Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 54:6 - ಪರಿಶುದ್ದ ಬೈಬಲ್‌

6 “ನೀನು ಗಂಡಬಿಟ್ಟ ಹೆಂಗಸಿನಂತಿದ್ದಿ. ನಿನ್ನ ಆತ್ಮದಲ್ಲಿ ನೀನು ತುಂಬಾ ದುಃಖಿತಳಾಗಿದ್ದಿ. ಆದರೆ ಯೆಹೋವನು ನಿನ್ನನ್ನು ತನ್ನವಳನ್ನಾಗಿ ಮಾಡಲು ಕರೆದನು. ಎಳೇ ಪ್ರಾಯದಲ್ಲಿ ಮದುವೆಯಾದ ಮತ್ತು ಗಂಡಬಿಟ್ಟ ಹೆಂಗಸಿನಂತೆ ನೀನಿದ್ದಿ. ಆದರೆ ದೇವರು ತನ್ನವಳನ್ನಾಗಿ ಮಾಡಿಕೊಳ್ಳಲು ನಿನ್ನನ್ನು ಕರೆದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀನು ತ್ಯಜಿಸಿದ ಮನನೊಂದ ಹೆಂಡತಿ, ಹೌದು, ತ್ಯಜಿಸಲ್ಪಟ್ಟವಳಾದ ನನ್ನ ಯೌವನಕಾಲದ ಪತ್ನಿ ಎಂದು ಯೆಹೋವನು ನಿನ್ನನ್ನು ಕನಿಕರಿಸಿ ಕರೆದಿದ್ದಾನೆ” ಎಂಬುದು ನಿನ್ನ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಗಂಡಬಿಟ್ಟು ಮನನೊಂದಿರುವ ಪತ್ನಿ ನೀನು ಹೌದು, ತ್ಯಜಿಸಲಾದ ಯೌವನದ ಪತ್ನಿ ನೀನು. ಸರ್ವೇಶ್ವರ ಕನಿಕರಿಸಿ ಕರೆದಿಹನು ನಿನ್ನನು. ಆ ನಿನ್ನ ದೇವರ ನುಡಿಯಿದು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀನು ಬಿಡಲ್ಪಟ್ಟು ಮನನೊಂದ ಹೆಂಡತಿ, ಹೌದು, ತ್ಯಜಿಸಲ್ಪಟ್ಟವಳಾದ ನನ್ನ ಯೌವನಕಾಲದ ಪತ್ನಿ ಎಂದು ಯೆಹೋವನು ನಿನ್ನನ್ನು ಕನಿಕರಿಸಿ ಕರೆದಿದ್ದಾನೆ ಎಂಬದು ನಿನ್ನ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀನು ತ್ಯಜಿಸಿದ ಮನನೊಂದಿರುವ ಯೌವನದ ಪತ್ನಿಯ ಹಾಗೆ ತಿರಸ್ಕಾರಹೊಂದಿರುವೆ. ಯೆಹೋವ ದೇವರು ನಿನ್ನನ್ನು ಕರೆದಿದ್ದಾನೆ, ಎಂದು ನಿನ್ನ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 54:6
13 ತಿಳಿವುಗಳ ಹೋಲಿಕೆ  

ದೇವರು ತೊರೆದ ಜನಾಂಗವೆಂದೂ ದೇವರು ನಾಶಮಾಡಿದ ದೇಶವೆಂದೂ ನಿನ್ನನ್ನು ಇನ್ನು ಮುಂದೆ ಯಾರೂ ಕರೆಯುವದಿಲ್ಲ. “ದೇವರ ಪ್ರಿಯ ಜನರು” ಎಂದು ನೀನು ಕರೆಯಲ್ಪಡುವಿ. ನಿನ್ನ ದೇಶವು “ದೇವರ ಮದಲಗಿತ್ತಿ” ಎಂದು ಕರೆಯಲ್ಪಡುವದು. ಯಾಕೆಂದರೆ ಯೆಹೋವನು ನಿನ್ನನ್ನು ಪ್ರೀತಿಸುತ್ತಾನೆ; ನಿನ್ನ ದೇಶವು ಆತನಿಗೆ ಸೇರಿದೆ.


ನೀನು ಪ್ರಿಯ ಪತ್ನಿಯೊಡನೆ ಸುಖಪಡು. ನಿನ್ನ ಅಲ್ಪಕಾಲ ಜೀವಿತದ ದಿನಗಳಲ್ಲೆಲ್ಲಾ ಸುಖಪಡು. ಈ ಜೀವಿತವನ್ನು ನಿನಗೆ ಅನುಗ್ರಹಿಸಿರುವಾತನು ದೇವರೇ, ಇದೇ ನಿನ್ನ ಪಾಲು. ನಿನ್ನ ಈ ಜೀವಿತದ ಕೆಲಸಕಾರ್ಯಗಳನ್ನು ಸಂತೋಷದಿಂದ ಮಾಡು.


ಆದ್ದರಿಂದ ಯೌವನಪ್ರಾಯದಲ್ಲಿ ನೀನು ಮದುವೆಮಾಡಿಕೊಂಡ ಸ್ತ್ರೀಯೊಡನೆ ಸಂತೋಷಿಸು.


“ನಮ್ಮ ಕಾಣಿಕೆಗಳನ್ನು ಯೆಹೋವನು ಏಕೆ ಸ್ವೀಕರಿಸುವುದಿಲ್ಲ?” ಎಂದು ನೀವು ಕೇಳಬಹುದು. ಯಾಕೆಂದರೆ ನಿಮ್ಮ ಪಾಪಕೃತ್ಯಗಳನ್ನು ಆತನು ನೋಡಿರುತ್ತಾನೆ. ಅವುಗಳಿಗೆ ವಿರೋಧವಾಗಿ ಆತನೇ ಸಾಕ್ಷಿಯಾಗಿರುತ್ತಾನೆ. ನಿಮ್ಮ ಹೆಂಡತಿಯರನ್ನು ನೀವು ಮೋಸಗೊಳಿಸಿದ್ದನ್ನು ಆತನು ನೋಡಿರುತ್ತಾನೆ. ನೀವು ಆಕೆಯನ್ನು ನಿಮ್ಮ ಯೌವನ ಕಾಲದಲ್ಲಿ ಹೆಂಡತಿಯನ್ನಾಗಿ ಮಾಡಿಕೊಂಡಿರುತ್ತೀರಿ. ಆಕೆಯು ನಿಮ್ಮ ಆಪ್ತ ಸ್ನೇಹಿತೆಯಾಗಿದ್ದಳು. ನೀವಿಬ್ಬರೂ ಮಾತುಕೊಟ್ಟಿರಿ. ಆಕೆ ನಿಮ್ಮ ಹೆಂಡತಿಯಾದಳು. ಆದರೆ ನೀವು ಅವಳಿಗೆ ಅಪನಂಬಿಗಸ್ಥರಾದಿರಿ.


“ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ. ನಾನು ನಿಮಗೆ ವಿಶ್ರಾಂತಿಯನ್ನು ಕೊಡುತ್ತೇನೆ.


ಆದರೆ ದೇವರು ಇಕ್ಕಟ್ಟುಗಳಲ್ಲಿರುವ ಜನರನ್ನು ಸಂತೈಸುತ್ತಾನೆ. ತೀತನು ಬಂದಾಗ ದೇವರು ನಮ್ಮನ್ನು ಸಂತೈಸಿದನು.


ಆಗ ನಾನು (ಯೆಹೋವನು) ನಿನ್ನನ್ನು ಒಳ್ಳೆಯತನದಿಂದಲೂ ನ್ಯಾಯದಿಂದಲೂ ಪ್ರೀತಿಯಿಂದಲೂ ಕರುಣೆಯಿಂದಲೂ ಕೂಡಿರುವ ನಿರಂತರವಾದ ವಧುವನ್ನಾಗಿ ಮಾಡುವೆನು.


ಇದು ಯೆಹೋವನ ನುಡಿ: “ನಾನು ಪುನಃ ನಿಮಗೆ ಆರೋಗ್ಯವನ್ನು ಕೊಡುವೆನು; ನಿಮ್ಮ ಗಾಯಗಳನ್ನು ವಾಸಿಮಾಡುವೆನು. ಏಕೆಂದರೆ ಚೀಯೋನ್ ಭ್ರಷ್ಟಳಾದಳೆಂದೂ ‘ಯಾರಿಗೂ ಬೇಡವಾದ ನಗರ’ವೆಂದೂ ಬೇರೆಯವರು ಹೇಳಿದರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು