ಯೆಶಾಯ 51:8 - ಪರಿಶುದ್ದ ಬೈಬಲ್8 ಯಾಕೆಂದರೆ ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು. ಅವರು ಉಣ್ಣೆಯಂತಿರುವರು, ನುಸಿಯು ಅದನ್ನು ತಿಂದುಬಿಡುವುದು. ಆದರೆ ನನ್ನ ಒಳ್ಳೆಯತನವು ಶಾಶ್ವತವಾದದ್ದು. ನನ್ನ ರಕ್ಷಣೆಯು ಸದಾಕಾಲವಿರುವುದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು, ಹುಳವು ಅವರನ್ನು ಉಣ್ಣೆಯಂತೆ ತಿಂದುಬಿಡುವುದು. ನನ್ನ ರಕ್ಷಣಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವುದು. ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನುಸಿ ಅವರನ್ನು ತಿಂದುಹಾಕುವುದು ಬಟ್ಟೆಯಂತೆ ಹುಳು ಅವರನ್ನು ಮೆದ್ದುಬಿಡುವುದು ಉಣ್ಣೆಯಂತೆ. ನಾ ನೀಡುವ ಮುಕ್ತಿಯೋ ನಿಲ್ಲುವುದು ಶಾಶ್ವತವಾಗಿ ನಾ ಕೊಡುವ ವಿಮೋಚನೆ ಸದಾ ಇರುವುದು ನೆಲೆಯಾಗಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನನ್ನ ರಕ್ಷಣ ಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವದು, ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಏಕೆಂದರೆ ನುಸಿಯು ಬಟ್ಟೆಯನ್ನು ತಿನ್ನುವಂತೆ, ಅವರನ್ನು ತಿಂದುಬಿಡುವುದು ಮತ್ತು ಹುಳವು ಅವರನ್ನು ಉಣ್ಣೆಯಂತೆ ತಿನ್ನುವುದು. ಆದರೆ ನನ್ನ ನೀತಿಯು ಶಾಶ್ವತವಾಗಿರುವುದು ಮತ್ತು ನನ್ನ ರಕ್ಷಣೆಯು ತಲತಲಾಂತರಗಳಿಗೂ ಇರುವುದು. ಅಧ್ಯಾಯವನ್ನು ನೋಡಿ |
“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.
ದೇವರು ಹೇಳುವುದೇನೆಂದರೆ: “ನೋಹನ ಕಾಲದಲ್ಲಿ ನಾನು ಲೋಕವನ್ನು ಜಲಪ್ರವಾಹದ ಮೂಲಕ ಶಿಕ್ಷಿಸಿದ್ದನ್ನು ಜ್ಞಾಪಕಮಾಡಿಕೊ. ಆ ಬಳಿಕ ನಾನು ನೋಹನಿಗೆ ಪ್ರಪಂಚವನ್ನು ಜಲಪ್ರವಾಹದಿಂದ ಇನ್ನೆಂದಿಗೂ ನಾಶಪಡಿಸುವದಿಲ್ಲ ಎಂದು ಪ್ರಮಾಣ ಮಾಡಿದೆನು. ಅದೇ ರೀತಿಯಲ್ಲಿ ಇನ್ನೆಂದಿಗೂ ನಿನ್ನ ಮೇಲೆ ಕೋಪಗೊಳ್ಳುವುದಿಲ್ಲವೆಂತಲೂ ನಿನ್ನನ್ನು ಗದರಿಸುವುದಿಲ್ಲವೆಂತಲೂ ನಾನು ನಿನಗೆ ಪ್ರಮಾಣ ಮಾಡುತ್ತೇನೆ.”