Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 56:4 - ಪರಿಶುದ್ದ ಬೈಬಲ್‌

4-5 ಯಾಕೆಂದರೆ ಯೆಹೋವನು ಹೇಳುವುದೇನೆಂದರೆ: “ಈ ಕಂಚುಕಿಯರಲ್ಲಿ ಕೆಲವರು ಸಬ್ಬತ್ ನಿಯಮವನ್ನು ಅನುಸರಿಸುತ್ತಾರೆ. ಅವರು ನನ್ನ ಇಷ್ಟಪ್ರಕಾರ ನಡೆದುಕೊಳ್ಳುತ್ತಾರೆ; ಅವರು ನನ್ನ ಒಡಂಬಡಿಕೆಗೆ ಸರಿಯಾಗಿ ನಡೆಯುತ್ತಾರೆ. ಆದ್ದರಿಂದ ನಾನು ಅವರಿಗೋಸ್ಕರ ನನ್ನ ಮಂದಿರದಲ್ಲಿ ಸ್ಮಾರಕಸ್ತಂಭ ನೆಡುವೆನು. ನನ್ನ ಪಟ್ಟಣದಲ್ಲಿ ಅವರ ಹೆಸರುಗಳು ಜ್ಞಾಪಕ ಮಾಡಲ್ಪಡುವವು. ಹೌದು, ಆ ಕಂಚುಕಿಗಳಿಗೆ ನಾನು ಮಕ್ಕಳಿಗಿಂತ ಉತ್ತಮವಾದದ್ದನ್ನು ಕೊಡುವೆನು. ಅವರಿಗೆ ನಿತ್ಯಕಾಲಕ್ಕೂ ಇರುವ ಹೆಸರನ್ನು ಕೊಡುವೆನು. ನನ್ನ ಜನರಿಂದ ಅವರನ್ನು ಬೇರ್ಪಡಿಸುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಹೀಗೆನ್ನುತ್ತಾನೆ, “ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿ ನನಗೆ ಮೆಚ್ಚಿಕೆಯಾದುದನ್ನು ಕೈಕೊಂಡು ನನ್ನ ಒಡಂಬಡಿಕೆಯನ್ನು ಭದ್ರವಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಂಥವನಿಗೆ ಸರ್ವೇಶ್ವರ ಸ್ವಾಮಿ ಹೇಳುವುದನ್ನು ಕೇಳು : “ಸಬ್ಬತ್‍ದಿನಗಳನ್ನು ನನ್ನ ದಿನಗಳೆಂದು ಆಚರಿಸಿ, ನನಗೆ ಮೆಚ್ಚುಗೆಯಾದುವನ್ನು ಕೈಗೊಂಡು, ನನ್ನ ಒಡಂಬಡಿಕೆಯನ್ನು ಸುಭದ್ರವಾಗಿ ಪಾಲಿಸಿಕೊಂಡು ಬರುವ ನಪುಂಸಕರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ಹೀಗನ್ನುತ್ತಾನೆ - ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿ ನನಗೆ ಮೆಚ್ಚಿಕೆಯಾದದ್ದನ್ನು ಕೈಕೊಂಡು ನನ್ನ ಒಡಂಬಡಿಕೆಯನ್ನು ಭದ್ರವಾಗಿ ಹಿಡಿದುಕೊಂಡಿರುವ ನಪುಂಸಕರಿಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ಹೇಳುವುದೇನೆಂದರೆ, “ನನ್ನ ಸಬ್ಬತ್ ದಿನವನ್ನು ಕೈಗೊಂಡು, ನನಗೆ ಮೆಚ್ಚಿಗೆಯಾದದ್ದನ್ನು ಆಯ್ದುಕೊಂಡು, ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವ ನಪುಂಸಕರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 56:4
12 ತಿಳಿವುಗಳ ಹೋಲಿಕೆ  

ಒಂದೇ ಒಂದು ಮುಖ್ಯವಾದದ್ದು. ಮರಿಯಳು ಮಾಡಿದ ಆಯ್ಕೆ ಸರಿಯಾದದ್ದು. ಆಕೆಯಿಂದ ಅದು ಎಂದಿಗೂ ತೆಗೆಯಲ್ಪಡುವುದಿಲ್ಲ” ಎಂದನು.


ಆದರೆ ಯಾವನಾದರೂ ಆಶ್ರಯಕ್ಕಾಗಿ ನನ್ನ ಬಳಿಗೆ ಬಂದು ನನ್ನೊಡನೆ ಸಮಾಧಾನ ಮಾಡಿಕೊಳ್ಳುವುದಾದರೆ ಅವನು ನನ್ನ ಬಳಿಗೆ ಬಂದು ಸಮಾಧಾನದಲ್ಲಿರಲಿ.


ನಿನ್ನ ಕಟ್ಟಳೆಗಳನ್ನು ಎಂದೆಂದಿಗೂ ನಿತ್ಯಸ್ವಾಸ್ತ್ಯವನ್ನಾಗಿ ಆರಿಸಿಕೊಂಡಿದ್ದೇನೆ. ಅವು ನನ್ನ ಹೃದಯಕ್ಕೆ ಆನಂದಕರವಾಗಿವೆ.


“ಅನ್ಯದೇಶದವರಲ್ಲಿ ಕೆಲವರು ಯೆಹೋವನನ್ನು ಅನುಸರಿಸುವರು. ಆತನನ್ನು ಸೇವಿಸಿ ಆತನ ನಾಮವನ್ನು ಪ್ರೀತಿಸುವರು. ಅವರು ಯೆಹೋವನ ಸೇವಕರಾಗುವುದಕ್ಕಾಗಿ ಆತನೊಂದಿಗೆ ಸೇರಿಕೊಳ್ಳುವರು. ಸಬ್ಬತ್‌ದಿವಸವನ್ನು ಆರಾಧನೆ ಮಾಡುವ ವಿಶೇಷ ದಿವಸವೆಂದು ನೆನಸಿ ಒಡಂಬಡಿಕೆಯನ್ನು ಪರಿಪಾಲಿಸುವರು.


“ಯೆಹೋವನು ನನ್ನ ಕುಟುಂಬವನ್ನು ಸ್ಥಿರಗೊಳಿಸಿದನು. ಆತನು ನನ್ನೊಡನೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡನು. ಆತನು ಈ ಒಡಂಬಡಿಕೆಯನ್ನು ಸಂಪೂರ್ಣವಾಗಿ ಸುಭದ್ರಗೊಳಿಸಿದನು. ಆತನು ನನಗೆ ಎಲ್ಲೆಲ್ಲಿಯೂ ಜಯ ಕೊಡುವನು. ಆತನು ನನಗೆ ಬೇಕಾದದ್ದನ್ನೆಲ್ಲಾ ಕೊಡುವನು.


“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.


ಹಾಗೆಯೇ ದೇವರು ತನ್ನ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವ ಜನರಿಗೆ ತನ್ನ ಸಂಕಲ್ಪವು ಸ್ಥಿರವಾದದ್ದು ಎಂಬುದನ್ನು ಸ್ಪಷ್ಟಪಡಿಸಲು ಆಣೆಯಿಟ್ಟು ನಿಶ್ಚಯಪಡಿಸಿದನು.


ಅವರು ಚೀಯೋನಿಗೆ ಹೋಗುವ ಮಾರ್ಗವನ್ನು ವಿಚಾರಿಸುವರು. ಆ ದಿಕ್ಕಿನಲ್ಲಿ ಹೋಗಲು ಪ್ರಾರಂಭಿಸುವರು. ‘ಬನ್ನಿ, ನಾವೆಲ್ಲರೂ ಯೆಹೋವನ ಆಶ್ರಯಪಡೆಯೋಣ. ಆತನೊಂದಿಗೆ ಶಾಶ್ವತವಾದ ಮತ್ತು ನಾವೆಂದೂ ಮರೆಯಲಾಗದ ಒಡಂಬಡಿಕೆಯನ್ನು ಮಾಡಿಕೊಳ್ಳೋಣ’ ಎಂದು ಅವರು ಹೇಳುವರು.


ಸಬ್ಬತ್ತಿನ ವಿಷಯದಲ್ಲಿ ದೇವರ ಕಟ್ಟಳೆಗಳನ್ನು ಅನುಸರಿಸುವವರು ಆಶೀರ್ವಾದ ಹೊಂದುವರು. ದುಷ್ಕೃತ್ಯಗಳನ್ನು ಮಾಡದವನು ಸಂತೋಷದಿಂದಿರುವನು.”


ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.


ಸಬ್ಬತ್ತಿನ ವಿಷಯವಾಗಿ ಯೆಹೋವನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ನೀವು ಅನುಸರಿಸಿದರೆ ಮತ್ತು ಆ ವಿಶೇಷ ದಿನದಲ್ಲಿ ಸ್ವೇಚ್ಛೆಯಾಗಿ ನಡೆಯದಿದ್ದರೆ ಇದೆಲ್ಲಾ ನಿಮಗೆ ದೊರೆಯುವುದು. ಸಬ್ಬತ್‌ದಿವಸವನ್ನು ನೀವು ಸಂತಸದ ದಿವಸವೆಂದು ಕರೆಯಬೇಕು. ದೇವರ ಆ ವಿಶೇಷ ದಿವಸವನ್ನು ನೀವು ಸನ್ಮಾನಿಸಿ ಆ ದಿವಸದಲ್ಲಿ ನಿಮ್ಮ ಸ್ವಕಾರ್ಯಗಳನ್ನು ಮಾಡಕೂಡದು; ಹರಟೆ ಹೊಡೆಯಕೂಡದು.


ಯೆಹೋವನ ಒಡಂಬಡಿಕೆಯನ್ನೂ ವಾಗ್ದಾನಗಳನ್ನೂ ಅನುಸರಿಸುವ ಜನರಿಗೆ ಆತನ ಮಾರ್ಗಗಳೆಲ್ಲ ಕರುಣೆಯುಳ್ಳವೂ ಸತ್ಯವೂ ಆಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು