Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 55:6 - ಪರಿಶುದ್ದ ಬೈಬಲ್‌

6 ಆದ್ದರಿಂದ ಸಮಯವು ದಾಟುವ ಮೊದಲು ನೀವು ಯೆಹೋವನಿಗಾಗಿ ಹುಡುಕಿರಿ. ಆತನು ಹತ್ತಿರವಿರುವಾಗಲೇ ಕರೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅರಸಿರಿ ಸರ್ವೇಶ್ವರನನು ಆತ ದೊರಕುವ ವೇಳೆಯಲಿ ವಿನಂತಿಸಿರಿ ಆತನಿರುವಾಗಲೆ ಸಮೀಪದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ, ಆತನು ಸಮೀಪದಲ್ಲಿರುವಾಗ, ಆತನಿಗೆ ಬಿನ್ನಹ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 55:6
45 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಭಕ್ತರಿಗೆ ಸಮೀಪವಾಗಿದ್ದಾನೆ. ಆತನು ತನ್ನನ್ನು ಯಥಾರ್ಥವಾಗಿ ಕರೆಯುವ ಪ್ರತಿಯೊಬ್ಬರಿಗೂ ಸಮೀಪವಾಗಿದ್ದಾನೆ.


ನಾನು ಗುಪ್ತವಾಗಿ ಮಾತನಾಡದೆ ಬಹಿರಂಗವಾಗಿಯೇ ಮಾತನಾಡಿದ್ದೇನೆ. ಈ ಭೂಮಿಯ ಕತ್ತಲೆಯ ಸ್ಥಳದಲ್ಲಿ ನನ್ನ ಮಾತುಗಳನ್ನು ಅಡಗಿಸಿಡಲಿಲ್ಲ. ನನ್ನನ್ನು ಕಂಡುಹಿಡಿಯಲು ಗುಪ್ತಸ್ಥಳದಲ್ಲಿ ಹುಡುಕಿರಿ ಎಂದು ನಾನು ಯಾಕೋಬನ ಜನರಿಗೆ ಹೇಳಲಿಲ್ಲ. ನಾನೇ ಯೆಹೋವನು. ನಾನು ಸತ್ಯವನ್ನೇ ಆಡುವೆನು.


ದೇವರೇ, ಈ ಕಾರಣದಿಂದಲೇ ನಿನ್ನ ಭಕ್ತರು ನಿನ್ನಲ್ಲಿ ಪ್ರಾರ್ಥಿಸಲಿ. ಆಪತ್ತುಗಳು ಮಹಾಪ್ರವಾಹದಂತೆ ಬಂದರೂ ಅವರನ್ನು ಮುಟ್ಟಲಾರವು.


ದೇವರಿಗಾಗಿ ಹುಡುಕುವ ಬುದ್ಧಿವಂತರು ಮನುಷ್ಯರಲ್ಲಿ ಇದ್ದಾರೋ ಎಂದು ಯೆಹೋವನು ಪರಲೋಕದಿಂದ ಮನುಷ್ಯರನ್ನು ನೋಡುವನು.


ಅವರು ಕೇಳುವ ಮೊದಲೇ ಅವರಿಗೆ ಏನುಬೇಕು ಎಂಬುದನ್ನು ಅರಿತುಕೊಳ್ಳುವೆನು. ಅವರ ಪ್ರಾರ್ಥನೆ ಮುಗಿಯುವ ಮೊದಲೇ ಅವರಿಗೆ ಸಹಾಯ ಮಾಡುವೆನು.


ಯೆಹೋವನ ಬಳಿಗೆ ಹೋಗು. ಆಗ ಜೀವಿಸುವೆ. ಯೆಹೋವನ ಬಳಿಗೆ ನೀನು ಹೋಗದಿದ್ದಲ್ಲಿ ಯೋಸೇಫನ ಮನೆತನಕ್ಕೆ ಬೆಂಕಿಯು ಹಿಡಿಯುವುದು. ಆ ಬೆಂಕಿಯು ಯೋಸೇಫನ ಮನೆಯನ್ನು ದಹಿಸುವದು. ಬೇತೇಲಿನಲ್ಲಿ ಅದನ್ನು ಯಾರೂ ನಂದಿಸಲಾರರು.


“ನನ್ನ ಮಗನಾದ ಸೊಲೊಮೋನನೇ, ನಿನ್ನ ತಂದೆಯ ದೇವರನ್ನು ನೀನು ಚೆನ್ನಾಗಿ ಅರಿತುಕೋ. ನೀನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ನಿನ್ನ ದೇವರನ್ನು ಸೇವಿಸು. ದೇವರು ಪ್ರತಿಯೊಬ್ಬನ ಹೃದಯ ಮನಸ್ಸುಗಳನ್ನು ನೋಡುತ್ತಾನೆ. ನೀನು ದೇವರ ಸಹಾಯವನ್ನು ಕೇಳಿದರೆ ಆತನು ನಿನ್ನ ಪ್ರಾರ್ಥನೆಯನ್ನು ಲಾಲಿಸುವನು. ಆದರೆ ನೀನು ದೇವರನ್ನು ಬಿಟ್ಟರೆ ಆತನು ನಿನ್ನನ್ನು ಬಿಟ್ಟುಹೋಗುವನು.


ನಮಗೆ ದಯಪಾಲಿಸಲ್ಪಟ್ಟ ಈ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ದಂಡನೆಯಂತೂ ಖಂಡಿತ. ಇದು ಪ್ರಭುವಿನಿಂದ ಮೊದಲು ಹೇಳಲ್ಪಟ್ಟಿತು. ಆತನಿಂದ ಕೇಳಿದವರೇ ಈ ರಕ್ಷಣೆಯ ಕುರಿತಾಗಿ ನಮಗೆ ಸ್ಥಿರಪಡಿಸಿದರು.


ಯೆಹೋವನೇ, ನಾನು ನಿನ್ನೊಂದಿಗೆ ಹೃದಯಪೂರ್ವಕವಾಗಿ ಮಾತನಾಡಬೇಕೆಂದಿದ್ದೇನೆ. ದೇವರೇ, ನಾನು ನಿನ್ನ ಸನ್ನಿಧಿಗೆ ಬರುತ್ತೇನೆ.


ಯೋಬನೇ, ಈಗಲಾದರೋ ದೇವರ ಕಡೆಗೆ ನೋಡು, ಕರುಣೆತೋರುವಂತೆ ಸರ್ವಶಕ್ತನಾದ ದೇವರಿಗೆ ಪ್ರಾರ್ಥಿಸು.


“ನಾವು ನಮ್ಮ ದೇವರಾದ ಯೆಹೋವನಿಗೆ ಪ್ರಾರ್ಥಿಸುವಾಗ ಆತನು ನಮ್ಮ ಹತ್ತಿರವೇ ಇದ್ದಾನೆ. ಯಾವ ದೇಶದವರಿಗೂ ಆತನಂಥ ದೇವರಿಲ್ಲ.


ನಮ್ಮ ದೇವರು ಆತನೇ, ನಾವು ಆತನವರೇ. ಆತನ ಸ್ವರಕ್ಕೆ ಕಿವಿಗೊಡುವುದಾದರೆ ಇಂದೇ ನಾವು ಆತನ ಮಂದೆಯಾಗುತ್ತೇವೆ.


ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.


ಆದರೆ ಒಬ್ಬರನ್ನೊಬ್ಬರು ಪ್ರತಿದಿನವೂ ಸಂತೈಸಿರಿ. “ಈ ದಿನ”ವು ಇನ್ನೂ ಇರುವಾಗಲೇ ಇದನ್ನೆಲ್ಲ ಮಾಡಿರಿ. ಪಾಪದಿಂದಾಗಲಿ ಪಾಪವು ಮೋಸಗೊಳಿಸುವ ರೀತಿಯಿಂದಾಗಲಿ ನಿಮ್ಮಲ್ಲಿ ಯಾರೂ ಕಠಿಣರಾಗದಂತೆ ಒಬ್ಬರಿಗೊಬ್ಬರು ಸಹಾಯ ಮಾಡಿರಿ.


ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಬೇಕಷ್ಟೇ, ಆದರೂ ಅವನು ತೆರೆಯುವುದಿಲ್ಲ. ‘ಸ್ವಾಮೀ, ನಮಗೆ ಬಾಗಿಲು ತೆರೆ!’ ಎಂದು ನೀವು ಕೇಳುವಿರಿ. ಅವನು ನಿಮಗೆ, ‘ನೀವು ಯಾರೋ ನನಗೆ ತಿಳಿಯದು. ನೀವು ಎಲ್ಲಿಯವರು?’ ಎಂದು ಉತ್ತರಿಸುವನು.


ನಾನು ಒಳ್ಳೆಯ ಕಾರ್ಯಗಳನ್ನು ಮಾಡುವೆನು. ನನ್ನ ಜನರನ್ನು ಬೇಗನೆ ರಕ್ಷಿಸುವೆನು. ಚೀಯೋನಿಗೆ, ಅಂದರೆ ನನ್ನ ಅದ್ಭುತವಾದ ಇಸ್ರೇಲಿಗೆ ರಕ್ಷಣೆಯನ್ನು ತರುವೆನು.”


ಯೇಸು ಅವರಿಗೆ, “ನಾನು ನಿಮ್ಮನ್ನು ಬಿಟ್ಟುಹೋಗುತ್ತೇನೆ. ನೀವು ನನ್ನನ್ನು ಹುಡುಕುವಿರಿ. ಆದರೆ ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ” ಎಂದು ಹೇಳಿದನು.


ಆತನು ತನ್ನ ಜನರನ್ನು ಬಲಿಷ್ಠರನ್ನಾಗಿ ಮಾಡುತ್ತಾನೆ. ಆತನ ಭಕ್ತರನ್ನು ಜನರು ಹೊಗಳುವರು. ಜನರು ಇಸ್ರೇಲರನ್ನು ಹೊಗಳುವರು. ಆತನು ಹೋರಾಡುತ್ತಿರುವುದು ಅವರಿಗಾಗಿಯೇ. ಯೆಹೋವನಿಗೆ ಸ್ತೋತ್ರವಾಗಲಿ!


ಆಗ ದೇವರು ನನಗೆ, “ನರಪುತ್ರನೇ, ನನ್ನನ್ನು ನನ್ನ ಆಲಯದಿಂದ ಓಡಿಸಲು ಇಲ್ಲಿ ಇಸ್ರೇಲರು ಮಾಡುತ್ತಿರುವ ಭಯಂಕರವಾದ ಕೃತ್ಯಗಳು ನಿನಗೆ ಕಾಣುತ್ತಿಲ್ಲವೇ? ಆದರೆ ಇದಕ್ಕಿಂತಲೂ ಹೆಚ್ಚಿನ ದುಷ್ಕೃತ್ಯಗಳನ್ನು ನೀನು ನೋಡುವೆ” ಎಂದು ಹೇಳಿದನು.


ಆದರೆ ನಿನ್ನಲ್ಲಿ ಕೆಲವಾರು ಒಳ್ಳೆಯ ವಿಷಯಗಳಿವೆ. ನೀನು ಈ ದೇಶದೊಳಗಿದ್ದ ಅಶೇರಕಂಬಗಳನ್ನು ತೆಗೆದುಹಾಕಿಸಿದೆ; ಯೆಹೋವನನ್ನು ಹಿಂಬಾಲಿಸಲು ನಿನ್ನ ಹೃದಯದಲ್ಲಿ ತೀರ್ಮಾನಿಸಿದೆ” ಅಂದನು.


ದೇವರೇ, ನಿನ್ನನ್ನು ಕೊಂಡಾಡುವೆವು! ನಿನ್ನ ಹೆಸರನ್ನು ಸ್ತುತಿಸುವೆವು; ಯಾಕೆಂದರೆ ನೀನು ನನ್ನ ಸಾಮಿಪ್ಯದಲ್ಲಿರುವೆ; ನಿನ್ನ ಮಹತ್ಕಾರ್ಯಗಳ ಬಗ್ಗೆ ಜನರು ಹೇಳುತ್ತಲೇ ಇದ್ದಾರೆ.


ಹೀಗಿರಲಾಗಿ ನಾನು ನಿಮಗೋಸ್ಕರ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿ ನಿರಾಶರಾಗಿ ಧೈರ್ಯಗೆಡಬೇಡಿ. ನನ್ನ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ.


ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ.


“ನಿಮ್ಮ ವಿರೋಧಿಯು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆದೊಯ್ಯುವಾಗ ಬೇಗನೆ ಅವನೊಂದಿಗೆ ಸ್ನೇಹಿತರಾಗಿ. ನೀವು ನ್ಯಾಯಾಲಯಕ್ಕೆ ಹೋಗುವ ಮೊದಲೇ ಇದನ್ನು ಮಾಡಬೇಕು. ನೀವು ಅವನ ಸ್ನೇಹಿತರಾಗದಿದ್ದರೆ, ಅವನು ನಿಮ್ಮನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿಯು ನಿಮ್ಮನ್ನು ಸೆರೆಮನೆಗೆ ಹಾಕಲು ಕಾವಲುಗಾರನಿಗೆ ಒಪ್ಪಿಸಬಹುದು.


ಆಗ ನೀವು ನಿಮ್ಮ ದೇವರಾದ ಯೆಹೋವನನ್ನು ಹುಡುಕುವಿರಿ. ನೀವು ನಿಮ್ಮ ಹೃದಯ ಆತ್ಮಗಳಿಂದ ಹುಡುಕಿದಾಗ ಆತನು ನಿಮಗೆ ಸಿಗುವನು.


ನಮ್ಮ ಆತ್ಮವು ನಿನ್ನೊಂದಿಗೆ ರಾತ್ರಿಯಲ್ಲಿರಲು ಆಶಿಸುತ್ತದೆ. ನಮ್ಮೊಳಗಿರುವ ಆತ್ಮವು ನಿನ್ನ ಸಹವಾಸವನ್ನು ಬಯಸುತ್ತದೆ. ಹೊಸ ದಿವಸಗಳ ಮುಂಜಾನೆಯಲ್ಲಿ ನಿನ್ನೊಂದಿಗಿರಲು ಆಶಿಸುತ್ತದೆ. ನಿನ್ನ ನ್ಯಾಯವು ಈ ಭೂಮಿಗೆ ಬಂದಾಗ ಜನರು ಜೀವನದ ಸತ್ಯಮಾರ್ಗವನ್ನು ಅರಿಯುವರು.


ದೂರದೇಶದಲ್ಲಿರುವ ಜನರೇ, ನೀವು ಸುಳ್ಳುದೇವರನ್ನು ಅವಲಂಬಿಸುವದನ್ನು ನಿಲ್ಲಿಸಿರಿ. ನನ್ನನ್ನು ಹಿಂಬಾಲಿಸಿ ರಕ್ಷಣೆ ಹೊಂದಿರಿ. ನಾನೇ ದೇವರು, ಬೇರೆ ದೇವರುಗಳೇ ಇಲ್ಲ. ನಾನೊಬ್ಬನೇ ದೇವರು.


ಆಗ ನೀವು ಯೆಹೋವನನ್ನು ಕರೆದಾಗ ಆತನು ನಿಮಗೆ ಉತ್ತರಿಸುವನು. ನೀವು ಆತನನ್ನು ಕೂಗಿದಾಗ, “ಇಗೋ, ನಾನಿದ್ದೇನೆ” ಎಂದು ಅನ್ನುವನು. ನೀವು ಜನರಿಗೆ ಕಷ್ಟಕೊಡುವದನ್ನೂ ಅವರಿಗೆ ಭಾರ ಹೊರಿಸುವದನ್ನೂ ನಿಲ್ಲಿಸಬೇಕು. ಜನರಿಗೆ ಕಟುವಾಗಿ ಮಾತನಾಡಿ ಅವರನ್ನು ಬಯ್ಯುವದನ್ನು ನಿಲ್ಲಿಸಬೇಕು.


ಆಗ ಶಾರೋನಿನ ಕಣಿವೆಯು ಕುರಿಗಳು ಮೇಯುವ ಮೈದಾನವಾಗುವದು. ಆಕೋರಿನ ಕಣಿವೆಯು ದನಗಳು ಮಲಗುವ ಸ್ಥಳವಾಗುವದು. ಇವೆಲ್ಲವೂ ನನ್ನ ಜನರಿಗಾಗುವದು. ಇವರು ನನಗಾಗಿ ಹುಡುಕುತ್ತಿರುವರು.


ಆ ಪ್ರವಾದಿಗಳು, “ನಿಮ್ಮ ಜೀವನಕ್ರಮವನ್ನು ಬದಲಾಯಿಸಿಕೊಳ್ಳಿರಿ. ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಿಬಿಡಿ. ನೀವು ಬದಲಾದರೆ, ಯೆಹೋವನು ನಿಮಗೂ ನಿಮ್ಮ ಪೂರ್ವಿಕರಿಗೂ ಬಹಳ ಹಿಂದೆ ಕೊಟ್ಟ ಭೂಮಿಯಲ್ಲಿ ನೀವು ನೆಲೆಸಬಹುದು. ನೀವು ಶಾಶ್ವತವಾಗಿ ವಾಸಿಸಬೇಕೆಂದು ಆತನು ಈ ಭೂಮಿಯನ್ನು ಕೊಟ್ಟಿದ್ದಾನೆ.


‘ಯೆಹೂದವೇ, ನನಗೆ ಪ್ರಾರ್ಥಿಸು. ಆಗ ನಾನು ನಿನಗೆ ಉತ್ತರಿಸುವೆನು. ನಾನು ನಿನಗೆ ಬಹು ಮುಖ್ಯವಾದ ರಹಸ್ಯಗಳನ್ನು ತಿಳಿಸುತ್ತೇನೆ. ಈ ಸಂಗತಿಗಳನ್ನು ನೀನು ಹಿಂದೆಂದೂ ಕೇಳಲಿಲ್ಲ.


“ಆದ್ದರಿಂದ ಇಸ್ರೇಲ್ ಜನರಿಗೆ ಈ ವಿಷಯವನ್ನು ತಿಳಿಸು. ಅವರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ನಿಮ್ಮ ಹೊಲಸು ವಿಗ್ರಹಗಳನ್ನು ತೊರೆದುಬಿಟ್ಟು ನನ್ನ ಬಳಿಗೆ ಹಿಂತಿರುಗಿರಿ. ಆ ಭಯಂಕರ ಸುಳ್ಳು ದೇವರಿಂದ ತೊಲಗಿರಿ.


“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’


ಆದ್ದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕೃತ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.


ಪ್ರತಿ ಮನುಷ್ಯನೂ ಪ್ರಾಣಿಯೂ ಶೋಕವಸ್ತ್ರವನ್ನು ಧರಿಸಬೇಕು. ಜನರು ದೇವರಿಗೆ ಗಟ್ಟಿಯಾಗಿ ಮೊರೆಯಿಡಬೇಕು. ಪ್ರತಿಯೊಬ್ಬನು ತನ್ನ ದುಷ್ಟಜೀವಿತವನ್ನು ಬದಲಾಯಿಸಿ ದುಷ್ಟತನ ಮಾಡುವದನ್ನು ನಿಲ್ಲಿಸಬೇಕು.


ಆಗ ಏಲಾಮನ ಸಂತತಿಯವನಾದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ ಹೀಗೆಂದನು: “ನಾವು ದೇವರಿಗೆ ನಂಬಿಗಸ್ತರಾಗಿರಲಿಲ್ಲ. ನಾವು ಅನ್ಯಜನರೊಂದಿಗೆ ಮದುವೆಯಾಗಿದ್ದೇವೆ. ಹಾಗಿದ್ದರೂ ಇಸ್ರೇಲರಿಗೆ ಒಂದು ನಿರೀಕ್ಷೆ ಇದೆ.


ನೀತಿವಂತರಿಗೆ ಅನೇಕ ಕಷ್ಟಗಳು ಬಂದರೂ ಯೆಹೋವನು ಅವೆಲ್ಲವುಗಳಿಂದ ಬಿಡಿಸುವನು.


ನನ್ನನ್ನು ಪ್ರೀತಿಸುವವರನ್ನು ನಾನೂ ಪ್ರೀತಿಸುವೆನು; ಬಹಳವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ನೀನು ಒಳ್ಳೆಯತನವನ್ನು ಬಿತ್ತಿದರೆ ಪ್ರೀತಿಯೆಂಬ ಬೆಳೆಯನ್ನು ಕೊಯ್ಯುವೆ. ನಿನ್ನ ನೆಲವನ್ನು ಉಳುಮೆ ಮಾಡು. ಆಗ ನೀನು ಯೆಹೋವನೊಂದಿಗೆ ಬೆಳೆಯನ್ನು ಕೊಯ್ಯುವೆ. ಆತನು ಬರುವನು. ಮತ್ತು ಆತನ ಒಳ್ಳೆಯತನವು ನಿನ್ನ ಮೇಲೆ ಮಳೆಯಂತೆ ಸುರಿಯುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು