Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 52:3 - ಪರಿಶುದ್ದ ಬೈಬಲ್‌

3 ಯೆಹೋವನು ಹೇಳುವುದೇನೆಂದರೆ: “ನಾನು ನಿನ್ನನ್ನು ಮಾರಿದ್ದು ಹಣಕ್ಕಾಗಿಯಲ್ಲ; ಆದ್ದರಿಂದ ನಾನು ನಿನ್ನನ್ನು ಹಣ ಕೊಡದೆ ಬಿಡುಗಡೆ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನ ಈ ಮಾತನ್ನು ಕೇಳಿರಿ, “ಲಾಭಪಡೆಯದೆ ನಿಮ್ಮನ್ನು ಮಾರಿದೆನು, ಹಣತಕ್ಕೊಳ್ಳದೆ ನಿಮ್ಮನ್ನು ಬಿಡುಗಡೆಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಏಕೆಂದರೆ ಸರ್ವೇಶ್ವರ ಹೀಗೆಂದು ಹೇಳಿದ್ದಾರೆ - ‘ಬೆಲೆಯಿಲ್ಲದೆ ಮಾರಲ್ಪಟ್ಟಿರಿ; ಹಣವಿಲ್ಲದೆ ಮುಕ್ತರಾಗುವಿರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನ ಈ ಮಾತನ್ನು ಕೇಳಿರಿ, ಲಾಭಪಡೆಯದೆ ನಿಮ್ಮನ್ನು ಮಾರಿದೆನು, ಹಣತಕ್ಕೊಳ್ಳದೆ ನಿಮ್ಮನ್ನು ಬಿಡುಗಡೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ಯೆಹೋವ ದೇವರು ಹೇಳುವುದೇನೆಂದರೆ: “ನಿಮ್ಮನ್ನು ನೀವೇ ನಿಷ್ಪಲವಾಗಿ ಮಾಡಿಕೊಂಡಿರಿ. ಹಣವಿಲ್ಲದೆ ನೀವು ವಿಮೋಚನೆ ಹೊಂದುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 52:3
13 ತಿಳಿವುಗಳ ಹೋಲಿಕೆ  

ನಾನು ಸೈರಸನಿಗೆ ಸುಕಾರ್ಯಗಳನ್ನು ಮಾಡಲು ಶಕ್ತಿಯನ್ನು ಕೊಟ್ಟಿದ್ದೇನೆ. ಅವನ ಕೆಲಸಗಳನ್ನೆಲ್ಲಾ ಸುಲಭಗೊಳಿಸುತ್ತೇನೆ. ಸೈರಸನು ನನ್ನ ಪಟ್ಟಣವನ್ನು ಮತ್ತೆ ಕಟ್ಟುವನು; ನನ್ನ ಜನರಿಗೆ ಸ್ವಾತಂತ್ರ್ಯವನ್ನು ಕೊಡುವನು. ನನ್ನ ಜನರನ್ನು ಸೈರಸನು ನನಗೆ ಮಾರಿಬಿಡುವದಿಲ್ಲ. ಈ ಕಾರ್ಯಗಳನ್ನೆಲ್ಲ ಮಾಡುವದಕ್ಕೆ ನಾನು ಅವನಿಗೆ ಹಣ ಕೊಡುವ ಅವಶ್ಯವಿಲ್ಲ. ಜನರು ಸ್ವತಂತ್ರರಾಗುವರು. ಇದಕ್ಕಾಗಿ ನನಗೇನೂ ಖರ್ಚು ಇಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಮೊದಲು ನೀವು ನಿರರ್ಥಕವಾದ ರೀತಿಯಲ್ಲಿ ಜೀವಿಸುತ್ತಿದ್ದಿರೆಂಬುದು ನಿಮಗೇ ತಿಳಿದಿದೆ. ನಿಮಗಿಂತಲೂ ಮೊದಲು ಜೀವಿಸಿದ್ದವರಿಂದ ಅಂತಹ ಜೀವಿತವನ್ನು ಕಲಿತುಕೊಂಡಿರಿ. ಆದರೆ ಅದರಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿಬಂಗಾರಗಳಿಂದಲ್ಲ.


ನಿನ್ನ ಜನರನ್ನು ಅತ್ಯಲ್ಪ ಬೆಲೆಗೆ ಮಾರಿಬಿಟ್ಟೆ. ಬೆಲೆಯ ಬಗ್ಗೆ ವಾದವನ್ನೂ ನೀನು ಮಾಡಲಿಲ್ಲ.


ಯೆಹೂದದ ಜನರಲ್ಲಿ ಅನೇಕ ಭಂಡಾರಗಳಿವೆ. ಆ ಭಂಡಾರಗಳನ್ನು ನಾನು ಬೇರೆಯವರಿಗೆ ಒಪ್ಪಿಸುತ್ತೇನೆ. ಬೇರೆಯವರು ಆ ಭಂಡಾರಗಳನ್ನು ಹಣ ಕೊಟ್ಟು ತೆಗೆದುಕೊಳ್ಳಬೇಕಾಗಿಲ್ಲ. ನಾನು ಅವರಿಗೆ ಅವುಗಳನ್ನು ಉಚಿತವಾಗಿ ಕೊಟ್ಟುಬಿಡುತ್ತೇನೆ. ಏಕೆಂದರೆ ಯೆಹೂದವು ಅನೇಕ ಪಾಪಗಳನ್ನು ಮಾಡಿದೆ. ದೇಶದ ಪ್ರತಿಯೊಂದು ಭಾಗದಲ್ಲಿಯೂ ಯೆಹೂದ ಪಾಪಮಾಡಿದೆ.


ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.


ದೇವರು ಒಳ್ಳೆಯವನು; ನ್ಯಾಯವನ್ನೇ ಮಾಡುವವನು; ಆತನು ಚೀಯೋನನ್ನೂ ತನ್ನ ಬಳಿಗೆ ಬರುವ ಜನರನ್ನೂ ರಕ್ಷಿಸಿ ಕಾಪಾಡುವನು.


ಆತನ ಜನರು “ಪವಿತ್ರಜನ”ರೆಂದೂ, “ಯೆಹೋವನಿಂದ ರಕ್ಷಿಸಲ್ಪಟ್ಟವ”ರೆಂದೂ ಕರೆಯಲ್ಪಡುವರು. ಜೆರುಸಲೇಮ್, “ದೇವರಿಗೆ ಬೇಕಾದ ಪಟ್ಟಣ”ವೆಂದೂ, “ದೇವರಿರುವ ಪಟ್ಟಣ”ವೆಂದೂ ಕರೆಯಲ್ಪಡುವದು.


ಜನರನ್ನು ಶಿಕ್ಷಿಸಲು ನಾನೊಂದು ಸಮಯವನ್ನು ನಿಗದಿ ಮಾಡಿರುತ್ತೇನೆ. ಈಗ ನನ್ನ ಜನರನ್ನು ರಕ್ಷಿಸಿ ಕಾಪಾಡುವ ಸಮಯ ಬಂದಿದೆ.


ದೇವರು ಹೇಳಿದ್ದೇನೆಂದರೆ, “ಆದರೆ ನೀನು ವೇಶ್ಯೆಯ ಹಾಗೆ ಪೂರ್ಣವಾಗಿರಲಿಲ್ಲ. ನೀನು ಎತ್ತರದ ಪೂಜಾಸ್ಥಳಗಳನ್ನು ಪ್ರತೀ ರಸ್ತೆಯ ಪ್ರಾರಂಭದಲ್ಲಿಯೂ ಯಜ್ಞವೇದಿಕೆಗಳನ್ನು ಪ್ರತೀ ರಸ್ತೆಯ ಮೂಲೆಗಳಲ್ಲಿಯೂ ಕಟ್ಟಿಸಿರುವೆ. ಆ ಎಲ್ಲಾ ಪುರುಷರೊಂದಿಗೆ ನೀನು ಸಂಭೋಗಿಸಿರುವೆ. ಆದರೆ ಸೂಳೆಯಂತೆ ಅವರಿಂದ ನೀನು ಹಣ ತೆಗೆದುಕೊಳ್ಳಲಿಲ್ಲ.


ಹೊಲದಲ್ಲಿ ಬೆಳೆಯುವ ಮರಗಳು ಫಲವನ್ನಿಯುವವು. ಭೂಮಿಯು ಬೆಳೆಯನ್ನು ಕೊಡುವದು. ಆಗ ಕುರಿಗಳು ಅವರ ದೇಶದಲ್ಲಿ ಸುರಕ್ಷಿತವಾಗಿರುವವು. ಅವರ ಮೇಲಿರುವ ನೊಗಗಳನ್ನು ನಾನು ಮುರಿದುಬಿಡುವೆನು. ಅವರನ್ನು ಗುಲಾಮರನ್ನಾಗಿ ಮಾಡಿದ ದೇಶದವರ ಶಕ್ತಿಯನ್ನೆ ಮುರಿಯುವೆನು. ನಾನು ಯೆಹೋವನೆಂದು ಆಗ ಅವರಿಗೆ ತಿಳಿಯುವದು.


“ಯಾರೂ ಅವನನ್ನು ಬಿಡಿಸದಿದ್ದರೂ ಜ್ಯೂಬಿಲಿ ವರ್ಷದಲ್ಲಿ ಅವನು ಮತ್ತು ಅವನ ಮಕ್ಕಳು ಬಿಡುಗಡೆ ಹೊಂದುವರು.


ನೀನು ನಮ್ಮನ್ನು ನೆರೆಹೊರೆಯವರಿಗೆ ತಮಾಷೆಯನ್ನಾಗಿ ಮಾಡಿರುವೆ. ನಮ್ಮ ನೆರೆಹೊರೆಯವರು ನಮ್ಮನ್ನು ಕಂಡು ನಗುತ್ತಾರೆ; ನಮ್ಮನ್ನು ಗೇಲಿ ಮಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು