Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 56:1 - ಪರಿಶುದ್ದ ಬೈಬಲ್‌

1 ಯೆಹೋವನು ಹೇಳುವುದೇನೆಂದರೆ: “ಎಲ್ಲರಿಗೂ ನ್ಯಾಯವಂತರಾಗಿರಿ; ಎಲ್ಲರಿಗೂ ಒಳ್ಳೆಯವರಾಗಿರಿ; ಯಾಕೆಂದರೆ ನನ್ನ ರಕ್ಷಣೆಯು ಬೇಗನೆ ಬರಲಿದೆ; ಇಡೀ ಲೋಕಕ್ಕೆಲ್ಲಾ ನನ್ನ ನೀತಿಯು ಬೇಗನೆ ವ್ಯಕ್ತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಹೀಗೆನ್ನುತ್ತಾನೆ, “ನ್ಯಾಯವನ್ನು ಅನುಸರಿಸಿ, ಧರ್ಮವನ್ನು ಆಚರಿಸಿರಿ; ಏಕೆಂದರೆ ನನ್ನ ವಿಮೋಚನಕ್ರಿಯೆಯು ಬೇಗನೆ ಬರುವುದು, ನನ್ನ ರಕ್ಷಣಾಧರ್ಮದ ಕಾರ್ಯವು ಶೀಘ್ರವಾಗಿ ವ್ಯಕ್ತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಹೇಳುವುದು ಏನೆಂದರೆ : ನ್ಯಾಯವನ್ನು ಅನುಸರಿಸಿರಿ. ನೀತಿಯನ್ನು ಆಚರಿಸಿರಿ. ಏಕೆಂದರೆ ನಾನೀಡುವ ಮುಕ್ತಿಯು ಬೇಗನೆ ಬರುವುದು; ನಾನು ತರುವ ಸತ್ಸಂಬಂಧವು ಕೂಡಲೆ ಬೆಳಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಹೀಗನ್ನುತ್ತಾನೆ - ನ್ಯಾಯವನ್ನು ಅನುಸರಿಸಿರಿ, ಧರ್ಮವನ್ನು ಆಚರಿಸಿರಿ; ಏಕಂದರೆ ನನ್ನ ವಿಮೋಚನ ಕ್ರಿಯೆಯು ಬೇಗನೆ ಬರುವದು, ನನ್ನ ರಕ್ಷಣಧರ್ಮದ ಕಾರ್ಯವು ಶೀಘ್ರವಾಗಿ ವ್ಯಕ್ತವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಹೇಳುವುದೇನೆಂದರೆ: “ನ್ಯಾಯವನ್ನು ಕೈಗೊಳ್ಳಿರಿ, ನೀತಿಯಲ್ಲಿ ನಡೆಯಿರಿ. ಏಕೆಂದರೆ ನನ್ನ ರಕ್ಷಣೆಯು ಬರುವುದಕ್ಕೂ, ನನ್ನ ನೀತಿಯು ಪ್ರಕಟವಾಗುವುದಕ್ಕೂ ಸಮೀಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 56:1
26 ತಿಳಿವುಗಳ ಹೋಲಿಕೆ  

ದೇವರು ತನ್ನ ಭಕ್ತರನ್ನು ರಕ್ಷಿಸುವ ಕಾಲ ಸಮೀಪವಾಗಿದೆ. ನಾವು ಸ್ವದೇಶದಲ್ಲಿ ಗೌರವದೊಂದಿಗೆ ನೆಲೆಸುವ ಸಮಯ ಹತ್ತಿರವಾಗಿದೆ.


ಹೇಗೆಂದರೆ, ದೇವರಿಂದ ದೊರೆಯುವ ನೀತಿಯು ಅದರಲ್ಲಿ ತೋರಿಬರುತ್ತದೆ. ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುತ್ತದೆ. ಪವಿತ್ರ ಗ್ರಂಥವು ಹೇಳುವಂತೆ, “ನೀತಿವಂತನು ನಂಬಿಕೆಯಿಂದಲೇ ಜೀವಿಸುತ್ತಾನೆ.”


“ಪರಲೋಕರಾಜ್ಯವು ಸಮೀಪಿಸಿತು. ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ” ಎಂದು ಅವನು ಬೋಧಿಸಿದನು.


ಕೆಟ್ಟಜನರು ಕೆಟ್ಟತನದಲ್ಲಿ ಜೀವಿಸುವದನ್ನು ನಿಲ್ಲಿಸಲಿ. ಅವರು ಕೆಟ್ಟ ಆಲೋಚನೆಗಳನ್ನು ಮಾಡದಿರಲಿ. ಅವರು ಯೆಹೋವನ ಬಳಿಗೆ ಹಿಂತಿರುಗಲಿ. ಆಗ ಯೆಹೋವನು ಅವರನ್ನು ಆದರಿಸುವನು. ದೇವರಾದ ಯೆಹೋವನು ಕ್ಷಮಿಸುವುದರಿಂದ ಅವರು ಆತನ ಬಳಿಗೆ ಬರಲಿ.


ಅಂದಿನಿಂದ ಯೇಸು ಬೋಧಿಸುವುದಕ್ಕೆ ಪ್ರಾರಂಭಿಸಿದನು. “ಪರಲೋಕರಾಜ್ಯವು ಬೇಗನೆ ಬರಲಿದೆ. ಆದ್ದರಿಂದ ನೀವು ನಿಮ್ಮ ಹೃದಯಗಳನ್ನು ಮತ್ತು ಜೀವಿತಗಳನ್ನು ಮಾರ್ಪಡಿಸಿಕೊಳ್ಳಿರಿ” ಎಂದು ಯೇಸು ಬೋಧಿಸಿದನು.


ನಾನು ನ್ಯಾಯವಂತನೆಂದು ನಿಮಗೆ ಬೇಗನೆ ತೋರಿಸುವೆನು. ನಿಮ್ಮನ್ನು ಬೇಗನೆ ರಕ್ಷಿಸುವೆನು. ನಾನು ನನ್ನ ಸಾಮರ್ಥ್ಯದಿಂದ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವೆನು. ದೂರದೇಶದವರು ನನಗೋಸ್ಕರ ಕಾಯುತ್ತಿದ್ದಾರೆ. ಅವರು ತಮ್ಮ ರಕ್ಷಣೆಗಾಗಿ ನನ್ನ ಶಕ್ತಿಯನ್ನು ಎದುರುನೋಡುತ್ತಿದ್ದಾರೆ.


ನಾನು ಒಳ್ಳೆಯ ಕಾರ್ಯಗಳನ್ನು ಮಾಡುವೆನು. ನನ್ನ ಜನರನ್ನು ಬೇಗನೆ ರಕ್ಷಿಸುವೆನು. ಚೀಯೋನಿಗೆ, ಅಂದರೆ ನನ್ನ ಅದ್ಭುತವಾದ ಇಸ್ರೇಲಿಗೆ ರಕ್ಷಣೆಯನ್ನು ತರುವೆನು.”


ದೇವರು ಅಪೇಕ್ಷಿಸುವುದನ್ನು ಮಾಡಬಯಸುವವನಿಗೆ ನನ್ನ ಉಪದೇಶವು ದೇವರಿಂದ ಬಂದದ್ದೇ ಹೊರತು ನನ್ನ ಸ್ವಂತದ್ದಲ್ಲವೆಂದು ಗೊತ್ತಾಗುವುದು.


“ಕಾಲ ಪರಿಪೂರ್ಣವಾಯಿತು. ದೇವರ ರಾಜ್ಯ ಸಮೀಪಿಸಿತು. ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಸುವಾರ್ತೆಯನ್ನು ನಂಬಿರಿ” ಎಂಬ ದೇವರ ಸುವಾರ್ತೆಯನ್ನು ಉಪದೇಶಿಸಿದನು.


“ನನ್ನ ಸೇವಕನಾದ ಮೋಶೆಯ ಕಟ್ಟಳೆಗಳನ್ನು ಅನುಸರಿಸಲು ಮರೆಯಬೇಡಿ. ಹೋರೇಬ್ ಬೆಟ್ಟದಲ್ಲಿ ನಾನು ಆ ನ್ಯಾಯವಿಧಿಗಳನ್ನು ಅವನಿಗೆ ಕೊಟ್ಟೆನು. ಆ ಕಟ್ಟಳೆಗಳೆಲ್ಲಾ ಇಸ್ರೇಲ್ ಜನರಿಗಾಗಿ ಇರುವದು.”


ನನಗೆ ಕೃತಜ್ಞತಾಯಜ್ಞವನ್ನು ಅರ್ಪಿಸುವವನೇ ನನ್ನನ್ನು ಸನ್ಮಾನಿಸುವವನು. ಆದರೆ ನೀತಿವಂತನಾಗಿ ಜೀವಿಸುವವನಿಗೆ ನನ್ನ ರಕ್ಷಣಾಶಕ್ತಿಯನ್ನು ತೋರಿಸುವೆನು.”


ಯೆಹೋವನೇ ಉನ್ನತೋನ್ನತನು. ಆತನು ಬಹು ಉನ್ನತವಾದ ಸ್ಥಳದಲ್ಲಿ ವಾಸಿಸುತ್ತಾನೆ. ಆತನು ಚೀಯೋನನ್ನು ನ್ಯಾಯನೀತಿಗಳಿಂದ ತುಂಬಿಸುವನು.


ಯಾಕೆಂದರೆ ನಾನೇ ಯೆಹೋವನು. ನಾನು ನ್ಯಾಯದಲ್ಲಿ ಸಂತೋಷಿಸುವೆನು. ನಾನು ಕದಿಯುವದನ್ನೂ ಎಲ್ಲಾ ದುಷ್ಟತ್ವಗಳನ್ನೂ ದ್ವೇಷಿಸುತ್ತೇನೆ. ಅದಕ್ಕಾಗಿ ನಾನು ಅಂಥಾ ಜನರಿಗೆ ದೊರಕಬೇಕಾದ ಶಿಕ್ಷೆಯನ್ನು ಕೊಡುವೆನು. ನನ್ನ ಜನರೊಂದಿಗೆ ನಿತ್ಯಕಾಲದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.


ಒಳ್ಳೆಯದನ್ನು ಮಾಡುವದರಲ್ಲಿ ಸಂತೋಷಪಡುವವರೊಂದಿಗೆ ನೀನಿರುವೆ. ಅವರು ನಿನ್ನ ಮಾರ್ಗಗಳನ್ನು ನೆನಪಿನಲ್ಲಿಡುತ್ತಾರೆ. ಇಗೋ, ಗತಿಸಿದ ದಿವಸಗಳಲ್ಲಿ ನಾವು ನಿನಗೆ ವಿರುದ್ಧವಾಗಿ ಪಾಪಮಾಡಿದೆವು. ಆದ್ದರಿಂದ ನೀನು ನಮ್ಮ ಮೇಲೆ ಕೋಪಗೊಂಡೆ. ಈಗ ನಾವು ಹೇಗೆ ರಕ್ಷಿಸಲ್ಪಡುವೆವು?


“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.


ಮನುಷ್ಯನೇ, ಒಳ್ಳೆಯದು ಏನೆಂದು ಯೆಹೋವನು ನಿನಗೆ ತಿಳಿಸಿದ್ದಾನೆ. ಯೆಹೋವನು ನಿನ್ನಿಂದ ಅಪೇಕ್ಷಿಸುವದೇನೆಂದರೆ, ಇತರರಿಗೆ ನೀನು ಅನ್ಯಾಯ ಮಾಡದಿರು. ದಯೆ ಮತ್ತು ನಂಬಿಗಸ್ತಿಕೆಗಳನ್ನು ಪ್ರೀತಿಸು. ದೀನತೆಯಿಂದ ನಿನ್ನ ದೇವರಿಗೆ ವಿಧೇಯನಾಗಿರು.


ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ. ಆದ್ದರಿಂದ ಆತನು ನನ್ನ ಮೇಲೆ ಕೋಪಿಸಿಕೊಂಡಿದ್ದಾನೆ. ಆದರೆ ನನ್ನ ಪರವಾಗಿ ಆತನು ವಾದಿಸುತ್ತಾನೆ. ನನಗೆ ಒಳ್ಳೆಯದನ್ನೇ ಆತನು ಮಾಡುತ್ತಾನೆ. ಆ ಬಳಿಕ ನನ್ನನ್ನು ಹೊರಗೆ ಬೆಳಕಿಗೆ ತರುವನು. ಆತನು ನೀತಿವಂತನೆಂಬುದು ಆಗ ನನಗೆ ತಿಳಿಯುವುದು.


ದೇವರ ಆಜ್ಞೆಗಳಿಗೆ ವಿಧೇಯರಾಗಿರುವವರು ಭಾಗ್ಯವಂತರೇ ಸರಿ! ಅವರು ಸತ್ಕಾರ್ಯಗಳನ್ನು ಯಾವಾಗಲೂ ಮಾಡುತ್ತಿರುವರು.


“ಯಾಕೋಬನು ಒಬ್ಬ ವ್ಯಾಪಾರಿ. ಅವನು ತನ್ನ ಸ್ನೇಹಿತನಿಗೇ ಮೋಸಮಾಡುತ್ತಾನೆ. ಅವನ ತ್ರಾಸು ಮೋಸದ್ದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು