Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 53:2 - ಪರಿಶುದ್ದ ಬೈಬಲ್‌

2 ಒಂದು ಸಣ್ಣ ಸಸಿಯು ಬೆಳೆಯುವ ರೀತಿಯಲ್ಲಿ ಯೆಹೋವನ ಮುಂದೆ ಆತನು ಬೆಳೆದನು. ಆತನು ಒಣ ನೆಲದಿಂದ ಚಿಗುರುವ ಬೇರಿನಂತಿದ್ದನು. ಆತನು ಒಬ್ಬ ವಿಶೇಷ ಪುರುಷನಂತೆ ತೋರಲಿಲ್ಲ. ಅಂಥ ಲಕ್ಷಣಗಳೇನೂ ಆತನಲ್ಲಿರಲಿಲ್ಲ. ನಾವು ಆತನನ್ನು ನೋಡಿದಾಗ ಆತನಲ್ಲಿ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರನ ಮುಂದೆ ಬೆಳೆದನಾತ ಸಸಿಯಂತೆ ಒಣನೆಲದೊಳಗೆ ಇಳಿಯುವ ಬೇರಿನಂತೆ. ಆತನಲಿ ಅಂದಚಂದಗಳಾವುವೂ ಇರಲಿಲ್ಲ, ನೋಡಲು ಲಕ್ಷಣವಾದುವು ಏನೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಒಣನೆಲದೊಳಗೆ ಬೇರಿನಿಂದ ಹೊರಡುವ ಅಂಕುರದಂತೆಯೂ ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಚಿಗುರಿನಂತೆಯೂ, ಒಣ ನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಯೆಹೋವ ದೇವರ ಮುಂದೆ ಬೆಳೆಯುವನು. ಅವನಿಗೆ ಯಾವ ಸೌಂದರ್ಯವಾಗಲಿ ಇಲ್ಲವೆ ಘನತೆಯಾಗಲಿ ಇರಲಿಲ್ಲ. ನಾವು ಅವನನ್ನು ನೋಡಿದಾಗ, ಅವನಲ್ಲಿ ಆಕರ್ಷಿಸತಕ್ಕ ಯಾವ ಚಂದವು ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 53:2
22 ತಿಳಿವುಗಳ ಹೋಲಿಕೆ  

ಆದರೆ ನನ್ನ ಜನರು ನನ್ನ ಸೇವಕನನ್ನು ನೋಡಿದಾಗ ಆಶ್ಚರ್ಯಗೊಂಡರು. ಆತನು ಮನುಷ್ಯನೆಂಬ ಗುರುತೇ ಅವರಿಗೆ ಸಿಕ್ಕಲಿಲ್ಲ. ಆತನ ರೂಪವು ವಿಕಾರವಾಗುವಷ್ಟರ ಮಟ್ಟಿಗೆ ಆತನು ಗಾಯಗೊಂಡಿದ್ದನು.


ಇಷಯನ ಬುಡದಿಂದ ಒಂದು ಚಿಗುರು ಒಡೆಯುವುದು. ಆ ಕೊಂಬೆಯು ಇಷಯನ ಬೇರಿನಿಂದ ಬೆಳೆಯುವುದು.


ಇವನು ಕೇವಲ ಬಡಗಿಯಲ್ಲವೋ? ಇವನ ತಾಯಿ ಮರಿಯಳು. ಇವನು ಯಾಕೋಬ, ಯೋಸೆ, ಯೂದ ಮತ್ತು ಸಿಮೋನರ ಅಣ್ಣ. ಇವನ ತಂಗಿಯರು ಇಲ್ಲಿ ನಮ್ಮೊಂದಿಗಿದ್ದಾರೆ” ಎಂದು ಹೇಳಿ ಆತನನ್ನು ತಾತ್ಸಾರ ಮಾಡಿದರು.


ಇದು ಯೆಹೋವನ ಸಂದೇಶ: “ನಾನು ಒಳ್ಳೆಯ ‘ಸಸಿಯನ್ನು’ ಚಿಗುರಿಸುವ ಕಾಲ ಬಂದಿದೆ. ಅವನು ಬುದ್ಧಿವಂತಿಕೆಯಿಂದ ಆಳುವ ರಾಜನಾಗಿರುವನು. ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಬದ್ಧವಾದದ್ದನ್ನು ಮಾಡುವನು.


ಯೇಸು ಅವರಿಗೆ, “ಎಲೀಯನೇ ಮೊದಲು ಬರಬೇಕೆಂದು ಅವರು ಹೇಳುವುದು ಸರಿ. ಎಲೀಯನು ಎಲ್ಲವನ್ನು ಸರಿಪಡಿಸುತ್ತಾನೆ. ಆದರೆ ಮನುಷ್ಯಕುಮಾರನು ಬಹಳ ಸಂಕಟವನ್ನು ಅನುಭವಿಸುವನೆಂತಲೂ ಜನರು ಆತನನ್ನು ಹೀನೈಸುವರೆಂತಲೂ ಪವಿತ್ರಗ್ರಂಥವು ಏಕೆ ಹೇಳುತ್ತದೆ?


ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.


ರಾಜನು ಕಳುಹಿಸುವ ಅಧಿಕಾರಿಗಳಿಗೆ ವಿಧೇಯರಾಗಿರಿ. ತಪ್ಪು ಮಾಡಿದವರನ್ನು ದಂಡಿಸಲೂ ಒಳ್ಳೆಯದನ್ನು ಮಾಡಿದವರನ್ನು ಹೊಗಳಲೂ ಅವರನ್ನು ಕಳುಹಿಸಲಾಗಿದೆ.


ಆಗ ಯೇಸು ಹೊರಗೆ ಬಂದನು. ಆತನ ತಲೆಯ ಮೇಲೆ ಮುಳ್ಳಿನ ಕಿರೀಟವನ್ನು ಇಟ್ಟಿದ್ದರು ಮತ್ತು ಕೆಂಪು ಅಂಗಿಯನ್ನು ಆತನಿಗೆ ತೊಡಿಸಿದ್ದರು. ಪಿಲಾತನು ಯೆಹೂದ್ಯರಿಗೆ, “ಇಗೋ, ಈ ಮನುಷ್ಯನು!” ಎಂದು ಹೇಳಿದನು.


ಯೆಹೂದ್ಯರು, “ಇಲ್ಲ, ಅವನನ್ನಲ್ಲ! ಬರಬ್ಬನಿಗೆ ಬಿಡುಗಡೆಯಾಗಲಿ!” ಎಂದು ಕೂಗಿದರು. (ಬರಬ್ಬನು ಒಬ್ಬ ದರೋಡೆಕೋರ.)


ಯೇಸು, “ನರಿಗಳಿಗೆ ಗುಹೆಗಳಿವೆ, ಪಕ್ಷಿಗಳಿಗೆ ಗೂಡುಗಳಿವೆ. ಆದರೆ ಮನುಷ್ಯಕುಮಾರನಿಗೆ ತಲೆ ಇಡುವಷ್ಟು ಸ್ಥಳವೂ ಇಲ್ಲ” ಎಂದು ಉತ್ತರಿಸಿದನು.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಕೊಂಬೆ ಎಂಬ ಒಬ್ಬಾತನು ಇದ್ದಾನೆ. ಆತನು ಬೆಳೆದು ಬಲಿಷ್ಠನಾಗುವನು. ಆತನು ದೇವಾಲಯವನ್ನು ಕಟ್ಟುವನು.


ಆಕೆ ತನ್ನ ಚೊಚ್ಚಲಮಗುವನ್ನು (ಯೇಸು) ಹೆತ್ತಳು. ಅವರಿಗೆ ಇಳಿದುಕೊಳ್ಳಲು ಛತ್ರದಲ್ಲಿ ಸ್ಥಳ ದೊರೆಯಲಿಲ್ಲ. ಆದ್ದರಿಂದ ಮರಿಯಳು ಮಗುವನ್ನು ಬಟ್ಟೆಯಿಂದ ಸುತ್ತಿ ದನದ ಕೊಟ್ಟಿಗೆಯಲ್ಲಿ ಮೇವು ಹಾಕುತ್ತಿದ್ದ ತೊಟ್ಟಿಯಲ್ಲಿ ಮಲಗಿಸಿದಳು.


ಆ ಸಮಯದಲ್ಲಿ ಯೆಹೋವನ ಸಸಿ (ಯೆಹೂದವು) ಬಹಳ ಚಂದವಾಗಿಯೂ ದೊಡ್ಡದಾಗಿಯೂ ಇರುವುದು. ಆ ಸಮಯದಲ್ಲಿ, ಚೀಯೋನಿನಲ್ಲಿ ಮತ್ತು ಜೆರುಸಲೇಮಿನಲ್ಲಿ ಇನ್ನೂ ವಾಸಿಸುತ್ತಿರುವ ಜನರು ತಮ್ಮ ದೇಶದಲ್ಲಿ ಬೆಳೆಯುವ ಫಲಗಳಿಗಾಗಿ ತುಂಬಾ ಹೆಚ್ಚಳಪಡುವರು.


ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ಈ ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು.


ಪ್ರಧಾನ ಯಾಜಕನಾದ ಯೆಹೋಶುವನೇ, ಅವನೊಂದಿಗೆ ಸೇವೆಮಾಡುವ ಇತರ ಯಾಜಕರೇ, ನನ್ನ ಮಾತಿಗೆ ಕಿವಿಗೊಡಿರಿ. ಈ ಗಂಡಸರು ಮುಂದೆ ಏನಾಗಬಹುದೆಂಬುದಕ್ಕೆ ನಿದರ್ಶನವಾಗಿದ್ದಾರೆ. ಆಗ ನಾನು ನನ್ನ ವಿಶೇಷ ಸೇವಕನನ್ನು ಕರೆತರುವೆನು. ಆತನ ಹೆಸರು ಕೊಂಬೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು