Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:1 - ಪರಿಶುದ್ದ ಬೈಬಲ್‌

1 “ಒಳ್ಳೆಯವರಾಗಿ ಜೀವಿಸಲು ಬಹಳವಾಗಿ ಪ್ರಯತ್ನಿಸುತ್ತಿರುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ. ನಿಮ್ಮ ಪಿತೃವಾದ ಅಬ್ರಹಾಮನನ್ನೇ ದೃಷ್ಟಿಸಿ ನೋಡಿರಿ; ಆ ಬಂಡೆಯೊಳಗಿಂದಲೇ ನೀವು ತೆಗೆಯಲ್ಪಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನೀತಿಯನ್ನು ಹಿಂಬಾಲಿಸುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ, ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರೋ, ಯಾವ ಗುಂಡಿಯಿಂದ ಅಗೆಯಲ್ಪಟ್ಟಿರೋ ಆ ಕಡೆಗೆ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಸದ್ಧರ್ಮಾರ್ಥಿಗಳಾದ ಸರ್ವೇಶ್ವರನ ಶರಣರೇ ಕೇಳಿ : ನೀವು ಯಾವ ಬಂಡೆಗಲ್ಲಿನಿಂದ ರೂಪುಪಡೆದಿರಿ, ಯಾವ ಕಲ್ಲುಗುಂಡಿಯಿಂದ ಅಗೆಯಲ್ಪಟ್ಟಿರಿ, ಎಂಬುದನ್ನು ಪರಿಭಾವಿಸಿ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸದ್ಧರ್ಮನಿರತರಾದ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ, ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರಿ, ಯಾವ ಗುಂಡಿಯಿಂದ ತೋಡಲ್ಪಟ್ಟಿರಿ ಎಂಬದನ್ನು ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನೀತಿಯನ್ನು ಹಿಂಬಾಲಿಸುವವರೇ, ಯೆಹೋವ ದೇವರನ್ನು ಹುಡುಕುವವರೇ, ನನ್ನ ಕಡೆಗೆ ಕಿವಿಗೊಡಿರಿ. ನಿಮ್ಮನ್ನು ಯಾವ ಬಂಡೆಯೊಳಗಿಂದ ಒಡೆದು ಕಡಿದಿರುತ್ತಾರೋ ಮತ್ತು ಯಾವ ಗುಂಡಿಯೊಳಗಿಂದ ಅಗೆದಿರುತ್ತಾರೋ ಆ ಬಂಡೆಯಾದಾತನನ್ನು ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:1
29 ತಿಳಿವುಗಳ ಹೋಲಿಕೆ  

ಒಳ್ಳೆಯತನವನ್ನು ಅರ್ಥಮಾಡಿಕೊಂಡ ನೀವು ನನ್ನ ಮಾತುಗಳನ್ನು ಕೇಳಿರಿ. ನನ್ನ ಬೋಧನೆಯನ್ನು ಅನುಸರಿಸುವ ನೀವು ನನ್ನ ಮಾತಿಗೆ ಕಿವಿಗೊಡಿರಿ. ದುಷ್ಟಜನರಿಗೆ ಭಯಪಡಬೇಡಿರಿ. ಅವರು ನಿಮಗೆ ಹೇಳುವ ಕೆಟ್ಟಮಾತುಗಳಿಗೆ ಭಯಪಡಬೇಡಿ.


ನ್ಯಾಯವು ನೀತಿಯೊಂದಿಗೆ ಮರಳಿ ಬರುವುದು. ಆಗ ಜನರು ಒಳ್ಳೆಯವರೂ ಯಥಾರ್ಥವಂತರೂ ಆಗುವರು.


ಎಲ್ಲಾ ಜನರೊಂದಿಗೆ ಸಮಾಧಾನದಿಂದಲೂ ಪರಿಶುದ್ಧರಾಗಿಯೂ ಜೀವಿಸಲು ಪ್ರಯತ್ನಿಸಿರಿ. ಯಾವನ ಜೀವಿತವು ಪರಿಶುದ್ಧವಾಗಿರುವುದಿಲ್ಲವೋ ಅವನೆಂದಿಗೂ ಪ್ರಭುವನ್ನು ನೋಡುವುದಿಲ್ಲ.


ಆದ್ದರಿಂದ ಸಮಾಧಾನವನ್ನು ಉಂಟುಮಾಡುವ ಕಾರ್ಯಗಳನ್ನು ನಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಮಾಡಲು ನಾವು ಪ್ರಯತ್ನಿಸೋಣ. ಪರಸ್ಪರ ಸಹಾಯಕವಾದ ಕಾರ್ಯಗಳನ್ನೇ ಮಾಡಲು ನಾವು ಪ್ರಯತ್ನಿಸೋಣ. ದೇವರ ಕಾರ್ಯವನ್ನು ನಾಶಪಡಿಸಲು ಆಹಾರಕ್ಕೆ ಅವಕಾಶ ಕೊಡಬೇಡಿ.


“ಯಾಕೋಬೇ, ನನಗೆ ಕಿವಿಗೊಡು. ಇಸ್ರೇಲೇ, ನೀವು ನನ್ನ ಜನರಾಗುವದಕ್ಕಾಗಿ ನಿಮ್ಮನ್ನು ನಾನು ಕರೆದೆನು. ಆದ್ದರಿಂದ ನನ್ನ ಮಾತುಗಳನ್ನು ಕೇಳಿರಿ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.


ಯುವಕರು ಇಷ್ಟಪಡುವ ಕೆಟ್ಟಕಾರ್ಯಗಳಿಂದ ನೀನು ದೂರವಾಗಿರು. ಪ್ರೀತಿ, ನಂಬಿಕೆ ಮತ್ತು ಶಾಂತಿಯನ್ನು ಹೊಂದಿದವನಾಗಿದ್ದು ಯೋಗ್ಯವಾದ ರೀತಿಯಲ್ಲಿ ಜೀವಿಸಲು ಬಹಳವಾಗಿ ಪ್ರಯತ್ನಪಡು. ಪ್ರಭುವಿನಲ್ಲಿ ಭರವಸವಿಟ್ಟಿರುವ ಮತ್ತು ಪರಿಶುದ್ಧ ಹೃದಯ ಹೊಂದಿರುವ ಜನರೊಂದಿಗೆ ಒಟ್ಟುಗೂಡಿ ಈ ಕಾರ್ಯಗಳನ್ನು ಮಾಡು.


ಯೆಹೋವನ ಬಳಿಗೆ ಹೋಗು. ಆಗ ಜೀವಿಸುವೆ. ಯೆಹೋವನ ಬಳಿಗೆ ನೀನು ಹೋಗದಿದ್ದಲ್ಲಿ ಯೋಸೇಫನ ಮನೆತನಕ್ಕೆ ಬೆಂಕಿಯು ಹಿಡಿಯುವುದು. ಆ ಬೆಂಕಿಯು ಯೋಸೇಫನ ಮನೆಯನ್ನು ದಹಿಸುವದು. ಬೇತೇಲಿನಲ್ಲಿ ಅದನ್ನು ಯಾರೂ ನಂದಿಸಲಾರರು.


ನ್ಯಾಯವನ್ನು ಮತ್ತು ಕರುಣೆಯನ್ನು ಹುಡುಕುವವನಿಗೆ ಒಳ್ಳೆಯ ಜೀವಿತವೂ ನ್ಯಾಯವೂ ಸನ್ಮಾನವೂ ದೊರೆಯುವುದು.


ದುಷ್ಟರ ಜೀವಿತವು ಯೆಹೋವನಿಗೆ ಅಸಹ್ಯ. ಒಳ್ಳೆಯದನ್ನು ಮಾಡಲಿಚ್ಛಿಸುವವರು ಯೆಹೋವನಿಗೆ ಪ್ರಿಯ.


ಆದರೆ ನೀನು ದೇವರ ಮನುಷ್ಯ. ಆದ್ದರಿಂದ ಈ ಎಲ್ಲಾ ಸಂಗತಿಗಳಿಂದ ದೂರವಾಗಿರು. ದೇವರ ಸೇವೆಯನ್ನು ಮಾಡುತ್ತಾ ಉತ್ತಮಮಾರ್ಗದಲ್ಲಿ ಜೀವಿಸಲು ಪ್ರಯತ್ನಿಸು; ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತೆಗಳನ್ನು ಹೊಂದಿದವನಾಗಿರು.


ಸಹೋದರ ಸಹೋದರಿಯರೇ, ನಾನಿನ್ನೂ ಆ ಗುರಿಯನ್ನು ಮುಟ್ಟಿಲ್ಲವೆಂಬುದು ನನಗೆ ಗೊತ್ತಿದೆ. ಆದರೆ ನಾನು ಯಾವಾಗಲೂ ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ನನ್ನ ಮುಂದಿರುವ ಗುರಿಯನ್ನು ಮುಟ್ಟಲು ನನ್ನಿಂದಾದಷ್ಟರ ಮಟ್ಟಿಗೆ ಓಡುತ್ತಿದ್ದೇನೆ.


ಆದ್ದರಿಂದ ನೀವು ದೇವರ ರಾಜ್ಯಕ್ಕಾಗಿ ಮತ್ತು ಆತನ ಚಿತ್ತಕ್ಕನುಸಾರವಾಗಿ ಕಾರ್ಯಗಳನ್ನು ಮಾಡಲು ಬಹಳ ತವಕಪಡಬೇಕು. ಆಗ ನಿಮಗೆ ಅಗತ್ಯವಾದ ಉಳಿದವುಗಳನ್ನು ಸಹ ಕೊಡಲಾಗುವುದು.


ನೀತಿಗಾಗಿ ತವಕಪಡುವವರು ಧನ್ಯರು. ದೇವರು ಅವರನ್ನು ಸಂತೃಪ್ತಿಪಡಿಸುವನು.


ನಾನು ಗುಪ್ತವಾಗಿ ಮಾತನಾಡದೆ ಬಹಿರಂಗವಾಗಿಯೇ ಮಾತನಾಡಿದ್ದೇನೆ. ಈ ಭೂಮಿಯ ಕತ್ತಲೆಯ ಸ್ಥಳದಲ್ಲಿ ನನ್ನ ಮಾತುಗಳನ್ನು ಅಡಗಿಸಿಡಲಿಲ್ಲ. ನನ್ನನ್ನು ಕಂಡುಹಿಡಿಯಲು ಗುಪ್ತಸ್ಥಳದಲ್ಲಿ ಹುಡುಕಿರಿ ಎಂದು ನಾನು ಯಾಕೋಬನ ಜನರಿಗೆ ಹೇಳಲಿಲ್ಲ. ನಾನೇ ಯೆಹೋವನು. ನಾನು ಸತ್ಯವನ್ನೇ ಆಡುವೆನು.


ಆತನನ್ನು ಅನುಸರಿಸುವವರು ಇಂಥವರೇ. ಸಹಾಯಕ್ಕಾಗಿ ಯಾಕೋಬನ ದೇವರ ಬಳಿಗೆ ಹೋಗುವವರು ಇಂಥವರೇ.


ದೀನರೇ, ಯೆಹೋವನ ಬಳಿಗೆ ಬನ್ನಿರಿ. ಆತನ ನಿಯಮಗಳಿಗೆ ಒಳಗಾಗಿರಿ, ಒಳ್ಳೇದನ್ನು ಮಾಡಿರಿ, ದೀನರಾಗಿರಿ. ಯೆಹೋವನು ತನ್ನ ಕೋಪಾಗ್ನಿಯನ್ನು ಪ್ರದರ್ಶಿಸುವ ದಿವಸದಲ್ಲಿ ನೀವು ರಕ್ಷಿಸಲ್ಪಡಬಹುದು.


ಆದ್ದರಿಂದ ಸಮಯವು ದಾಟುವ ಮೊದಲು ನೀವು ಯೆಹೋವನಿಗಾಗಿ ಹುಡುಕಿರಿ. ಆತನು ಹತ್ತಿರವಿರುವಾಗಲೇ ಕರೆಯಿರಿ.


“ನನ್ನ ಜನರೇ, ನನ್ನ ಮಾತನ್ನು ಕೇಳಿರಿ. ನನ್ನ ಕಟ್ಟಳೆ ಮತ್ತು ನ್ಯಾಯ ಬೆಳಕಿನಂತಿದ್ದು ಹೇಗೆ ಜೀವಿಸಬೇಕೆಂಬುದನ್ನು ಜನರಿಗೆ ತೋರಿಸುತ್ತವೆ.


ನೀತಿವಂತರನ್ನಾಗಿ ಮಾಡುವ ದೇವರ ಮಾರ್ಗವನ್ನು ಅವರು ತಿಳಿದಿಲ್ಲದ ಕಾರಣ ತಮ್ಮ ಸ್ವಂತ ಮಾರ್ಗದ ಮೂಲಕವಾಗಿ ತಮ್ಮನ್ನು ನೀತಿವಂತರನ್ನಾಗಿ ಮಾಡಿಕೊಳ್ಳಲು ಪ್ರಯತ್ನಿಸಿದರು.


ಆಗ ಶಾರೋನಿನ ಕಣಿವೆಯು ಕುರಿಗಳು ಮೇಯುವ ಮೈದಾನವಾಗುವದು. ಆಕೋರಿನ ಕಣಿವೆಯು ದನಗಳು ಮಲಗುವ ಸ್ಥಳವಾಗುವದು. ಇವೆಲ್ಲವೂ ನನ್ನ ಜನರಿಗಾಗುವದು. ಇವರು ನನಗಾಗಿ ಹುಡುಕುತ್ತಿರುವರು.


ಆದರೆ ಇಸ್ರೇಲರು ತಮಗೆ ಕಷ್ಟಬಂದಾಗ ದೇವರ ಕಡೆಗೆ ತಿರುಗಿದರು. ಆತನೇ ಇಸ್ರೇಲಿನ ದೇವರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.


ಯೆಹೋವನು ಹೇಳುವುದೇನೆಂದರೆ, “ಯಾಕೋಬನ ಮನೆತನದವರೇ, ನನ್ನ ಮಾತುಗಳನ್ನು ಕೇಳಿರಿ. ಜನರು ನಿಮ್ಮನ್ನು ಇಸ್ರೇಲ್ ಎಂದು ಕರೆಯುತ್ತಾರೆ. ನೀವು ಯೆಹೂದದ ಕುಟುಂಬದವರು. ನೀವು ಯೆಹೋವನ ಹೆಸರಿನಲ್ಲಿ ಒಡಂಬಡಿಕೆ ಮಾಡಿಕೊಳ್ಳುವಿರಿ. ನೀವು ಯೆಹೋವನ ನಾಮವನ್ನು ಸ್ತುತಿಸುವಿರಿ, ಆದರೆ ನೀವು ಇವುಗಳನ್ನು ಮಾಡುವಾಗ ನಂಬಿಗಸ್ತರಾಗಿರುವದಿಲ್ಲ; ಯಥಾರ್ಥರಾಗಿರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು