Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:10 - ಪರಿಶುದ್ದ ಬೈಬಲ್‌

10 ಇವುಗಳನ್ನೆಲ್ಲಾ ನೀವು ಬಹು ಪ್ರಯಾಸದಿಂದ ಮಾಡಿದರೂ ಆಯಾಸಗೊಂಡಿಲ್ಲ. ಯಾಕೆಂದರೆ ಇವುಗಳನ್ನು ಮಾಡುವುದರಲ್ಲೇ ನಿಮಗೆ ಸಂತೋಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನು ನಡೆದು ನಡೆದು ಆಯಾಸಗೊಂಡರೂ ದಿಕ್ಕಿಲ್ಲವಲ್ಲಾ ಅಂದುಕೊಳ್ಳಲಿಲ್ಲ; ಹೊಸ ಬಲವನ್ನು ತಂದುಕೊಂಡಿ; ಆದುದರಿಂದ ನೀನು ಸೋತುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಡೆದು ನಡೆದು ದಣಿದಿದ್ದರೂ ‘ಇನ್ನು ಪ್ರಯೋಜನವಿಲ್ಲ’ ಎಂದುಕೊಳ್ಳಲಿಲ್ಲ. ಹೊಸ ಚೈತನ್ಯವನ್ನು ತಂದುಕೊಂಡು ನಿಲ್ಲದೆ ಮುಂದುವರೆದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನು ನಡೆದು ನಡೆದು ಆಯಾಸಗೊಂಡರೂ ದಿಕ್ಕಿಲ್ಲವಲ್ಲಾ ಅಂದುಕೊಳ್ಳಲಿಲ್ಲ; ಹೊಸ ಬಲವನ್ನು ತಂದುಕೊಂಡಿ; ಆದದರಿಂದ ನೀನು ಸೋತುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿನ್ನ ಮಾರ್ಗದಲ್ಲಿ ಬಹಳವಾಗಿ ದಣಿದಿದ್ದರೂ, ‘ಏನೂ ಪ್ರಯೋಜನವಿಲ್ಲ,’ ಎಂದುಕೊಳ್ಳಲಿಲ್ಲ. ನೀನು ಹೊಸ ಬಲವನ್ನು ತಂದುಕೊಂಡು, ಬೇಸರಗೊಳ್ಳದೆ ಮುಂದುವರೆದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:10
12 ತಿಳಿವುಗಳ ಹೋಲಿಕೆ  

ಯೆಹೂದವೇ, ವಿಗ್ರಹಗಳ ಬೆನ್ನುಹತ್ತಿ ಹೋಗುವದನ್ನು ನಿಲ್ಲಿಸು! ಆ ಅನ್ಯದೇವರುಗಳ ಬಗ್ಗೆ ನಿನ್ನಲ್ಲಿರುವ ಬಯಕೆಯನ್ನು ತೊರೆದುಬಿಡು. ಆದರೆ ನೀನು ‘ಹಾಗೆ ಮಾಡಿದರೆ ಪ್ರಯೋಜನವೇನು? ನಾನು ಅವುಗಳನ್ನು ಬಿಡಲಾರೆ. ನಾನು ಆ ಅನ್ಯದೇವರುಗಳನ್ನು ಪ್ರೀತಿಸುತ್ತೇನೆ. ನಾನು ಅವುಗಳನ್ನು ಪೂಜಿಸಬಯಸುತ್ತೇನೆ’ ಎಂದು ಹೇಳುವೆ.


ಆದರೆ ಯೆಹೂದದ ಜನರು, ‘ಪ್ರಯತ್ನ ಮಾಡುವದರಿಂದ ಏನೂ ಪ್ರಯೋಜನವಿಲ್ಲ. ನಮ್ಮ ಮನಸ್ಸಿಗೆ ಬಂದಂತೆ ನಾವು ಮಾಡುತ್ತಿದ್ದೇವೆ. ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ದುಷ್ಟ ಮತ್ತು ಮೊಂಡುಮನಸ್ಸು ಹೇಳಿದಂತೆ ನಡೆಯುವೆವು’ ಎಂಬುದಾಗಿ ಉತ್ತರಿಸುವರು” ಎಂದನು.


ಯೆಹೋವನೇ, ನೀನು ನಂಬಿಗಸ್ತರಾದ ಜನರನ್ನು ಹುಡುಕುವೆ. ನೀನು ಯೆಹೂದದ ಜನರಿಗೆ ಹೊಡೆದೆ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನ್ನು ಹಾಳುಮಾಡಿದೆ, ಆದರೆ ಅದರಿಂದ ಅವರು ಪಾಠವನ್ನೂ ಕಲಿಯಲಿಲ್ಲ. ಅವರು ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಡಲಿಲ್ಲ. ಅವರು ಬಹಳ ಹಟಮಾರಿಗಳಾದರು.


ನಾನು ಧರ್ಮಶಾಸ್ತ್ರವನ್ನು ತಿಳಿದುಕೊಳ್ಳುವುದಕ್ಕಿಂತ ಮೊದಲು ಧರ್ಮಶಾಸ್ತ್ರವಿಲ್ಲದವನಾಗಿ ಜೀವಂತವಾಗಿದ್ದೆನು. ಆದರೆ ಧರ್ಮಶಾಸ್ತ್ರದ ಆಜ್ಞೆಯು ನನ್ನ ಬಳಿಗೆ ಬಂದಾಗ, ಪಾಪವು ಜೀವಿಸತೊಡಗಿತು.


ಆ ಜನರು ಕಟ್ಟುವ ಪ್ರತಿಯೊಂದನ್ನೂ ಸರ್ವಶಕ್ತನಾದ ಯೆಹೋವನು ಬೆಂಕಿಯಿಂದ ನಾಶಮಾಡುವ ತೀರ್ಮಾನವನ್ನು ಮಾಡಿರುತ್ತಾನೆ. ಅವರು ಮಾಡಿದ ಕೆಲಸವೆಲ್ಲವೂ ವ್ಯರ್ಥವಾಗುವದು.


“‘ತನ್ನ ಕಿಲುಬುಗಳ ಕಲೆಯನ್ನು ತೆಗೆಯಲು ಜೆರುಸಲೇಮ್ ತುಂಬಾ ಕಷ್ಟಪಡಬಹುದು. ಆದರೆ ಆ ಕಿಲುಬು ಹೋಗುವದಿಲ್ಲ. ಬೆಂಕಿಯು ಮಾತ್ರ ಕಿಲುಬನ್ನು ತೆಗೆದುಹಾಕುವುದು.


ಪ್ರತಿಯೊಬ್ಬನೂ ತನ್ನ ನೆರೆಯವನಿಗೆ ಸುಳ್ಳು ಹೇಳುತ್ತಾನೆ. ಒಬ್ಬನೂ ಸತ್ಯವನ್ನು ನುಡಿಯುವದಿಲ್ಲ. ಯೆಹೂದದ ಜನರು ತಮ್ಮ ನಾಲಿಗೆಗಳಿಗೆ ಸುಳ್ಳು ಹೇಳುವದನ್ನು ಕಲಿಸಿದ್ದಾರೆ. ಅವರು ಹಿಂತಿರುಗಿ ಬರಲು ಆಯಾಸವಾಗುವಷ್ಟು ಪಾಪಗಳನ್ನು ಮಾಡಿದ್ದಾರೆ.


ನೀನು ಪಾಪ ಮಾಡಿದ್ದರಿಂದ ಮಳೆ ಬರಲಿಲ್ಲ; ಹಿಂಗಾರು ಮಳೆಯೂ ಆಗಲಿಲ್ಲ. ನಿನ್ನ ಮುಖದ ಮೇಲೆ ಇನ್ನೂ ವೇಶ್ಯೆಯ ಕಳೆಯೇ ಇದೆ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ನಾಚಿಕೆಯೂ ಆಗುವುದಿಲ್ಲ.


ನಿನ್ನ ವಿಚಾರಗಳನ್ನು ಬದಲಾಯಿಸುವದು ನಿನಗೆ ಸುಲಭ. ಅಸ್ಸೀರಿಯಾ ನಿನ್ನನ್ನು ನಿರಾಶೆಗೊಳಿಸಿತು. ಆಗ ನೀನು ಅಸ್ಸೀರಿಯರನ್ನು ಬಿಟ್ಟು ಈಜಿಪ್ಟಿನ ಸಹಾಯವನ್ನು ಕೇಳಿದೆ, ಈಜಿಪ್ಟ್ ನಿನ್ನನ್ನು ನಿರಾಶೆಗೊಳಿಸುತ್ತದೆ.


ನಿನಗೆ ಅನೇಕಾನೇಕ ಸಲಹೆಗಾರರಿದ್ದಾರೆ. ಅವರು ನಿನಗೆ ಕೊಡುವ ಸಲಹೆಗಳಿಂದ ನೀನು ಬೇಸರಗೊಂಡಿರುವಿಯಾ? ಹಾಗಾದರೆ ನಿನ್ನಲ್ಲಿರುವ ಖಗೋಳಶಾಸ್ತ್ರಜ್ಞರನ್ನು ಕರೆಯಿಸು. ತಿಂಗಳು ಯಾವಾಗ ಪ್ರಾರಂಭವಾಗುತ್ತದೆಯೆಂದು ಅವರು ಹೇಳಬಲ್ಲರು. ನಿನ್ನ ಸಂಕಟಗಳು ಯಾವಾಗ ಪ್ರಾಪ್ತವಾಗುತ್ತವೆಯೆಂದು ಅವರು ನಿನಗೆ ತಿಳಿಸಬಲ್ಲರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು