ್ನು ನೆಟ್ಟನು. ನಿಮಗೆ ಕೇಡು ಬರುವದೆಂದು ಆತನು ಸಾರಿರುವನು. ಏಕೆಂದರೆ ಇಸ್ರೇಲ್ ವಂಶವೂ ಯೆಹೂದ ವಂಶವೂ ದುಷ್ಕೃತ್ಯಗಳನ್ನು ಮಾಡಿವೆ. ಬಾಳನಿಗೆ ಹೋಮವನ್ನರ್ಪಿಸಿ ನನಗೆ ಕೋಪ ಬರುವಂತೆ ಮಾಡಿವೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು