Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:4 - ಪರಿಶುದ್ದ ಬೈಬಲ್‌

4 “ನನ್ನ ಜನರೇ, ನನ್ನ ಮಾತನ್ನು ಕೇಳಿರಿ. ನನ್ನ ಕಟ್ಟಳೆ ಮತ್ತು ನ್ಯಾಯ ಬೆಳಕಿನಂತಿದ್ದು ಹೇಗೆ ಜೀವಿಸಬೇಕೆಂಬುದನ್ನು ಜನರಿಗೆ ತೋರಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನನ್ನ ಜನರೇ, ಆಲಿಸಿರಿ! ನನ್ನ ಪ್ರಜೆಗಳೇ, ಕಿವಿಗೊಡಿರಿ! ಧರ್ಮೋಪದೇಶವು ನನ್ನಿಂದ ಹೊರಡುವುದು, ನನ್ನ ನ್ಯಾಯಬೋಧನೆಯನ್ನು ಜನಾಂಗಗಳಿಗೆ ಬೆಳಕನ್ನಾಗಿ ಸ್ಥಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಲಿಸಿರಿ ನನ್ನ ಜನರೆ, ಕಿವಿಗೊಡಿ ನನ್ನ ಪ್ರಜೆಗಳೆ : ಧರ್ಮೋಪದೇಶ ಹೊರಡುವುದು ರಾಷ್ಟ್ರಗಳಿಗೆ ನನ್ನಿಂದಲೆ; ಬೆಳಗುವುದು ಜಗಜ್ಯೋತಿಯಾಗಿ ನನ್ನ ನ್ಯಾಯಬೋಧೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ಜನರೇ, ಆಲಿಸಿರಿ! ನನ್ನ ಪ್ರಜೆಗಳೇ, ಕಿವಿಗೊಡಿರಿ! ಧರ್ಮೋಪದೇಶವು ನನ್ನಿಂದ ಹೊರಡುವದು, ನನ್ನ ನ್ಯಾಯಬೋಧನೆಯನ್ನು ಜನಾಂಗಗಳಿಗೆ ಬೆಳಕನ್ನಾಗಿ ಸ್ಥಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನ ಜನರೇ, ಕೇಳಿರಿ. ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ. ಏಕೆಂದರೆ ನಿಯಮವು ನನ್ನಿಂದ ಹೊರಡುವುದು ಮತ್ತು ನನ್ನ ನ್ಯಾಯವನ್ನು ಜನಾಂಗಕ್ಕೆ ಬೆಳಕನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:4
27 ತಿಳಿವುಗಳ ಹೋಲಿಕೆ  

ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ಧರ್ಮಶಾಸ್ತ್ರವಿಲ್ಲದ ಜನರನ್ನು ರಕ್ಷಣಾಮಾರ್ಗಕ್ಕೆ ನಡೆಸಬೇಕೆಂದು ಅವರಿಗೆ ಧರ್ಮಶಾಸ್ತ್ರವಿಲ್ಲದ ವ್ಯಕ್ತಿಯಂತಾದೆನು. (ಆದರೆ ನಿಜವಾಗಿಯೂ, ನಾನು ಧರ್ಮಶಾಸ್ತ್ರವಿಲ್ಲದವನಲ್ಲ. ನಾನು ಕ್ರಿಸ್ತನ ಧರ್ಮಶಾಸ್ತ್ರಕ್ಕೆ ಅಧೀನನಾಗಿದ್ದೇನೆ.)


ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.


ಯೆಹೋವನು ನನಗೆ ಹೇಳಿದ್ದೇನೆಂದರೆ: “ನನ್ನ ಸೇವಕನಾದ ಯಾಕೋಬನ ಕುಲಗಳನ್ನು ಮೇಲೆತ್ತಿ ಇಸ್ರೇಲಿನ ಅಳಿದುಳಿದವರನ್ನು ಪುನಃಸ್ಥಾಪಿಸುವೆ. ಆದರೆ ನಿನಗೆ ಇನ್ನೊಂದು ಕೆಲಸವಿದೆ. ಅದು ಇದಕ್ಕಿಂತಲೂ ಮಹತ್ತಾದದ್ದು. ನಾನು ನಿನ್ನನ್ನು ಎಲ್ಲಾ ಜನಾಂಗಗಳಿಗೆ ಬೆಳಕನ್ನಾಗಿ ಮಾಡುವೆನು. ಲೋಕದ ಎಲ್ಲಾ ಜನರನ್ನು ರಕ್ಷಿಸಲು ನೀನು ನನ್ನ ಮಾರ್ಗವಾಗುವೆ.”


“ಯೆಹೋವನೆಂಬ ನಾನು ನ್ಯಾಯವನ್ನು ಸ್ಥಾಪಿಸಲು ನಿನ್ನನ್ನು ಕರೆದೆನು. ನಾನು ನಿನ್ನ ಕೈಗಳನ್ನು ಹಿಡಿದು ಸಂರಕ್ಷಿಸುವೆನು. ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆ ನನ್ನಲ್ಲಿದೆಯೆಂಬುದಕ್ಕೆ ನೀನು ಗುರುತಾಗಿರುವೆ. ಎಲ್ಲಾ ಜನರಿಗೆ ನೀನು ಹೊಳೆಯುವ ಪ್ರಕಾಶವಾಗಿರುವೆ.


ಅನೇಕ ದೇಶಗಳಿಂದ ಜನರು ಅಲ್ಲಿಗೆ ಹೋಗುವರು. “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ, ಯಾಕೋಬನ ದೇವರ ಆಲಯಕ್ಕೆ ನಾವು ಹೋಗೋಣ. ಆಗ ದೇವರು ನಮಗೆ ಜೀವಿತದ ಮಾರ್ಗವನ್ನು ಕಲಿಸುವನು. ಮತ್ತು ನಾವು ಆತನನ್ನು ಅನುಸರಿಸುವೆವು” ಎಂದು ಹೇಳುವರು. ದೇವರ ಉಪದೇಶವು, ಆತನ ಸಂದೇಶವು ಚೀಯೋನ್ ಬೆಟ್ಟದಲ್ಲಿರುವ ಜೆರುಸಲೇಮಿನಲ್ಲಿ ಪ್ರಾರಂಭವಾಗಿ ಪ್ರಪಂಚದಲ್ಲೆಲ್ಲಾ ಹಬ್ಬುತ್ತದೆ.


ನನ್ನ ಜನರೇ, ನನ್ನ ಉಪದೇಶಗಳಿಗೆ ಕಿವಿಗೊಡಿರಿ; ನನ್ನ ನುಡಿಗಳನ್ನು ಲಾಲಿಸಿರಿ.


ಆತನು ಯೆಹೂದ್ಯರಲ್ಲದ ಜನರಿಗೆ ನಿನ್ನ ಮಾರ್ಗವನ್ನು ತೋರಿಸುವ ಬೆಳಕಾಗಿದ್ದಾನೆ. ಆತನಿಂದ ನಿನ್ನ ಜನರಾದ ಇಸ್ರೇಲರಿಗೆ ಕೀರ್ತಿಯಾಗುವುದು.”


ದ್ವಾರಗಳನ್ನು ತೆರೆಯಿರಿ. ಒಳ್ಳೆಯ ಜನರು ಅದರಲ್ಲಿ ಪ್ರವೇಶಿಸುವರು. ಅವರು ದೇವರ ನಿಯಮಗಳನ್ನು ಅನುಸರಿಸುತ್ತಾರೆ.


ನಿನ್ನ ತಂದೆತಾಯಿಗಳ ಆಜ್ಞೆಗಳು ಮತ್ತು ಉಪದೇಶಗಳು ನಿನಗೆ ನೀತಿಮಾರ್ಗವನ್ನು ತೋರಿಸುವ ಬೆಳಕಿನಂತಿವೆ. ಅವು ನಿನ್ನನ್ನು ಸರಿಪಡಿಸಿ ಜೀವಮಾರ್ಗದಲ್ಲಿ ನಡೆಯಲು ಸಹಾಯಮಾಡುತ್ತವೆ.


ಆತನು ಬೇರೆ ಯಾವ ಜನಾಂಗದವರಿಗೂ ಹೀಗೆ ಮಾಡಲಿಲ್ಲ. ಆತನು ಅನ್ಯಜನಾಂಗಗಳವರಿಗೆ ತನ್ನ ಕಟ್ಟಳೆಗಳನ್ನು ಉಪದೇಶಿಸಲಿಲ್ಲ. ಯೆಹೋವನಿಗೆ ಸ್ತೋತ್ರವಾಗಲಿ!


ಯೆಹೋವನೇ, ನಿನ್ನ ಜನರಿಗೋಸ್ಕರ ನೀನು ಮಾಡುವ ಒಳ್ಳೆಯವುಗಳಲ್ಲಿ ನನಗೂ ಪಾಲು ದೊರೆಯಲಿ. ನಿನ್ನ ಜನರೊಂದಿಗೆ ನಾನೂ ಸಂತೋಷಪಡುವಂತೆ ಮಾಡು. ನಿನ್ನ ಜನರೊಂದಿಗೆ ನಾನೂ ನಿನ್ನ ಬಗ್ಗೆ ಹೆಮ್ಮೆಪಡುವಂತಾಗಲಿ.


ದೇವರು ಹೀಗೆನ್ನುತ್ತಾನೆ: “ನನ್ನ ಜನರೇ, ಇಸ್ರೇಲರೇ, ನನಗೆ ಕಿವಿಗೊಡಿರಿ! ನಾನು ನಿಮಗೆ ವಿರುದ್ಧವಾಗಿ ಸಾಕ್ಷಿ ಹೇಳುವೆನು. ದೇವರಾದ ನಾನೇ ನಿಮ್ಮ ದೇವರು!


ಯಾರಿಗೆ ಯೆಹೋವನು ದೇವರಾಗಿದ್ದಾನೋ ಅವರೇ ಧನ್ಯರು. ಯಾಕೆಂದರೆ ಆತನು ಅವರನ್ನು ಸ್ವಕೀಯರನ್ನಾಗಿ ಆರಿಸಿಕೊಂಡಿದ್ದಾನೆ.


ನಾನು ನಿನ್ನನ್ನು ನಿಜವಾಗಿಯೂ ಮೆಚ್ಚಿಸಿರುವುದಾದರೆ, ನಾನು ನಿನ್ನನ್ನು ತಿಳಿದುಕೊಳ್ಳುವಂತೆ ನಿನ್ನ ಮಾರ್ಗಗಳನ್ನು ಬೋಧಿಸು. ಆಗ ನಾನು ನಿನ್ನನ್ನು ಯಾವಾಗಲೂ ಮೆಚ್ಚಿಸಲು ಸಾಧ್ಯವಾಗುವುದು. ಇವರೆಲ್ಲರೂ ನಿನ್ನ ಜನರೆಂದು ಜ್ಞಾಪಕಮಾಡಿಕೊ” ಎಂದು ವಿಜ್ಞಾಪಿಸಿದನು.


ನೀವು ಯಾಜಕರ ರಾಜ್ಯ’ ಎಂಬ ವಿಶೇಷವಾದ ಜನಾಂಗವಾಗುವಿರಿ. ಮೋಶೆಯೇ, ನಾನು ನಿನಗೆ ಹೇಳಿದ ಸಂಗತಿಗಳನ್ನು ನೀನು ಇಸ್ರೇಲರಿಗೆ ಹೇಳಲೇಬೇಕು” ಎಂದನು.


ನಾನು ಅವರಿಗಾಗಿ ನಿನ್ನ ತರಹದ ಒಬ್ಬ ಪ್ರವಾದಿಯನ್ನು ಕಳುಹಿಸುವೆನು. ಅವನು ಅವರ ಜನರಲ್ಲಿ ಒಬ್ಬನಾಗಿರುವನು. ಅವನು ಜನರಿಗೆ ತಿಳಿಸಬೇಕಾದ ವಿಷಯವನ್ನು ನಾನೇ ಅವನಿಗೆ ತಿಳಿಸುವೆನು. ನಾನು ಆಜ್ಞಾಪಿಸುವುದೆಲ್ಲವನ್ನು ಅವನು ಜನರಿಗೆ ತಿಳಿಸುವನು.


ದೇವರು ಒಳ್ಳೆಯವನು; ನ್ಯಾಯವನ್ನೇ ಮಾಡುವವನು; ಆತನು ಚೀಯೋನನ್ನೂ ತನ್ನ ಬಳಿಗೆ ಬರುವ ಜನರನ್ನೂ ರಕ್ಷಿಸಿ ಕಾಪಾಡುವನು.


ಆದರೆ ಯೆಹೋವನೇ, ನಾವು ನಿನ್ನ ನ್ಯಾಯವಿಚಾರಣೆಯ ರೀತಿಗಾಗಿ ಕಾಯುತ್ತಿದ್ದೇವೆ. ನಮ್ಮ ಆತ್ಮಗಳು ನಿನ್ನನ್ನೂ ನಿನ್ನ ನಾಮವನ್ನೂ ನೆನಪು ಮಾಡುತ್ತವೆ.


ತನ್ನ ಸೇವಕನು ನೀತಿವಂತನಾಗಿರಬೇಕೆಂದೂ ತನ್ನ ಉತ್ಕೃಷ್ಟವಾದ ಉಪದೇಶವನ್ನು ಗೌರವಿಸಬೇಕೆಂದೂ ಯೆಹೋವನು ಬಯಸುತ್ತಾನೆ.


ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.


ಯೆಹೋವನು ಹೇಳಿದ್ದೇನೆಂದರೆ: “ಇವರೇ ನನ್ನ ಜನರು. ಇವರೆಲ್ಲಾ ನನ್ನ ಸ್ವಂತ ಮಕ್ಕಳು.” ಆದ್ದರಿಂದ ಯೆಹೋವನು ಅವರನ್ನು ರಕ್ಷಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು