Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:12 - ಪರಿಶುದ್ದ ಬೈಬಲ್‌

12 ನೀವು ಮಾಡುವ ಧಾರ್ಮಿಕ ಕಾರ್ಯಗಳನ್ನೂ ನಿಮ್ಮ ಒಳ್ಳೆತನವನ್ನೂ ನಾನು ಹೇಳಿದರೂ ಅವುಗಳೆಲ್ಲಾ ನಿಷ್ಪ್ರಯೋಜಕವಾದವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ನಿನ್ನ ಧರ್ಮವನ್ನು ಬಯಲಿಗೆ ತರುವೆನು, ನಿನ್ನ ಕಾರ್ಯಗಳು ನಿನಗೆ ನಿಷ್ಪ್ರಯೋಜನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಿನ್ನ ನಡತೆಯನ್ನು ಬಯಲಿಗೆ ತರುವೆನು. ಆಗ ನಿನ್ನ ಕೃತ್ಯಗಳು ನಿನಗೆ ನೆರವಾಗವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನು ನಿನ್ನ ಧರ್ಮವನ್ನು ಬೈಲಿಗೆ ತರುವೆನು, ನಿನ್ನ ಕಾರ್ಯಗಳೇನೋ ನಿನಗೆ ನಿಷ್ಪ್ರಯೋಜನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾನೇ ನಿನ್ನ ನೀತಿಯನ್ನೂ, ನಿನ್ನ ಕ್ರಿಯೆಗಳನ್ನೂ ತಿಳಿಯ ಮಾಡುವೆನು. ಏಕೆಂದರೆ ಅವು ನಿನಗೆ ಪ್ರಯೋಜನವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:12
20 ತಿಳಿವುಗಳ ಹೋಲಿಕೆ  

“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.


“ತಮ್ಮನ್ನು ಬೇರೆ ಜನರು ನೋಡಲಿ ಎಂಬ ಒಂದೇ ಉದ್ದೇಶದಿಂದ ಅವರು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾರೆ. ಪವಿತ್ರ ಗ್ರಂಥಗಳು ತುಂಬಿರುವ ವಿಶೇಷವಾದ ಚರ್ಮದ ಚೀಲಗಳನ್ನು ಅವರು ಕಟ್ಟಿಕೊಂಡಿರುತ್ತಾರೆ. ಅವರು ಈ ಚೀಲಗಳನ್ನು ಇನ್ನೂ ಹೆಚ್ಚುಹೆಚ್ಚು ದೊಡ್ಡದನ್ನಾಗಿ ಮಾಡುತ್ತಾರೆ. ಜನರು ನೋಡಲಿ ಎಂದು ಅವರು ತಮ್ಮ ವಿಶೇಷ ಪ್ರಾರ್ಥನೆಯ ಉಡುಪುಗಳನ್ನು ಮತ್ತಷ್ಟು ಉದ್ದ ಮಾಡುತ್ತಾರೆ.


ಒಳ್ಳೆಯದನ್ನು ಮಾಡುವದರಲ್ಲಿ ಸಂತೋಷಪಡುವವರೊಂದಿಗೆ ನೀನಿರುವೆ. ಅವರು ನಿನ್ನ ಮಾರ್ಗಗಳನ್ನು ನೆನಪಿನಲ್ಲಿಡುತ್ತಾರೆ. ಇಗೋ, ಗತಿಸಿದ ದಿವಸಗಳಲ್ಲಿ ನಾವು ನಿನಗೆ ವಿರುದ್ಧವಾಗಿ ಪಾಪಮಾಡಿದೆವು. ಆದ್ದರಿಂದ ನೀನು ನಮ್ಮ ಮೇಲೆ ಕೋಪಗೊಂಡೆ. ಈಗ ನಾವು ಹೇಗೆ ರಕ್ಷಿಸಲ್ಪಡುವೆವು?


ಯೆಹೋವನಿಗೆ ತಮ್ಮ ಆಲೋಚನೆಗಳು ತಿಳಿಯಬಾರದೆಂದು ಕುತಂತ್ರೋಪಾಯಗಳನ್ನು ಮಾಡಿ, ಕತ್ತಲೆಯಲ್ಲಿ ದುಷ್ಕೃತ್ಯಗಳನ್ನು ಮಾಡುತ್ತಾ, “ನಮ್ಮನ್ನು ಯಾರು ನೋಡಬಲ್ಲರು, ನಮ್ಮನ್ನು ಯಾರು ಗುರುತಿಸಬಲ್ಲರು?” ಎಂದುಕೊಳ್ಳುವವರ ಗತಿಯನ್ನು ಏನು ಹೇಳಲಿ.


ಎಷ್ಟು ಗಟ್ಟಿಯಾಗಿ ಆರ್ಭಟಿಸಬಹುದೋ ಅಷ್ಟು ಆರ್ಭಟಿಸಿರಿ, ನಿಲ್ಲಿಸಬೇಡಿರಿ. ತುತ್ತೂರಿಯಂತೆ ಗಟ್ಟಿಯಾಗಿ ಕಿರುಚಿರಿ. ಜನರು ಮಾಡಿದ ಪಾಪಗಳನ್ನು ಅವರಿಗೆ ತಿಳಿಸಿರಿ. ಯಾಕೋಬನ ವಂಶದವರಿಗೆ ಅವರ ಪಾಪಗಳನ್ನು ತಿಳಿಸಿರಿ.


ನಿಮ್ಮ ಪಾಪಗಳೂ ನಿಮ್ಮ ಪಿತೃಗಳ ಪಾಪಗಳೂ ಒಂದೇಯಾಗಿವೆ. ಇದು ಯೆಹೋವನ ನುಡಿ. ನಿಮ್ಮ ಪೂರ್ವಿಕರು ಬೆಟ್ಟಗಳ ಮೇಲೆ ಧೂಪಸುಟ್ಟು ಪಾಪಮಾಡಿದರು. ಅವರು ಆ ಬೆಟ್ಟಗಳ ಮೇಲೆ ನನ್ನನ್ನು ಅವಮಾನಪಡಿಸಿದರು. ಆದರೆ ನಾನು ಅವರನ್ನು ಮೊದಲು ಶಿಕ್ಷಿಸಿದೆನು. ಅವರಿಗೆ ತಕ್ಕ ಶಿಕ್ಷೆಯನ್ನು ಕೊಟ್ಟೆನು.”


“ಆ ಜನರಲ್ಲಿ ಕೆಟ್ಟ ಯೋಜನೆಗಳು ಇದ್ದು ಕೆಟ್ಟದ್ದನ್ನೇ ಮಾಡುವವರಾಗಿದ್ದಾರೆ. ಅದಕ್ಕಾಗಿ ನಾನು ಅವರನ್ನು ಶಿಕ್ಷಿಸಲು ಬರುತ್ತಿದ್ದೇನೆ. ನಾನು ಎಲ್ಲಾ ಜನಾಂಗಗಳನ್ನೂ ಎಲ್ಲಾ ಜನರನ್ನೂ ಒಟ್ಟುಗೂಡಿಸುವೆನು. ಎಲ್ಲಾ ಜನರು ಒಟ್ಟುಗೂಡಿ ನನ್ನ ಸಾಮರ್ಥ್ಯವನ್ನು ನೋಡುವರು.


ಜನರು ವಿಗ್ರಹಗಳನ್ನು ಮಾಡಿಕೊಳ್ಳುವರು. ಆದರೆ ಅವು ನಿಷ್ಪ್ರಯೋಜಕವಾದ ವಸ್ತುಗಳಾಗಿವೆ. ಜನರು ಆ ವಿಗ್ರಹಗಳನ್ನು ಪ್ರೀತಿಸುತ್ತಾರೆ. ಆದರೆ ಅವುಗಳು ಯಾವ ಪ್ರಯೋಜನಕ್ಕೂ ಬಾರವು. ಆ ಜನರು ಆ ವಿಗ್ರಹದ ಸಾಕ್ಷಿಗಳಾಗಿದ್ದಾರೆ. ಆದರೆ ಅವುಗಳಿಗೆ ದೃಷ್ಟಿ ಇಲ್ಲ. ಅವುಗಳಿಗೆ ಏನೂ ಗೊತ್ತಿಲ್ಲ. ತಮ್ಮ ಕಾರ್ಯಗಳು ನಾಚಿಕೆಗೆಟ್ಟವುಗಳೆಂಬ ತಿಳುವಳಿಕೆಯೂ ಅವರಲ್ಲಿಲ್ಲ.


ಯೆಹೋವನು ಹೇಳುತ್ತಾನೆ, “ಈ ಸಂದೇಶವನ್ನು ಆ ಜನರಿಗೆ ಹೇಳು: ‘ಆ ಸುಳ್ಳುದೇವರುಗಳು ಭೂಲೋಕವನ್ನೂ ಪರಲೋಕವನ್ನೂ ಸೃಷ್ಟಿ ಮಾಡಿಲ್ಲ. ಆ ಸುಳ್ಳುದೇವರುಗಳನ್ನು ನಾಶಮಾಡಲಾಗುವುದು; ಅವುಗಳು ಭೂಲೋಕದಿಂದಲೂ ಆಕಾಶದಿಂದಲೂ ಕಣ್ಮರೆಯಾಗುವವು.’”


ಜನರು ಬುದ್ಧಿಗೇಡಿಗಳಾಗಿದ್ದಾರೆ. ತಾವು ಕೆತ್ತಿದ ವಿಗ್ರಹಗಳಿಂದ ಅಕ್ಕಸಾಲಿಗರು ಮೋಸಹೋಗುತ್ತಾರೆ. ಆ ವಿಗ್ರಹಗಳು ಕೇವಲ ಸುಳ್ಳಿನ ಕಂತೆಗಳು. ಅವುಗಳಲ್ಲಿ ಜೀವವಿಲ್ಲ.


ಆ ವಿಗ್ರಹಗಳು ನಿಷ್ಪ್ರಯೋಜಕ ವಸ್ತುಗಳಾಗಿವೆ. ಅವು ಅಪಹಾಸ್ಯಕ್ಕೆ ಯೋಗ್ಯವಾದವುಗಳಾಗಿವೆ. ನ್ಯಾಯನಿರ್ಣಯದ ಸಮಯದಲ್ಲಿ ಆ ವಿಗ್ರಹಗಳನ್ನು ನಾಶಪಡಿಸಲಾಗುವುದು.


ಆ ವಿಗ್ರಹಗಳು ನಿಷ್ಪ್ರಯೋಜಕವಾದವುಗಳೇ. ಆ ವಿಗ್ರಹಗಳನ್ನು ಮಾಡಿದವರು ಜನರೇ. ಅವುಗಳು ಕೇವಲ ಹಾಸ್ಯಾಸ್ಪದ ವಸ್ತುಗಳಲ್ಲದೆ ಮತ್ತೇನೂ ಅಲ್ಲ. ಅವುಗಳ ಬಗ್ಗೆ ತೀರ್ಪುಕೊಡುವ ಕಾಲ ಬರುವದು; ಆ ವಿಗ್ರಹಗಳನ್ನು ನಾಶಮಾಡಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು