Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 54:5 - ಪರಿಶುದ್ದ ಬೈಬಲ್‌

5 ಯಾಕೆಂದರೆ ನಿನ್ನ ಗಂಡನೇ (ದೇವರು) ನಿನ್ನನ್ನು ನಿರ್ಮಿಸಿದನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಇಸ್ರೇಲನ್ನು ಕಾಪಾಡುವಾತನಾಗಿದ್ದಾನೆ. ಆತನು ಇಸ್ರೇಲಿನ ಪರಿಶುದ್ಧ ದೇವರಾಗಿದ್ದಾನೆ. ಆತನನ್ನು ‘ಇಡೀ ಭೂಲೋಕದ ದೇವರು’ ಎಂದು ಕರೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ. ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು. ನಿನ್ನ ವಿಮೋಚಕನು ಇಸ್ರಾಯೇಲಿನ ಪರಿಶುದ್ಧನೇ. ಸಮಸ್ತ ಭೂಮಿಯ ದೇವರು ಎಂದು ಆತನನ್ನು ಕರೆಯಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 54:5
30 ತಿಳಿವುಗಳ ಹೋಲಿಕೆ  

ರಕ್ಷಕನೂ ಇಸ್ರೇಲರ ಪರಿಶುದ್ಧನೂ ಆಗಿರುವ ಯೆಹೋವನು ಹೇಳುವುದೇನೆಂದರೆ, “ನಾನೇ ನಿಮ್ಮ ದೇವರಾದ ಯೆಹೋವನು. ಯಾವದು ಒಳ್ಳೆಯದೋ, ಪ್ರಯೋಜನಕರವೋ ಅದನ್ನು ಮಾಡಲು ನಿಮಗೆ ಕಲಿಸುತ್ತೇನೆ. ನೀವು ಹೋಗಲೇಬೇಕಾದ ದಾರಿಯಲ್ಲಿ ನಿಮ್ಮನ್ನು ನಡಿಸುವೆನು.


ನಾನು ಮತ್ತೆ ಹಾದುಹೋಗುವಾಗ ನಿನ್ನನ್ನು ನೋಡಲಾಗಿ ನೀನು ಸಂಭೋಗಿಸಲು ತಯಾರಾಗಿದ್ದೆ. ನಾನು ನನ್ನ ಹೊದಿಕೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಬೆತ್ತಲೆ ದೇಹವನ್ನು ಮುಚ್ಚಿದೆನು. ನಿನ್ನನ್ನು ವಿವಾಹವಾಗಲು ಮಾತುಕೊಟ್ಟೆನು. ನಾನು ನಿನ್ನೊಡನೆ ಒಡಂಬಡಿಕೆ ಮಾಡಿಕೊಂಡೆನು. ಆಗ ನೀನು ನನ್ನವಳಾದೆ.’” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಮದುಮಗಳು ಮದುಮಗನಿಗೆ ಮಾತ್ರ ಸೇರಿದವಳಾಗಿದ್ದಾಳೆ. ಮದುಮಗನಿಗೆ ಸಹಾಯಮಾಡುವ ಸ್ನೇಹಿತನು ಮದುಮಗನ ಬರುವಿಕೆಗಾಗಿ ಕಾಯುತ್ತಿರುತ್ತಾನೆ ಮತ್ತು ಆತನ ಕರೆಗಾಗಿ ಆಲಿಸುತ್ತಿರುತ್ತಾನೆ. ಮದುಮಗನ ಸ್ವರವನ್ನು ಕೇಳುವಾಗ ಈ ಸ್ನೇಹಿತನು ಬಹು ಸಂತೋಷಪಡುವನು. ಅದೇ ಸಂತೋಷ ನನಗಿದೆ. ನನ್ನ ಪೂರ್ಣಾನಂದದ ಸಮಯವು ಇದೇ ಆಗಿದೆ.


ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತಾಡುತ್ತಿದ್ದೇನೆ. ರಹಸ್ಯವಾದ ಈ ಸತ್ಯವು ಬಹು ಮುಖ್ಯವಾದದ್ದು.


ಆ ಸಮಯದಲ್ಲಿ ಯೆಹೋವನು ಇಡೀ ಭೂಲೋಕದ ಅರಸನಾಗುವನು. ಆತನು ಒಬ್ಬನೇ. ಆತನ ಹೆಸರು ಒಂದೇ.


ಆತನು ಮಹಾಪುರುಷನಾಗುವನು. ಜನರು ಆತನನ್ನು ಮಹೋನ್ನತನ (ದೇವರ) ಮಗನೆಂದು ಕರೆಯುವರು. ಪ್ರಭುವಾದ ದೇವರು ಆತನಿಗೆ ಆತನ ಪೂರ್ವಿಕನಾದ ದಾವೀದನ ಅಧಿಕಾರವನ್ನು ಕೊಡುವನು.


ಆದರೆ ಯಾಕೋಬ್ಯರ ಸ್ವಾಸ್ತ್ಯವಾದಾತನು ಆ ನಿಷ್ಪ್ರಯೋಜಕ ವಿಗ್ರಹಗಳಂತಲ್ಲ. ಜನರು ದೇವರನ್ನು ಸೃಷ್ಟಿಸಲಿಲ್ಲ. ದೇವರು ತನ್ನ ಜನರನ್ನು ಸೃಷ್ಟಿಸಿದನು. ದೇವರು ಎಲ್ಲವನ್ನು ಸೃಷ್ಟಿಸಿದನು. ಆತನ ಹೆಸರು ಸರ್ವಶಕ್ತನಾದ ಯೆಹೋವನು.


“ವಿಶ್ವಾಸದ್ರೋಹಿಗಳಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ” ಇದು ಯೆಹೋವನ ನುಡಿಯಾಗಿತ್ತು. “ನಾನೇ ನಿಮ್ಮ ಒಡೆಯನು. ನಾನು ಪ್ರತಿಯೊಂದು ನಗರದಿಂದ ಒಬ್ಬ ವ್ಯಕ್ತಿಯನ್ನು ಮತ್ತು ಪ್ರತಿಯೊಂದು ಕುಲದಿಂದ ಇಬ್ಬರನ್ನು ಆರಿಸಿ ಚೀಯೋನಿಗೆ ಕರೆದು ತರುವೆನು.


ಪ್ರತಿಯೊಬ್ಬ ದೂತನು ಇನ್ನೊಬ್ಬ ದೂತನನ್ನು ಕರೆದು, “ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಸರ್ವಶಕ್ತನಾದ ಯೆಹೋವನು ಮಹಾ ಪರಿಶುದ್ಧನು. ಆತನ ಮಹಿಮೆಯು ಇಡೀ ಭೂಮಂಡಲವನ್ನು ಆವರಿಸಿಕೊಂಡಿದೆ” ಎಂದು ಗಟ್ಟಿಯಾದ ಸ್ವರದಲ್ಲಿ ಹೇಳುತ್ತಿದ್ದರು.


ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”


ಆದರೆ ಯಾಕೋಬ್ಯರ ದೇವರು ಆ ವಿಗ್ರಹಗಳಂತಲ್ಲ. ಆತನು ಸಮಸ್ತವನ್ನೂ ನಿರ್ಮಿಸಿದಾತನಾಗಿದ್ದಾನೆ. ಇಸ್ರೇಲು ಆತನ ಸ್ವಾಸ್ತ್ಯವಾದ ಜನಾಂಗ. “ಸರ್ವಶಕ್ತನಾದ ಯೆಹೋವ” ಎಂಬುದು ಆತನ ನಾಮಧೇಯ.


ಇಸ್ರೇಲರ ಪರಿಶುದ್ಧನೇ, ನಿಮ್ಮನ್ನು ರಕ್ಷಿಸುವಾತನು. ಯೆಹೋವನು ಹೇಳುವುದೇನೆಂದರೆ: “ನಾನು ನಿಮಗೋಸ್ಕರ ಬಾಬಿಲೋನಿಗೆ ಸೈನ್ಯವನ್ನು ಕಳುಹಿಸುವೆನು. ಎಷ್ಟೋ ಮಂದಿ ಸೆರೆಹಿಡಿಯಲ್ಪಡುವರು. ಕಲ್ದೀಯ ಜನರು ಅವರ ಹಡಗುಗಳಿಂದಲೇ ಒಯ್ಯಲ್ಪಡುವರು. (ಅವರು ಆ ಹಡಗುಗಳ ಬಗ್ಗೆ ಬಹು ಹೆಮ್ಮೆಯಿಂದಿದ್ದಾರೆ.)


“ಯೆಹೋವನೆಂಬ ನಾನೇ ನಿಮ್ಮ ದೇವರು. ನಾನು ಸಾಗರವನ್ನು ಕದಡಿಸಿ ತೆರೆಗಳನ್ನು ಬರಮಾಡುತ್ತೇನೆ.” (ಸರ್ವಶಕ್ತನು ಎಂಬುದೇ ನನ್ನ ಹೆಸರು.)


“ಹೌದು, ಅವರು ಪರಿಶುದ್ಧ ಪಟ್ಟಣದ ನಿವಾಸಿಗಳಾಗಿದ್ದಾರೆ. ಅವರು ಇಸ್ರೇಲಿನ ದೇವರನ್ನು ಅವಲಂಬಿಸಿಕೊಂಡಿದ್ದಾರೆ. ಸರ್ವಶಕ್ತನಾದ ಯೆಹೋವನು ಎಂಬುದೇ ಆತನ ಹೆಸರು.


ಯಾರೂ ಪರಸ್ಪರ ಹಾನಿಮಾಡುವದಿಲ್ಲ. ನನ್ನ ಪವಿತ್ರ ಪರ್ವತದಲ್ಲಿನ ಜನರು ವಸ್ತುಗಳನ್ನು ನಾಶಮಾಡಲು ಇಷ್ಟಪಡುವದಿಲ್ಲ. ಯಾಕೆಂದರೆ ಆಗ ಜನರು ನಿಜವಾಗಿಯೂ ಯೆಹೋವನನ್ನು ಅರಿತಿರುವರು. ಸಾಗರದಲ್ಲಿ ನೀರು ತುಂಬಿದಂತೆ ಲೋಕವೆಲ್ಲಾ ಆತನ ವಿಷಯವೆಂಬ ಜ್ಞಾನದಿಂದ ತುಂಬುವದು.


ದೇವರಾದ ಯೆಹೋವನು ಇಸ್ರೇಲರ ಪರಿಶುದ್ಧನಾಗಿದ್ದಾನೆ. ಆತನು ಇಸ್ರೇಲನ್ನು ಸೃಷ್ಟಿಸಿದನು. ಯೆಹೋವನು ಹೇಳುವುದೇನೆಂದರೆ, “ನಾನು ಕೈಯಾರೆ ಮಾಡಿದ ಮಕ್ಕಳ ಬಗ್ಗೆ ನೀನು ಪ್ರಶ್ನಿಸುವಿಯಾ? ನಾನು ಏನು ಮಾಡಬೇಕೆಂದು ನೀನು ನನಗೆ ಆಜ್ಞಾಪಿಸುವಿಯೋ?


ನಾನು ತುಂಬಾ ಸಿಟ್ಟುಗೊಂಡಿದ್ದೆನು ಮತ್ತು ಸ್ವಲ್ಪ ಕಾಲಕ್ಕೆ ನಿನಗೆ ಮರೆಯಾದೆನು. ಆದರೆ ನಿನ್ನನ್ನು ಕರುಣೆಯಿಂದ ನಿರಂತರವೂ ಸಂತೈಸುವೆನು.” ನಿನ್ನ ರಕ್ಷಕನಾದ ಯೆಹೋವನ ನುಡಿಗಳಿವು.


“ಈಗ ಜನರು ಭೂಮಿಯಿಂದ ಆಶೀರ್ವಾದ ಕೇಳುತ್ತಾರೆ. ಆದರೆ ಮುಂದಿನ ದಿನಗಳಲ್ಲಿ ಅವರು ನಂಬಿಗಸ್ತನಾದ ದೇವರಿಂದ ಆಶೀರ್ವಾದ ಕೇಳುವರು. ಈಗ ಜನರು ವಾಗ್ದಾನ ಮಾಡುವಾಗ ಭೂಮಿಯ ಬಲದಲ್ಲಿ ಭರವಸವಿಡುವರು. ಆದರೆ ಮುಂದಿನ ದಿನಗಳಲ್ಲಿ ನಂಬಿಗಸ್ತನಾದ ದೇವರ ಮೇಲೆ ಭರವಸವಿಡುವರು. ಯಾಕೆಂದರೆ ಗತಿಸಿದ ಸಂಕಟಗಳೆಲ್ಲವೂ ಮರೆತುಹೋಗುತ್ತವೆ. ಇವುಗಳು ನನ್ನ ಕಣ್ಣುಗಳಿಗೆ ಮರೆಯಾಗಿರುತ್ತವೆ.”


ಇವು ಯೆಹೋವನ ಮಾತುಗಳು. “ಆಗ ನನ್ನನ್ನು ನೀನು ‘ನನ್ನ ಗಂಡ’ ಎಂದು ಕರೆಯುವೆ. ‘ನನ್ನ ಬಾಳನು’ ಎಂದು ಕರೆಯುವದಿಲ್ಲ.


“ಭೂಲೋಕದ ಜನರೆಲ್ಲಾ ನನ್ನ ಹೆಸರನ್ನು ಗೌರವಿಸುತ್ತಾರೆ; ಒಳ್ಳೆಯ ಕಾಣಿಕೆಗಳನ್ನು ತಂದೊಪ್ಪಿಸುತ್ತಾರೆ, ಒಳ್ಳೆಯ ಧೂಪವನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ. ಯಾಕೆಂದರೆ ಅವರಿಗೆಲ್ಲಾ ನನ್ನ ನಾಮ ಮಹತ್ತರವಾದದ್ದು, ವಿಶೇಷವಾದದ್ದು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಇದೋ ಇಲ್ಲಿದೆ ಸಾಕ್ಷಿ. ನೀವು ಜೋರ್ಡನ್ ನದಿಯನ್ನು ದಾಟುವಾಗ ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ನಿಮ್ಮ ಮುಂದೆ ಹೋಗುವುದು.


ಯಾಜಕರು ಯೆಹೋವನ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವರು. ಯೆಹೋವನು ಸರ್ವಲೋಕದ ಒಡೆಯನಾಗಿದ್ದಾನೆ. ಅವರು ಆ ಪೆಟ್ಟಿಗೆಯನ್ನು ನಿಮ್ಮ ಮುಂದೆ ಜೋರ್ಡನ್ ನದಿಯಲ್ಲಿ ತೆಗೆದುಕೊಂಡು ಹೋಗುವರು. ಅವರು ನೀರಿನಲ್ಲಿ ಪ್ರವೇಶ ಮಾಡಿದಾಗ ಜೋರ್ಡನ್ ನದಿಯ ನೀರು ಹರಿಯದೆ ನಿಂತುಬಿಡುವುದು. ನೀರು ಮುಂದಕ್ಕೆ ಹರಿಯದೆ ಹರಡಿಕೊಂಡು ಸರೋವರದಂತೆ ತೋರುವುದು” ಎಂದು ತಿಳಿಸಿದನು.


ಜೀವಸ್ವರೂಪನಾದ ಒಬ್ಬನು ನನ್ನ ಪರವಾಗಿ ವಾದಿಸುತ್ತಾನೆಂದು ನನಗೆ ಗೊತ್ತಿದೆ; ಕೊನೆಯಲ್ಲಿ, ಆತನು ಭೂಮಿಯ ಮೇಲೆ ನಿಂತುಕೊಂಡು ನನಗೋಸ್ಕರ ವಾದಿಸುವನು.


ಯಾಕೋಬೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಇಸ್ರೇಲೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಈಗ ಆತನು ಹೇಳುವುದೇನೆಂದರೆ: “ಭಯಪಡಬೇಡ. ನಾನೇ ನಿನ್ನನ್ನು ರಕ್ಷಿಸಿದ್ದೇನೆ. ನಾನು ನಿನಗೆ ಹೆಸರಿಟ್ಟೆನು. ನೀನು ನನ್ನವನೇ.


“ಆ ಸಮಯದಲ್ಲಿ ನಾನು ಇಸ್ರೇಲರಿಗೋಸ್ಕರವಾಗಿ ಅಡವಿಯ ಮೃಗಗಳೊಂದಿಗೂ ಆಕಾಶದ ಪಕ್ಷಿಗಳೊಂದಿಗೂ ನೆಲದ ಮೇಲೆ ಹರಿದಾಡುವ ಜಂತುಗಳೊಂದಿಗೂ ಒಡಂಬಡಿಕೆ ಮಾಡುವೆನು. ನಾನು ಯುದ್ಧದ ಆಯುಧ, ಬಿಲ್ಲು, ಖಡ್ಗಗಳನ್ನು ತುಂಡು ಮಾಡುವೆನು. ಆ ದೇಶದೊಳಗೆ ಯಾವ ಆಯುಧವೂ ಇರದು. ಆಗ ಇಸ್ರೇಲಿನ ಜನರು ನಿಶ್ಟಿಂತೆಯಿಂದ ಮಲಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು